ರಾಮಚಂದ್ರ ಪೌಡೆಲ್ - ಸುಶೀಲಾ ಕರ್ಕಿ 
ವಿದೇಶ

ಮುಂದಿವ ವರ್ಷ ಮಾರ್ಚ್ 5 ರಂದು ನೇಪಾಳ ಸಂಸತ್ ಚುನಾವಣೆ: ಅಧ್ಯಕ್ಷರ ಕಚೇರಿ ಘೋಷಣೆ

ಮುಂದಿನ ವರ್ಷ ಮಾರ್ಚ್ 5 ರಂದು ಸಾರ್ವತ್ರಿಕ ಚುನಾವಣೆ ನಡೆಯಲಿದೆ ಎಂದು ನೇಪಾಳ ಅಧ್ಯಕ್ಷ ರಾಮಚಂದ್ರ ಪೌಡೆಲ್ ಅವರ ಕಚೇರಿ ಘೋಷಿಸಿದೆ.

ಕಠ್ಮಂಡು: ಜೆನ್ -ಝಿ ಪ್ರತಿಭಟನೆಯಿಂದ ನೇಪಾಳದಲ್ಲಿ ಕೆ.ಪಿ.ಓಲಿ ನೇತೃತ್ವದ ಸರ್ಕಾರ ಪತನವಾಗಿದ್ದು, ಸುಪ್ರೀಂಕೋರ್ಟ್​​​ನ ನಿವೃತ್ತ ನ್ಯಾಯಮೂರ್ತಿ ಸುಶೀಲಾ ಕರ್ಕಿ ಅವರು ಹಂಗಾಮಿ ಪ್ರಧಾನಿಯಾಗಿ ಶುಕ್ರವಾರ ಪ್ರಮಾಣವಚನ ಸ್ವೀಕರಿಸಿದ್ದಾರೆ. ಇದರ ಬೆನ್ನಲ್ಲೇ ಶನಿವಾರ ನೇಪಾಳ ಸಂಸತ್ತಿಗೆ ಚುನಾವಣೆ ಘೋಷಣೆಯಾಗಿದೆ

ಮುಂದಿನ ವರ್ಷ ಮಾರ್ಚ್ 5 ರಂದು ಸಾರ್ವತ್ರಿಕ ಚುನಾವಣೆ ನಡೆಯಲಿದೆ ಎಂದು ನೇಪಾಳ ಅಧ್ಯಕ್ಷ ರಾಮಚಂದ್ರ ಪೌಡೆಲ್ ಅವರ ಕಚೇರಿ ಘೋಷಿಸಿದೆ.

ಹೊಸದಾಗಿ ನೇಮಕಗೊಂಡ ಪ್ರಧಾನಿಯ ಶಿಫಾರಸಿನ ಮೇರೆಗೆ ಪ್ರತಿನಿಧಿಗಳ ಸಭೆಯನ್ನು ಶುಕ್ರವಾರ ವಿಸರ್ಜಿಸಿದ್ದು, 2026ರ ಮಾರ್ಚ್ 5 ರಂದು ಮುಂದಿನ ಸಂಸತ್ ಚುನಾವಣೆ ನಡೆಯಲಿದೆ ಎಂದು ಅಧ್ಯಕ್ಷ ಪೌಡೆಲ್ ಹೇಳಿದ್ದಾರೆ.

ಸಾಮಾಜಿಕ ಮಾಧ್ಯಮ ನಿಷೇಧ ಮತ್ತು ಭ್ರಷ್ಟಾಚಾರದ ಆರೋಪದ ವಿರುದ್ಧ ವ್ಯಾಪಕ ಪ್ರತಿಭಟನೆಗಳ ನಂತರ ಈ ವಾರ ಓಲಿ ಅವರು ಪ್ರಧಾನಿ ಸ್ಥಾನಕ್ಕೆ ಹಠಾತ್ ರಾಜೀನಾಮೆ ನೀಡಿದ್ದರು. ನಂತರ ರಾಜಕೀಯ ಅನಿಶ್ಚಿತತೆಯ ದಿನಗಳನ್ನು ಕೊನೆಗೊಳಿಸಲು ಮಾಜಿ ಮುಖ್ಯ ನ್ಯಾಯಮೂರ್ತಿ ಕರ್ಕಿ(73) ಅವರು ದೇಶದ ಮೊದಲ ಮಹಿಳಾ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದರು.

ಪ್ರಧಾನಿ ಪ್ರಮಾಣವಚನ ಸಮಾರಂಭದ ಎರಡು ದಿನಗಳ ನಂತರ ಕರ್ಕಿ ಅವರು ಭಾನುವಾರ ಸಣ್ಣ ಸಚಿವ ಸಂಪುಟವನ್ನು ರಚಿಸಲಿದ್ದಾರೆ.

ಕರ್ಕಿ ಅವರು ಗೃಹ, ವಿದೇಶಾಂಗ ವ್ಯವಹಾರ ಮತ್ತು ರಕ್ಷಣಾ ಸೇರಿದಂತೆ ಸುಮಾರು ಎರಡು ಡಜನ್ ಸಚಿವರನ್ನು ತಮ್ಮ ಸಂಪುಟಕ್ಕೆ ಸೇರಿಸಿಕೊಳ್ಳಲಿದ್ದಾರೆ.

ಪ್ರಧಾನಿಯವರು ಭಾನುವಾರ ಅಧಿಕಾರ ವಹಿಸಿಕೊಳ್ಳುವಾಗ ಅಲ್ಪ ಸಂಖ್ಯೆಯ ಸಚಿವರನ್ನು ಸೇರಿಸಿಕೊಂಡು ಸಚಿವ ಸಂಪುಟ ರಚಿಸಲಿದ್ದಾರೆ ಎಂದು ಅಧ್ಯಕ್ಷರ ಕಚೇರಿಯ ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಕರ್ನಾಟಕ ಸರ್ಕಾರ ಒಂದೇ ಒಂದು ಕಲ್ಲು ಇಡೋಕೂ ಬಿಡಲ್ಲ': ತಮಿಳುನಾಡು ಸಚಿವ ಆನಂದ್ ಕ್ಯಾತೆ

ಫುಟ್‌ಪಾತ್‌ ಮೇಲೆ ಮತ್ತೆ ಅಂಗಡಿ ಹಾಕಿದ್ರೆ ಸಾಮಗ್ರಿಗಳನ್ನ ಜಪ್ತಿ ಮಾಡಿ, ದುಪ್ಪಟ್ಟು ದಂಡ ವಿಧಿಸಿ: ಕೃಷ್ಣ ಬೈರೇಗೌಡ ಖಡಕ್ ಸೂಚನೆ

ಶ್ರೀನಗರಕ್ಕೆ ಭಾರತದಲ್ಲಿನ US ರಾಯಭಾರಿ ಸೆರ್ಗಿಯೊ ಮೊದಲ ಭೇಟಿ: ಕಾಶ್ಮೀರದ ಸೌಂದರ್ಯಕ್ಕೆ ಫಿದಾ, ಅಮೆರಿಕದ ಪ್ರಯಾಣ ಸಲಹೆ ಬದಲಾವಣೆಯ ಸುಳಿವು!

'ಪ್ರಧಾನಿಗೆ ನಿಜವಾದ ಕಾಳಜಿ ಇದ್ದರೆ ಸರ್ಕಾರಿ ಶಾಲೆಗಳ ಸುಧಾರಣೆಗೆ 'ಪಿಎಂ ಕೇರ್ಸ್ ಫಂಡ್' ಬಳಸಲಿ: ಅಭಿಜಿತ್ ದೀಪ್ಕೆ ಆಗ್ರಹ

'ಪ್ರತಿಯೊಬ್ಬರಿಗೂ ಕಾರು, ತಿಂಗಳಿಗೆ ₹1 ಲಕ್ಷ ಭತ್ಯೆ': ರಾಜ್ಯದ 234 ಶಾಸಕರಿಗೆ ಭರ್ಜರಿ ಕೊಡುಗೆ ಘೋಷಿಸಿದ ತಮಿಳುನಾಡು CM ವಿಜಯ್!