ನೇಪಾಳ ಪ್ರಧಾನಿ ಸುಶೀಲಾ ಕರ್ಕಿ 
ವಿದೇಶ

'ಅಧಿಕಾರದ ಆಸೆಯಿಂದ ಬಂದಿಲ್ಲ.. 6 ತಿಂಗಳಿಗಿಂತ ಹೆಚ್ಚು ದಿನ ಇರಲ್ಲ': ನೇಪಾಳ ನೂತನ ಪ್ರಧಾನಿ Sushila Karki

ತಾವು ಮತ್ತು ತಮ್ಮ ತಂಡಕ್ಕೆ ಅಧಿಕಾರದಲ್ಲಿ ಆಸಕ್ತಿ ಇಲ್ಲ ಮತ್ತು ಆರು ತಿಂಗಳೊಳಗೆ ದೇಶದ ಜವಾಬ್ದಾರಿಯನ್ನು ಹೊಸ ಸಂಸತ್ತಿಗೆ ಹಸ್ತಾಂತರಿಸುವುದಾಗಿ ಹೇಳಿದ್ದಾರೆ.

ಕಠ್ಮಂಡು: ನಾನು ಅಧಿಕಾರದ ಆಸೆಯಿಂದ ಬಂದಿಲ್ಲ.. 6 ತಿಂಗಳಿಗಿಂತ ಹೆಚ್ಚು ದಿನ ಇರಲ್ಲ ಎಂದು ನೇಪಾಳದ ನೂತನ ಹಂಗಾಮಿ ಪ್ರಧಾನಿ ಸುಶೀಲ ಕರ್ಕಿ ಹೇಳಿದ್ದಾರೆ.

ನೇಪಾಳದ ಮಧ್ಯಂತರ ಪ್ರಧಾನಿ ಮತ್ತು ಸುಪ್ರೀಂ ಕೋರ್ಟ್‌ನ ಮಾಜಿ ಮುಖ್ಯ ನ್ಯಾಯಮೂರ್ತಿ ಸುಶೀಲಾ ಕರ್ಕಿ (Sushila Karki) ಅವರು, 'ತಾವು ಮತ್ತು ತಮ್ಮ ತಂಡಕ್ಕೆ ಅಧಿಕಾರದಲ್ಲಿ ಆಸಕ್ತಿ ಇಲ್ಲ ಮತ್ತು ಆರು ತಿಂಗಳೊಳಗೆ ದೇಶದ ಜವಾಬ್ದಾರಿಯನ್ನು ಹೊಸ ಸಂಸತ್ತಿಗೆ ಹಸ್ತಾಂತರಿಸುವುದಾಗಿ ಹೇಳಿದ್ದಾರೆ.

ಹಂಗಾಮಿ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ 73 ವರ್ಷದ ಸುಶೀಲ ಕರ್ಕಿ ಅವರು, "ನನ್ನ ತಂಡ ಮತ್ತು ನಾನು ಅಧಿಕಾರದ ರುಚಿ ನೋಡಲು ಇಲ್ಲಿಲ್ಲ. ನಾವು ಆರು ತಿಂಗಳಿಗಿಂತ ಹೆಚ್ಚು ಕಾಲ ಇರುವುದಿಲ್ಲ. ನಾವು ಹೊಸ ಸಂಸತ್ತಿಗೆ ಜವಾಬ್ದಾರಿಯನ್ನು ಹಸ್ತಾಂತರಿಸುತ್ತೇವೆ. ನಿಮ್ಮ ಬೆಂಬಲವಿಲ್ಲದೆ ನಾವು ಯಶಸ್ವಿಯಾಗುವುದಿಲ್ಲ" ಎಂದು ಹೇಳಿದರು.

ಇದೇ ವೇಳೆ ನೇಪಾಳದಲ್ಲಿ ಕೆ.ಪಿ. ಶರ್ಮಾ ಓಲಿ ಸರ್ಕಾರ ಉರುಳಿಸಿದ ಭ್ರಷ್ಟಾಚಾರದ ವಿರುದ್ಧ ರಾಷ್ಟ್ರವ್ಯಾಪಿ 'ಜೆನ್-ಝಡ್' ​​ಪ್ರತಿಭಟನೆಗಳನ್ನು ಸುಶೀಲಾ ಕರ್ಕಿ ಶ್ಲಾಘಿಸಿದರು. ಅಂತೆಯೇ ಆಂದೋಲನದ ಸಮಯದಲ್ಲಿ ಕೊಲ್ಲಲ್ಪಟ್ಟವರನ್ನು "ಹುತಾತ್ಮರು" ಎಂದು ಗುರುತಿಸಲಾಗುವುದು ಎಂದು ಹೇಳಿದರು.

ಪ್ರತಿ ಸಂತ್ರಸ್ಥರ ಕುಟುಂಬಗಳಿಗೆ 1 ಮಿಲಿಯನ್ ನೇಪಾಳಿ ರೂಪಾಯಿಗಳ ಪರಿಹಾರವನ್ನು ಅವರು ಘೋಷಿಸಿದರು. ಮಧ್ಯಂತರ ಸರ್ಕಾರವು ಗಾಯಗೊಂಡವರ ಚಿಕಿತ್ಸಾ ವೆಚ್ಚವನ್ನು ಭರಿಸುತ್ತದೆ ಮತ್ತು ಅವರಿಗೆ ಆರ್ಥಿಕವಾಗಿ ಸಹಾಯ ಮಾಡುತ್ತದೆ ಎಂದು ಅವರು ಹೇಳಿದರು.

"ಕೇವಲ 27 ಗಂಟೆಗಳ ಪ್ರತಿಭಟನೆಯಲ್ಲಿ ನಾನು ಅಂತಹ ರೂಪಾಂತರವನ್ನು ಎಂದಿಗೂ ನೋಡಿಲ್ಲ. ನಾವು ದೃಢನಿಶ್ಚಯದಿಂದ ಕೆಲಸ ಮಾಡಬೇಕು ಎಂದರು.

ಅಲ್ಲದೆ ನೇಪಾಳದಲ್ಲಿ ನಡೆದ ಕೆಲ ವಿಧ್ವಂಸಕ ಪ್ರಕರಣಗಳ ಕುರಿತು ಮಾತನಾಡಿದ ಸುಶೀಲಾ ಕರ್ಕಿ, 'ಪ್ರತಿಭಟನೆಗಳ ಹೆಸರಿನಲ್ಲಿ ಏನಾಯಿತು ಎಂಬುದನ್ನು ನೋಡಿದರೆ, ಅದನ್ನು ಯೋಜಿತ ರೀತಿಯಲ್ಲಿ ಕಾರ್ಯಗತಗೊಳಿಸಲಾಗಿದೆ ಎಂದು ತೋರುತ್ತದೆ, ಇದು ಪಿತೂರಿಯ ಪ್ರಶ್ನೆಗಳನ್ನು ಹುಟ್ಟುಹಾಕುತ್ತದೆ. ನಮ್ಮ ಸರ್ಕಾರವು ಅವುಗಳನ್ನು ತನಿಖೆ ಮಾಡುತ್ತದೆ ಮತ್ತು ಅವರ ಆಸ್ತಿಗೆ ಹಾನಿಯಾದವರಿಗೆ ಪರಿಹಾರವನ್ನು ನೀಡುತ್ತದೆ ಎಂದು ಹೇಳಿದರು.

"ವೈಯಕ್ತಿಕ ಆಸ್ತಿಗಳನ್ನು ಸಹ ಸುಟ್ಟುಹಾಕಲಾಯಿತು. ನಾವು ಅವರನ್ನು ಬಿಡುವುದಿಲ್ಲ, ಸರ್ಕಾರವು ಪರಿಹಾರವನ್ನು ನೀಡಲು ಕ್ರಮಗಳ ಮೇಲೆ ಕೆಲಸ ಮಾಡುತ್ತದೆ. ಅದು ಮೃದು ಸಾಲಗಳು ಅಥವಾ ಯಾವುದೇ ಇತರ ಕ್ರಮಗಳ ಮೂಲಕ ಆಗಿರಬಹುದು. ವಿಧ್ವಂಸಕ ಘಟನೆಯಲ್ಲಿ ಭಾಗಿಯಾಗಿರುವವರನ್ನು ತನಿಖೆ ಮಾಡಲಾಗುತ್ತದೆ" ಎಂದು ಅವರು ಹೇಳಿದರು.

ದಿ ಹಿಮಾಲಯನ್ ಟೈಮ್ಸ್ ಪ್ರಕಾರ, ಇತ್ತೀಚಿನ ಪ್ರತಿಭಟನೆಗಳಲ್ಲಿ ಸಾವನ್ನಪ್ಪಿದವರ ಸಂಖ್ಯೆ 72 ಕ್ಕೆ ಏರಿದೆ. ಇದರಲ್ಲಿ 59 ಪ್ರತಿಭಟನಾಕಾರರು, 10 ಜೈಲು ಕೈದಿಗಳು ಮತ್ತು ಮೂವರು ಪೊಲೀಸ್ ಅಧಿಕಾರಿಗಳು ಸೇರಿದ್ದಾರೆ ಎನ್ನಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಧನ್ಕರ್ ವಿಚಾರವಾಗಿ ಎಚ್ಚೆತ್ತ NDA: ನೂತನ ಉಪರಾಷ್ಟ್ರಪತಿಗಳ ಕಾರ್ಯದರ್ಶಿಯಾಗಿ ಪ್ರಧಾನಿ ಮೋದಿ ಸಲಹೆಗಾರ ಅಮಿತ್ ಖರೆ ನೇಮಕ!

Cut Crude oil: ಟ್ರಂಪ್ ಒತ್ತಡದ ಬೆನ್ನಲ್ಲೇ ಕಚ್ಚಾ ತೈಲ, ಅನಿಲ ಆಮದು ಕಡಿತಕ್ಕೆ ಕೇಂದ್ರ ಮುಂದು: ಪ್ರಧಾನಿ ಮೋದಿ ಹೇಳಿದ್ದೇನು?

Assam: ಕಾಂಗ್ರೆಸ್ ನಿಂದ ಪಾಕ್ ಉಗ್ರರಿಗೆ ಬೆಂಬಲ, ನುಸುಳುಕೋರರ ರಕ್ಷಣೆ: ಪ್ರಧಾನಿ ಮೋದಿ ಆರೋಪ! Video

ಸೀಟು ಹಂಚಿಕೆಗೂ ಮುನ್ನ ಬಿಹಾರದಲ್ಲಿ ಇಂಡಿ ಕೂಟಕ್ಕೆ ಏನಾಯ್ತು: ಎಲ್ಲಾ 243 ಕ್ಷೇತ್ರಗಳಲ್ಲಿಯೂ ಸ್ಪರ್ಧಿಸುವುದಾಗಿ ಹೇಳಿದ ತೇಜಸ್ವಿ!

J-K terrorists shift: ಸ್ಥಳೀಯರಿಂದ ಸಿಗದ ಬೆಂಬಲ, ಅರಣ್ಯ 'ಬಂಕರ್' ಗಳಿಗೆ ಉಗ್ರರ ಸ್ಥಳಾಂತರ! ಭಾರತೀಯ ಸೇನೆಗೆ ಹೊಸ ಸವಾಲು

SCROLL FOR NEXT