ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ 
ವಿದೇಶ

'ಪಾಕ್ ಸೇನಾ ಮುಖ್ಯಸ್ಥರು ಬ್ಯಾಟಿಂಗ್ ಮಾಡಿದರೆ ಮಾತ್ರ...': ಭಾರತವನ್ನು ಸೋಲಿಸುವ ಬಗ್ಗೆ ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್

ದುಬೈನಲ್ಲಿ ನಡೆಯುತ್ತಿರುವ ಏಷ್ಯಾಕಪ್‌ 2025 ಪಂದ್ಯಾವಳಿಯಲ್ಲಿ ಭಾರತವು ಪಾಕಿಸ್ತಾನವನ್ನು ಎರಡು ಪಂದ್ಯಗಳಲ್ಲಿ ಸೋಲಿಸಿದ ನಂತರ ಇಮ್ರಾನ್ ಖಾನ್ ಪಿಸಿಬಿ ವಿರುದ್ಧ ವ್ಯಂಗ್ಯ ಹೇಳಿಕೆ ನೀಡಿದ್ದಾರೆ.

ಲಾಹೋರ್: ಪಾಕಿಸ್ತಾನ ಕ್ರಿಕೆಟ್ ಮಂಡಳಿ ಅಧ್ಯಕ್ಷ ಮೊಹ್ಸಿನ್ ನಖ್ವಿ ಅವರನ್ನು ಟೀಕಿಸಿರುವ ಮಾಜಿ ಕ್ರಿಕೆಟಿಗ, ರಾಜಕಾರಣಿ ಇಮ್ರಾನ್ ಖಾನ್, ಭಾರತದ ವಿರುದ್ಧ ಕ್ರಿಕೆಟ್ ಪಂದ್ಯ ಗೆಲ್ಲಬೇಕಾದರೆ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಜೊತೆಗೆ ನಾನು ಆರಂಭಿಕ ಆಟಗಾರರಾಗಿ ಬ್ಯಾಟಿಂಗ್ ಮಾಡಬೇಕು ಎಂದು ಹೇಳಿದ್ದಾರೆ.

ದುಬೈನಲ್ಲಿ ನಡೆಯುತ್ತಿರುವ ಏಷ್ಯಾಕಪ್‌ 2025 ಪಂದ್ಯಾವಳಿಯಲ್ಲಿ ಭಾರತವು ಪಾಕಿಸ್ತಾನವನ್ನು ಎರಡು ಪಂದ್ಯಗಳಲ್ಲಿ ಸೋಲಿಸಿದ ನಂತರ ಇಮ್ರಾನ್ ಖಾನ್ ಪಿಸಿಬಿ ವಿರುದ್ಧ ವ್ಯಂಗ್ಯ ಹೇಳಿಕೆ ನೀಡಿದ್ದಾರೆ.

ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಪ್ರಧಾನಿ ಇಮ್ರಾನ್ ಅವರ ಸಹೋದರಿ ಅಲೀಮಾ ಖಾನ್, ಭಾರತದ ವಿರುದ್ಧ ಕ್ರಿಕೆಟ್ ಪಂದ್ಯ ಗೆಲ್ಲಲು ಏಕೈಕ ಮಾರ್ಗವೆಂದರೆ ಸೇನಾ ಮುಖ್ಯಸ್ಥ ಜನರಲ್ ಮುನೀರ್ ಮತ್ತು ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಅಧ್ಯಕ್ಷ ನಖ್ವಿ ಆರಂಭಿಕರಾಗಿ ಬ್ಯಾಟಿಂಗ್ ಮಾಡಿದರೆ ಮಾತ್ರ ಸಾಧ್ಯ. ಆದರೆ, ಅಂಪೈರ್‌ಗಳಾಗಿ ಪಾಕಿಸ್ತಾನದ ಮಾಜಿ ಮುಖ್ಯ ನ್ಯಾಯಮೂರ್ತಿ ಖಾಜಿ ಫೈಜ್ ಇಸಾ ಮತ್ತು ಪಾಕಿಸ್ತಾನದ ಮುಖ್ಯ ಚುನಾವಣಾ ಆಯುಕ್ತ ಸಿಕಂದರ್ ಸುಲ್ತಾನ್ ರಾಜಾ ಇರಬೇಕು ಎಂದು ಇಮ್ರಾನ್ ಸೂಚಿಸಿದ್ದಾರೆ ಎಂದು ಹೇಳಿದರು.

ಮೂರನೇ ಅಂಪೈರ್ ಇಸ್ಲಾಮಾಬಾದ್ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಸರ್ಫರಾಜ್ ದೋಗರ್ ಆಗಿರಬೇಕು ಎಂದು ಅವರು ಹೇಳಿದ್ದಾಗಿ ತಿಳಿಸಿದ್ದಾರೆ.

ಭಾರತದ ವಿರುದ್ಧ ಪಾಕಿಸ್ತಾನ ಕ್ರಿಕೆಟ್ ತಂಡದ ಸತತ ಸೋಲುಗಳ ಬಗ್ಗೆ ತನ್ನ ಸಹೋದರನಿಗೆ ಹೇಳಿದ್ದಾಗಿ ಅಲೀಮಾ ಹೇಳಿದ್ದಾರೆ.

1992ರಲ್ಲಿ ಪಾಕಿಸ್ತಾನವನ್ನು ಏಕದಿನ ವಿಶ್ವಕಪ್‌ನಲ್ಲಿ ಮೊದಲ ಮತ್ತು ಏಕೈಕ ಗೆಲುವಿಗೆ ಕಾರಣರಾದ ಖಾನ್, ತಮ್ಮ ಅಸಮರ್ಥತೆ ಮತ್ತು ಸ್ವಜನಪಕ್ಷಪಾತದಿಂದ ಪಾಕಿಸ್ತಾನಿ ಕ್ರಿಕೆಟ್ ಅನ್ನು ನಾಶಮಾಡಿದ್ದಕ್ಕೆ ನಖ್ವಿ ಅವರನ್ನು ದೂಷಿಸುತ್ತಾರೆ.

2024ರ ಫೆಬ್ರುವರಿಯಲ್ಲಿ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ಆಗಿನ ಸಿಜೆಪಿ ಇಸಾ ಮತ್ತು ಮುಖ್ಯ ಚುನಾವಣಾ ಆಯುಕ್ತ ರಾಜಾ ಅವರ ಸಹಾಯದಿಂದ ಜನರಲ್ ಮುನೀರ್ ತಮ್ಮ ಪಕ್ಷವಾದ ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್‌ನ ಜನಾದೇಶವನ್ನು ಕದ್ದಿದ್ದಾರೆ ಎಂದು 72 ವರ್ಷದ ಇಮ್ರಾನ್ ಬಹಳ ಹಿಂದಿನಿಂದಲೂ ಆರೋಪಿಸುತ್ತಿದ್ದಾರೆ.

ಪಿಟಿಐ ಸಂಸ್ಥಾಪಕ 2023ರ ಆಗಸ್ಟ್‌ನಿಂದ ಹಲವಾರು ಪ್ರಕರಣಗಳಲ್ಲಿ ಜೈಲಿನಲ್ಲಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೆಹಲಿ ಸ್ಫೋಟ ಸಂತ್ರಸ್ತರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ, ಸಂಜೆ 5.30ಕ್ಕೆ CCS ತುರ್ತು ಸಭೆ!

Delhi Blast: 'ಬಿಹಾರ ಚುನಾವಣೆ ಸಮಯದಲ್ಲೇ ಏಕೆ ಸ್ಫೋಟ ನಡೆಯಿತು..? ಯಾರೂ ಗೂಟ ಹೊಡೆದು ಇರಲ್ಲ': ಸಚಿವ ಜಮೀರ್ ವಿಚಿತ್ರ ಪ್ರಶ್ನೆ

ಎಲೆಕ್ಷನ್ ಗೆಲವಿನ ಕತೆ ಹಾಗಿರಲಿ, ಬಿಹಾರ ಗೆಲ್ಲುವುದು ಯಾವಾಗ ಎಂಬುದೇ ಪ್ರಶ್ನೆ (ತೆರೆದ ಕಿಟಕಿ)

ಜಮ್ಮು ಮತ್ತು ಕಾಶ್ಮೀರ: ನಿಷೇಧಿತ ಜಮಾತ್-ಎ-ಇಸ್ಲಾಮಿ ವಿರುದ್ಧ ಬೃಹತ್ ಕಾರ್ಯಾಚರಣೆ; ಕುಲ್ಗಾಮ್‌ನ 200 ಸ್ಥಳಗಳಲ್ಲಿ ದಾಳಿ!

Cricket: 'ಯಾರೂ ನಮ್ಮನ್ನ ಕ್ಷಮಿಸೊಲ್ಲ.. ನಾವೇನೂ ರೊಬೋಟ್ ಗಳಲ್ಲ..': ಪಾಕಿಸ್ತಾನ ವೇಗಿ ಹ್ಯಾರಿಸ್ ರೌಫ್ ಆಕ್ರೋಶ!

SCROLL FOR NEXT