ಡೊನಾಲ್ಡ್ ಟ್ರಂಪ್ online desk
ವಿದೇಶ

ಹಾರ್ಮುಜ್ ಜಲಸಂಧಿ ತೆರೆಯಲಾಗುವುದು, ಆದರೆ...: ಟ್ರಂಪ್‌ಗೆ ಇರಾನ್ ಕೊಟ್ಟ ಸಂದೇಶವೇನು?

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಕಠಿಣ ಎಚ್ಚರಿಕೆ ನೀಡಿದ ಇರಾನ್ ಸಂಸತ್ತಿನ ರಾಷ್ಟ್ರೀಯ ಭದ್ರತಾ ಆಯೋಗದ ಮುಖ್ಯಸ್ಥ ಇಬ್ರಾಹಿಂ ಅಜೀಜಿ ಅವರು, ಹಾರ್ಮುಜ್ ಜಲಸಂಧಿಯನ್ನು ಅಮೆರಿಕಕ್ಕೆ ಮುಚ್ಚಲಾಗುವುದು ಎಂದು ಹೇಳಿದ್ದಾರೆ.

ಟೆಹ್ರಾನ್: ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆ, ಇರಾನ್ ತನ್ನ ಹೊಸ ನಿಯಮಗಳನ್ನು ಪಾಲಿಸದವರಿಗೆ ಹಾರ್ಮುಜ್ ಜಲಸಂಧಿಯನ್ನು ಮುಚ್ಚುವುದಾಗಿ ಎಚ್ಚರಿಕೆ ನೀಡಿದೆ. ಇದು ಪಶ್ಚಿಮ ಏಷ್ಯಾದ ತೈಲ ಬಿಕ್ಕಟ್ಟ ಮತ್ತಷ್ಟು ಉಲ್ಬಣಗೊಳ್ಳುವ ಸೂಚನೆ ನೀಡಿದ್ದು, ಜಾಗತಿಕ ತೈಲ ಪೂರೈಕೆ ಮಾರ್ಗಗಳ ಬಗ್ಗೆ ಕಳವಳ ಹುಟ್ಟುಹಾಕಿದೆ.

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಕಠಿಣ ಎಚ್ಚರಿಕೆ ನೀಡಿದ ಇರಾನ್ ಸಂಸತ್ತಿನ ರಾಷ್ಟ್ರೀಯ ಭದ್ರತಾ ಆಯೋಗದ ಮುಖ್ಯಸ್ಥ ಇಬ್ರಾಹಿಂ ಅಜೀಜಿ ಅವರು, ಹಾರ್ಮುಜ್ ಜಲಸಂಧಿಯನ್ನು ಅಮೆರಿಕಕ್ಕೆ ಮುಚ್ಚಲಾಗುವುದು ಎಂದು ಹೇಳಿದ್ದಾರೆ.

ಕಾರ್ಯತಂತ್ರದ ಜಲಮಾರ್ಗವನ್ನು "ಖಂಡಿತವಾಗಿಯೂ" ಮತ್ತೆ ತೆರೆಯಲಾಗುವುದು. ಆದರೆ "ಟ್ರಂಪ್‌ಗಾಗಿ ಅಲ್ಲ" ಎಂದು ಇಬ್ರಾಹಿಂ ಅಜೀಜಿ ಅವರು ಹೇಳಿದ್ದಾರೆ.

ಯುಎಸ್ ಮತ್ತು ಇಸ್ರೇಲಿ ಪಡೆಗಳು ಇರಾನ್ ಮೇಲೆ ದಾಳಿ ಮಾಡುವುದನ್ನು ಮುಂದುವರೆಸುತ್ತಿರುವಾಗ, ಟೆಹ್ರಾನ್ ಕೊಲ್ಲಿಯಾದ್ಯಂತ ಪ್ರತೀಕಾರ ತೀರಿಸಿಕೊಳ್ಳುತ್ತಿದೆ ಮತ್ತು ಹಾರ್ಮುಜ್ ಜಲಸಂಧಿಯನ್ನು ನಿರ್ಬಂಧಿಸುತ್ತಿದೆ.

"ಅಂತಿಮವಾಗಿ, ಟ್ರಂಪ್ "ಆಡಳಿತ ಬದಲಾವಣೆ"ಯ ಕನಸು ಛಿದ್ರವಾಗಿದೆ. ಆದರೆ ಈ ಪ್ರದೇಶದ ಸಮುದ್ರಗಳ ಆಡಳಿತದಲ್ಲಿ! ಹಾರ್ಮುಜ್ ಜಲಸಂಧಿಯನ್ನು ಖಂಡಿತವಾಗಿಯೂ ತೆರೆಯಲಾಗುತ್ತದೆ; ಆದರೆ ನಿಮಗಾಗಿ ಅಲ್ಲ! ಇರಾನ್ ಇಸ್ಲಾಮಿಕ್ ಗಣರಾಜ್ಯದ ಹೊಸ ನಿಯಮಗಳನ್ನು ಪಾಲಿಸುವವರಿಗೆ. 47 ವರ್ಷಗಳ ಆತಿಥ್ಯದ ಯುಗ ಈಗ ಮುಗಿದಿದೆ" ಎಂದು ಇಬ್ರಾಹಿಂ ಅಜೀಜಿ ಹೇಳಿದ್ದಾರೆ.

ಇದಕ್ಕೂ ಮೊದಲು, ಟ್ರಂಪ್ ವರದಿಗಾರರನ್ನು ಉದ್ದೇಶಿಸಿ ಮಾತನಾಡುತ್ತಾ, ಅಮೆರಿಕ ಶೀಘ್ರದಲ್ಲೇ ಇರಾನ್ ತೊರೆಯಲಿದೆ ಎಂದು ಹೇಳಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Basmati ಅಕ್ಕಿ ಭಾರತಕ್ಕೆ ಮಾತ್ರ ಸೀಮಿತವಲ್ಲ: ವಿಶೇಷ ಟ್ರೇಡ್‌ಮಾರ್ಕ್ ನೀಡಲು ಆಸ್ಟ್ರೇಲಿಯಾ ಕೋರ್ಟ್ ನಕಾರ, ರಫ್ತುದಾರರಲ್ಲಿ ಹೆಚ್ಚಿದ ಆತಂಕ

ತಮಿಳುನಾಡಿನಲ್ಲಿ ಸಿಎಂ ವಿಜಯ್ ಬಂಪರ್ ಘೋಷಣೆ: ವರ್ಷಕ್ಕೆ 3 ಉಚಿತ LPG ಸಿಲಿಂಡರ್; ಮಹಿಳೆಯರ ಉಚಿತ ಬಸ್ ಪ್ರಯಾಣ ವಿಸ್ತರಣೆ, ಪರಂದೂರು ವಿಮಾನ ನಿಲ್ದಾಣಕ್ಕೆ ಬ್ರೇಕ್..!

ಕಾವೇರಿ ನೀರಿಗಾಗಿ ತಮಿಳುನಾಡು ಕ್ಯಾತೆ: ಆಗಸ್ಟ್.31ಕ್ಕೆ ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್

ವಾಲ್ಮೀಕಿ ನಿಗಮ ಹಗರಣ: ಸಚಿವ ಬಿ. ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ BJP ಬೃಹತ್ ಪ್ರತಿಭಟನೆ, ಅಶೋಕ್-ವಿಜಯೇಂದ್ರ ಸೇರಿ ಹಲವರು ಪೊಲೀಸರ ವಶಕ್ಕೆ..!

ದೆಹಲಿಯಲ್ಲಿ ಭೀಕರ ಅಪಘಾತ: ನಿಯಂತ್ರಣ ತಪ್ಪಿ ಡಿವೈಡರ್‌ ದಾಟಿ SUVಗೆ ಕಾರು ಡಿಕ್ಕಿ, ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸೇರಿ 6 ಮಂದಿಗೆ ಗಾಯ..!