ಬೈರುತ್ ದಾಳಿಯಲ್ಲಿ ಹೆಜ್ಬೊಲ್ಲಾ ಮುಖ್ಯಸ್ಥನ ಸಲಹೆಗಾರ ಹತ 
ವಿದೇಶ

ಲೆಬೆನಾನ್ ಮೇಲೆ ಇಸ್ರೇಲ್ ದಾಳಿ; Hezbollah ಮುಖ್ಯಸ್ಥನ ಸಲಹೆಗಾರ ಹತ!

ನಿನ್ನೆ, ಐಡಿಎಫ್ ಬೈರುತ್ ಪ್ರದೇಶದಲ್ಲಿ ದಾಳಿ ಮಾಡಿ ಹೆಜ್ಬೊಲ್ಲಾ ಪ್ರಧಾನ ಕಾರ್ಯದರ್ಶಿ ನಯೀಮ್ ಖಾಸೆಮ್ ಅವರ ವೈಯಕ್ತಿಕ ಕಾರ್ಯದರ್ಶಿ ಮತ್ತು ಸೋದರಳಿಯ ಅಲಿ ಯೂಸುಫ್ ಹರ್ಷಿಯನ್ನು ಹತ್ಯೆ ಮಾಡಿದೆ.

ಬೈರುತ್: ಇರಾನ್ ಕದನ ವಿರಾಮ ಬೆನ್ನಲ್ಲೇ ಲೆಬೆನಾನ್ ಮೇಲೆ ಮುಗಿಬಿದ್ದಿರುವ ಇಸ್ರೇಲ್ ಸೇನೆ ಹೆಜ್ಬೊಲ್ಲಾ ಉಗ್ರ ಸಂಘಟನೆಯ ಮುಖ್ಯಸ್ಥನ ಆಪ್ತ ಸಲಹೆಗಾರನ ಹೊಡೆದುರುಳಿಸಿದೆ ಎಂದು ತಿಳಿದುಬಂದಿದೆ.

ಈ ಬಗ್ಗೆ ಸ್ವತಃ ಇಸ್ರೇಲ್ ಸೇನೆ ಮಾಹಿತಿ ನೀಡಿದ್ದು, ಇಸ್ರೇಲ್ ಸೇನೆಯು ಗುರುವಾರ ಬೈರುತ್‌ನಲ್ಲಿ ಹಿಜ್ಬೊಲ್ಲಾ ಮುಖ್ಯಸ್ಥ ನಯೀಮ್ ಖಾಸೆಮ್‌ನ ಆಪ್ತ ಸಲಹೆಗಾರನನ್ನು ಹೊಡೆದು ಕೊಂದಿದೆ ಎಂದು ಹೇಳಿದೆ.

"ನಿನ್ನೆ, ಐಡಿಎಫ್ ಬೈರುತ್ ಪ್ರದೇಶದಲ್ಲಿ ದಾಳಿ ಮಾಡಿ ಹೆಜ್ಬೊಲ್ಲಾ ಪ್ರಧಾನ ಕಾರ್ಯದರ್ಶಿ ನಯೀಮ್ ಖಾಸೆಮ್ ಅವರ ವೈಯಕ್ತಿಕ ಕಾರ್ಯದರ್ಶಿ ಮತ್ತು ಸೋದರಳಿಯ ಅಲಿ ಯೂಸುಫ್ ಹರ್ಷಿಯನ್ನು ಹತ್ಯೆ ಮಾಡಿದೆ" ಎಂದು ಮಿಲಿಟರಿ ಹೇಳಿಕೆ ತಿಳಿಸಿದೆ.

ಹರ್ಷಿ ಹೆಜ್ಬೊಲ್ಲಾ ಪ್ರಧಾನ ಕಾರ್ಯದರ್ಶಿ ಖಾಸೆಮ್‌ಗೆ ನಿಕಟ ಸಹವರ್ತಿ ಮತ್ತು ವೈಯಕ್ತಿಕ ಸಲಹೆಗಾರರಾಗಿದ್ದ ಮತ್ತು ಅವರ ಕಚೇರಿಯನ್ನು ನಿರ್ವಹಿಸುವಲ್ಲಿ ಮತ್ತು ಭದ್ರಪಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು ಎಂದು ಅದು ಹೇಳಿದೆ.

ಹಿಜ್ಬೊಲ್ಲಾ ದಹಿಯೆಹ್ ಭದ್ರಕೋಟೆಯ ಹೊರಗೆ ಬೈರುತ್‌ನ ಟ್ಯಾಲೆಟ್ ಖಯಾತ್ ನೆರೆಹೊರೆಯಲ್ಲಿ ನಡೆದ ದಾಳಿಯಲ್ಲಿ ಅಲಿ ಯೂಸುಫ್ ಹರ್ಷಿಯನ್ನು ಹೊಡೆದುರುಳಿಸಲಾಗಿದೆ ಎಂದು ಇಸ್ರೇಲ್ ಹೇಳಿದೆ. ಅಂತೆಯೇ ಈ ದಾಳಿಯಲ್ಲಿ ಬಹುಮಹಡಿ ಕಟ್ಟಡ ಭಾಗಶಃ ಕುಸಿದಿದೆ ಎಂದು ದೃಶ್ಯಗಳು ತೋರಿಸಿವೆ.

ಯಾರು ಈ ಹರ್ಷಿ?

ಹರ್ಷಿ ಖಾಸೆಮ್ ಅವರ ಸೋದರಳಿಯ ಮತ್ತು ವೈಯಕ್ತಿಕ ಕಾರ್ಯದರ್ಶಿ ಎಂದು ಇಸ್ರೇಲ್ ಮಿಲಿಟರಿ ಹೇಳಿದೆ. "ಹರ್ಷಿ ಹೆಜ್ಬೊಲ್ಲಾ ಪ್ರಧಾನ ಕಾರ್ಯದರ್ಶಿ ನಯೀಮ್ ಖಾಸೆಮ್ ಅವರ ನಿಕಟ ಸಹವರ್ತಿ ಮತ್ತು ವೈಯಕ್ತಿಕ ಸಲಹೆಗಾರರಾಗಿದ್ದ. ಅವರ ಕಚೇರಿ ಮತ್ತು ಅವರ ಭದ್ರತೆಯನ್ನು ನಿರ್ವಹಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಎಂದು ಹೇಳಲಾಗಿದೆ.

ಏತನ್ಮಧ್ಯೆ, ಹೆಜ್ಬೊಲ್ಲಾ ಸಂಘಟನೆ ತನ್ನ ಸಾವಿರಾರು ಶಸ್ತ್ರಾಸ್ತ್ರಗಳು, ರಾಕೆಟ್‌ಗಳು ಮತ್ತು ಲಾಂಚರ್‌ಗಳನ್ನು ದಕ್ಷಿಣ ಲೆಬನಾನ್‌ಗೆ ವರ್ಗಾಯಿಸಲು ಬಳಸುತ್ತಿದ್ದ ಎರಡು "ಕೇಂದ್ರ" ಲಿಟಾನಿ ನದಿ ದಾಟುವಿಕೆಗಳನ್ನು ರಾತ್ರಿಯಿಡೀ ಇಸ್ರೇಲ್ ಸೇನೆ ಹೊಡೆದಿದೆ ಎಂದು ಐಡಿಎಫ್ ಹೇಳಿದೆ.

ಹೆಚ್ಚುವರಿಯಾಗಿ, ದಕ್ಷಿಣ ಲೆಬನಾನ್‌ನಲ್ಲಿ ಸುಮಾರು 10 ಶಸ್ತ್ರಾಸ್ತ್ರ ಡಿಪೋಗಳು, ರಾಕೆಟ್ ಲಾಂಚರ್‌ಗಳು ಮತ್ತು ಹೆಜ್ಬೊಲ್ಲಾ ಪ್ರಧಾನ ಕಚೇರಿಗಳನ್ನು ಹೊಡೆದುರುಳಿಸಲಾಗಿದೆ ಎಂದು ಇಸ್ರೇಲ್ ಮಿಲಿಟರಿ ಹೇಳಿಕೊಂಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Strait of Hormuz: 'ಮುಲಾಜೇ ಇಲ್ಲ, ಅನುಮತಿ ಇಲ್ದೇ ಬಂದ್ರೆ ಹೊಡೆದುರುಳಿಸ್ತೀವಿ': Iran ಎಚ್ಚರಿಕೆ

Kerala, Karnataka Bypoll & Assam, Puducherry Election 2026 Live Updates |ಮಧ್ಯಾಹ್ನ 1ರವರೆಗೆ ಅಸ್ಸಾಂನಲ್ಲಿ ಶೇ. 59.63, ಕೇರಳದ ಶೇ. 49.7, ಪುದುಚೆರಿ ಶೇ. 56.83 ಮತದಾನ, ಸೊನಿತ್ಪುರ್ ನಲ್ಲಿ ಮತಗಟ್ಟೆ ಅಧಿಕಾರಿ ಸಾವು

Video: ಈರುಳ್ಳಿ ಖರೀದಿಗೆ ರೈತ ತಂದಿದ್ದ 5 ಲಕ್ಷ ರೂ ಹಣ ಕದ್ದ ಖತರ್ನಾಕ್ ಕಳ್ಳ; ದುಷ್ಕರ್ಮಿ ಕೈಚಳಕ CCTVಯಲ್ಲಿ ಸೆರೆ!

ಬಾರಾಮತಿ ಉಪಚುನಾವಣೆ: ಸುನೇತ್ರಾ ಅವಿರೋಧ ಆಯ್ಕೆ ಬಯಸುತ್ತಿರುವ ಫಡ್ನವೀಸ್, ಸುಪ್ರಿಯಾ; ಕಣದಿಂದ ಹಿಂದೆ ಸರಿಯುವಂತೆ ಕಾಂಗ್ರೆಸ್ ಗೆ ಒತ್ತಾಯ!

ಲೆಬನಾನ್ ಮೇಲೆ ದಾಳಿ: ಅಮೆರಿಕಾ ವಿರುದ್ಧ ಇರಾನ್ ತೀವ್ರ ಕಿಡಿ; ಮಾತುಕತೆಗೂ ಮುನ್ನವೇ ಕದನ ವಿರಾಮ ಉಲ್ಲಂಘನೆ, ಸಂಧಾನ ಪ್ರಯತ್ನ ಅರ್ಥಹೀನ ಎಂದ ಟೆಹ್ರಾನ್

SCROLL FOR NEXT