ಮಿಯಾ ಖಲೀಫಾ 
ವಿದೇಶ

Video: 'ಇದು ಅತ್ಯಂತ ನೋವಿನ ದಿನ'; ಕಣ್ಣೀರಿಟ್ಟ ನೀಲಿ ಚಿತ್ರತಾರೆ ಮಿಯಾ ಖಲೀಫಾ

ಲೆಬನಾನ್ ಮೇಲೆ ದಾಳಿ ಬಳಿಕ ನೀಲಿ ಚಿತ್ರಗಳ ಮಾಜಿ ತಾರೆ ಮಿಯಾ ಖಲೀಫಾ ಅವರು ತಮ್ಮ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹಂಚಿಕೊಂಡಿದ್ದು, ಅದರಲ್ಲಿ ಕಣ್ಣೀರು ಹಾಕಿದ್ದಾರೆ.

ಸುಮಾರು 40 ದಿನಗಳ ಭೀಕರ ಯುದ್ಧದ ಬಳಿಕ ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವೆ ಕದನ ವಿರಾಮ ಘೋಷಣೆಯಾಗಿದ್ದು, ಇದರ ಬೆನ್ನಲ್ಲೇ ಇಸ್ರೇಲ್ ಲೆಬನಾನ್ ಮೇಲೆ ವೈಮಾನಿಕ ದಾಳಿ ನಡೆಸಿದೆ. ಈ ದಾಳಿಯಲ್ಲಿ 250ಕ್ಕೂ ಹೆಚ್ಚು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.

ಲೆಬನಾನ್ ಮೇಲೆ ದಾಳಿ ಬಳಿಕ ನೀಲಿ ಚಿತ್ರಗಳ ಮಾಜಿ ತಾರೆ ಮಿಯಾ ಖಲೀಫಾ ಅವರು ತಮ್ಮ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹಂಚಿಕೊಂಡಿದ್ದು, ಅದರಲ್ಲಿ ಕಣ್ಣೀರು ಹಾಕಿದ್ದಾರೆ.

ಸದ್ಯ ಅಮೆರಿಕದಲ್ಲಿ ನೆಲೆಸಿರುವ ಮಿಯಾ ಖಲೀಫಾ ಅವರು ಮೂಲತಃ ಲೆಬನಾನ್​​ನವರು. ಹೀಗಾಗಿ ತಾಯ್ನಾಡಿನ ಮೇಲೆ ನಡೆದ ಬಾಂಬ್ ದಾಳಿಯನ್ನು ಮಿಯಾ ಖಂಡಿಸಿದ್ದಾರೆ.

ಇನ್​​ಸ್ಟಾಗ್ರಾಂನಲ್ಲಿ ಹಂಚಿಕೊಂಡಿರುವ ವಿಡಿಯೋದಲ್ಲಿ ಅಳುತ್ತಲೇ ಮಾತನಾಡಿರುವ ಮಿಯಾ ಖಲೀಫಾ, ‘ಇದು ಅತ್ಯಂತ ನೋವಿನ ದಿನ. ನಾವು ದಾಳಿಯ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ನೋಡುತ್ತಿರುವುದನ್ನು ಇಷ್ಟು ವರ್ಷಗಳಲ್ಲಿ ನೋಡಿಯೇ ಇಲ್ಲ. ನರಮೇಧವನ್ನೇ ನಡೆಸಲಾಗುತ್ತಿದೆ. ಕಳೆದೊಂದು ದಶಕದಲ್ಲಿ ಇಂಥಹಾ ನರಮೇಧವನ್ನು ಯಾರೂ ನೋಡಿಲ್ಲ. ಕೇವಲ 10 ನಿಮಿಷದಲ್ಲಿ 160 ವಾಯುದಾಳಿಗಳನ್ನು ಲೆಬನಾನ್ ಮೇಲೆ ಮಾಡಲಾಗಿದೆ. ಶಾಲೆ, ಆಸ್ಪತ್ರೆ, ಸಾರ್ವಜನಿಕರು ವಾಸಿಸುವ ಪ್ರದೇಶಗಳು, ಸ್ಮಶಾನಗಳನ್ನು ಗುರಿ ಮಾಡಿಕೊಂಡು ಇಸ್ರೇಲ್ ದಾಳಿ ನಡೆಸಿದೆ, ಅದೂ ಕದನ ವಿರಾಮದ ಅವಧಿಯಲ್ಲಿ’ ಎಂದಿದ್ದಾರೆ ಮಿಯಾ ಖಲೀಫಾ ಹೇಳಿದ್ದಾರೆ.

‘ನನ್ನ ತೆರಿಗೆ ಹಣವನ್ನು(ಅಮೆರಿಕದಲ್ಲಿ ಅವರು ಪಾವತಿಸುವ ಹಣ) ನನ್ನ ಮಾತೃಭೂಮಿಯನ್ನು ಧ್ವಂಸ ಮಾಡಲು ಬಳಸಲಾಗುತ್ತಿದೆ. ಇದಕ್ಕೆ ಹೇಗೆ ನಾನು ಪ್ರತಿಕ್ರಿಯಿಸಬೇಕು ಅರ್ಥವಾಗುತ್ತಿಲ್ಲ. ನನಗೆ ಏನು ಹೇಳಬೇಕು ಎಂದು ಸಹ ತೋಚುತ್ತಿಲ್ಲ. ನನಗೆ ಪದಗಳೇ ಬರುತ್ತಿಲ್ಲ. ಇಷ್ಟು ದಿನ ನನಗೆ ಸರಿ ಎನಿಸುವ ಬೇರೆಯವರ ಅಭಿಪ್ರಾಯಗಳನ್ನು ನಾನು ಹಂಚಿಕೊಳ್ಳುತ್ತಿದ್ದೆ. ಆದರೆ ಈಗ ನಾನೇ ಮಾತನಾಡುತ್ತಿದ್ದೇನೆ’ ಎಂದಿದ್ದಾರೆ ಮಿಯಾ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜೀನಾಮೆ ಬಗ್ಗೆ ಖುದ್ದು ಸುಳಿವು ನೀಡಿದ CM ಸಿದ್ದರಾಮಯ್ಯ; ಸಾಮಾಜಿಕ ಮಾಧ್ಯಮದಲ್ಲಿ ಮಹತ್ವದ ಪೋಸ್ಟ್​!

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ಸಿಎಂ ಸಿದ್ದರಾಮಯ್ಯ ಪದತ್ಯಾಗ; ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಹತ್ವದ ಸಭೆ

Mysuru Rain: ಸಿಡಿಲು ಬಡಿದು ಬೆಂಗಳೂರಿನ ಟೆಕ್ಕಿ ಸಾವು

SCROLL FOR NEXT