ಡೊನಾಲ್ಡ್ ಟ್ರಂಪ್ 
ವಿದೇಶ

West-Asia war: ಒಪ್ಪಂದ ಪೂರ್ಣಗೊಳ್ಳದ ಹೊರತು ಸೇನೆ ಹಿಂಪಡೆಯಲ್ಲ; ಅಮೆರಿಕಾ ದ್ವಂದ್ವ ನಿಲುವು; ಮಧ್ಯಪ್ರಾಚ್ಯದಲ್ಲಿ ಮುಂದುವರೆದ ಉದ್ವಿಗ್ನತೆ..!

ಇರಾನ್ ಒಪ್ಪಂದವನ್ನು ಉಲ್ಲಂಘಿಸಿದರೆ “ಇದಕ್ಕೂ ಮುಂಚೆ ಯಾರೂ ನೋಡದ ಮಟ್ಟದ ಸೈನಿಕ ಕಾರ್ಯಾಚರಣೆ ಕೈಗೊಳ್ಳುವ ಎಚ್ಚರಿಕೆಯನ್ನೂ ನೀಡಿದ್ದಾರೆ.

ಇರಾನ್ ಜೊತೆ ಕದನ ವಿರಾಮ ಘೋಷಿಸಿದ ಬಳಿಕವೂ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಮತ್ತೊಮ್ಮೆ ಕಠಿಣ ನಿಲುವು ತಾಳಿದ್ದು, ಒಪ್ಪಂದ ಸಂಪೂರ್ಣ ಜಾರಿಗೆ ತರುವವರೆಗೂ ಇರಾನ್ ಸುತ್ತಮುತ್ತ ಇರುವ ಅಮೆರಿಕಾ ಸೇನೆಯನ್ನು ಹಿಂಪಡೆಯುವುದಿಲ್ಲ ಎಂದು ದ್ವಂದ್ವ ನಿಲುವನ್ನು ವ್ಯಕ್ತಪಡಿಸಿದ್ದಾರೆ.

ಸಾಮಾಜಿಕ ಜಾಲತಾಣದ ಮೂಲಕ ಟ್ರಂಪ್ ಅವರು ಹೇಳಿಕೆ ನೀಡಿದ್ದು, ಅಮೆರಿಕಾ ನೌಕಾಪಡೆ ಹಡಗುಗಳು, ಯುದ್ಧ ವಿಮಾನಗಳು ಮತ್ತು ಸೈನಿಕರು ಹೆಚ್ಚುವರಿ ಶಸ್ತ್ರಾಸ್ತ್ರಗಳೊಂದಿಗೆ ತಾವಿರುವ ಸ್ಥಳದಲ್ಲೇ ಇರಲಿದ್ದಾರೆ. ಇರಾನ್ ಒಪ್ಪಂದದ ನಿಯಮಗಳನ್ನು ಸಂಪೂರ್ಣ ಪಾಲಿಸುವವರೆಗೆ ಹಿಂತೆಗೆದುಕೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಇದಷ್ಟೇ ಅಲ್ಲದೆ, ಇರಾನ್ ಒಪ್ಪಂದವನ್ನು ಉಲ್ಲಂಘಿಸಿದರೆ “ಇದಕ್ಕೂ ಮುಂಚೆ ಯಾರೂ ನೋಡದ ಮಟ್ಟದ ಸೈನಿಕ ಕಾರ್ಯಾಚರಣೆ ಕೈಗೊಳ್ಳುವ ಎಚ್ಚರಿಕೆಯನ್ನೂ ನೀಡಿದ್ದಾರೆ.

ಇದರ ನಡುವೆ, ಲೆಬನಾನ್ ಪ್ರದೇಶದಲ್ಲಿ ಇಸ್ರೇಲ್ ದಾಳಿಗಳು ಹಾಗೂ ಹಿಜ್ಬುಲ್ಲಾ ಪ್ರತಿದಾಳಿ ಹಿನ್ನೆಲೆಯಲ್ಲಿ ಕದನ ವಿರಾಮಕ್ಕೆ ಧಕ್ಕೆಯಾಗಿದ್ದು, ಇರಾನ್ ಈ ದಾಳಿಗಳನ್ನು ಒಪ್ಪಂದ ಉಲ್ಲಂಘನೆ ಎಂದು ಆರೋಪಿಸಿ, ಮುಂದಿನ ಮಾತುಕತೆಗಳ ಬಗ್ಗೆ ಅನುಮಾನ ವ್ಯಕ್ತಪಡಿಸಿದೆ.

ಅಂತಾರಾಷ್ಟ್ರೀಯ ಮಟ್ಟದಲ್ಲಿ ಈ ಬೆಳವಣಿಗೆಗಳು ದೊಡ್ಡ ಆತಂಕಕ್ಕೆ ಕಾರಣವಾಗಿವೆ. ತೈಲ ಸಾಗಣೆಗಾಗಿ ಪ್ರಮುಖ ಮಾರ್ಗವಾದ ಹಾರ್ಮುಜ್ ಜಲಸಂಧಿ ಮತ್ತೆ ಬಂದ್ ಆಗಿದ್ದು, ಇದು ಜಾಗತಿಕ ಮಾರುಕಟ್ಟೆಗಳಿಗೆ ಭಾರೀ ಹೊಡೆತ ಬೀಳುವ ಎಚ್ಚರಿಕೆಯನ್ನು ನೀಡುತ್ತಿದೆ.

ಇದೇ ವೇಳೆ, ನಾಟೋ ಮಿತ್ರ ರಾಷ್ಟ್ರಗಳು ಇರಾನ್ ವಿರುದ್ಧದ ಕಾರ್ಯಾಚರಣೆಯಲ್ಲಿ ಅಮೆರಿಕಾಗೆ ಪೂರ್ಣ ಬೆಂಬಲ ನೀಡದಿರುವುದರಿಂದ ಟ್ರಂಪ್ ಅಸಮಾಧಾನಗೊಂಡಿದ್ದು, ಒಕ್ಕೂಟದ ಮೇಲೆ ಟೀಕೆ ಮುಂದುವರಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ