ಡೊನಾಲ್ಡ್ ಟ್ರಂಪ್ 
ವಿದೇಶ

ಇರಾನ್ ಶಾಂತಿ ಒಪ್ಪಂದಕ್ಕೆ ಸಹಿ ಹಾಕುವವರೆಗೂ ದಿಗ್ಬಂಧನ ತೆರವುಗೊಳಿಸಲ್ಲ: ಡೊನಾಲ್ಡ್ ಟ್ರಂಪ್

ಮತ್ತೊಂದೆಡೆ ಟ್ರಂಪ್ ಎಚ್ಚರಿಕೆಗೆ ತಿರುಗೇಟು ನೀಡಿರುವ ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯನ್, ಇರಾನ್‌ನಲ್ಲಿ ಅಮೆರಿಕ ಸರ್ಕಾರದ ಬಗ್ಗೆ ಅಪನಂಬಿಕೆ ಇದೆ ಮತ್ತು ಇರಾನಿಯನ್ನರು ಬಲವಂತಕ್ಕೆ ಮಣಿಯುವುದಿಲ್ಲ ಎಂದು ಹೇಳಿದ್ದಾರೆ.

ವಾಷಿಂಗ್ಟನ್: ಶಾಂತಿ ಒಪ್ಪಂದಕ್ಕೆ ಸಹಿ ಹಾಕುವವರೆಗೆ ಅಮೆರಿಕ ಇರಾನ್ ಬಂದರುಗಳ ಮೇಲಿನ ದಿಗ್ಬಂಧನ ತೆಗೆದುಹಾಕುವುದಿಲ್ಲ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸೋಮವಾರ ಹೇಳಿದ್ದಾರೆ. ದಿಗ್ಬಂಧನ ಇರಾನ್ ನ್ನು ನಾಶಪಡಿಸುತ್ತಿದ್ದು, ಒಪ್ಪಂದ ಅಂತಿಮವಾಗುವವರೆಗೂ ಅದನ್ನು ನಾವು ತೆರವುಗೊಳಿಸುವುದಿಲ್ಲ ಎಂದು ಟ್ರಂಪ್ ಸಾಮಾಜಿಕ ಮಾಧ್ಯಮದಲ್ಲಿ ಹೇಳಿದ್ದಾರೆ.

ಇರಾನ್ ದಿನಕ್ಕೆ $500 ಮಿಲಿಯನ್ ಡಾಲರ್‌ ಕಳೆದುಕೊಳ್ಳುತ್ತಿದ್ದಾರೆ. ಅಲ್ಪಾವಧಿಯಲ್ಲಿಯೂ ಸಹ ಇದು ಸಮರ್ಥನೀಯವಲ್ಲದ ಸಂಖ್ಯೆಯಾಗಿದೆ. ಇರಾನ್ ಮತ್ತು ಅಮೆರಿಕ ಎರಡೂ ಪ್ರತ್ಯೇಕ ದಿಗ್ಬಂಧನ ವಿಧಿಸುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಹಡಗು ಸಂಚಾರಕ್ಕೆ ಮತ್ತೆ ಅಡಚಣೆಯಾಗಿದೆ.

ಮತ್ತೊಂದೆಡೆ ಟ್ರಂಪ್ ಎಚ್ಚರಿಕೆಗೆ ತಿರುಗೇಟು ನೀಡಿರುವ ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯನ್, ಇರಾನ್‌ನಲ್ಲಿ ಅಮೆರಿಕ ಸರ್ಕಾರದ ಬಗ್ಗೆ ಅಪನಂಬಿಕೆ ಇದೆ ಮತ್ತು ಇರಾನಿಯನ್ನರು ಬಲವಂತಕ್ಕೆ ಮಣಿಯುವುದಿಲ್ಲ ಎಂದು ಹೇಳಿದ್ದಾರೆ.

ಬದ್ಧತೆಗಳನ್ನು ಗೌರವಿಸುವುದು ಅರ್ಥಪೂರ್ಣ ಸಂವಾದದ ಆಧಾರವಾಗಿದೆ. ಅಮೆರಿಕ ಸರ್ಕಾರದ ನಡವಳಿಕೆಯ ಬಗ್ಗೆ ಇರಾನ್‌ನಲ್ಲಿ ಅಪನಂಬಿಕೆ ಉಳಿದಿದೆ, ಆದರೆ ಅಮೆರಿಕ ಅಧಿಕಾರಿಗಳು ಇರಾನ್‌ನ ಶರಣಾಗತಿಯನ್ನು ಬಯಸುತ್ತಾರೆ. ಇರಾನಿಯನ್ನರು ಬಲವಂತಕ್ಕೆ ಮಣಿಯುವುದಿಲ್ಲ ಎಂದು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಬರೆದುಕೊಂಡಿದ್ದಾರೆ.

ಅಮೆರಿಕದ ನಿಯೋಗ ಪಾಕಿಸ್ತಾನಕ್ಕೆ ತೆರಳಲು ಸಿದ್ಧತೆ ನಡೆಸುತ್ತಿದ್ದಂತೆ ಅಮೆರಿಕದೊಂದಿಗೆ ಹೊಸ ಸುತ್ತಿನ ಶಾಂತಿ ಮಾತುಕತೆಗೆ ಹಾಜರಾಗಬೇಕೆ ಅಥವಾ ಬೇಡವೇ ಎಂಬುದನ್ನು ಇನ್ನೂ ನಿರ್ಧರಿಸಿಲ್ಲ ಎಂದು ಇರಾನ್ ಹೇಳಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಖಾತೆ ಹಂಚಿಕೆ ಕಿತ್ತಾಟ: ಆರಂಭದಲ್ಲೇ ಅಸಮಾಧಾನದ ಅಲೆ: ಡಿಕೆಶಿ ಸರ್ಕಾರಕ್ಕಿದು ಆರಂಭಿಕ ಆಘಾತವೋ, ದೊಡ್ಡ ಸಂಕಷ್ಟದ ಮುನ್ಸೂಚನೆಯೋ?

ಗ್ರಾಹಕರ ಜೇಬಿಗೆ ಮತ್ತೆ ಕತ್ತರಿ: ಗೃಹಬಳಕೆ ಸಿಲಿಂಡರ್‌ ದರ ಮತ್ತೆ ಏರಿಕೆ, ಬರೋಬ್ಬರಿ 29 ರೂ. ಹೆಚ್ಚಳ..!

'ಮಲ್ಲಘಟ್ಟ ಗಂಗಾಧರೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದಾಗಲೆಲ್ಲಾ ನನಗೆ ಮನ:ಶಾಂತಿ ಸಿಗುತ್ತದೆ:ಡಿ ಕೆ ಶಿವಕುಮಾರ್ ರೋಡ್‌ಶೋ; ಬೆಂಬಲಿಗರ ಸಂಭ್ರಮ-Video

ಬರನಾಡಿನ ಭಗೀರಥ: 200 ಕೆರೆ-3,000 ಕೊಳವೆ ಬಾವಿಗಳಿಗೆ ಮರುಜೀವ; ಗದಗದ ‘ಜಲಯೋಧ’ನ ಪ್ರೇರಣಾದಾಯಕ ಯಶೋಗಾಥೆ..!

ಪ್ಲಾಸ್ಟಿಕ್ ಬಾಟಲಿ ನಿಷೇಧ ಆದೇಶ ಉಲ್ಲಂಘನೆ: ಸರ್ಕಾರಿ ಕಚೇರಿಗಳಿಗೆ KSPCB ಕಠಿಣ ಎಚ್ಚರಿಕೆ, ನೋಟಿಸ್ ಜಾರಿ..!

SCROLL FOR NEXT