ಸಂಗ್ರಹ ಚಿತ್ರ AFP
ವಿದೇಶ

ಕದನ ವಿರಾಮ ಒಪ್ಪಂದಕ್ಕೆ ಬೆಲೆ ಇಲ್ಲವೇ?: ಲೆಬನಾನ್‌ ಮೇಲೆ ಮುಂದುವರೆದ ಇಸ್ರೇಲ್ ದಾಳಿ, ಪತ್ರಕರ್ತೆ ಸೇರಿ ಐವರ ಸಾವು..!

ಇತ್ತೀಚೆಗೆ ಅಮೆರಿಕಾ ಮಧ್ಯಸ್ಥಿಕೆಯಲ್ಲಿ ಇಸ್ರೇಲ್ ಮತ್ತು ಲೆಬನಾನ್ ನಡುವೆ ಕದನ ವಿರಾಮ ಒಪ್ಪಂದ ಮಾಡಲಾಗಿತ್ತು. ಇದರಲ್ಲಿ ಇರಾನ್ ಬೆಂಬಲಿತ ಹಿಜ್ಬುಲ್ಲಾ ಕೂಡ ಭಾಗಿಯಾಗಿತ್ತು. ಆದಾಗ್ಯೂ, ಹಿಂಸಾಚಾರ ಮುಂದುವರಿದಿರುವುದು ಒಪ್ಪಂದದ ಪರಿಣಾಮಕಾರಿತ್ವದ ಬಗ್ಗೆ ಪ್ರಶ್ನೆ ಏಳುವಂತೆ ಮಾಡಿದೆ.

ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಮತ್ತೆ ಮುಂದುವರಿದಿದ್ದು, ಲೆಬನಾನ್ ಮತ್ತು ಇಸ್ರೇಲ್ ನಡುವೆ ಕದನ ವಿರಾಮ ಒಪ್ಪಂದವಾಗಿದ್ದರೂ, ಹಿಂಸಾಚಾರ ಮುಂದುವರೆದಿದೆ. ಬುಧವಾರ ಇಸ್ರೇಲ್ ನಡೆಸಿದ ದಾಳಿಯಲ್ಲಿ ಕನಿಷ್ಠ ಐವರು ಸಾವನ್ನಪ್ಪಿರುವುದಾಗಿ ಲೆಬನಾನ್ ಮಾಧ್ಯಮಗಳು ವರದಿ ಮಾಡಿವೆ.

ಇತ್ತೀಚೆಗೆ ಅಮೆರಿಕಾ ಮಧ್ಯಸ್ಥಿಕೆಯಲ್ಲಿ ಇಸ್ರೇಲ್ ಮತ್ತು ಲೆಬನಾನ್ ನಡುವೆ ಕದನ ವಿರಾಮ ಒಪ್ಪಂದ ಮಾಡಲಾಗಿತ್ತು. ಇದರಲ್ಲಿ ಇರಾನ್ ಬೆಂಬಲಿತ ಹಿಜ್ಬುಲ್ಲಾ ಕೂಡ ಭಾಗಿಯಾಗಿತ್ತು. ಆದಾಗ್ಯೂ, ಹಿಂಸಾಚಾರ ಮುಂದುವರಿದಿರುವುದು ಒಪ್ಪಂದದ ಪರಿಣಾಮಕಾರಿತ್ವದ ಬಗ್ಗೆ ಪ್ರಶ್ನೆ ಏಳುವಂತೆ ಮಾಡಿದೆ.

ಗಡಿಭಾಗದ ಬಳಿ ನಡೆದ ಇಸ್ರೇಲಿ ದಾಳಿಯಲ್ಲಿ ‘ಅಲ್-ಅಖ್ಬಾರ್’ ಪತ್ರಿಕೆಯ ಪತ್ರಕರ್ತೆ ಅಮಲ್ ಖಲೀಲ್ ಸಾವನ್ನಪ್ಪಿದ್ದು, ಮತ್ತೊಬ್ಬ ಪತ್ರಕರ್ತೆ ಜೈನಬ್ ಫರಾಜ್ ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ. ಪತ್ರಕರ್ತರ ಮೇಲೆ ದಾಳಿ ನಡೆದಿರುವುದು ಅಂತರರಾಷ್ಟ್ರೀಯ ಮಟ್ಟದಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ.

ಇದೇ ವೇಳೆ, ಯುಎನ್ ಶಾಂತಿಪಡೆಗಳ ಮೇಲೆ ನಡೆದ ದಾಳಿಯಲ್ಲಿ ಗಾಯಗೊಂಡಿದ್ದ ಫ್ರೆಂಚ್ ಸೈನಿಕನೂ ಸಾವನ್ನಪ್ಪಿರುವುದಾಗಿ ಎಮ್ಯಾನುಯೆಲ್ ಮ್ಯಾಕ್ರನ್ ತಿಳಿಸಿದ್ದಾರೆ. ಈ ದಾಳಿಗೆ ಹಿಜ್ಬುಲ್ಲಾ ಕಾರಣ ಎಂದು ಆರೋಪಿಸಲಾಗಿದ್ದರೂ, ಸಂಘಟನೆ ಅದನ್ನು ತಳ್ಳಿಹಾಕಿದೆ.

ಏತನ್ಮಧ್ಯೆ ಕದನ ವಿರಾಮ ಮುಂದುವರಿಸುವ ಕುರಿತು ಚರ್ಚಿಸಲು ಇಸ್ರೇಲ್ ಮತ್ತು ಲೆಬನಾನ್ ಪ್ರತಿನಿಧಿಗಳು ವಾಷಿಂಗ್ಟನ್‌ನಲ್ಲಿ ಮತ್ತೊಂದು ಸುತ್ತಿನ ಮಾತುಕತೆ ನಡೆಸಲಿದ್ದಾರೆ.

ಲೆಬನಾನ್ ಒಂದು ತಿಂಗಳ ಕಾಲ ಕದನ ವಿರಾಮ ವಿಸ್ತರಣೆ ಕೋರುವ ಸಾಧ್ಯತೆ ಇದೆ. ಜೊತೆಗೆ, ಇಸ್ರೇಲ್ ದಾಳಿಗಳನ್ನು ಸಂಪೂರ್ಣ ನಿಲ್ಲಿಸುವಂತೆ ಒತ್ತಾಯಿಸಲೂ ಚಿಂತನೆ ನಡೆಸಿದೆ ಎಂದು ತಿಳಿದುಬಂದಿದೆ.

ಯುದ್ಧ ಆರಂಭವಾದ ಬಳಿಕ ಇಸ್ರೇಲ್ ದಾಳಿಗಳಿಂದ ಲೆಬನಾನ್‌ನಲ್ಲಿ 2,450ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Tamilnadu & West Bengal Election 2026 Live Updates | 9 ಗಂಟೆ ವೇಳೆಗೆ ತಮಿಳುನಾಡಿನಲ್ಲಿ ಶೇ. 17.69, ಪಶ್ಚಿಮ ಬಂಗಾಳದಲ್ಲಿ ಶೇ.18.76ರಷ್ಟು ಮತದಾನ

US-Iran war:: ಅಮೆರಿಕಾ ನೌಕಾ ದಿಗ್ಭಂಧನ ಮುಂದುವರಿದರೆ ಹಾರ್ಮುಜ್ ಜಲಸಂಧಿ ತೆರೆಯಲ್ಲ; ಇರಾನ್ ಕಠಿಣ ನಿಲುವು, ಜಾಗತಿಕ ತೈಲ ಮಾರುಕಟ್ಟೆಯಲ್ಲಿ ಹೆಚ್ಚಿದ ಆತಂಕ

ಇಂದು SSLC ರಿಸಲ್ಟ್: 8.6 ಲಕ್ಷ ವಿದ್ಯಾರ್ಥಿಗಳ ಭವಿಷ್ಯ ನಿರ್ಧಾರ, ಹೈಕೋರ್ಟ್ ಆದೇಶ ಹಿನ್ನೆಲೆ ಹಿಂದಿ ಗ್ರೇಡ್'ಗೆ ಕೊಕ್..!

ಕಬ್ಬಡ್ಡಿ ಪಂದ್ಯದ ವೇಳೆ ಬೆಟ್ಟಿಂಗ್: ನನ್ನ ಹೇಳಿಕೆ ತಪ್ಪಾಗಿ ಅರ್ಥೈಸಲಾಗಿದೆ, ಈಗ ತಮಾಷೆನೂ ಮಾಡುವಂತಿಲ್ಲ‌ ಎಂಬಂತಾಗಿದೆ; ಗೃಹ ಸಚಿವ ಪರಮೇಶ್ವರ್

ಎಚ್ಚೆತ್ತ ರಾಜ್ಯ ಸರ್ಕಾರ: ಮಣ್ಣಿನ ಕುಸಿತ ತಡೆಗೆ 99 ಕೋಟಿ ರೂ. ಅನುದಾನ, ಉತ್ತರ ಕನ್ನಡ ಜಿಲ್ಲೆಗೆ ವಿಶೇಷ ಪ್ಯಾಕೇಜ್..!

SCROLL FOR NEXT