ಇರಾನ್ ದೇಶದ ನೂತನ ಪರಮೋಚ್ಛ ನಾಯಕ ಮೊಜ್ತಬಾ ಖಮೇನಿ 
ವಿದೇಶ

ಕಾಲಿಲ್ಲ-ಮಾತನಾಡಲಾಗುತ್ತಿಲ್ಲ, ತೀವ್ರವಾಗಿ ಸುಟ್ಟು ಹೋದ ಖಮೇನಿ ಮುಖ; ಇರಾನ್ ಪರಮೋಚ್ಛ ನಾಯಕನ ಆರೋಗ್ಯದ ಬಗ್ಗೆ ಬಿಗ್​ ಅಪ್ಡೇಟ್​..!

ಅಧಿಕಾರ ವಹಿಸಿಕೊಂಡ ದಿನದಿಂದ ಇಂದಿನವರೆಗೂ ಮೊಜ್ತಬಾ ಖಮೇನಿ ಸಾರ್ವಜನಿಕವಾಗಿ ಕಾಣಿಸಿಕೊಂಡಿಲ್ಲ. ಅವರ ಧ್ವನಿಯೂ ಜನರಿಗೆ ಕೇಳಿಸಿಲ್ಲ. ಹೀಗಾಗಿ ಅವರು ತಲೆ ಮರೆಸಿಕೊಂಡಿದ್ದಾರೆ ಎಂದು ಹೇಳಾಗುತ್ತಿತ್ತು.

ಇರಾನ್‌ನ ಪರಮೋಚ್ಛ ನಾಯಕ ಮೊಜ್ತಬಾ ಖಮೇನಿ ಅವರ ಆರೋಗ್ಯ ಸ್ಥಿತಿ ಕುರಿತು ಬಿಗ್​ ಅಪ್ಡೇಟ್​ (Health Update) ಬಂದಿದೆ.

ಇತ್ತೀಚಿನ ವಾಯುದಾಳಿಯ ಸಂದರ್ಭದಲ್ಲಿ ಮೊಜ್ತಬಾ ಖಮೇನಿ ಅವರಿಗೆ ಗಂಭೀರ ಗಾಯಗಳಾಗಿದ್ದು, ವಿಶೇಷವಾಗಿ ಮುಖದ ಭಾಗದಲ್ಲಿ ತೀವ್ರ ಸುಟ್ಟ ಗಾಯಗಳಾಗಿವೆ ಎಂದು ಅಂತರರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

ಫೆಬ್ರವರಿ 28 ರಂದು ನಡೆದ ಅಮೆರಿಕ–ಇಸ್ರೇಲ್ ವೈಮಾನಿಕ ದಾಳಿಯಲ್ಲಿ ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಸಾವನ್ನಪ್ಪಿದರು. ಈ ದಾಳಿಯಲ್ಲಿ ಖಮೇನಿ ಕುಟುಂಬದ ಹಲವಾರು ಸದಸ್ಯರೂ ಮೃತಪಟ್ಟಿದ್ದಾರೆ ಎಂದು ವರದಿಗಳು ತಿಳಿಸಿವೆ. ಸುಮಾರು ಆರು ವಾರಗಳ ಬಳಿಕ ಅವರ ಪುತ್ರ ಮೊಜ್ತಬಾ ಖಮೇನಿ ಅವರನ್ನು ಹೊಸ ಸರ್ವೋಚ್ಚ ನಾಯಕರಾಗಿ ಘೋಷಿಸಲಾಯಿತು.

ಆದರೆ ಅಧಿಕಾರ ವಹಿಸಿಕೊಂಡ ದಿನದಿಂದ ಇಂದಿನವರೆಗೂ ಮೊಜ್ತಬಾ ಖಮೇನಿ ಸಾರ್ವಜನಿಕವಾಗಿ ಕಾಣಿಸಿಕೊಂಡಿಲ್ಲ. ಅವರ ಧ್ವನಿಯೂ ಜನರಿಗೆ ಕೇಳಿಸಿಲ್ಲ. ಹೀಗಾಗಿ ಅವರು ತಲೆ ಮರೆಸಿಕೊಂಡಿದ್ದಾರೆ ಎಂದು ಹೇಳಾಗುತ್ತಿತ್ತು, ಆದರೆ ಇದೀಗ ಅವರ ಆರೋಗ್ಯದ ಕುರಿತು ಮುಖ್ಯವಾದ ಮಾಹಿತಿ ಹೊರಬಂದಿದೆ.

ನ್ಯೂಯಾರ್ಕ್ ಟೈಮ್ಸ್ ವರದಿ ಪ್ರಕಾರ, ವೈಮಾನಿಕ ದಾಳಿಯಲ್ಲಿ ಮೊಜ್ತಬಾ ಖಮೇನಿಗೆ ತೀವ್ರ ಗಾಯಗಳಾಗಿದ್ದು, ಅವರ ಸುತ್ತಲೂ ದೊಡ್ಡ ವೈದ್ಯಕೀಯ ತಂಡ ಸದಾ ಹಾಜರಿರುತ್ತದೆ ಎನ್ನಲಾಗಿದೆ.

ಮಾಹಿತಿಗಳ ಪ್ರಕಾರ, ಖಮೇನಿ ಅವರ ಮುಖ ಮತ್ತು ತುಟಿಗಳಿಗೆ ಭಾರೀ ಹಾನಿಯಾಗಿದ್ದು, ಇದರಿಂದಾಗಿ ಅವರು ಸರಿಯಾಗಿ ಮಾತನಾಡಲು ಸಾಧ್ಯವಾಗುತ್ತಿಲ್ಲ ಎನ್ನಲಾಗಿದೆ.

ಈ ಗಾಯಗಳ ಗಂಭೀರತೆಯನ್ನು ಗಮನದಲ್ಲಿಟ್ಟುಕೊಂಡು, ಅವರಿಗೆ ಪ್ಲಾಸ್ಟಿಕ್ ಶಸ್ತ್ರಚಿಕಿತ್ಸೆ ಅಗತ್ಯವಾಗಬಹುದು ಎಂಬ ಅಂದಾಜು ವ್ಯಕ್ತವಾಗುತ್ತಿದೆ.

ವೈದ್ಯಕೀಯ ತಜ್ಞರು ಈ ರೀತಿಯ ಗಾಯಗಳಿಗೆ ಹಲವು ಹಂತಗಳಲ್ಲಿ ಚಿಕಿತ್ಸೆ ಮತ್ತು ಶಸ್ತ್ರಚಿಕಿತ್ಸೆ ಅಗತ್ಯವಾಗಬಹುದು ಎಂದು ಸಲಹೆ ನೀಡಿದ್ದಾರೆಂದು ತಿಳಿದುಬಂದಿದೆ.

ಇದೊಂದೇ ಅಲ್ಲ, ದಾಳಿಯಲ್ಲಿ ಅವರ ದೇಹದ ಇತರೆ ಭಾಗಗಳಿಗೂ ಹಾನಿಯಾಗಿದೆ ಎಂದು ಹೇಳಲಾಗುತ್ತಿದೆ. ಒಂದು ಕಾಲಿಗೆ ಗಂಭೀರ ಗಾಯವಾಗಿದ್ದು, ಅದಕ್ಕೆ ಹಲವಾರು ಬಾರಿ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ಆದರೂ ಸಂಪೂರ್ಣವಾಗಿ ಚೇತರಿಸಿಕೊಳ್ಳದಿದ್ದರೆ, ಕೃತಕ ಕಾಲಿನ ಅವಶ್ಯಕತೆ ಎದುರಾಗಬಹುದು ಎಂದು ಹೇಳಲಾಗುತ್ತಿದೆ. ಕೈಗಳಿಗೂ ಗಾಯವಾಗಿದ್ದು, ಚಿಕಿತ್ಸೆ ಇನ್ನೂ ಮುಂದುವರಿದಿದೆ.

ಈ ಪರಿಸ್ಥಿತಿಯ ಪರಿಣಾಮವಾಗಿ, ಖಮೇನಿ ಸಾರ್ವಜನಿಕವಾಗಿ ಕಾಣಿಸಿಕೊಳ್ಳುವುದನ್ನು ಬಹುತೇಕ ನಿಲ್ಲಿಸಿದ್ದಾರೆ. ಅವರು ಸಭೆಗಳು ಅಥವಾ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಬದಲು, ಮುಖ್ಯವಾಗಿ ಬರವಣಿಗೆಯ ಮೂಲಕವೇ ತಮ್ಮ ಸೂಚನೆಗಳನ್ನು ನೀಡುತ್ತಿದ್ದಾರೆ ಎನ್ನಲಾಗಿದೆ. ಅವರ ಸುತ್ತಲಿನ ಭದ್ರತೆ ಕೂಡ ಹೆಚ್ಚಿಸಲಾಗಿದೆ, ಮತ್ತು ಕೆಲವೇ ಆಪ್ತ ವ್ಯಕ್ತಿಗಳಿಗೆ ಮಾತ್ರ ಅವರನ್ನು ಭೇಟಿ ಮಾಡುವ ಅವಕಾಶ ನೀಡಲಾಗುತ್ತಿದೆ ಎಂದು ವರದಿಗಳಿಂದ ತಿಳಿದುಬಂದಿದೆ.

ಆದಾಗ್ಯೂ, ಖಮೇನಿ ಮಾನಸಿಕ ಸ್ಥಿತಿ ಸ್ಥಿರವಾಗಿದ್ದು, ದೇಶದ ಆಡಳಿತ ಸಂಬಂಧಿತ ನಿರ್ಧಾರಗಳಲ್ಲಿ ಅವರು ಇನ್ನೂ ಭಾಗವಹಿಸುತ್ತಿದ್ದಾರೆ ಎಂಬ ಮಾಹಿತಿಯೂ ಲಭ್ಯವಾಗಿದೆ. ಇದರಿಂದ ಇರಾನ್ ಆಡಳಿತ ವ್ಯವಸ್ಥೆ ಕಾರ್ಯನಿರ್ವಹಣೆಯಲ್ಲಿ ಯಾವುದೇ ಪರಿಣಾಮಗಳು ಬೀರಿಲ್ಲ.

ಇದರ ಮಧ್ಯೆ, ಇರಾನ್ ಸರ್ಕಾರ ಈ ಗಾಯಗಳ ತೀವ್ರತೆ ಅಥವಾ ಚಿಕಿತ್ಸೆಯ ವಿವರಗಳನ್ನು ಅಧಿಕೃತವಾಗಿ ಬಹಿರಂಗಪಡಿಸಿಲ್ಲ. ಇದರಿಂದಾಗಿ ವಿವಿಧ ಮಾಧ್ಯಮಗಳಲ್ಲಿ ವಿಭಿನ್ನ ರೀತಿಯ ವರದಿಗಳು ಹರಿದಾಡುತ್ತಿದ್ದು, ನಿಖರ ಮಾಹಿತಿ ಕುರಿತು ಅನಿಶ್ಚಿತತೆ ಮುಂದುವರಿದಿದೆ.

ಸುರಕ್ಷತಾ ಕಾರಣಗಳು ಮತ್ತು ರಾಜಕೀಯ ಪರಿಸ್ಥಿತಿಗಳನ್ನು ಗಮನದಲ್ಲಿಟ್ಟುಕೊಂಡು, ಈ ವಿಷಯವನ್ನು ಕಟ್ಟುನಿಟ್ಟಾಗಿ ನಿಯಂತ್ರಿಸಲಾಗುತ್ತಿದೆ ಎಂಬ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ.

ಒಟ್ಟಿನಲ್ಲಿ, ಖಮೇನಿ ಅವರ ಆರೋಗ್ಯ ಸ್ಥಿತಿ ಕೇವಲ ವೈದ್ಯಕೀಯ ವಿಚಾರವಷ್ಟೇ ಅಲ್ಲದೆ, ಇರಾನ್‌ನ ರಾಜಕೀಯ ಮತ್ತು ಭದ್ರತಾ ವ್ಯವಸ್ಥೆಗಳ ಮೇಲೂ ಪರಿಣಾಮ ಬೀರುವ ಸಾಧ್ಯತೆಯಿದೆ. ಅವರ ಸಾರ್ವಜನಿಕ ಹಾಜರಾತಿ ಕಡಿಮೆಯಾಗಿರುವುದು ಮತ್ತು ಆರೋಗ್ಯದ ಬಗ್ಗೆ ಸ್ಪಷ್ಟ ಮಾಹಿತಿ ಕೊರತೆಯಿರುವುದು ಜಾಗತಿಕ ಮಟ್ಟದಲ್ಲಿ ಚರ್ಚೆಗೆ ಕಾರಣವಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಭಾರತವನ್ನು ‘ನರಕಕೂಪ’ವೆಂದು ಹೀಯಾಳಿಸಿದ ಟ್ರಂಪ್: ಅಜ್ಞಾನಪೂರ್ಣ ಹೇಳಿಕೆ; ವಿದೇಶಾಂಗ ಇಲಾಖೆ ತೀವ್ರ ಕಿಡಿ

"One Leader, One Nation": ನಾಯಕತ್ವ ಕುರಿತ ಟ್ರಂಪ್ ಹೇಳಿಕೆಗೆ ತಿರುಗೇಟು ಕೊಟ್ಟ ಇರಾನ್!

ಮೇ.4ರ ಫಲಿತಾಂಶಕ್ಕೂ ಮುನ್ನ ರಾಜ್ಯದಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ: ಆಪ್ತರೊಂದಿಗೆ ಸಿದ್ದರಾಮಯ್ಯ ಗೌಪ್ಯ ಸಭೆ, ಮುಂದಿನ ಕಾರ್ಯತಂತ್ರ ಕುರಿತು ಚರ್ಚೆ..!

ಕಾಂಗ್ರೆಸ್‌ನಲ್ಲಿ ಅಸಮಾಧಾನ ಸ್ಫೋಟ: ಮುಸ್ಲಿಂ ನಾಯಕರ ವಿರುದ್ಧದ ಶಿಸ್ತು ಕ್ರಮಕ್ಕೆ ವಿರೋಧ, ಜಮೀರ್-ಜಾರಕಿಹೊಳಿ ತುರ್ತು ಸಭೆ, ಹೆಚ್ಚಿದ ಕುತೂಹಲ

ಸಂಘದಿಂದ ಎರವಲು ಪಡೆದ Ai ಬಳಸುವುದಕ್ಕಿಂತ Oi ಬಳಸಿದರೆ BJP ಕೇಸರಲ್ಲಿ ಮುಳುಗುವುದರಿಂದ ಬಚಾವಾಗಬಹುದು: JDS ಕುರಿತು ಪ್ರಿಯಾಂಕ್ ಖರ್ಗೆ ವ್ಯಂಗ್ಯ

SCROLL FOR NEXT