ಸ್ಥಳದಲ್ಲಿ ಭದ್ರತಾ ಸಿಬ್ಬಂದಿಗಳು. 
ವಿದೇಶ

ರಷ್ಯಾದ ಜನಪ್ರಿಯ 'Balzi Rossi' ಹೋಟೆಲ್ ಬಳಿ ಭೀಕರ ಬಾಂಬ್ ಸ್ಫೋಟ: ಮೂವರ ಸಾವು, 21 ಜನರಿಗೆ ಗಾಯ..!

ಅಪರಿಚಿತ ಮಹಿಳೆಯೊಬ್ಬಳು ತನ್ನ ಬ್ಯಾಗ್‌ನಲ್ಲಿ ಸುಧಾರಿತ ಸ್ಫೋಟಕ ಸಾಧನವನ್ನು (IED) ಅಡಗಿಸಿಟ್ಟುಕೊಂಡು ರೆಸ್ಟೋರೆಂಟ್ ಒಳಗೆ ನುಗ್ಗಲು ಯತ್ನಿಸಿದ್ದಾಳೆ. ಆದರೆ, ಮುಖ್ಯ ದ್ವಾರದಲ್ಲಿದ್ದ ಭದ್ರತಾ ಸಿಬ್ಬಂದಿ (Security Guard) ಆಕೆಯ ಮೇಲೆ ಸಂಶಯಗೊಂಡು ತಡೆದಿದ್ದಾರೆ.

ಮಾಸ್ಕೋ (ರಷ್ಯಾ): ರಷ್ಯಾ ರಾಜಧಾನಿ ಮಾಸ್ಕೋದ ಹೃದಯಭಾಗದಲ್ಲಿ ಭೀಕರ ಬಾಂಬ್ ಸ್ಫೋಟ ಸಂಭವಿಸಿದ್ದು, ಮೂವರು ಸ್ಥಳದಲ್ಲೇ ಸಾವನ್ನಪ್ಪಿ, 21 ಕ್ಕೂ ಹೆಚ್ಚು ಜನರು ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ವರದಿಗಳಿಂದ ತಿಳಿದುಬಂದಿದೆ.

ಶನಿವಾರ ರಾತ್ರಿ ಇಲ್ಲಿನ ಪ್ರಸಿದ್ಧ ಇಟಾಲಿಯನ್ ರೆಸ್ಟೋರೆಂಟ್ 'ಬಾಲ್ಜಿ ರೊಸ್ಸಿ' (Balzi Rossi) ಯ ಪ್ರವೇಶ ದ್ವಾರದ ಬಳಿ ಈ ದುರಂತ ನಡೆದಿದೆ.

ರಷ್ಯಾದ ರಾಷ್ಟ್ರೀಯ ಭಯೋತ್ಪಾದನಾ ನಿರೋಧಕ ಸಮಿತಿ (NAK) ನೀಡಿರುವ ಮಾಹಿತಿ ಪ್ರಕಾರ, ಅಪರಿಚಿತ ಮಹಿಳೆಯೊಬ್ಬಳು ತನ್ನ ಬ್ಯಾಗ್‌ನಲ್ಲಿ ಸುಧಾರಿತ ಸ್ಫೋಟಕ ಸಾಧನವನ್ನು (IED) ಅಡಗಿಸಿಟ್ಟುಕೊಂಡು ರೆಸ್ಟೋರೆಂಟ್ ಒಳಗೆ ನುಗ್ಗಲು ಯತ್ನಿಸಿದ್ದಾಳೆ. ಆದರೆ, ಮುಖ್ಯ ದ್ವಾರದಲ್ಲಿದ್ದ ಭದ್ರತಾ ಸಿಬ್ಬಂದಿ (Security Guard) ಆಕೆಯ ಮೇಲೆ ಸಂಶಯಗೊಂಡು ತಡೆದಿದ್ದಾರೆ. ಈ ವೇಳೆ ಪರಸ್ಪರ ಮಾತಿನ ಚಕಮಕಿ ನಡೆದು, ಕ್ಷಣಾರ್ಧದಲ್ಲಿ ಆಕೆಯ ಬಳಿಯಿದ್ದ ಬಾಂಬ್ ಭೀಕರವಾಗಿ ಸ್ಫೋಟಗೊಂಡಿದೆ.

ಭದ್ರತಾ ಸಿಬ್ಬಂದಿ ಆಕೆಯನ್ನು ತಡೆಯದೇ ಹೋಗಿದ್ದರೆ ರೆಸ್ಟೋರೆಂಟ್ ಒಳಗಡೆ ನೂರಾರು ಜೀವಗಳು ಬಲಿಯಾಗುತ್ತಿದ್ದವು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಗಾಯಗೊಂಡಿರುವ 21 ಜನರಲ್ಲಿ ಹಲವರ ಸ್ಥಿತಿ ಚಿಂತಾಜನಕವಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಿ ತುರ್ತು ಚಿಕಿತ್ಸೆ ನೀಡಲಾಗುತ್ತಿದೆ.

ರಷ್ಯಾದ ಪ್ರಸಿದ್ಧ ಪತ್ರಿಕೆ ಕೊಮ್ಮರ್ಸಾಂಟ್ (Kommersant) ವರದಿಗಳ ಪ್ರಕಾರ, ಘಟನೆ ನಡೆದ ಸಮಯದಲ್ಲಿ ರೆಸ್ಟೋರೆಂಟ್‌ನಲ್ಲಿ ರಷ್ಯಾದ ಮಿಲಿಟರಿ ಜನರಲ್ ಒಬ್ಬರ ಖಾಸಗಿ ಹುಟ್ಟುಹಬ್ಬದ ಪಾರ್ಟಿ ನಡೆಯುತ್ತಿತ್ತು. ಇದೇ ಕಾರಣಕ್ಕೆ ಉನ್ನತ ಮಿಲಿಟರಿ ಅಧಿಕಾರಿಗಳನ್ನು ಗುರಿಯಾಗಿಸಿ ಈ ದಾಳಿ ನಡೆಸಲಾಗಿರಬಹುದು ಎಂದು ಶಂಕಿಸಲಾಗಿದೆ. ಅಲ್ಲದೆ, ಮಹಿಳೆಗೆ ತಿಳಿಯದಂತೆ ಬೇರೆ ಯಾರೋ ರಿಮೋಟ್ ಕಂಟ್ರೋಲ್ ಮೂಲಕ ಈ ಬಾಂಬ್ ಸ್ಫೋಟಿಸಿರುವ ಸಾಧ್ಯತೆಗಳ ಬಗ್ಗೆಯೂ ರಷ್ಯಾದ ತನಿಖಾ ಸಂಸ್ಥೆಗಳು ತನಿಖೆ ನಡೆಸುತ್ತಿವೆ.

ಘಟನಾ ಸ್ಥಳಕ್ಕೆ ರಷ್ಯಾದ ಸಶಸ್ತ್ರ ಪಡೆಗಳು ಹಾಗೂ ತುರ್ತು ರಕ್ಷಣಾ ಸಿಬ್ಬಂದಿ ಧಾವಿಸಿದ್ದು, ಇಡೀ ಕುದ್ರಿನ್ಸ್ಕಾಯಾ ಚೌಕ (Kudrinskaya Square) ಪ್ರದೇಶವನ್ನು ಸೀಲ್ ಡೌನ್ ಮಾಡಲಾಗಿದೆ.

ಹತ್ತಿರದ ಮೆಟ್ರೋ ನಿಲ್ದಾಣಗಳನ್ನು ಮುಚ್ಚಲಾಗಿದ್ದು, ವಾಹನ ಸಂಚಾರವನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ. ರಷ್ಯಾ ಸರ್ಕಾರವು ಇದನ್ನು ಭಯೋತ್ಪಾದನಾ ದಾಳಿ ಎಂದು ಪರಿಗಣಿಸಿದ್ದು, ಉನ್ನತ ಮಟ್ಟದ ತನಿಖೆಗೆ ಆದೇಶಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಚಿವ ಸಂಪುಟ ವಿಸ್ತರಣೆಗೆ ಕ್ಷಣಗಣನೆ: ಪ್ರಮಾಣವಚನ ಸಮಾರಂಭಕ್ಕೆ ಸಕಲ ಸಿದ್ಧತೆ, 20 ಸಚಿವರ ಪಟ್ಟಿಗೆ ಹೈಕಮಾಂಡ್ ಅಸ್ತು..?

ಪೆರುವಿನಲ್ಲಿ ಭೀಕರ ದುರಂತ: ಟೇಕ್‌ಆಫ್ ಆದ ಕೆಲವೇ ಕ್ಷಣಗಳಲ್ಲಿ ನೆಲಕ್ಕಪ್ಪಳಿಸಿ ಸ್ಫೋಟಗೊಂಡ ವಿಮಾನ, 11 ವಿದೇಶಿ ಪ್ರವಾಸಿಗರು ಸೇರಿ 13 ಮಂದಿ ದುರ್ಮರಣ..!

35 ವರ್ಷಗಳಿಂದ ಲೆಕ್ಕಪರಿಶೋಧನೆ ಇಲ್ಲ...! ಕೂಡಲಸಂಗಮ ಮಂಡಳಿ ಸಭೆಯಲ್ಲಿ ಅಧಿಕಾರಿಗಳ ಬೆವರಿಳಿಸಿದ DCM ಪರಮೇಶ್ವರ್..!

ಭಾರತೀಯ ವಿದ್ಯಾರ್ಥಿಗಳಿಗೆ ಪ್ರಧಾನಿ ಮೋದಿ ಕ್ಷಮೆ ಬೇಕಿಲ್ಲ: ರಾಹುಲ್ ಗಾಂಧಿ

ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ!