ಶಕೀಬ್ ಅಲ್ ಹಸನ್ Online Desk
ವಿದೇಶ

ಬಾಂಗ್ಲಾದೇಶದಲ್ಲಿ ಮುಂದುವರಿದ ರಾಜಕೀಯ ಅಶಾಂತಿ; ಶೇಖ್ ಹಸೀನಾ ಕಾರ್ಯಕ್ರಮದಲ್ಲಿ ಭಾಗವಹಿಸಿದ ಕ್ರಿಕೆಟಿಗನ ಮನೆ ಮೇಲೆ ಪೆಟ್ರೋಲ್ ಬಾಂಬ್ ದಾಳಿ

ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಕ್ಕೆ ಬಾಂಗ್ಲಾ ಕ್ರಿಕೆಟಿಗ ಹಾಗೂ ಮಾಜಿ ಸಂಸದ ಶಕೀಬ್ ಅಲ್ ಹಸನ್ ನಿವಾಸದ ಮೇಲೆ ಪೆಟ್ರೋಲ್ ಬಾಂಬ್ ದಾಳಿ ಮಾಡಿದ ಕಿಡಿಗೇಡಿಗಳು. ಆ ಕುರಿತ ವರದಿ ಇಲ್ಲಿದೆ:

ಢಾಕಾ (ಬಾಂಗ್ಲಾದೇಶ): ಬಾಂಗ್ಲಾದೇಶದಲ್ಲಿ ರಾಜಕೀಯ ಅಶಾಂತಿ ಮತ್ತು ಹಿಂಸಾಚಾರ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದ್ದು, ಈಗ ರಾಜಕೀಯ ಬೆಳವಣಿಗೆಗಳ ಕಾವು ಕ್ರೀಡಾಪಟುಗಳ ಮನೆಗೂ ತಟ್ಟಲು ಪ್ರಾರಂಭಿಸಿದೆ. ಅದರಂತೆ, ಬಾಂಗ್ಲಾದೇಶದ ಖ್ಯಾತ ಕ್ರಿಕೆಟಿಗ ಮತ್ತು ಮಾಜಿ ಸಂಸದ ಶಕೀಬ್ ಅಲ್ ಹಸನ್ ಅವರ ಮನೆಗೆ ಕಿಡಿಗೇಡಿಗಳು ಪೆಟ್ರೋಲ್ ಬಾಂಬ್ ಎಸೆದು, ಬೆಂಕಿ ಹಚ್ಚಲು ಯತ್ನಿಸಿದ್ದಾರೆ. ಅದರಲ್ಲೂ, ಭಾರತದ ನವದೆಹಲಿಯಲ್ಲಿ ನಡೆದ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ಆನ್‌ಲೈನ್ ಪತ್ರಿಕಾಗೋಷ್ಠಿಯಲ್ಲಿ ಶಕೀಬ್ ಪಾಲ್ಗೊಂಡ ಕೆಲವೇ ಗಂಟೆಗಳಲ್ಲಿ ಈ ದಾಳಿ ನಡೆದಿದೆ. ಆ ಕುರಿತ ವರದಿ ಇಲ್ಲಿದೆ:

ಏನಿದು ಘಟನೆ?

ನವದೆಹಲಿಯ ಫಾರಿನ್ ಕರೆಸ್ಪಾಂಡೆಂಟ್ಸ್ ಕ್ಲಬ್ ಆಯೋಜಿಸಿದ್ದ ಮಾಧ್ಯಮ ಸಂವಾದದಲ್ಲಿ ಭಾರತದಲ್ಲಿ ಆಶ್ರಯ ಪಡೆದಿರುವ ಮಾಜಿ ಪ್ರಧಾನಿ ಶೇಖ್ ಹಸೀನಾ ಮಾತನಾಡಿದ್ದರು. ಈ ವೇಳೆ ಮಾಜಿ ಅವಾಮಿ ಲೀಗ್ ಸಂಸದರಾಗಿರುವ ಶಕೀಬ್ ಅಲ್ ಹಸನ್ ಅವರು ಕೂಡ ಆನ್‌ಲೈನ್ ಮೂಲಕ ಭಾಗವಹಿಸಿದ್ದರು. ಹಾಗಾಗಿ, ದುಷ್ಕರ್ಮಿಗಳು ಮಗುರಾ ಪಟ್ಟಣದ ಕೇಶಬ್‌ಮೋರ್ ಪ್ರದೇಶದಲ್ಲಿರುವ ಶಕೀಬ್ ಅಲ್ ಹಸನ್ ಅವರ ಮನೆಗೆ ಬುಧವಾರ ರಾತ್ರಿ ಸುಮಾರು 8:45 ರಿಂದ 9:00 ರ ನಡುವೆ ಪೆಟ್ರೋಲ್ ಬಾಂಬ್ ಎಸೆದು, ಬೆಂಕಿ ಹಚ್ಚಲು ಯತ್ನಿಸಿದ್ದಾರೆ ಎಂದು ವರದಿಯಾಗಿದೆ.

ಮುಂದುವರೆದು, ಬೈಕ್​ನಲ್ಲಿ ಬಂದ ಅಪರಿಚಿತ ಕಿಡಿಗೇಡಿಗಳು ಮನೆಯ ಕಿಟಕಿಗಳ ಮೇಲೆ ಕಲ್ಲುಗಳನ್ನು ಎಸೆದು ಧ್ವಂಸಗೊಳಿಸಿದ್ದಾರೆ. ನಂತರ ಕಬ್ಬಿಣದ ಗೇಟ್ ಮತ್ತು ಮೇಲಿನ ಮಹಡಿಯ ಭಾಗಕ್ಕೆ ಪೆಟ್ರೋಲ್ ಬಾಂಬ್ ತರಹದ ವಸ್ತುವನ್ನು ಎಸೆದು ಬೆಂಕಿ ಹಚ್ಚಲು ಯತ್ನಿಸಿದ್ದಾರೆ. ಆದ್ರೆ, ಘಟನೆ ನಡೆದ ಸಮಯದಲ್ಲಿ ಮನೆಯಲ್ಲಿ ಯಾರೂ ಇರದ ಕಾರಣ ಯಾರಿಗೂ ಗಾಯಗಳಾಗಿಲ್ಲ ಎನ್ನಲಾಗಿದೆ. ಇನ್ನು ಘಟನೆಯಿಂದ ತಕ್ಷಣವೇ ಎಚ್ಚೆತ್ತ ಅಕ್ಕ-ಪಕ್ಕದ ಮನೆಯವರು ಬೆಂಕಿಯನ್ನು ನಂದಿಸಿದ್ದರಿಂದ ದೊಡ್ಡ ಮಟ್ಟದ ಹಾನಿ ತಪ್ಪಿದೆ.

ಏತನ್ಮಧ್ಯೆ, ಬಾಂಗ್ಲಾದೇಶದ ಮಗುರಾ-1 ಕ್ಷೇತ್ರದಿಂದ ಸಂಸದರಾಗಿದ್ದ ಶಕೀಬ್ ಅಲ್ ಹಸನ್, 2024ರ ಆಗಸ್ಟ್‌ನಲ್ಲಿ ವಿದ್ಯಾರ್ಥಿ ಚಳುವಳಿಯ ಕಾರಣದಿಂದ ಶೇಖ್ ಹಸೀನಾ ಸರ್ಕಾರ ಪತನಗೊಂಡ ತರುವಾಯು ದೇಶದಿಂದಲೇ ಪಲಾಯನ ಮಾಡಿದ್ದರು. ಜೊತೆಗೆ ಆ ವೇಳೆ ನಡೆದ ಕೊಲೆ ಪ್ರಕರಣವೊಂದರಲ್ಲಿ ಶಕೀಬ್ ವಿರುದ್ಧವೂ FIR ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

2013ರ ಅತ್ಯಾಚಾರ ಪ್ರಕರಣ: ‘Tehelka’ ಮಾಜಿ ಸಂಪಾದಕ ತರುಣ್ ತೇಜಪಾಲ್ ದೋಷಿ; ಬಾಂಬೆ ಹೈಕೋರ್ಟ್ ಮಹತ್ವದ ತೀರ್ಪು..!

FCRA: 'ಪ್ರಜಾಪ್ರಭುತ್ವಕ್ಕೆ ಅಪಾಯಕಾರಿ, ಸಾಮಾನ್ಯ ಭಾರತೀಯರೇ ದೊಡ್ಡ ಬೆಲೆ ತೆರಬೇಕಾಗುತ್ತದೆ': Shashi Tharoor

"ಪ್ರಧಾನಿ ಮೋದಿಗೆ ಅಷ್ಟೊಂದು ತಲೆಬಾಗಬೇಡಿ": Instagram ಖಾತೆ ನಿರ್ಬಂಧ ಬೆನ್ನಲ್ಲೇ Meta ವಿರುದ್ಧ ಕೇಜ್ರಿವಾಲ್ ಆಕ್ರೋಶ..!

ಯೆನ್ ರಕ್ಷಣೆಗೆ ಅಮೇರಿಕಾ-ಜಪಾನ್ ಜಂಟಿ ಕಾರ್ಯಾಚರಣೆ, ಜಾಗತಿಕ ಹಣಕಾಸು ವ್ಯವಸ್ಥೆಗೆ ಎಚ್ಚರಿಕೆಯ ಗಂಟೆ (ಹಣಕ್ಲಾಸು)

ಹಾರ್ಮುಜ್ ಜಲಸಂಧಿ ಒಪ್ಪಂದ ಸನ್ನಿಹಿತ, ಆದರೆ ಯಾವುದಾದರೊಂದು ದೇಶ ತನ್ನ ನಿಲುವಿನಲ್ಲಿ ಸಡಿಲಿಕೆ ತೋರಿಸಬೇಕು: ಇರಾನ್-ಯುಎಸ್