ಹಫೀಜ್ ಸಯೀದ್ 
ವಿದೇಶ

Pak ಬಣ್ಣ ಬಯಲು: ಕಾಶ್ಮೀರ ರಕ್ತದೋಕುಳಿಗೆ 10,000 ಉಗ್ರರ ರವಾನಿಸಿದ್ದ: Hafiz Saeed ಪಾಪಕೃತ್ಯ ಬಹಿರಂಗಪಡಿಸಿದ ಮೌಲ್ವಿ, Video ವೈರಲ್

ಬಹವಲ್ಪುರದಲ್ಲಿ ಪಾಕಿಸ್ತಾನ್ ಮಾರ್ಕಜಿ ಮುಸ್ಲಿಂ ಲೀಗ್ (PMML) ಆಯೋಜಿಸಿದ್ದ ರ‍್ಯಾಲಿಯಲ್ಲಿ ಮಾತನಾಡಿದ ಮೌಲಾನಾ ನಾಸಿರ್ ಮದನಿ ಈ ಹೇಳಿಕೆ ನೀಡಿದ್ದಾರೆ.

ಇಸ್ಲಾಮಾಬಾದ್: ಪಾಕಿಸ್ತಾನದ ಉಗ್ರ ಜಾಲದ ಕುರಿತು ಪಾಕಿಸ್ತಾನದಲ್ಲೇ ಕೇಳಿಬಂದಿರುವ ಹೇಳಿಕೆಯೊಂದು ಇದೀಗ ಭಾರೀ ಚರ್ಚೆಗೆ ಗ್ರಾಸವಾಗಿದೆ.

ಲಷ್ಕರ್-ಇ-ತೊಯ್ಬಾ ಸಂಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾಶ್ಮೀರಕ್ಕೆ ಕಳುಹಿಸಿದ್ದ ಎಂದು ಪಾಕಿಸ್ತಾನಿ ಧರ್ಮಗುರು ಮೌಲಾನಾ ನಾಸಿರ್ ಮದನಿ ಹೇಳಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಸಯೀದ್‌ ಪರವಾಗಿ ಮಾತನಾಡುವ ವೇಳೆ ಮದನಿ ನೀಡಿರುವ ಈ ಹೇಳಿಕೆ, ಕಾಶ್ಮೀರದತ್ತ ಉಗ್ರರ ರವಾನೆ ಕುರಿತು ಭಾರತ ಹಲವು ವರ್ಷಗಳಿಂದ ಮಾಡುತ್ತಿರುವ ಆರೋಪಗಳನ್ನು ಮತ್ತೊಮ್ಮೆ ಮುನ್ನೆಲೆಗೆ ತಂದಿದೆ.

ಬಹವಲ್ಪುರದಲ್ಲಿ ಪಾಕಿಸ್ತಾನ್ ಮಾರ್ಕಜಿ ಮುಸ್ಲಿಂ ಲೀಗ್ (PMML) ಆಯೋಜಿಸಿದ್ದ ರ‍್ಯಾಲಿಯಲ್ಲಿ ಮಾತನಾಡಿದ ಮೌಲಾನಾ ನಾಸಿರ್ ಮದನಿ ಈ ಹೇಳಿಕೆ ನೀಡಿದ್ದಾರೆ. PMML ಪಕ್ಷವು ಲಷ್ಕರ್-ಎ-ತೊಯ್ಬಾದೊಂದಿಗೆ ಸಂಪರ್ಕ ಹೊಂದಿದೆ ಎಂದು ವರದಿಯಾಗಿದೆ.

‘10,000 ಯುವಕರನ್ನು ಕಾಶ್ಮೀರಕ್ಕೆ ಕಳುಹಿಸಿದ್ದ’

ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಭಾಷಣದ ವಿಡಿಯೋದಲ್ಲಿ ಮದನಿ, ಪ್ರಸ್ತುತ ಪಾಕಿಸ್ತಾನದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿರುವ ಹಫೀಜ್ ಸಯೀದ್‌ರನ್ನು ಸಮರ್ಥಿಸಿಕೊಂಡಿದ್ದಾರೆ. ಸಯೀದ್ ದೇಶಕ್ಕಾಗಿ ತ್ಯಾಗ ಮಾಡಿದ್ದಾರೆ ಎಂದು ಹೇಳಿರುವುದು ಕಂಡು ಬಂದಿದೆ.

“ಈ ಹಫೀಜ್ ಸಯೀದ್ ತ್ಯಾಗ ಮಾಡಿದ್ದಾರೆ. ಇಂದು ಅವರು ಜೈಲಿನಲ್ಲಿದ್ದಾರೆ” ಎಂದು ಮದನಿ ಹೇಳಿದ್ದಾರೆ. ಬಳಿಕ ಸಯೀದ್ “10,000 ಯುವಕರನ್ನು ಕಾಶ್ಮೀರಕ್ಕಾಗಿ ಹಾಗೂ ತ್ಯಾಗಕ್ಕಾಗಿ ಕಳುಹಿಸಿದ್ದರು” ಎಂದು ಹೇಳಿರುವುದು ಕಂಡು ಬಂದಿದೆ.

ಈ ಯುವಕರನ್ನು ‘ಕಮಾಂಡೋಗಳು’ ಎಂದೂ ಮದನಿ ಉಲ್ಲೇಖಿಸಿದ್ದು, ಸಯೀದ್ ಜೈಲಿನಲ್ಲಿರುವಾಗ ಅವರು ಏಕೆ ಮೌನವಾಗಿದ್ದಾರೆ ಎಂದು ಪ್ರಶ್ನಿಸಿದ್ದಾರೆ. ಅವರ ಹೇಳಿಕೆ ಹಫೀಜ್ ಸಯೀದ್ ಹಾಗೂ ಕಾಶ್ಮೀರದತ್ತ ಉಗ್ರರ ಸಾಗಣೆಯ ನಡುವಿನ ನೇರ ಸಂಪರ್ಕವನ್ನು ಸೂಚಿಸುವಂತಿದೆ.

ಭಾರತದ ಆರೋಪಗಳಿಗೆ ಮತ್ತಷ್ಟು ಬಲ..!

ಹಫೀಜ್ ಸಯೀದ್ ಹಾಗೂ ಲಷ್ಕರ್-ಎ-ತೊಯ್ಬಾ ವಿರುದ್ಧ ಭಾರತ ಹಲವು ವರ್ಷಗಳಿಂದ ಗಂಭೀರ ಆರೋಪಗಳನ್ನು ಮಾಡುತ್ತಾ ಬಂದಿದೆ. ಭಾರತದಲ್ಲಿ ದಾಳಿಗಳನ್ನು ನಡೆಸಲು ಉಗ್ರರನ್ನು ನೇಮಕ ಮಾಡುವುದು, ತರಬೇತಿ ನೀಡುವುದು ಹಾಗೂ ಅವರಿಗೆ ನೆರವು ಒದಗಿಸುವಲ್ಲಿ ಸಯೀದ್ ಮತ್ತು ಲಷ್ಕರ್-ಎ-ತೊಯ್ಬಾ ಪಾತ್ರವಿದೆ ಎಂದು ಭಾರತ ಆರೋಪಿಸಿದೆ.

ಹಫೀಜ್ ಸಯೀದ್ ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆಯನ್ನು ಸ್ಥಾಪಿಸಿದ್ದು, ಬಳಿಕ ಜಮಾತ್-ಉದ್-ದವಾ (JuD) ಸಂಘಟನೆಯನ್ನೂ ಸ್ಥಾಪಿಸಿದ್ದಾನೆ. ವಿಶ್ವಸಂಸ್ಥೆ ಹಾಗೂ ಅಮೆರಿಕ ಸಯೀದ್‌ನನ್ನು ಭಯೋತ್ಪಾದಕ ಎಂದು ಗುರುತಿಸಿವೆ. ಅಲ್ಲದೆ, ಆತನ ಶಿಕ್ಷೆಗೆ ಕಾರಣವಾಗುವ ಮಾಹಿತಿ ನೀಡುವವರಿಗೆ ಅಮೆರಿಕ 1 ಕೋಟಿ ಡಾಲರ್ ಬಹುಮಾನ ಘೋಷಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆ: ನಕಲಿ ಪಿಂಚಣಿದಾರರಿಗೆ ಸರ್ಕಾರ ಶಾಕ್; 18 ಲಕ್ಷ ಖಾತೆಗಳು ತಾತ್ಕಾಲಿಕ ಸ್ಥಗಿತ, ವಂಚನೆಯಲ್ಲಿ ಬೆಂಗಳೂರೇ ನಂ.1..!

ಭಾರತದ ಚುನಾವಣಾ ವ್ಯವಸ್ಥೆಯ ವಿಶ್ವಾಸಾರ್ಹತೆ ಬಗ್ಗೆ ಜಾಗತಿಕವಾಗಿ ಅತ್ಯುತ್ತಮ ಸ್ಪಷ್ಟ ಅಭಿಪ್ರಾಯ- ಟ್ರಂಪ್ ಹೇಳಿಕೆ ಬೆನ್ನಲ್ಲೇ MEA ಪ್ರತಿಕ್ರಿಯೆ!

ಮಾಜಿ ಸಚಿವ ಬಿ. ಸಿ. ನಾಗೇಶ್ ನಿಧನ: ನಾಳೆ ತಿಪಟೂರಿನಲ್ಲಿ ಅಂತ್ಯಕ್ರಿಯೆ!

ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ನಕಲಿ ಔಷಧಿ ಮರುಪ್ಯಾಕಿಂಗ್ ಬೃಹತ್ ಜಾಲ ಪತ್ತೆ: 5 ಕೋಟಿ ರೂ. ಮೌಲ್ಯದ ವಸ್ತುಗಳು ವಶಕ್ಕೆ!

ಪಸಿಂದು ಗೋಲ್ಡನ್ ಡಕೌಟ್: ಆಡಿದ 2ನೇ ಪಂದ್ಯದಲ್ಲೇ ಕುಂಬ್ಳೆ ದಾಖಲೆ ಸರಿಗಟ್ಟಿದ Team India ಯುವ ಸ್ಪಿನ್ನರ್ ಮಾನವ್ ಸುತಾರ್!