ತಾರಿಕ್ ರೆಹಮಾನ್ 
ವಿದೇಶ

'ಬಾಂಗ್ಲಾದೇಶದ ಹಿತಾಸಕ್ತಿ ಮೊದಲು': ಭಾರತದೊಂದಿಗಿನ ಸಂಬಂಧಗಳ ಕುರಿತು BNP ಅಧ್ಯಕ್ಷ ತಾರಿಕ್ ರೆಹಮಾನ್

ಬಾಂಗ್ಲಾದೇಶ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ ಬೆನ್ನಲ್ಲೇ BNP ಅಧ್ಯಕ್ಷ ತಾರಿಕ್ ರೆಹಮಾನ್ ತಮ್ಮ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದ್ದು ಭಾರತ-ಬಾಂಗ್ಲಾದೇಶ ಸಂಬಂಧಗಳ ಕುರಿತ ಪ್ರಶ್ನೆಗೆ ಒಂದೇ ಸಾಲಿನಲ್ಲಿ ಉತ್ತರಿಸಿದರು.

ಢಾಕಾ: ಬಾಂಗ್ಲಾದೇಶ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ ಬೆನ್ನಲ್ಲೇ ಬಾಂಗ್ಲಾದೇಶ ರಾಷ್ಟ್ರೀಯತಾವಾದಿ ಪಕ್ಷದ (BNP) ಅಧ್ಯಕ್ಷ ತಾರಿಕ್ ರೆಹಮಾನ್ ತಮ್ಮ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದ್ದು ಭಾರತ-ಬಾಂಗ್ಲಾದೇಶ ಸಂಬಂಧಗಳ ಕುರಿತ ಪ್ರಶ್ನೆಗೆ ಒಂದೇ ಸಾಲಿನಲ್ಲಿ ಉತ್ತರಿಸಿದರು. ಭಾರತ ಮತ್ತು ಬಾಂಗ್ಲಾದೇಶ ನಡುವಿನ ಸಂಬಂಧವನ್ನು ಹೇಗೆ ಮುಂದುವರಿಸಲು ಬಯಸುತ್ತೀರಿ ಎಂದು ಕೇಳಿದ್ದಕ್ಕೆ ನಮಗೆ, ಬಾಂಗ್ಲಾದೇಶ ಮತ್ತು ಜನರು ಮೊದಲು ಬರುತ್ತಾರೆ. ಆದ್ದರಿಂದ, ನಮ್ಮ ವಿದೇಶಾಂಗ ನೀತಿಯು ಬಾಂಗ್ಲಾದೇಶ ಮತ್ತು ಅದರ ಜನರಿಗೆ ಯಾವುದು ಉತ್ತಮ ಎಂಬುದರ ಮೇಲೆ ನಿರ್ಧರಿಸಲ್ಪಡುತ್ತದೆ ಎಂದು ಹೇಳಿದರು.

ರಾಜಕೀಯ ಭಿನ್ನಾಭಿಪ್ರಾಯಗಳ ಹೊರತಾಗಿಯೂ ದೇಶವು ಒಗ್ಗಟ್ಟಿನಿಂದ ಇರಬೇಕು ಎಂದು ಬಾಂಗ್ಲಾದೇಶದ ನೂತನ ಪ್ರಧಾನಿ ತಾರಿಕ್ ರೆಹಮಾನ್ ಹೇಳಿದರು. ಮಾರ್ಗಗಳು ಮತ್ತು ಆಲೋಚನೆಗಳು ಭಿನ್ನವಾಗಿರಬಹುದು. ಆದರೆ ದೇಶದ ಹಿತಾಸಕ್ತಿಯಲ್ಲಿ ಎಲ್ಲರೂ ಒಗ್ಗಟ್ಟಿನಿಂದ ಇರಬೇಕು ಎಂದು ಅವರು ಹೇಳಿದರು. ರಾಷ್ಟ್ರೀಯ ಏಕತೆ ಸಾಮೂಹಿಕ ಶಕ್ತಿಯಾಗಿದೆ, ಆದರೆ ವಿಭಜನೆ ದೌರ್ಬಲ್ಯವೆಂದು ಸಾಬೀತುಪಡಿಸುತ್ತದೆ ಎಂದು ಅವರು ಹೇಳಿದರು.

ತಮ್ಮ ಭಾಷಣವನ್ನು ಪ್ರಾರಂಭಿಸಿದ ರೆಹಮಾನ್ ತಮ್ಮ ಬೆಂಬಲಿಗರಿಗೆ ಧನ್ಯವಾದ ಅರ್ಪಿಸಿದ್ದು ಜನಾದೇಶವನ್ನು ಪ್ರಜಾಪ್ರಭುತ್ವದ ಆಕಾಂಕ್ಷೆಗಳಿಗೆ ಸಿಕ್ಕ ಗೆಲುವು ಎಂದು ಬಣ್ಣಿಸಿದರು. ಸ್ವಾತಂತ್ರ್ಯ ಪ್ರಿಯ ಮತ್ತು ಪ್ರಜಾಪ್ರಭುತ್ವ ಪರ ಜನರು ಮತ್ತೊಮ್ಮೆ ಬಿಎನ್‌ಪಿಗೆ ಗೆಲುವು ನೀಡಿದ್ದಾರೆ. ಈ ಗೆಲುವು ಬಾಂಗ್ಲಾದೇಶಕ್ಕೆ, ಪ್ರಜಾಪ್ರಭುತ್ವಕ್ಕೆ ಮತ್ತು ಪ್ರಜಾಪ್ರಭುತ್ವಕ್ಕಾಗಿ ಕನಸು ಕಂಡವರು ಮತ್ತು ತ್ಯಾಗ ಮಾಡಿದವರಿಗೆ ಸೇರಿದೆ.

ಹೊಸ ಸರ್ಕಾರವು ಅನೇಕ ಕಠಿಣ ಸವಾಲುಗಳನ್ನು ಎದುರಿಸಲಿದೆ ಎಂದು ಅವರು ಒಪ್ಪಿಕೊಂಡರು. ದೇಶದಲ್ಲಿ ಪ್ರಜಾಪ್ರಭುತ್ವವನ್ನು ಸ್ಥಾಪಿಸುವ ಹಾದಿಯನ್ನು ಸಿದ್ಧಪಡಿಸಲಾಗಿದೆ. ಆದರೆ ಮುಂದಿನ ಪ್ರಯಾಣ ಸುಲಭವಲ್ಲ ಎಂದು ರೆಹಮಾನ್ ಹೇಳಿದರು. ದೇಶವು ಆರ್ಥಿಕತೆ ದುರ್ಬಲವಾಗಿರುವ ಸಾಂವಿಧಾನಿಕ ಮತ್ತು ಸಾಂಸ್ಥಿಕ ಚೌಕಟ್ಟು ದುರ್ಬಲಗೊಂಡಿರುವ ಮತ್ತು ಕಾನೂನು ಮತ್ತು ಸುವ್ಯವಸ್ಥೆಗೆ ಹಾನಿಯಾಗಿರುವ ಪರಿಸ್ಥಿತಿಯನ್ನು ಎದುರಿಸುತ್ತಿದೆ ಎಂದು ಅವರು ಹೇಳಿದರು. ಹೊಸ ಸರ್ಕಾರವು ಈ ರಂಗಗಳಲ್ಲಿ ಸುಧಾರಣೆಗೆ ಕೆಲಸ ಮಾಡುತ್ತದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಬಾಂಗ್ಲಾದೇಶದ ಆರ್ಥಿಕ ಪರಿಸ್ಥಿತಿ ಮತ್ತು ಕಾನೂನು ಸುವ್ಯವಸ್ಥೆ ನಮಗೆ ಸವಾಲುಗಳಾಗಿವೆ ಎಂದು ತಾರಿಕ್ ಹೇಳಿದರು. ನಾವು ಅದನ್ನು ಸುಧಾರಿಸಲು ಪ್ರಯತ್ನಿಸುತ್ತೇವೆ. ಉತ್ತಮ ಆಡಳಿತವನ್ನು ಒದಗಿಸುವುದು ನಮ್ಮ ಪ್ರಯತ್ನವಾಗಿರುತ್ತದೆ. ಚೀನಾದೊಂದಿಗಿನ ಸಂಬಂಧಗಳ ಬಗ್ಗೆ ಕೇಳಿದಕ್ಕೆ ಚೀನಾ ಈಗಾಗಲೇ ಬಾಂಗ್ಲಾದೇಶದಲ್ಲಿ ಹಲವಾರು ಅಭಿವೃದ್ಧಿ ಯೋಜನೆಗಳಲ್ಲಿ ತೊಡಗಿಸಿಕೊಂಡಿದೆ ಎಂದು ಅವರು ಹೇಳಿದರು. ಈ ಪ್ರಯತ್ನವನ್ನು ಇನ್ನಷ್ಟು ಸುಧಾರಿಸಲು ನಾವು ಒಟ್ಟಾಗಿ ಕೆಲಸ ಮಾಡಲು ಆಶಿಸುತ್ತೇವೆ ಎಂದರು.36 ವರ್ಷಗಳ ನಂತರ ಬಾಂಗ್ಲಾದೇಶದ ಮೊದಲ ಪುರುಷ ಪ್ರಧಾನಿಯಾಗಲಿರುವ ತಾರಿಕ್

36 ವರ್ಷಗಳ ನಂತರ ಬಾಂಗ್ಲಾದೇಶದ ಮೊದಲ ಪುರುಷ ಪ್ರಧಾನಿಯಾಗಲಿರುವ ತಾರಿಕ್

36 ವರ್ಷಗಳ ನಂತರ ಬಾಂಗ್ಲಾದೇಶದ ಮೊದಲ ಪುರುಷ ಪ್ರಧಾನಿಯಾಗಲಿದ್ದಾರೆ ತಾರಿಕ್ ರೆಹಮಾನ್. ಇದಕ್ಕೂ ಮೊದಲು, ಅವರ ತಾಯಿ ಖಲೀದಾ ಜಿಯಾ ಮತ್ತು ಅವಾಮಿ ಲೀಗ್ ನಾಯಕಿ ಶೇಖ್ ಹಸೀನಾ 36 ವರ್ಷಗಳ ಕಾಲ ಆಳ್ವಿಕೆ ನಡೆಸಿದರು. ಹೀಗಾಗಿ, ಬಾಂಗ್ಲಾದೇಶವು ಬಹಳ ಸಮಯದ ನಂತರ ಪುರುಷ ಪ್ರಧಾನಿಯನ್ನು ಹೊಂದಲಿದೆ. 20 ವರ್ಷಗಳ ನಂತರ ಬಿಎನ್‌ಪಿ ಅಧಿಕಾರಕ್ಕೆ ಮರಳಿತು. 299 ಸ್ಥಾನಗಳ ಸಂಸತ್ತಿನಲ್ಲಿ 212 ಸ್ಥಾನಗಳ ಭರ್ಜರಿ ಜಯ ಸಾಧಿಸಿತು. ಅದರ ಪ್ರತಿಸ್ಪರ್ಧಿ ಜಮಾತ್-ಇ-ಇಸ್ಲಾಮಿ ಮೈತ್ರಿಕೂಟ 76 ಸ್ಥಾನಗಳನ್ನು ಗಳಿಸಿತು. ಆದಾಗ್ಯೂ, ಶೇಖ್ ಹಸೀನಾ ಅವರ ಅವಾಮಿ ಲೀಗ್ ಪಕ್ಷವು ಸ್ಪರ್ಧಿಸುವುದನ್ನು ನಿಷೇಧಿಸಿದ್ದರಿಂದ ಚುನಾವಣೆಯಲ್ಲಿ ಸ್ಪರ್ಧಿಸುವುದನ್ನು ನಿಷೇಧಿಸಲಾಯಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಾಂಗ್ರೆಸ್ ಸರ್ಕಾರದ 1000 ದಿನಗಳ ಸಮಾವೇಶದ ಬಗ್ಗೆ ಬಿಜೆಪಿಗೆ 'ಹೊಟ್ಟೆ ಉರಿ': ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಮಹಾರಾಷ್ಟ್ರ: ಮಾಲೆಗಾಂವ್ ಉಪಮೇಯರ್ ಕೊಠಡಿಯಲ್ಲಿ ಗಾಂಧಿ, ಅಂಬೇಡ್ಕರ್ ಫೋಟೋ ತೆಗೆದು ಟಿಪ್ಪು ಫೋಟೋ, ಭುಗಿಲೆದ್ದ ವಿವಾದ!

T20 World Cup 2026: ಹ್ಯಾಂಡ್‌ಶೇಕ್ ಬಗ್ಗೆ ನೋಡೋಣ, ಮೊದಲು ಸರಿಯಾದ ಮನೋಭಾವದಿಂದ ಆಡೋಣ; ಸಲ್ಮಾನ್ ಅಲಿ ಆಘಾ

Valentine's Day: ಕಾರಿನಲ್ಲೇ ಗೆಳತಿಗೆ ಗುಂಡಿಕ್ಕಿ ಹತ್ಯೆ, ಬಳಿಕ ತಾನೂ ಶೂಟ್ ಮಾಡಿಕೊಂಡ ಪಾಗಲ್ ಪ್ರೇಮಿ!

ಜೋರಾಗಿ ಸುಳ್ಳು ಹೇಳುವುದು, ಅದನ್ನೇ ಪುನರಾವರ್ತಿಸುವುದು ರಾಹುಲ್ ಗಾಂಧಿಯ ಪಾಲಿಸಿ: ಅಮಿತ್ ಶಾ

SCROLL FOR NEXT