ಖಲಿಸ್ತಾನಿ ಪ್ರತ್ಯೇಕತಾವಾದಿ ಗುರ್ಪತವಂತ್ ಸಿಂಗ್ ಪನ್ನುನ್. 
ವಿದೇಶ

ಗುರ್ಪತ್ವಂತ್ ಸಿಂಗ್ ಪನ್ನುನ್ ಹತ್ಯೆಗೆ ಸಂಚು: ಅಮೆರಿಕಾ ನ್ಯಾಯಾಲಯದಲ್ಲಿ ನಿಖಿಲ್ ಗುಪ್ತ ತಪ್ಪೊಪ್ಪಿಗೆ

ಅಮೆರಿಕದ ಫೆಡರಲ್ ನ್ಯಾಯಾಲಯದ ಮುಂದೆ ನಡೆದ ವಿಚಾರಣೆಯಲ್ಲಿ, ಹಣಕ್ಕೆ ಹತ್ಯೆ (ಮರ್ಡರ್-ಫಾರ್-ಹೈರ್) ಹಾಗೂ ಸಂಚು ಸೇರಿದಂತೆ ಮೂರು ಆರೋಪಗಳನ್ನು ಗುಪ್ತ ಒಪ್ಪಿಕೊಂಡಿದ್ದಾರೆ.

ಭಾರತೀಯ ನಾಗರಿಕ ನಿಖಿಲ್ ಗುಪ್ತ ಅಮೆರಿಕಾದಲ್ಲಿ ಸಿಖ್ ಪ್ರತ್ಯೇಕತಾವಾದಿ ನಾಯಕ ಗುರ್ಪತವಂತ್ ಸಿಂಗ್ ಪನ್ನುನ್ ಅವರ ಹತ್ಯೆಗೆ ಸಂಚು ರೂಪಿಸಿದ ಪ್ರಕರಣಕ್ಕೆ ಸಂಬಂಧಿಸಿದ ಆರೋಪಗಳನ್ನು ಮ್ಯಾನ್ಹ್ಯಾಟನ್‌ನ ಫೆಡರಲ್ ನ್ಯಾಯಾಲಯದಲ್ಲಿ ಒಪ್ಪಿಕೊಂಡಿದ್ದಾರೆ ಎಂದು ನ್ಯೂಯಾರ್ಕ್ ಟೈಮ್ಸ್ ವರದಿ ಮಾಡಿದೆ.

ಅಮೆರಿಕದ ಫೆಡರಲ್ ನ್ಯಾಯಾಲಯದ ಮುಂದೆ ನಡೆದ ವಿಚಾರಣೆಯಲ್ಲಿ, ಹಣಕ್ಕೆ ಹತ್ಯೆ (ಮರ್ಡರ್-ಫಾರ್-ಹೈರ್) ಹಾಗೂ ಸಂಚು ಸೇರಿದಂತೆ ಮೂರು ಆರೋಪಗಳನ್ನು ಗುಪ್ತ ಒಪ್ಪಿಕೊಂಡಿದ್ದಾರೆ. ಈ ಆರೋಪಗಳು ಅಮೆರಿಕದ ನಾಗರಿಕರಾಗಿರುವ ಹಾಗೂ ಪಂಜಾಬ್‌ನಲ್ಲಿ ಪ್ರತ್ಯೇಕತಾವಾದಕ್ಕೆ ಬೆಂಬಲ ನೀಡುವ ಗುರ್ಪತವಂತ್ ಸಿಂಗ್ ಪನ್ನುನ್ ವಿರುದ್ಧ ರೂಪಿಸಲಾಗಿದ್ದ ಹತ್ಯೆ ಸಂಚಿಗೆ ಸಂಬಂಧಿಸಿದವು ಎಂದು ಸರ್ಕಾರಿ ಅಭಿಯೋಜಕರು ತಿಳಿಸಿದ್ದಾರೆ. ಪನ್ನುನ್ ಅವರು ನ್ಯೂಯಾರ್ಕ್ ಮೂಲದ ‘ಸಿಖ್ಸ್ ಫಾರ್ ಜಸ್ಟಿಸ್’ ಸಂಘಟನೆಯೊಂದಿಗೆ ಸಂಪರ್ಕ ಹೊಂದಿದ್ದಾರೆ.

ಅಮೆರಿಕದ ಅಭಿಯೋಜಕರು, ಗುಪ್ತ ಅವರು ಭಾರತೀಯ ಸರ್ಕಾರದ ಅಧಿಕಾರಿಯೆಂದು ಹೇಳಲಾಗಿರುವ ವ್ಯಕ್ತಿಯ ಸೂಚನೆಯ ಮೇರೆಗೆ ಕಾರ್ಯನಿರ್ವಹಿಸುತ್ತಿದ್ದರು ಎಂದು ಆರೋಪಿಸಿದ್ದಾರೆ. ಆದರೆ, ಈ ಆರೋಪಗಳನ್ನು ಭಾರತ ಸರ್ಕಾರ ಸ್ಪಷ್ಟವಾಗಿ ತಳ್ಳಿ ಹಾಕಿದ್ದು, ಯಾವುದೇ ಅಧಿಕೃತ ಸಂಬಂಧ ಹೊಂದಿಲ್ಲ ಎಂದು ತಿಳಿಸಿದೆ. ಈ ವಿಷಯವನ್ನು ಕಾನೂನು ಮತ್ತು ರಾಜತಾಂತ್ರಿಕ ಮಾರ್ಗಗಳ ಮೂಲಕ ಪರಿಶೀಲಿಸಲಾಗುತ್ತಿದೆ ಎಂದು ಭಾರತೀಯ ಅಧಿಕಾರಿಗಳು ಈ ಹಿಂದೆಯೇ ಹೇಳಿದ್ದಾರೆ.

ನಿಖಿಲ್ ಗುಪ್ತರನ್ನು ಜೂನ್ 2024ರಲ್ಲಿ ಝೆಕ್ ಗಣರಾಜ್ಯದಿಂದ ಅಮೆರಿಕಕ್ಕೆ ಹಸ್ತಾಂತರಿಸಲಾಗಿತ್ತು. ನಂತರ ಅವರು ಮ್ಯಾನ್ಹ್ಯಾಟನ್ ಫೆಡರಲ್ ನ್ಯಾಯಾಲಯದಲ್ಲಿ ಮ್ಯಾಜಿಸ್ಟ್ರೇಟ್ ನ್ಯಾಯಾಧೀಶ ಜೇಮ್ಸ್ ಕಾಟ್ ಅವರ ಮುಂದೆ ಹಾಜರಾಗಿದ್ದರು. ಆರೋಪ ಪತ್ರ ಸಲ್ಲಿಕೆಯ ವೇಳೆ ಅವರು ತಮ್ಮ ಮೇಲಿನ ಆರೋಪಗಳನ್ನು ನಿರಾಕರಿಸಿದ್ದರು.

ಅಮೆರಿಕ ಸರ್ಕಾರದ ಮನವಿಯ ಮೇರೆಗೆ, ನ್ಯೂಯಾರ್ಕ್‌ನಲ್ಲಿ ಖಲಿಸ್ತಾನಿ ಪ್ರತ್ಯೇಕತಾವಾದಿ ಗುರ್ಪತವಂತ್ ಸಿಂಗ್ ಪನ್ನುನ್ ಅವರನ್ನು ಹತ್ಯೆ ಮಾಡುವ ಸಂಚಿನಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪದ ಮೇಲೆ ನಿಖಿಲ್ ಗುಪ್ತ ಅವರನ್ನು ಝೆಕ್ ಗಣರಾಜ್ಯದಲ್ಲಿ ಬಂಧಿಸಲಾಗಿತ್ತು. ಪನ್ನೂನ್ ಅವರು ಅಮೆರಿಕಾ ಮತ್ತು ಕೆನಡಾ ಎರಡೂ ದೇಶಗಳ ದ್ವಿತೀಯ ನಾಗರಿಕತ್ವ ಹೊಂದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ