ಪಾಕಿಸ್ತಾನ ಪ್ರಧಾನಮಂತ್ರಿ ಶೆಹಬಾಜ್ ಶರೀಫ್ (ಎಡ), ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್(ಬಲ) 
ವಿದೇಶ

'India-Pak ಯುದ್ಧ ನಾನು ತಡೆಯದಿರುತ್ತಿದ್ದರೆ ಪಾಕ್ ಪ್ರಧಾನಿ ಶೆಹಬಾಜ್ ಶರೀಫ್ ಸಾಯುತ್ತಿದ್ದರು': ಡೊನಾಲ್ಡ್ ಟ್ರಂಪ್; Video

ತಮ್ಮ ಸ್ಟೇಟ್ ಆಫ್ ದ ಯೂನಿಯನ್ ಭಾಷಣದಲ್ಲಿ, ವಿಶ್ವದಾದ್ಯಂತ ಎಂಟು ಯುದ್ಧಗಳನ್ನು ತಾನು ನಿಲ್ಲಿಸಿದ್ದೇನೆ ಎಂದು ಟ್ರಂಪ್ ಹೇಳಿ, ಭಾರತ ಮತ್ತು ಪಾಕಿಸ್ತಾನ ಅಣುಯುದ್ಧದ ಹಂತಕ್ಕೆ ಹೋಗುವುದನ್ನು ತಪ್ಪಿಸಿದ್ದೇನೆ ಎಂದರು.

ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ದೇಶವನ್ನುದ್ದೇಶಿಸಿ ಮಾತನಾಡಿ, ಕಳೆದ ವರ್ಷ ಮೇ ತಿಂಗಳಲ್ಲಿ ನಡೆದ ಭಾರತ–ಪಾಕಿಸ್ತಾನ ಸಂಘರ್ಷದಲ್ಲಿ ತಾವು ಮಧ್ಯಸ್ಥಿಕೆ ವಹಿಸಿದ್ದೇನೆ ಎಂಬ ತಮ್ಮ ಹೇಳಿಕೆಯನ್ನು ಮತ್ತೊಮ್ಮೆ ಪುನರುಚ್ಚರಿಸಿದರು.

ತಮ್ಮ ಸ್ಟೇಟ್ ಆಫ್ ದ ಯೂನಿಯನ್ ಭಾಷಣದಲ್ಲಿ, ವಿಶ್ವದಾದ್ಯಂತ ಎಂಟು ಯುದ್ಧಗಳನ್ನು ತಾನು ನಿಲ್ಲಿಸಿದ್ದೇನೆ ಎಂದು ಟ್ರಂಪ್ ಹೇಳಿ, ಭಾರತ ಮತ್ತು ಪಾಕಿಸ್ತಾನ ಅಣುಯುದ್ಧದ ಹಂತಕ್ಕೆ ಹೋಗುವುದನ್ನು ತಪ್ಪಿಸಿದ್ದೇನೆ ಎಂದರು.

ಇದರ ಜೊತೆಗೆ ಅಚ್ಚರಿ ಹುಟ್ಟಿಸುವ ಹೇಳಿಕೆ ನೀಡಿದ್ದು, ತಮ್ಮ ಹಸ್ತಕ್ಷೇಪ ಇರದಿದ್ದರೆ ಪಾಕಿಸ್ತಾನ ಪ್ರಧಾನಮಂತ್ರಿ ಶೆಹಬಾಜ್ ಶರೀಫ್ ಮೃತಪಡುತ್ತಿದ್ದರು ಎಂಬ ಆಘಾತಕಾರಿ ಮಾಹಿತಿ ಹೊರಹಾಕಿದ್ದಾರೆ.

ಟ್ರಂಪ್ ಅವರು ಎರಡು ದೇಶಗಳ ನಡುವೆ ಶಾಂತಿ ಸ್ಥಾಪನೆಯಲ್ಲಿ ತಾವು ಮಧ್ಯವರ್ತಿಯಾಗಿದ್ದೇನೆ ಎಂದು ಹಲವು ಬಾರಿ ಹೇಳಿದ್ದಾರೆ. ಆದರೆ, ಭಾರತವು ಈ ಹೇಳಿಕೆಯನ್ನು ದೃಢವಾಗಿ ತಳ್ಳಿಹಾಕಿದ್ದು, ಶಸ್ತ್ರಸಂಘರ್ಷ ಕಡಿಮೆಗೊಳಿಸುವ ಒಪ್ಪಂದವು ಉಭಯ ದೇಶಗಳ ಸೈನ್ಯದ ಡೈರೆಕ್ಟರ್ ಜನರಲ್ ಆಫ್ ಮಿಲಿಟರಿ ಆಪರೇಷನ್ಸ್ (DGMO) ಮಟ್ಟದ ದ್ವಿಪಕ್ಷೀಯ ಮಾತುಕತೆಗಳ ಮೂಲಕವೇ ನಡೆಯಿತು ಎಂದು ಸ್ಪಷ್ಟಪಡಿಸಿದೆ.

ಕಳೆದ ವಾರ ನಡೆದ “ಬೋರ್ಡ್ ಆಫ್ ಪೀಸ್” ಕಾರ್ಯಕ್ರಮದಲ್ಲಿ ಮಾತನಾಡಿದ ಟ್ರಂಪ್, ಎರಡು ದೇಶಗಳ ಮೇಲೂ 200 ಶೇಕಡಾ ಸುಂಕ ವಿಧಿಸುವುದಾಗಿ ಬೆದರಿಕೆ ಹಾಕಿದ್ದಾಗಿ ಹೇಳಿದರು. ಹಣಕಾಸು ಒತ್ತಡದ ಕಾರಣದಿಂದಲೇ ಎರಡು ದೇಶಗಳು ಸೈನಿಕ ಕ್ರಮಗಳನ್ನು ನಿಲ್ಲಿಸಿದವು. ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಕರೆ ಮಾಡಿ, ಅಮೆರಿಕ ಭಾರತೊಂದಿಗೆ ವ್ಯಾಪಾರ ನಡೆಸುವುದಿಲ್ಲ ಎಂದು ಎಚ್ಚರಿಸಿದ್ದೇನೆ ಎಂಬುದನ್ನೂ ಹೇಳಿದ್ದಾರೆ.

2025ರ ಮೇ 7ರ ರಾತ್ರಿ ಭಾರತವು “ಆಪರೇಶನ್ ಸಿಂಧೂರ್” ಆರಂಭಿಸಿತ್ತು. ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಂನಲ್ಲಿ ಏಪ್ರಿಲ್‌ನಲ್ಲಿ ನಡೆದ ಉಗ್ರ ದಾಳಿಯಲ್ಲಿ 26 ಪ್ರವಾಸಿಗರು ಮೃತಪಟ್ಟ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿತ್ತು. ಈ ಕಾರ್ಯಾಚರಣೆಯಲ್ಲಿ ಪಾಕಿಸ್ತಾನ ಹಾಗೂ ಪಾಕ್ ಆಕ್ರಮಿತ ಕಾಶ್ಮೀರದಲ್ಲಿನ ಉಗ್ರ ತರಬೇತಿ ಶಿಬಿರಗಳನ್ನು ಗುರಿಯಾಗಿಸಲಾಗಿತ್ತು. ಇದರ ನಂತರ ಕೆಲವು ದಿನಗಳ ಕಾಲ ಎರಡೂ ದೇಶಗಳ ನಡುವೆ ಸೈನಿಕ ಉದ್ವಿಗ್ನತೆ ಹೆಚ್ಚಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಹಾರ್ಮುಜ್ ಜಲಸಂಧಿ' ದಿಗ್ಬಂಧನ ನಡುವೆ ಟ್ರಂಪ್-ಪ್ರಧಾನಿ ಮೋದಿ ದೂರವಾಣಿ ಸಂಭಾಷಣೆ! ಏನೆಲ್ಲಾ ಮಾತುಕತೆ ಆಯ್ತು?

ಅಮೆರಿಕದ ಹಾರ್ಮುಜ್ ದಿಗ್ಬಂಧನದಿಂದ ಇರಾನ್‌ಗೆ ದಿನಕ್ಕೆ ಅಂದಾಜು $435 ಮಿಲಿಯನ್ ನಷ್ಟ; ಆದರೂ ದೀರ್ಘಾವಧಿಯ ಬ್ಲಾಕೇಡ್ ಕಷ್ಟ!

ತಿರುಪ್ಪೂರ್: ಟಿವಿಕೆ ವಿಜಯ್ ಪ್ರಚಾರ ಕಾರ್ಯಕ್ರಮದಲ್ಲಿ ಮಾತ್ತೊಂದು ಅವಘಡ: ಕುಸಿದುಬಿದ್ದು 15 ಮಂದಿ ಆಸ್ಪತ್ರೆಗೆ ದಾಖಲು!

IPL 2026: ತವರು ನೆಲದಲ್ಲಿ ಕೆಕೆಆರ್ ವಿರುದ್ಧ ಗೆದ್ದು ಬೀಗಿದ CSK!

ನವದೆಹಲಿ: ಸಂಪುಟ ಪುನರ್ ರಚನೆಗೆ ಪಟ್ಟು, ಹಿರಿಯ ನಾಯಕರೊಂದಿಗೆ ಚರ್ಚಿಸದೆ ಬೆಂಗಳೂರಿಗೆ ವಾಪಸ್ ಆಗಲ್ಲ: ಅಶೋಕ್ ಪಟ್ಟಣ್

SCROLL FOR NEXT