ಪ್ರಧಾನಿ ಮೋದಿ 
ವಿದೇಶ

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

ಮಾನವೀಯತೆಯು ಎಂದಿಗೂ ಸಂಘರ್ಷಕ್ಕೆ ಬಲಿಯಾಗಬಾರದು. ಗಾಜಾ ಶಾಂತಿ ಯೋಜನೆಯ ಮೂಲಕ ಶಾಂತಿಯ ಹಾದಿಯನ್ನು ಸೃಷ್ಟಿಸಲಾಗಿದೆ. ಭಾರತವು ಈ ಪ್ರಯತ್ನಗಳನ್ನು ಸಂಪೂರ್ಣವಾಗಿ ಬೆಂಬಲಿಸಿದೆ.

ಟೆಲ್ ಅವೀವ್: ಎರಡು ದಿನಗಳ ಇಸ್ರೇಲ್ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ಅವರು ಗುರುವಾರ ಗಾಜಾ ಶಾಂತಿ ಉಪಕ್ರಮಕ್ಕೆ ಬಲವಾದ ಬೆಂಬಲ ವ್ಯಕ್ತಪಡಿಸಿದ್ದು, "ಸಂಘರ್ಷಕ್ಕೆ ಮಾನವೀಯತೆ ಎಂದಿಗೂ ಬಲಿಯಾಗಬಾರದು" ಎಂದು ಪ್ರತಿಪಾದಿಸಿದ್ದಾರೆ.

ಜೆರುಸಲೆಮ್‌ನಲ್ಲಿ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರೊಂದಿಗೆ ಮಾತುಕತೆ ನಡೆಸಿದ ನಂತರ ಜಂಟಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಪ್ರಧಾನಿ, ಭಾರತದ ಭದ್ರತಾ ಹಿತಾಸಕ್ತಿಗಳು, ಪಶ್ಚಿಮ ಏಷ್ಯಾದಲ್ಲಿ ಶಾಂತಿ ಮತ್ತು ಸ್ಥಿರತೆಗೆ ನಿಕಟ ಸಂಬಂಧ ಹೊಂದಿವೆ ಎಂದು ಹೇಳಿದರು. ಅಲ್ಲದೆ ಗಾಜಾದಲ್ಲಿ ಸಂಘರ್ಷವನ್ನು ಕೊನೆಗೊಳಿಸುವ ಪ್ರಯತ್ನಗಳಿಗೆ ಭಾರತದ ಬೆಂಬಲವನ್ನು ಪುನರುಚ್ಚರಿಸಿದರು.

ಭಾರತದ ನಿಲುವು ಸ್ಪಷ್ಟವಾಗಿದೆ

ಮಾನವೀಯತೆಯು ಎಂದಿಗೂ ಸಂಘರ್ಷಕ್ಕೆ ಬಲಿಯಾಗಬಾರದು. ಗಾಜಾ ಶಾಂತಿ ಯೋಜನೆಯ ಮೂಲಕ ಶಾಂತಿಯ ಹಾದಿಯನ್ನು ಸೃಷ್ಟಿಸಲಾಗಿದೆ. ಭಾರತವು ಈ ಪ್ರಯತ್ನಗಳನ್ನು ಸಂಪೂರ್ಣವಾಗಿ ಬೆಂಬಲಿಸಿದೆ ಎಂದು ಮೋದಿ ತಮ್ಮ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

"ಭವಿಷ್ಯದಲ್ಲಿಯೂ ಸಹ, ನಾವು ಎಲ್ಲಾ ದೇಶಗಳೊಂದಿಗೆ ಮಾತುಕತೆ ಮತ್ತು ಸಹಕಾರವನ್ನು ಮುಂದುವರಿಸುತ್ತೇವೆ" ಎಂದು ಮೋದಿ ಹೇಳಿದ್ದಾರೆ.

ಭಯೋತ್ಪಾದನೆ ವಿರುದ್ಧ ತಮ್ಮ ನಿಲುವನ್ನು ಒತ್ತಿ ಹೇಳಿದ ಇಬ್ಬರೂ ನಾಯಕರು, "ಯಾವುದೇ ರೂಪದಲ್ಲಿ, ಯಾವುದೇ ಅಭಿವ್ಯಕ್ತಿಯಲ್ಲಿ" ಅದಕ್ಕೆ ಸ್ಥಾನವಿಲ್ಲ ಎಂದು ಘೋಷಿಸಿದರು. ಭಯೋತ್ಪಾದನೆ ಮತ್ತು ಅದರ ಬೆಂಬಲಿಗರನ್ನು ಎದುರಿಸುವಲ್ಲಿ ಭಾರತ ಮತ್ತು ಇಸ್ರೇಲ್ ನಿರಂತರವಾಗಿ "ಹೆಗಲಿಗೆ ಹೆಗಲು" ಕೊಟ್ಟು ನಿಂತಿವೆ ಮತ್ತು ಅದನ್ನು ಮುಂದುವರಿಸುತ್ತವೆ ಎಂದು ಮೋದಿ ಹೇಳಿದರು.

ಇಸ್ರೇಲ್ ಹಾಗೂ ಭಾರತ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಶೀಘ್ರದಲ್ಲೇ ಅಂತಿಮ ರೂಪ ಸಿಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಮೋದಿ,

ತಂತ್ರಜ್ಞಾನ ವರ್ಗಾವಣೆಯನ್ನು ಸಕ್ರಿಯಗೊಳಿಸುವ ಚೌಕಟ್ಟು ಒಳಗೊಂಡಂತೆ ಜಂಟಿ ಅಭಿವೃದ್ಧಿ ಮತ್ತು ಮಿಲಿಟರಿ ಹಾರ್ಡ್‌ವೇರ್‌ನ ಜಂಟಿ ಉತ್ಪಾದನೆಯ ಮೂಲಕ ಸಹಯೋಗವನ್ನು ಮತ್ತಷ್ಟು ವಿಸ್ತರಿಸಲು ಎರಡೂ ದೇಶಗಳು ಒಪ್ಪಿಕೊಂಡಿ ಎಂದರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ಉರ್ದು ಭಾಷೆಯಲ್ಲಿ ಸರ್ಕಾರದ ಜಾಹೀರಾತು: ಸಿಎಂ ಸಿದ್ದರಾಮಯ್ಯ ಸಮರ್ಥನೆ ಹೇಗಿದೆ ಗೊತ್ತಾ?

SCROLL FOR NEXT