Bolivian Air Forceಗೆ ಸೇರಿದ ಹೆರ್ಕ್ಯುಲೀಸ್ ವಿಮಾನವು El Altoನಲ್ಲಿ ಪತನಗೊಂಡು 15 ಮಂದಿ ಮೃತಪಟ್ಟಿದ್ದಾರೆ 
ವಿದೇಶ

ಹಣ ಸಾಗಿಸುತ್ತಿದ್ದ ಕಾರ್ಗೊ ವಿಮಾನ ಪತನ; 15 ಮಂದಿ ಸಾವು, ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದ ನೋಟುಗಳು, ಮುಗಿಬಿದ್ದ ಜನರು: Video

ವಿಮಾನವು ಲಾ ಪಾಸ್‌ಗೆ ಸಮೀಪದಲ್ಲಿರುವ ಎಲ್ ಅಲ್ಟೊ ನಗರದಲ್ಲಿ ವಾಹನಗಳಿಗೆ ಡಿಕ್ಕಿ ಹೊಡೆದು ನಂತರ ಹೊಲವೊಂದರಲ್ಲಿ ಬಿದ್ದಿರುವುದನ್ನು ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಚಿತ್ರಗಳು ಸೂಚಿಸುತ್ತವೆ.

ಹಣವನ್ನು ಸಾಗಿಸುತ್ತಿದ್ದ ಸರಕು ವಿಮಾನವು ಭಾರತೀಯ ಕಾಲಮಾನ ನಿನ್ನೆ ಶುಕ್ರವಾರ ಸಂಜೆ ಬೊಲಿವಿಯಾದ ರಾಜಧಾನಿ ಸಮೀಪ ಪತನಗೊಂಡು, ಹೆದ್ದಾರಿಯಲ್ಲಿ ಸುಮಾರು ಹನ್ನೆರಡು ವಾಹನಗಳಿಗೆ ಹಾನಿ ಉಂಟುಮಾಡಿತು. ವಿಮಾನದಲ್ಲಿದ್ದ ನೋಟುಗಳಲ್ಲಾ ನೆಲದ ಮೇಲೆ ಚದುರಿ ಬಿದ್ದಿದ್ದು, ಕನಿಷ್ಠ 15 ಮಂದಿ ಮೃತಪಟ್ಟಿದ್ದಾರೆ.

ವಿಮಾನ ಬಿದ್ದ ರಭಸಕ್ಕೆ ಅದರಲ್ಲಿದ್ದ ಕಂತೆ ಕಂತೆ ನೋಟುಗಳು ರಸ್ತೆಯುದ್ದಕ್ಕೂ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದು, ಇದನ್ನು ಕಂಡ ಜನ ಹಣವನ್ನು ಬಾಚಿಕೊಳ್ಳಲು ಮುಗಿಬಿದ್ದ ಪ್ರಸಂಗವೂ ನಡೆದಿದೆ.

ಘಟನೆಯ ವಿವರ

ಬೊಲಿವಿಯಾದ ರಾಜಧಾನಿ ಲಾ ಪಾಜ್ ಪಕ್ಕದಲ್ಲಿರುವ ಎಲ್ ಆಲ್ಟೊ (El Alto) ವಿಮಾನ ನಿಲ್ದಾಣದಲ್ಲಿ ಈ ದುರಂತ ಸಂಭವಿಸಿದೆ. ಬೊಲಿವಿಯಾ ವಾಯುಪಡೆಗೆ ಸೇರಿದ ಹರ್ಕ್ಯುಲಸ್ ಸಿ-130 (Hercules C-130) ವಿಮಾನವು ಹೊಸದಾಗಿ ಮುದ್ರಿಸಲಾದ ಕರೆನ್ಸಿ ನೋಟುಗಳನ್ನು ಸಾಗಿಸುತ್ತಿತ್ತು.

ವಿಮಾನವು ಲ್ಯಾಂಡಿಂಗ್ ಆಗುವಾಗ ನಿಯಂತ್ರಣ ತಪ್ಪಿ ರನ್‌ವೇಯಿಂದ ಜಾರಿ, ಪಕ್ಕದ ರಸ್ತೆಗೆ ನುಗ್ಗಿದೆ. ಅಲ್ಲಿ ಸಂಚರಿಸುತ್ತಿದ್ದ ಸುಮಾರು 15ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ವಿಮಾನಕ್ಕೆ ಬೆಂಕಿ ಹೊತ್ತಿಕೊಂಡಿದ್ದು, ಸ್ಥಳದಲ್ಲೇ ಭೀಕರ ವಾತಾವರಣ ನಿರ್ಮಾಣವಾಗಿತ್ತು.

ವಿಮಾನವು ಲಾ ಪಾಸ್‌ಗೆ ಸಮೀಪದಲ್ಲಿರುವ ಎಲ್ ಅಲ್ಟೊ ನಗರದಲ್ಲಿ ವಾಹನಗಳಿಗೆ ಡಿಕ್ಕಿ ಹೊಡೆದು ನಂತರ ಹೊಲವೊಂದರಲ್ಲಿ ಬಿದ್ದಿರುವುದನ್ನು ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಚಿತ್ರಗಳು ಸೂಚಿಸುತ್ತವೆ. ವಿಮಾನ ಪತನಗೊಳ್ಳುವ ಸಂದರ್ಭದಲ್ಲಿ ಅದು ಹಾರಾಟ ಆರಂಭಿಸುತ್ತಿತ್ತೋ ಅಥವಾ ಇಳಿಯುತ್ತಿದ್ದಿತ್ತೋ ಎಂಬ ಬಗ್ಗೆ ಸ್ಪಷ್ಟತೆಯಿಲ್ಲ. ವಿಮಾನದ ಅವಶೇಷಗಳು, ಧ್ವಂಸಗೊಂಡ ಕಾರುಗಳು ಹಾಗೂ ಮೃತದೇಹಗಳು ರಸ್ತೆಯಲ್ಲೇ ಬಿದ್ದಿವೆ. ಟೋವಾರ್ ಅವರ ಪ್ರಕಾರ ಕನಿಷ್ಠ 15 ವಾಹನಗಳು ಹಾನಿಗೀಡಾಗಿವೆ. ಅಗ್ನಿಶಾಮಕ ಸಿಬ್ಬಂದಿ ವಿಮಾನವನ್ನು ಆವರಿಸಿದ್ದ ಬೆಂಕಿಯನ್ನು ನಂದಿಸಲು ಯಶಸ್ವಿಯಾದರು.

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ ಚಿತ್ರಗಳಲ್ಲಿ ಜನರು ಚದುರಿದ ನೋಟುಗಳನ್ನು ಸಂಗ್ರಹಿಸಲು ಧಾವಿಸುತ್ತಿರುವುದು ಹಾಗೂ ಗಲಭೆ ನಿಯಂತ್ರಣ ಸಜ್ಜಿನಲ್ಲಿ ಇದ್ದ ಪೊಲೀಸರು ಅವರನ್ನು ಚದುರಿಸಲು ಪ್ರಯತ್ನಿಸುತ್ತಿರುವುದು ಕಾಣಿಸುತ್ತದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

2nd PUC exam 2026-ಇಂದಿನಿಂದ ದ್ವಿತೀಯ ಪಿಯು ಪರೀಕ್ಷೆ-1: 7 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ನೋಂದಣಿ, ಸಾವಿರಕ್ಕೂ ಅಧಿಕ ಮಕ್ಕಳಿಗೆ ನಿರಾಕರಣೆ

'ನೀವೇ CM ಆಗಿ, ಇಲ್ಲದಿದ್ದರೇ ದಲಿತರನ್ನು ಮುಖ್ಯಮಂತ್ರಿ ಮಾಡಿ: ಅಧಿಕಾರವಿದ್ದರೂ ಅವಕಾಶ ನೀಡದಿದ್ದರೇ ಇತಿಹಾಸ ನಿಮ್ಮನ್ನು ಶಪಿಸುತ್ತೆ'

ರಂಜಾನ್ ಉಪವಾಸದ ಸಮಯದಲ್ಲಿ ಆರೋಗ್ಯಕರ ಆಹಾರ ಸೇವನೆ

ಅಹಿಂದ ಉತ್ತರಾಧಿಕಾರಕ್ಕೆ ಜಾರಕಿಹೊಳಿ ಸಿದ್ದತೆ: ಹಿಂದುಳಿದ ವರ್ಗಗಳ ಚ್ಯಾಂಪಿಯನ್ ಪಟ್ಟಕ್ಕೆ 'ಸಾಹುಕಾರ್' ಸಮರ್ಥರೇ?

ನನ್ನ ಪರವಾಗಿ ಯಾರೂ ದೆಹಲಿಗೆ ಹೋಗುವುದು ಬೇಡ: ಯಾವ ಶಕ್ತಿ ಪ್ರದರ್ಶನವೂ ಇಲ್ಲ; ಡಿ.ಕೆ. ಶಿವಕುಮಾರ್

SCROLL FOR NEXT