ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಪ್ರಧಾನಿ ಮೋದಿ 
ವಿದೇಶ

India–US trade row: 'ಎಲ್ಲವೂ ಬದಲಾಗಿದೆ.. ಪ್ರಧಾನಿ ಮೋದಿ ಕೋಪಗೊಂಡಿದ್ದಾರೆ..'; ಡೊನಾಲ್ಡ್ ಟ್ರಂಪ್ Video

ಮೋದಿ ಅವರೊಂದಿಗೆ ಉತ್ತಮ ಸಂಬಂಧವಿದೆ. ಅವರು ನನ್ನ ಬಗ್ಗೆ ಅಷ್ಟೊಂದು ಸಂತೋಷವಾಗಿಲ್ಲ.. ಏಕೆಂದರೆ ಅವರು ಈಗ ತೈಲವನ್ನು ತಯಾರಿಸುತ್ತಿಲ್ಲವಾದ್ದರಿಂದ ಅವರು ಬಹಳಷ್ಟು ಸುಂಕಗಳನ್ನು ಪಾವತಿಸುತ್ತಿದ್ದಾರೆ..

ವಾಷಿಂಗ್ಟನ್: ಭಾರತದ ಮೇಲೆ ಹೇರಿರುವ ಸುಂಕದಿಂದಾಗಿ ಪ್ರಧಾನಿ ನರೇಂದ್ರ ಮೋದಿ ನಮ್ಮ ಮೇಲೆ ಕೋಪಕೊಂಡಿದ್ದಾರೆ... ಅವರು ಸಂತೋಷವಾಗಿಲ್ಲ ಎಂಬುದು ನಮಗೆ ಗೊತ್ತು.. ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.

ಹೌಸ್ GOP ಸದಸ್ಯರ ರಿಟ್ರೀಟ್‌ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಡೊನಾಲ್ಡ್ ಟ್ರಂಪ್, "ರಷ್ಯಾದ ತೈಲ ಖರೀದಿಗಾಗಿ ದೆಹಲಿಯ ಮೇಲೆ ವಾಷಿಂಗ್ಟನ್ ವಿಧಿಸಿರುವ ಸುಂಕಗಳಿಂದಾಗಿ ಪ್ರಧಾನಿ ನರೇಂದ್ರ ಮೋದಿ "ನನ್ನ ಬಗ್ಗೆ ಅಷ್ಟೊಂದು ಸಂತೋಷವಾಗಿಲ್ಲ.. ಪ್ರಧಾನಿ ಮೋದಿ ನನ್ನನ್ನು ನೋಡಲು ಬಂದರು, ಸರ್, ದಯವಿಟ್ಟು ನಾನು ನಿಮ್ಮನ್ನು ಭೇಟಿ ಮಾಡಬಹುದೇ' ಎಂದು ಹೇಳಿದ್ದಾರೆ ಎಂದರು.

"ನನಗೆ ಮೋದಿ ಅವರೊಂದಿಗೆ ಉತ್ತಮ ಸಂಬಂಧವಿದೆ. ಅವರು ನನ್ನ ಬಗ್ಗೆ ಅಷ್ಟೊಂದು ಸಂತೋಷವಾಗಿಲ್ಲ.. ಏಕೆಂದರೆ ಅವರು ಈಗ ತೈಲವನ್ನು ತಯಾರಿಸುತ್ತಿಲ್ಲವಾದ್ದರಿಂದ ಅವರು ಬಹಳಷ್ಟು ಸುಂಕಗಳನ್ನು ಪಾವತಿಸುತ್ತಿದ್ದಾರೆಂದು ನಿಮಗೆ ತಿಳಿದಿದೆ, ಆದರೆ ಅವರು ಈಗ ರಷ್ಯಾದಿಂದ ತೈಲ ಖರೀದಿಸುವುದನ್ನು ಗಣನೀಯವಾಗಿ ಕಡಿಮೆ ಮಾಡಿದ್ದಾರೆ" ಎಂದು ಟ್ರಂಪ್ ಹೇಳಿದರು.

ಅಪಾಚೆ ಹೆಲಿಕಾಪ್ಟರ್ ಒಪ್ಪಂದ

ಇದೇ ವೇಳೆ ಭಾರತ ಅಮೆರಿಕದ ಅಪಾಚೆ ಹೆಲಿಕಾಪ್ಟರ್ ಗಳ ಖರೀದಿ ವಿಚಾರವಾಗಿಯೂ ಮಾತನಾಡಿದ ಡೊನಾಲ್ಡ್ ಟ್ರಂಪ್, 'ಭಾರತ 68 ಅಪಾಚೆ ಹೆಲಿಕಾಪ್ಟರ್ ಗಳ ಖರೀದಿಗೆ ಆರ್ಡರ್ ಮಾಡಿದೆ. ಅಮೆರಿಕದ ಮಿಲಿಟರಿ ಹಾರ್ಡ್‌ವೇರ್ ಸ್ವೀಕರಿಸುವಲ್ಲಿನ ವಿಳಂಬದ ಬಗ್ಗೆ ಭಾರತ ಕಳವಳ ವ್ಯಕ್ತಪಡಿಸಿದೆ ಮತ್ತು ಈ ಸಮಸ್ಯೆಯನ್ನು ಈಗ ಪರಿಹರಿಸಲಾಗುತ್ತಿದೆ. ಅಪಾಚೆ ಹೆಲಿಕಾಪ್ಟರ್‌ಗಳಿಗಾಗಿ ಐದು ವರ್ಷಗಳಿಂದ ಕಾಯುತ್ತಿದ್ದೇನೆ ಎಂದು ಭಾರತ ತನಗೆ ತಿಳಿಸಿತ್ತು ಎಂದು ಹೇಳಿದರು.

ಇದಕ್ಕೂ ಮೊದಲು, ಟ್ರಂಪ್, ಭಾರತವು "ರಷ್ಯಾದ ತೈಲ ವಿಷಯದಲ್ಲಿ ಸಹಾಯ ಮಾಡದಿದ್ದರೆ", ರಷ್ಯಾ-ಉಕ್ರೇನ್ ಯುದ್ಧಕ್ಕೆ ನೇರವಾಗಿ ಬೆದರಿಕೆಯನ್ನು ಒಡ್ಡಿದರೆ, ಅಮೆರಿಕವು ಸುಂಕಗಳನ್ನು ಮತ್ತಷ್ಟು ಹೆಚ್ಚಿಸಬಹುದು ಎಂದು ಎಚ್ಚರಿಕೆ ನೀಡಿದ್ದರು. ಭಾರತವು ರಿಯಾಯಿತಿ ದರದಲ್ಲಿ ರಷ್ಯಾದ ಕಚ್ಚಾ ತೈಲವನ್ನು ಖರೀದಿಸುವ ಮೂಲಕ ರಷ್ಯಾವನ್ನು ಬಲಪಡಿಸುತ್ತಿದೆ ಎಂದು ಟ್ರಂಪ್ ಆರೋಪಿಸಿದ್ದಾರೆ. ಅಲ್ಲದೆ ಭಾರತೀಯ ಸರಕುಗಳ ಮೇಲೆ ತೀವ್ರವಾಗಿ ಹೆಚ್ಚಿನ ಸುಂಕಗಳಿಗೆ ಇದು ಕಾರಣವೆಂದು ಉಲ್ಲೇಖಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಮೆರಿಕ ವಶಪಡಿಸಿಕೊಂಡಿದ್ದ ತೈಲ ಟ್ಯಾಂಕರ್ ನಲ್ಲಿ ಮೂವರು ಭಾರತೀಯರೂ ಇದ್ದರು!

'ಧೈರ್ಯ ಇದ್ದರೆ ಈಗ ಮುಟ್ಟಿ..': ಅಮೆರಿಕಕ್ಕೆ ರಷ್ಯಾ ಸವಾಲು; ಅಣ್ವಸ್ತ್ರ ನೌಕೆಗಳ ನಿಯೋಜನೆ, US ಹಡುಗುಗಳ ಮುಳುಗಿಸಲು ಕರೆ!

RCB ಅಭಿಮಾನಿಗಳಿಗೆ ತೀವ್ರ ನಿರಾಸೆ: ಚಿನ್ನಸ್ವಾಮಿಗಿಲ್ಲ IPL ಭಾಗ್ಯ?, ಹೊಸ ತವರು ಮೈದಾನ ಬಹುತೇಕ ಫಿಕ್ಸ್!

ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿ ಈಗ ಮಹಾರಾಷ್ಟ್ರ ಚುನಾವಣೆಯಲ್ಲಿ ಸ್ಪರ್ಧೆ!

ನಟಿ ಜಯಮಾಲ, ಸಾ.ರಾ ಗೋವಿಂದುಗೆ ಡಾ.ರಾಜ್‌ಕುಮಾರ್‌ ಪ್ರಶಸ್ತಿ; ಎಂ.ಎಸ್ ಸತ್ಯುಗೆ ಪುಟ್ಟಣ್ಣ ಕಣಗಾಲ್ ಅವಾರ್ಡ್

SCROLL FOR NEXT