ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ JUSTIN LANE
ವಿದೇಶ

ಪ್ರತಿಭಟನಾಕಾರರ ಮೇಲೆ ದಾಳಿ ಮಾಡಿದರೆ ಸೇನಾ ಕಾರ್ಯಾಚರಣೆ; ಬೆದರಿಕೆ ಬಳಿಕ ಮಾತುಕತೆಗೆ ಇರಾನ್ ಮುಂದು; ಡೊನಾಲ್ಡ್ ಟ್ರಂಪ್

ಇರಾನ್‌ನಲ್ಲಿ ಎರಡು ವಾರಗಳಿಂದ ನಡೆಯುತ್ತಿರುವ ಪ್ರತಿಭಟನೆಯು ಹತ್ಯಾಕಾಂಡವಾಗಿ ಮಾರ್ಪಟ್ಟಿದೆ ಎಂದು ಮಾನವ ಹಕ್ಕು ಸಂಘಟನೆಗಳು ಎಚ್ಚರಿಸಿವೆ.

ವಾಷಿಂಗ್ಟನ್: ಪ್ರತಿಭಟನಾಕಾರರ ವಿರುದ್ಧ ದಾಳಿ ಮಾಡಿದರೆ ಸೇನಾ ಕಾರ್ಯಾಚರಣೆ ಮೂಲಕ ಮಧ್ಯಪ್ರವೇಶಿಸುವುದಾಗಿ ಬೆದರಿಕೆ ಹಾಕಿದ ಬಳಿಕ ಇರಾನ್‌ ಮಾತುಕತೆಗೆ ಮನವಿ ಮಾಡಿದೆ ಎಂದು ಅಮೆರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರು ಭಾನುವಾರ ಹೇಳಿದ್ದಾರೆ.

ಇರಾನ್‌ನಲ್ಲಿ ಎರಡು ವಾರಗಳಿಂದ ನಡೆಯುತ್ತಿರುವ ಪ್ರತಿಭಟನೆಯು ಹತ್ಯಾಕಾಂಡವಾಗಿ ಮಾರ್ಪಟ್ಟಿದೆ ಎಂದು ಮಾನವ ಹಕ್ಕು ಸಂಘಟನೆಗಳು ಎಚ್ಚರಿಸಿವೆ. ಆದಾಗ್ಯೂ, ಪ್ರತಿಭಟನೆಗಳು ತೀವ್ರಗೊಂಡಿವೆ.ಹಣದುಬ್ಬರ, ಏರುತ್ತಿರುವ ಜೀವನ ವೆಚ್ಚದ ವಿರುದ್ಧ ಆರಂಭವಾದ ಪ್ರತಿಭಟನೆಗಳು, ಹಿಂಸಾಚಾರಕ್ಕೆ ತಿರುಗಿವೆ.

ಈ ನಡುವೆ ಪ್ರತಿಭಟನೆಯನ್ನು ಹತ್ತಿಕ್ಕಲು ಇಂಟರ್ನೆಟ್ ಸೇವೆ ಹಾಗೂ ವಿದ್ಯುತ್‌ ಕಡಿತ ಸೇರಿದಂತೆ ಸಾಧ್ಯವಾದ ಎಲ್ಲ ಪ್ರಯತ್ನಗಳನ್ನೂ ಅಲ್ಲಿನ ಸರ್ಕಾರ ಮಾಡಿದೆ. ಆದಾಗ್ಯೂ, ಪ್ರತಿಭಟನೆಯ ಕಾವು ಏರುತ್ತಲೇ ಇದೆ.

ರಾಜಧಾನಿ ಟೆಹ್ರಾನ್‌ ಹಾಗೂ ಇತರ ನಗರಗಳಲ್ಲಿ ಪ್ರತಿಭಟನೆಗಳು ತಾರಕಕ್ಕೇರಿದ್ದು, ಹಿಂಸಾಚಾರದ ವೇಳೆ, 200ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಇದರಲ್ಲಿ, 40 ಮಂದಿ ಭದ್ರತಾ ಸಿಬ್ಬಂದಿಗಳೇ ಇದ್ದಾರೆಂದು ಹೇಳಲಾಗುತ್ತಿದೆ.

ಈ ಬೆಳವಣಿಗೆ ನಡುವೆ ಏರ್‌ ಫೋರ್ಸ್‌ ಒನ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಡೊನಾಲ್ಡ್ ಟ್ರಂಪ್ ಅವರು, ಪ್ರತಿಭಟನಾಕಾರರ ವಿರುದ್ಧ ದಾಳಿ ಮಾಡಿದರೆ ಸೇನಾ ಕಾರ್ಯಾಚರಣೆ ಮೂಲಕ ಮಧ್ಯಪ್ರವೇಶ ಮಾಡುವುದಾಗಿ ಪದೇ ಪದೆ ಬೆದರಿಕೆ ಹಾಕಲಾಗಿದ್ದು, ಇದರ ಬೆನ್ನಲ್ಲೇ ಇರಾನ್‌ ಮಾತುಕತೆಗೆ ಮುಂದಾಗಿದೆ ಎಂದು ಹೇಳಿದ್ದಾರೆ.

ಇರಾನ್‌ ನಾಯಕರು ಕರೆ ಮಾಡಿದ್ದರು. ಸಭೆಗೆ ಸಿದ್ಧತೆ ನಡೆಯುತ್ತಿದೆ. ಅವರಿಗೆ ಸಂಧಾನ ಬೇಕಿದೆ. ಆದರೆ, ಸಭೆಗೂ ಮುನ್ನವೇ ನಾವು ಕ್ರಮ ಕೈಗೊಳ್ಳಬೇಕಾದ ಪರಿಸ್ಥಿತಿ ಉಂಟಾಗಬಹುದು ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಉತ್ತರ ಪ್ರದೇಶ: "ಆಕ್ಷೇಪಾರ್ಹ" ಸ್ಥಿತಿಯಲ್ಲಿದ್ದ ಪ್ರೇಮಿಗಳನ್ನು ಹೊಡೆದು ಕೊಂದ ಕುಟುಂಬಸ್ಥರು!

ಮಹಾತ್ಮ ಗಾಂಧಿ ಸಂದೇಶಗಳು ಹಿಂದೆಂದಿಗಿಂತಲೂ ಈಗ ಹೆಚ್ಚು ಪ್ರಸ್ತುತ: ಸಬರಮತಿ ಆಶ್ರಮದಲ್ಲಿ ಜರ್ಮನ್ ಚಾನ್ಸೆಲರ್!

SCROLL FOR NEXT