ಹಫೀಜ್ ಅಬ್ದುಲ್ ರೌಫ್  
ವಿದೇಶ

Op Sindoor ವೇಳೆ 'ಉಗ್ರರ ಹೆಡ್ ಆಫೀಸ್' ಸಂಪೂರ್ಣ ಧ್ವಂಸ: ಸತ್ಯ ಒಪ್ಪಿಕೊಂಡ ಲಷ್ಕರ್ ಕಮಾಂಡರ್! ಮತ್ತೆ ಪಾಕ್ ಮುಖವಾಡ ಬಯಲು!

ಸಭೆಯೊಂದರಲ್ಲಿ ಮಾತನಾಡಿರುವ ಅಮೆರಿಕ ಘೋಷಿತ ಜಾಗತಿಕ ಉಗ್ರ ರೌಫ್, 'ಆಪರೇಷನ್ ಸಿಂಧೂರ' ಬಹಳ ದೊಡ್ಡ ದಾಳಿಯಾಗಿದ್ದು, ಉಗ್ರರ ತರಬೇತಿ ಶಿಬಿರದ ಇಡೀ ಕಟ್ಟಡವನ್ನು ಧ್ವಂಸಗೊಳಿಸಲಾಗಿದೆ ಎಂದು ಹೇಳಿದ್ದಾನೆ.

ನವದೆಹಲಿ: 'ಆಪರೇಷನ್ ಸಿಂಧೂರ' ವೇಳೆ ನಮಗೆ ಹೆಚ್ಚಿನ ನಷ್ಟ ಆಗಿಲ್ಲ. ನಾವೇ ಗೆದ್ದಿದ್ದೇವೆ ಎಂದು ಪಾಕಿಸ್ತಾನ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೇಳುತ್ತಾ ಬಂದಿದೆ. ಆದರೆ ಕಳೆದ ವರ್ಷದ ಮೇ 6-7 ರಂದು ನಡೆದ ಆಪರೇಷನ್ ಕಾರ್ಯಾಚರಣೆ ವೇಳೆಯಲ್ಲಿ ಮುರ್ಕೆಡೆಯಲ್ಲಿದ್ದ ಉಗ್ರರ ಪ್ರಮುಖ ತರಬೇತಿ ಶಿಬಿರ ಮರ್ಕಜ್ -ಎ- ತೊಯ್ಬಾ ಕಟ್ಟಡ ನಾಶವಾಗಿರುವುದಾಗಿ ಪಾಕ್ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾ (LET) ಕಮಾಂಡರ್ ಹಫೀಜ್ ಅಬ್ದುಲ್ ರೌಫ್ ಒಪ್ಪಿಕೊಂಡಿದ್ದಾನೆ.

ಸಭೆಯೊಂದರಲ್ಲಿ ಮಾತನಾಡಿರುವ ಅಮೆರಿಕ ಘೋಷಿತ ಜಾಗತಿಕ ಉಗ್ರ ರೌಫ್, 'ಆಪರೇಷನ್ ಸಿಂಧೂರ' ಬಹಳ ದೊಡ್ಡ ದಾಳಿಯಾಗಿದ್ದು, ಉಗ್ರರ ತರಬೇತಿ ಶಿಬಿರದ ಇಡೀ ಕಟ್ಟಡವನ್ನು ಧ್ವಂಸಗೊಳಿಸಲಾಗಿದೆ ಎಂದು ಹೇಳಿದ್ದಾನೆ.

"ಮೇ 6-7 ರಂದು ಏನಾಯಿತು ಅಂದ್ರೆ, ನಾವು ಸೇರುತ್ತಿದ್ದ ಜಾಗ ಮಸೀದಿಯಾಗಿ ಉಳಿದಿಲ್ಲ. ನಾವು ಈಗ ಅಲ್ಲಿ ಕುಳಿತುಕೊಳ್ಳಲು ಸಹ ಆಗಲ್ಲ. ಅದು ಸಂಪೂರ್ಣ ಧ್ವಂಸಗೊಂಡಿದೆ ಎಂದು ಹೇಳಿದ್ದಾನೆ. ಈ ಮೂಲಕ ಭಾರತದ ಕಾರ್ಯಾಚರಣೆಯು ಅದರ ಉದ್ದೇಶಿತ ಗುರಿಯನ್ನು ತಲುಪಿದೆ ಎಂದು LET ಉಗ್ರ ಸಂಘಟನೆಯೇ ದೃಢಪಡಿಸಿದೆ.

ರೌಫ್ ಲಷ್ಕರ್‌ನ ಕಾರ್ಯಾಚರಣೆಯ ಕಮಾಂಡರ್ ಆಗಿದ್ದು, ಭಯೋತ್ಪಾದಕರಿಗೆ ತರಬೇತಿ ನೀಡುವುದರಲ್ಲಿ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ (PoK) ಪಾಕಿಸ್ತಾನ ಸೇನೆ ಪ್ರಾಯೋಜಿತ ಲಾಂಚ್‌ಪ್ಯಾಡ್‌ಗಳಿಂದ ಉಗ್ರರನ್ನು ಗಡಿಯೊಳಗೆ ನುಸುಳಿಸುವುದರಲ್ಲಿ ತೊಡಗಿಸಿಕೊಂಡಿದ್ದಾನೆ. ಈ ಹಿಂದೆ ವೈರಲ್ ಆದ ಫೋಟೋಗಳಲ್ಲಿ ಆಪರೇಷನ್ ಸಿಂಧೂರದಲ್ಲಿ ಹತರಾದ ಭಯೋತ್ಪಾದಕರ ಅಂತ್ಯಕ್ರಿಯೆಯ ವೇಳೆ ಆತನೇ ನೇತೃತ್ವ ವಹಿಸಿರುವುದು ಕಂಡುಬಂದಿತ್ತು. ಇದಾದ ಕೆಲವು ತಿಂಗಳು ನಂತರ ಇದೀಗ ಮುರ್ಡೆಯಲ್ಲಿ ಏನಾಯಿತು ಎಂಬುದುರ ಕುರಿತು ಮಾತನಾಡಿದ್ದಾನೆ.

ಭಾರತ- ಪಾಕ್ ಸೇನಾ ಸಂಘರ್ಘದ ವೇಳೆ ಚೀನಾದ ಶಸ್ತ್ರಾಸ್ತ್ರಗಳು ಮತ್ತು ಉಪಕರಣಗಳನ್ನು ಪಾಕಿಸ್ತಾನ ಮತ್ತು ಎಲ್ಇಟಿ ಬಳಸಿದೆ ಎಂಬುದನ್ನು ರೌಫ್ ಬಹಿರಂಗವಾಗಿ ಒಪ್ಪಿಕೊಂಡಿದ್ದಾನೆ. ಅಲ್ಲಾ ನಮ್ಮನ್ನು ರಕ್ಷಿಸಿದನು, ಅಲ್ಲಾ ನಮಗೆ ಸಹಾಯ ಮಾಡಿದನು ಎಂದು ಹೇಳುತ್ತಾ, ಭಾರತ ಹೇಗೆ ಪೆಟ್ಟು ನೀಡಿದೆ ಎಂಬುದನ್ನು ಒಪ್ಪಿಕೊಂಡಿದ್ದಾನೆ.

ಇದು ಪಾಕಿಸ್ತಾನದ ಉಗ್ರ ಮುಖವಾಡವನ್ನು ಮತ್ತೊಮ್ಮೆ ಬಟ ಬಯಲು ಮಾಡಿದೆ. ಉಗ್ರರಿಗೆ ತನ್ನ ನೆಲದಲ್ಲಿ ಜಾಗ ನೀಡಿಲ್ಲ ಎಂದು ಪಾಕಿಸ್ತಾನ ಹೇಳುತ್ತಾ ಬಂದಿದ್ದರೂ ರೌಫ್ ಅವರ ಹೇಳಿಕೆಯ ವಿಡಿಯೋಗಳು ಸಾಕಷ್ಟು ವೈರಲ್ ಆಗಿದ್ದು, ಪಾಕಿಸ್ತಾನದ ಉಗ್ರನೀತಿಯನ್ನು ಮತ್ತೊಮ್ಮೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಜಗ ಜಹ್ಹೀರು ಮಾಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮಕ್ಕಳ ಸಾವಿಗೆ ಪ್ರತೀಕಾರ: ಇಸ್ರೇಲ್-ಅಮೆರಿಕ, ಗಲ್ಫ್ ದೇಶಗಳ ಮೇಲೆ ದಾಳಿ ನಿಲ್ಲಲ್ಲ; ಇರಾನ್ ಹೊಸ ಸರ್ವೋಚ್ಛ ನಾಯಕ ವಾರ್ನಿಂಗ್!

No shortage of fuel: ಹಾರ್ಮುಜ್ ಜಲಸಂಧಿ ತಲುಪಿಸಬಹುದಾದ ತೈಲಕ್ಕಿಂತ ಹೆಚ್ಚಿನದ್ದು ಬೇರೆಡೆಯಿಂದ ಭಾರತ ತಲುಪಿದೆ; ಪೆಟ್ರೋಲಿಯಂ ಸಚಿವ

ಮಧ್ಯಪ್ರಾಚ್ಯ ಯುದ್ಧಗ್ರಸ್ತ: ತೈಲ, ಅನಿಲ ಪೂರೈಕೆ ವ್ಯತ್ಯಯ ಸಂಕಷ್ಟ; ಆದರೂ ರಹಸ್ಯ'ಭೂಗತ ಗುಹೆ'ಗಳಿಂದ ಭಾರತಕ್ಕೆ No Tension!

ನಮ್ಮ ಶಕ್ತಿ ಇರಾನ್ ನಿರ್ನಾಮಕ್ಕೆ ಮೀಸಲು, ಹಾರ್ಮುಜ್ ಜಲಸಂಧಿಯಲ್ಲಿ ಟ್ಯಾಂಕರ್ ಗಳಿಗೆ ಬೆಂಗಾವಲು ನೀಡಲ್ಲ: ಅಮೆರಿಕ

ಮಾರ್ಚ್ 16 ರಂದು ರಾಜ್ಯದ ಎರಡು ಕ್ಷೇತ್ರಗಳ ಉಪ ಚುನಾವಣೆ ಸೇರಿದಂತೆ ಐದು ರಾಜ್ಯಗಳ ಚುನಾವಣೆ ಘೋಷಣೆ ಸಾಧ್ಯತೆ

SCROLL FOR NEXT