ಸಾಂದರ್ಭಿಕ ಚಿತ್ರ 
ವಿದೇಶ

'ಬಾಳೆಹಣ್ಣು' ವಿಚಾರವಾಗಿ ಜಗಳ: ಬಾಂಗ್ಲಾದೇಶದಲ್ಲಿ ಮತ್ತೋರ್ವ ಹಿಂದೂ ಉದ್ಯಮಿಗೆ ಹೊಡೆದು ಕೊಲೆ; ಮೂವರ ಬಂಧನ!

ಬಾಳೆ ತೋಟ ಹೊಂದಿದ್ದ ಮಾಸುಮ್, ಒಂದು ಬಂಚ್ ಬಾಳೆಹಣ್ಣು ಕಾಣೆಯಾಗಿದೆ ಎಂದು ಅದಕ್ಕಾಗಿ ಹುಡುಕಾಟ ನಡೆಸುತ್ತಿದ್ದಾಗ ಲಿಟ್ಟನ್ ಹೋಟೆಲ್ ನಲ್ಲಿ ಇರುವುದನ್ನು ನೋಡಿದ್ದಾನೆ. ಈ ವೇಳೆ ಇಬ್ಬರ ನಡುವೆ ವಾಗ್ವಾದ ನಡೆದಿದ್ದು, ಜಗಳ ತಾರಕಕ್ಕೇರಿದೆ.

ಗಾಜಿಪುರ: ಬಾಂಗ್ಲಾದೇಶದಲ್ಲಿ ಮತ್ತೋರ್ವ ಹಿಂದೂವಿನ ಹತ್ಯೆಯಾಗಿದೆ. ಬಾಳೆಹಣ್ಣಿನ ಬಗ್ಗೆ ಜಗಳ ನಡೆದು ಹಿಂದೂ ಉದ್ಯಮಿಯೊಬ್ಬರನ್ನು ಹೊಡೆದು ಕೊಲೆ ಮಾಡಲಾಗಿದೆ. ಒಂದೇ ಕುಟುಂಬದ ಮೂವರು ಹಲ್ಲೆಯಲ್ಲಿ ಭಾಗಿಯಾಗಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ಗಾಜಿಪುರದಲ್ಲಿ ಈ ಘಟನೆ ನಡೆದಿದೆ. ಮೃತರನ್ನು 'ಬೈಶಾಖಿ ಸ್ವೀಟ್‌ಮೀಟ್ ಮತ್ತು ಹೋಟೆಲ್' ಮಾಲೀಕ ಲಿಟನ್ ಚಂದ್ರ ಘೋಷ್ (55) ಎಂದು ಗುರುತಿಸಲಾಗಿದೆ. ಈ ಸಂಬಂಧ ಸ್ವಪನ್ ಮಿಯಾ (55) ಅವರ ಪತ್ನಿ ಮಜೇದಾ ಖಾತುನ್ (45), ಮತ್ತು ಅವರ ಮಗ ಮಾಸುಮ್ ಮಿಯಾ (28) ಬಂಧಿಸಲಾಗಿದೆ ಎಂದು ಕಾಳಿಗಂಜ್ ಪೊಲೀಸ್ ಠಾಣೆಯ ಅಧಿಕಾರಿ ಜಾಕಿರ್ ಹೊಸೈನ್ ತಿಳಿಸಿದ್ದಾರೆ.

ಬಾಳೆ ತೋಟ ಹೊಂದಿದ್ದ ಮಾಸುಮ್, ಒಂದು ಬಂಚ್ ಬಾಳೆಹಣ್ಣು ಕಾಣೆಯಾಗಿದೆ ಎಂದು ಅದಕ್ಕಾಗಿ ಹುಡುಕಾಟ ನಡೆಸುತ್ತಿದ್ದಾಗ ಲಿಟ್ಟನ್ ಹೋಟೆಲ್ ನಲ್ಲಿ ಇರುವುದನ್ನು ನೋಡಿದ್ದಾನೆ. ಈ ವೇಳೆ ಇಬ್ಬರ ನಡುವೆ ವಾಗ್ವಾದ ನಡೆದಿದ್ದು, ಜಗಳ ತಾರಕಕ್ಕೇರಿದೆ.

ಬೆಳಗ್ಗೆ ಸುಮಾರು 11 ಗಂಟೆಗೆ ಹೋಟೆಲ್ ಗೆ ಭೇಟಿ ನೀಡಿದ ಮಾಸುಮ್, ಕ್ಷುಲ್ಲಕ ಘಟನೆ ಕುರಿತು ಸಿಬ್ಬಂದಿ ಸದಸ್ಯ ಅನಂತ ದಾಸ್ ಅವರೊಂದಿಗೆ ಮಾತಿನ ಚಕಮಕಿ ನಡೆಸಿದ್ದಾರೆ. ನಂತರ, ಆತನ ಪೋಷಕರು ಅಲ್ಲಿಗೆ ಹೋಗಿದ್ದಾರೆ. ಬಳಿಕ ಪರಿಸ್ಥಿತಿ ಹಿಂಸಾಚಾರಕ್ಕೆ ತಿರುಗಿದ್ದು, ಪರಿಸ್ಥಿತಿಯನ್ನು ಶಮನಗೊಳಿಸಲು ಲಿಟನ್ ಮುಂದಾಗ ಆತನ ಮೇಲೆ ಹಲ್ಲೆ ನಡೆದಿದೆ.

ಆರೋಪಿ ಲಿಟನ್ ಗೆ ಗುದ್ದಿದ್ದು, ಒದ್ದಿದ್ದರಿಂದ ಆತ ನೆಲಕ್ಕೆ ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ವರದಿ ತಿಳಿಸಿದೆ.

ಬಾಂಗ್ಲಾದೇಶದಲ್ಲಿ ಮುಹಮ್ಮದ್ ಯೂನಸ್ ನೇತೃತ್ವದ ಮಧ್ಯಂತರ ಆಡಳಿತದಲ್ಲಿ ಅಲ್ಪಸಂಖ್ಯಾತರ ವಿರುದ್ಧ ಹಿಂಸಾತ್ಮಕ ದಾಳಿಗಳು ಹೆಚ್ಚಾಗುತ್ತಿವೆ. ಜನಸಂಖ್ಯೆಯ ಸರಿಸುಮಾರು ಶೇ. 7 ರಷ್ಟಿರುವ ಹಿಂದೂಗಳ ಮೇಲೆ ಆಗಾಗ್ಗೆ ದಾಳಿ ನಡೆಯುತ್ತಿದೆ. ಕಳೆದ ತಿಂಗಳಿನಿಂದ ಇಂತಹ ಹಲವಾರು ಘಟನೆಗಳು ವರದಿಯಾಗುತ್ತಿವೆ. 10 ಜನರ ಸಾವು ಸೇರಿದಂತೆ ಹಿಂದೂಗಳನ್ನು ಗುರಿಯಾಗಿಸಿಕೊಂಡು ಕನಿಷ್ಠ 51 ಹಿಂಸಾಚಾರದ ಪ್ರಕರಣಗಳು ನಡೆದಿರುವುದಾಗಿ ವರದಿಯಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜನರಲ್ ದ್ವಿವೇದಿ ಹೇಳಿಕೆ 'ಪ್ರಚೋದನಕಾರಿ'; ಇದು ವಿನಾಶಕ್ಕೆ ಕಾರಣವಾಗಬಹುದು: ಭಾರತಕ್ಕೆ ಪಾಕ್ ಸೇನೆ ಎಚ್ಚರಿಕೆ

ಬೆಂಗಳೂರು- ಮುಂಬೈ ನಡುವಿನ ಹೊಸ ಎಕ್ಸ್ ಪ್ರೆಸ್ ರೈಲಿಗೆ ಚಾಲನೆ: ಶೀಘ್ರದಲ್ಲೇ ವಂದೇ ಭಾರತ್ ರೈಲು ಸೇವೆ ಆರಂಭ- ಅಶ್ವಿನಿ ವೈಷ್ಣವ್

IPL 2026: RCB vs PBKS ಪಂದ್ಯದಲ್ಲಿ ಎರಡು ಭಾರೀ ದಾಖಲೆ ನಿರ್ಮಿಸಿದ Virat Kohli

ಕೋಲಾರ: ಕೃಷಿ ಹೊಂಡದಲ್ಲಿ ಮಕ್ಕಳಿಗೆ ಈಜು ಕಲಿಸುವಾಗ ದುರಂತ; ತಂದೆ ಸೇರಿ ಇಬ್ಬರು ಮಕ್ಕಳು ಜಲಸಮಾಧಿ

2028ಕ್ಕೆ 75-80 ಕ್ಷೇತ್ರಗಳಲ್ಲಿ ಜೆಡಿಎಸ್ ಗೆದ್ದು, ಅಧಿಕಾರಕ್ಕೆ- ಹೆಚ್ ಡಿ ಕುಮಾರಸ್ವಾಮಿ ವಿಶ್ವಾಸ! ಕಾಂಗ್ರೆಸ್ ವಿರುದ್ಧ ವಾಗ್ದಾಳಿ

SCROLL FOR NEXT