ಅಪಘಾತ ನಡೆದ ಸ್ಥಳದಲ್ಲಿ ರಕ್ಷಣಾ ಸಿಬ್ಬಂದಿ 
ವಿದೇಶ

ಅಪ್ರಾಪ್ತ ಬಾಲಕ ಚಲಾಯಿಸುತ್ತಿದ್ದ ಟ್ರಕ್ ಡಿಕ್ಕಿ, 9 ಬೌದ್ಧ ಭಿಕ್ಷುಗಳು ಸಾವು! ಚೆಲ್ಲಾಪಿಲ್ಲಿಯಾಗಿ ರಸ್ತೆ ಮೇಲೆ ಬಿದ್ದ ಮೃತದೇಹಗಳು, Video

ಮೃತದೇಹಗಳು ರಸ್ತೆ ಮೇಲೆಲ್ಲಾ ಚೆಲ್ಲಾ ಪಿಲ್ಲಿಯಾಗಿ ಬಿದ್ದಿರುವುದು ವಿಡಿಯೋದಲ್ಲಿದೆ. ಗುರುವಾರ ಬೆಳಿಗ್ಗೆ 11 ಗಂಟೆಗೂ ಮುನ್ನ ಈ ದುರ್ಘಟನೆ ನಡೆದಿದೆ ಎನ್ನಲಾಗಿದೆ.

ಬ್ಯಾಂಕಾಕ್‌: 11 ವರ್ಷದ ಅಪ್ರಾಪ್ತ ಬಾಲಕನೊಬ್ಬ ಚಲಾಯಿಸುತ್ತಿದ್ದ ಟ್ರಕ್ ಹರಿದು ಬೌದ್ಧ ಭಿಕ್ಷುಗಳು ಸಾವನ್ನಪ್ಪಿರುವ ಘಟನೆ ಥೈಲ್ಯಾಂಡ್ ನಲ್ಲಿ ನಡೆದಿದೆ. ರಾಜಧಾನಿ ಬ್ಯಾಂಕಾಕ್ ನಿಂದ ಸುಮಾರು 650 ಕಿ. ಮೀ ದೂರದಲ್ಲಿರುವ ಮುಕ್ದಹಾನ್ ಪಟ್ಟಣದಲ್ಲಿ ಈ ಘಟನೆ ನಡೆದಿದೆ.

ಸ್ಥಳೀಯ ರಕ್ಷಣಾ ತಂಡ ಈ ಕುರಿತ ಭಯಾನಕ CCTV ದೃಶ್ಯಾವಳಿಗಳನ್ನು ಹಂಚಿಕೊಂಡಿದೆ. ಕಿತ್ತಳೆ ಬಣ್ಣದ ನಿಲುವಂಗಿ ಧರಿಸಿದ್ದ ಬೌದ್ಧ ಭಿಕ್ಷುಗಳು ರಸ್ತೆಯಲ್ಲಿ ಸಾಗುತ್ತಿದ್ದಾಗ ಹಠಾತ್ತನೇ ಬಂದ ಟ್ರಕ್ ಅವರ ಮೇಲೆ ಹರಿದಿದೆ.

ಮೃತದೇಹಗಳು ರಸ್ತೆ ಮೇಲೆಲ್ಲಾ ಚೆಲ್ಲಾ ಪಿಲ್ಲಿಯಾಗಿ ಬಿದ್ದಿರುವುದು ವಿಡಿಯೋದಲ್ಲಿದೆ. ಗುರುವಾರ ಬೆಳಿಗ್ಗೆ 11 ಗಂಟೆಗೂ ಮುನ್ನ ಈ ದುರ್ಘಟನೆ ನಡೆದಿದೆ ಎನ್ನಲಾಗಿದೆ.

34 ಬೌದ್ಧ ಭಿಕ್ಷುಗಳು ಮತ್ತು ಐದು ಅನುಯಾಯಿಗಳ ಗುಂಪು ಉಬೊನ್ ರಚಥಾನಿಯಲ್ಲಿರುವ ಒಂದು ದೇವಾಲಯದಿಂದ ಮತ್ತೊಂದು ದೇವಾಲಯಕ್ಕೆ ರಸ್ತೆಯ ಪಕ್ಕದಲ್ಲಿ ಸಾಗುತ್ತಿದ್ದಾಗ ಟ್ರಕ್ ಹರಿದು ಈ ಅಪಘಾತ ಸಂಭವಿಸಿದೆ ಎಂದು ಮುಕ್ದಹಾನ್ ಪ್ರಾಂತ್ಯದ ಗವರ್ನರ್ ವೊರಾಯನ್ ಬುನಾರತ್ ಹೇಳಿದ್ದಾರೆ. ಅಪಘಾತದಲ್ಲಿ 9 ಮಂದಿ ಸಾವನ್ನಪ್ಪಿದ್ದು, ಮೂರು ಮಂದಿ ಗಾಯಗೊಂಡಿರುವುದಾಗಿ ಮುಕ್ದಹಾನ್ ಪ್ರಾಂತೀಯ ಕಚೇರಿ ತಿಳಿಸಿದೆ.

ಅಪ್ರಾಪ್ತ ಬಾಲಕ ಪೋಷಕರ ಅನುಮತಿಯಿಲ್ಲದೆ ಟ್ರಕ್ ಚಲಾಯಿಸುತ್ತಿದ್ದಾಗ ಅದು ನಿಯಂತ್ರಣ ತಪ್ಪಿ ಬೌದ್ಧ ಭಿಕ್ಷುಗಳಿಗೆ ಡಿಕ್ಕಿ ಹೊಡೆದಿದೆ. ಬಾಲಕ ಸಹ ತೀವ್ರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹತ್ಯೆಯಾಗಿ 4 ತಿಂಗಳ ಬಳಿಕ ಖಮೇನಿ ಅಂತ್ಯಕ್ರಿಯೆಗೆ ಇರಾನ್ ಸಿದ್ಧತೆ: ಶವಪೆಟ್ಟಿಗೆ ಪ್ರದರ್ಶನ; ಇಷ್ಟು ದಿನ ಎಲ್ಲಿತ್ತು ಶರೀರ?

ಶ್ರೀರಂಗಪಟ್ಟಣದಲ್ಲಿ 200 ಎಕರೆ ಭೂಕಬಳಿಕೆ ಬಯಲಿಗೆಳೆದ ಲೋಕಾಯುಕ್ತ; 9 ಜನರ ಬಂಧನ, ADLR ಅಧಿಕಾರಿ ಮೊಹಮ್ಮದ್ ಪರಾರಿ!

ವೈಭವ್ ಸೂರ್ಯವಂಶಿಗೆ ಜಾಸ್ತಿ ಹೈಪ್ ಕೊಡಬೇಡಿ: ಕಪಿಲ್ ದೇವ್ ಹೀಗೆ ಹೇಳಿದ್ಯಾಕೆ ಗೊತ್ತಾ?

ಬೆಂಗಳೂರು: ಸರ್ಜಾಪುರ ಸಮೀಪ, ನಿರ್ಜನ ರಸ್ತೆಯಲ್ಲಿ ಬೈಕ್ ಜೊತೆ ಸುಟ್ಟ ಸ್ಥಿತಿಯಲ್ಲಿ ಯುವಕನ ಶವ ಪತ್ತೆ; ಕಾರಣ ನಿಗೂಢ!

ಬೆಂಗಳೂರು: ಡೇಕೇರ್ ಸೆಂಟರ್‌ನಲ್ಲಿ ಮಕ್ಕಳ ಮೇಲೆ ದೌರ್ಜನ್ಯ; ಇಬ್ಬರು ದಾದಿಯರ ಬಂಧನ