ಇರಾನ್ ನ ಸರ್ವಾಧಿಕಾರಿ- ಇಸ್ರೇಲ್ ಪ್ರಧಾನಿ ನೆತನ್ಯಾಹು online desk
ವಿದೇಶ

ನೆತನ್ಯಾಹು ಮಾಸ್ಟರ್ ಪ್ಲ್ಯಾನ್ ಲೀಕ್? ಸದ್ದಿಲ್ಲದೆ ಗೂಢಚಾರರ ಜಾಲ ಧ್ವಂಸಗೊಳಿಸಿದ ಮೊಜ್ತಬಾ ಖಮೇನಿ..?

ಗುಪ್ತಚರ ಇಲಾಖೆ ನಡೆಸಿದ ಕಾರ್ಯಾಚರಣೆಯಲ್ಲಿ ಕರಾಜ್ ನಗರದಲ್ಲಿ ಖಾನಾಕಿಯನ್ನು ಬಂಧಿಸಲಾಗಿತ್ತು. ಬಂಧನದ ವೇಳೆ ಆತನಿಂದ ಬಂದೂಕುಗಳು, ಮದ್ದುಗುಂಡುಗಳು ಹಾಗೂ ಸ್ಫೋಟಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಇರಾನ್‌ನಲ್ಲಿ ಇಸ್ರೇಲ್ ಮತ್ತು ಅಮೆರಿಕದೊಂದಿಗೆ ಕೈಜೋಡಿಸಿ ದೇಶವಿರೋಧಿ ಚಟುವಟಿಕೆಗಳಲ್ಲಿ ತೊಡಗಿದ್ದ ಆರೋಪದ ಮೇಲೆ ಮೆಹ್ದಿ ಖಾನಾಕಿ ಎಂಬಾತನಿಗೆ ಗಲ್ಲು ಶಿಕ್ಷೆ ಜಾರಿಗೊಳಿಸಲಾಗಿದೆ. ಈ ವಿಷಯವನ್ನು ಇರಾನ್ ನ್ಯಾಯಾಂಗಕ್ಕೆ ಸೇರಿದ ಅಧಿಕೃತ ಸುದ್ದಿ ಸಂಸ್ಥೆ ಮಿಜಾನ್ ದೃಢಪಡಿಸಿದೆ.

ಇರಾನ್ ಅಧಿಕಾರಿಗಳ ಪ್ರಕಾರ, ಮೆಹ್ದಿ ಖಾನಾಕಿ 2023ರಲ್ಲಿ ಇಸ್ರೇಲ್ ಬೆಂಬಲಿತ ಎಂದು ಹೇಳಲಾಗುತ್ತಿರುವ ಹೆಸರನ್ನು ಬಹಿರಂಗಪಡಿಸದ ಶಸ್ತ್ರಸಜ್ಜಿತ ವಿರೋಧಿ ಸಂಘಟನೆಯೊಂದನ್ನು ಸೇರಿಕೊಂಡಿದ್ದ. ಬಳಿಕ ಇರಾನ್ ಸರ್ಕಾರದ ವಿರುದ್ಧ ವಿವಿಧ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದಾನೆ ಎಂದು ಆರೋಪಿಸಲಾಗಿದೆ.

ಗುಪ್ತಚರ ಇಲಾಖೆ ನಡೆಸಿದ ಕಾರ್ಯಾಚರಣೆಯಲ್ಲಿ ಕರಾಜ್ ನಗರದಲ್ಲಿ ಖಾನಾಕಿಯನ್ನು ಬಂಧಿಸಲಾಗಿತ್ತು. ಬಂಧನದ ವೇಳೆ ಆತನಿಂದ ಬಂದೂಕುಗಳು, ಮದ್ದುಗುಂಡುಗಳು ಹಾಗೂ ಸ್ಫೋಟಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆದರೆ, ಖಾನಾಕಿ ಸೇರಿಕೊಂಡಿದ್ದ ಎನ್ನಲಾದ ಶಸ್ತ್ರಸಜ್ಜಿತ ಸಂಘಟನೆಯ ಹೆಸರನ್ನು ಇರಾನ್ ನ್ಯಾಯಾಂಗ ಬಹಿರಂಗಪಡಿಸಿಲ್ಲ. ಅಲ್ಲದೆ, ಪ್ರಕರಣದ ವಿಚಾರಣೆ ಹೇಗೆ ನಡೆಯಿತು ಅಥವಾ ಯಾವ ಸಾಕ್ಷ್ಯಾಧಾರಗಳ ಆಧಾರದ ಮೇಲೆ ಶಿಕ್ಷೆ ವಿಧಿಸಲಾಯಿತು ಎಂಬ ವಿವರಗಳನ್ನೂ ಪ್ರಕಟಿಸಿಲ್ಲ.

ಇತ್ತೀಚಿನ ತಿಂಗಳುಗಳಲ್ಲಿ ಇರಾನ್‌ನಲ್ಲಿ ಸರ್ಕಾರ ವಿರೋಧಿ ಚಟುವಟಿಕೆಗಳ ವಿರುದ್ಧ ವ್ಯಾಪಕ ಕಾರ್ಯಾಚರಣೆ ನಡೆಯುತ್ತಿದ್ದು, ಇಸ್ರೇಲ್ ಮತ್ತು ಅಮೆರಿಕವು ದೇಶದೊಳಗಿನ ಶಸ್ತ್ರಸಜ್ಜಿತ ಜಾಲಗಳಿಗೆ ಬೆಂಬಲ ನೀಡುತ್ತಿವೆ ಎಂದು ಟೆಹ್ರಾನ್ ನಿರಂತರವಾಗಿ ಆರೋಪಿಸುತ್ತಿದೆ. ಇದೇ ಹಿನ್ನೆಲೆಯಲ್ಲಿ ಈ ಗಲ್ಲು ಶಿಕ್ಷೆ ಜಾರಿಗೊಂಡಿರುವುದು ಗಮನಾರ್ಹವಾಗಿದೆ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಮೆರಿಕ ಬೆದರಿಕೆಗೆ Iran ತಿರುಗೇಟು: 'ಕಣ್ಣಿಗೆ ಕಣ್ಣು' ಉತ್ತರ, ಮೂಲಸೌಕರ್ಯಗಳ ಮೇಲೆ ದಾಳಿಯಾದರೆ ಪ್ರಬಲ ಪ್ರತೀಕಾರ ಎಂದ ಟೆಹ್ರಾನ್

'ಕಾಶ್ಮೀರ ಭಾರತದ ಅವಿಭಾಜ್ಯ ಅಂಗ': ನಮ್ಮತ್ತ ಬೆರಳು ತೋರಿಸುವ ಮೊದಲು ನಿಮ್ಮ ದೇಶ ನೋಡಿಕೊಳ್ಳಿ; ವಿಶ್ವಸಂಸ್ಥೆಯಲ್ಲಿ Pak ವಿರುದ್ಧ ಭಾರತ ಗುಡುಗು..!

'ಶಾಂತಿಯುತ ಹೋರಾಟ ಹಿಂಸೆಗೆ ತಿರುಗಿದ್ದು ನೋವಾಗಿದೆ', ವಿದ್ಯಾರ್ಥಿಗಳ ಹೋರಾಟ ರಾಜಕೀಯದ ಅಸ್ತ್ರವಾಗಬಾರದು: NEET ಪ್ರತಿಭಟನೆಗೆ Salman Khan ಬೆಂಬಲ

'ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ಕುರಿತು ಸಂಸತ್‌ನಲ್ಲಿ ಚರ್ಚೆಗೆ ನಾವು ಸಿದ್ಧ': ಕೇಂದ್ರ ಆರೋಗ್ಯ ಸಚಿವ JP Nadda

Jantar Mantar ನಲ್ಲಿ ಮತ್ತೆ ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ; ಕಲ್ಲು ತೂರಾಟ, ಟೋಲ್ಸ್ಟಾಯ್ ಮಾರ್ಗ್‌, ಸಂಸದ್ ಮಾರ್ಗ್‌ನಲ್ಲಿ ಉದ್ವಿಗ್ನತೆ, 5 ಪೊಲೀಸರಿಗೆ ಗಾಯ