ಹಾರ್ಮುಜ್ ಜಲಸಂಧಿ 
ವಿದೇಶ

ಇರಾಕ್‌ನಲ್ಲಿ ಅಮೆರಿಕ-ಸೌದಿ ಜಂಟಿ ವಾಯುದಾಳಿ: ಇರಾನ್ ಬೆಂಬಲಿತ ಉಗ್ರ ನೆಲೆಗಳು ಧ್ವಂಸ, ಮಧ್ಯಪ್ರಾಚ್ಯ ಮತ್ತೆ ಉದ್ವಿಗ್ನ..!

ಇತ್ತೀಚಿನ ವಾರಗಳಲ್ಲಿ ಅಮೆರಿಕ ಮತ್ತು ಇರಾನ್ ನಡುವಿನ ಉದ್ವಿಗ್ನತೆ ತಾತ್ಕಾಲಿಕವಾಗಿ ಕಡಿಮೆಯಾಗಿತ್ತು. ಆದರೆ, ಈ ಹೊಸ ದಾಳಿಗಳೊಂದಿಗೆ ಮತ್ತೆ ಸಂಘರ್ಷ ತೀವ್ರಗೊಂಡಿದೆ.

ವಾಷಿಂಗ್ಟನ್: ಅಮೆರಿಕ ಮತ್ತು ಸೌದಿ ಅರೇಬಿಯಾ ಸೇನೆಗಳು ಇರಾನ್ ಬೆಂಬಲಿತ ಮಿಲಿಷಿಯಾಗಳು ಬಳಸುತ್ತಿದ್ದ ಇರಾಕ್‌ನ ಹಲವು ನೆಲೆಗಳ ಮೇಲೆ ಜಂಟಿ ವಾಯುದಾಳಿ ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (CENTCOM) ಮಂಗಳವಾರ ತಿಳಿಸಿದೆ.

ಕಳೆದ ಕೆಲವು ದಿನಗಳಿಂದ ಅಮೆರಿಕದ ಪಡೆಗಳು ಹಾಗೂ ಸೌದಿ ಅರೇಬಿಯಾದ ತೈಲ ಮೂಲಸೌಕರ್ಯಗಳನ್ನು ಗುರಿಯಾಗಿಸಿ ನಡೆದ ದಾಳಿಗಳಿಗೆ ಪ್ರತಿಯಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದೆ.

CENTCOM ಪ್ರಕಾರ, ಮಧ್ಯಪ್ರಾಚ್ಯದಲ್ಲಿರುವ ಅಮೆರಿಕದ ಪಡೆಗಳ ಮೇಲೆ ಇರಾನ್ ಉಡಾಯಿಸಿದ್ದ ಎಲ್ಲಾ ಕ್ಷಿಪಣಿಗಳನ್ನು ಯಶಸ್ವಿಯಾಗಿ ತಡೆಹಿಡಿಯಲಾಗಿದೆ. "ನಮ್ಮ ಪಡೆಗಳು ಸಂಪೂರ್ಣ ಎಚ್ಚರಿಕೆಯಿಂದಿದ್ದು, ಯಾವುದೇ ಪರಿಸ್ಥಿತಿಯನ್ನು ಎದುರಿಸಲು ಸಿದ್ಧವಾಗಿವೆ" ಎಂದು ತಿಳಿಸಿದೆ.

ಇತ್ತೀಚಿನ ವಾರಗಳಲ್ಲಿ ಅಮೆರಿಕ ಮತ್ತು ಇರಾನ್ ನಡುವಿನ ಉದ್ವಿಗ್ನತೆ ತಾತ್ಕಾಲಿಕವಾಗಿ ಕಡಿಮೆಯಾಗಿತ್ತು. ಆದರೆ, ಈ ಹೊಸ ದಾಳಿಗಳೊಂದಿಗೆ ಮತ್ತೆ ಸಂಘರ್ಷ ತೀವ್ರಗೊಂಡಿದೆ.

ಇರಾಕ್‌ನಲ್ಲಿರುವ ಇರಾನ್ ಬೆಂಬಲಿತ ಮಿಲಿಷಿಯಾಗಳು ಕಳೆದ 72 ಗಂಟೆಗಳಲ್ಲಿ 30ಕ್ಕೂ ಹೆಚ್ಚು ಡ್ರೋನ್ ದಾಳಿಗಳನ್ನು ನಡೆಸಿದ್ದವು ಎಂದು CENTCOM ಆರೋಪಿಸಿದೆ.

ಸೌದಿ ತೈಲ ಕೇಂದ್ರಗಳ ಮೇಲೆ ಡ್ರೋನ್ ದಾಳಿ

ಸೌದಿ ಅರೇಬಿಯಾ ಕೂಡ ಮಂಗಳವಾರ ಎರಡನೇ ದಿನವೂ ಇರಾಕ್‌ನಿಂದ ಉಡಾಯಿಸಲಾದ ಡ್ರೋನ್‌ಗಳನ್ನು ತನ್ನ ವಾಯು ರಕ್ಷಣಾ ವ್ಯವಸ್ಥೆ ಹೊಡೆದುರುಳಿಸಿದೆ ಎಂದು ತಿಳಿಸಿದೆ.

ಈ ಡ್ರೋನ್‌ಗಳು ದೇಶದ ಪೂರ್ವ ಭಾಗದಲ್ಲಿರುವ ತೈಲ ಸೌಲಭ್ಯಗಳನ್ನು ಗುರಿಯಾಗಿಸಿದ್ದವು ಎಂದು ಸೌದಿ ರಕ್ಷಣಾ ಸಚಿವಾಲಯ ಹೇಳಿದೆ.

"ಸೌದಿ ಅರೇಬಿಯಾ ಉದ್ವಿಗ್ನತೆ ಹೆಚ್ಚಿಸಲು ಬಯಸುವುದಿಲ್ಲ. ಆದರೆ, ನಮ್ಮ ದೇಶದ ಮೇಲೆ ಯಾವುದೇ ದಾಳಿ ನಡೆದರೆ ಸೂಕ್ತ ಪ್ರತಿಕ್ರಿಯೆ ನೀಡಲಾಗುವುದು" ಎಂದು ಸಚಿವಾಲಯ ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದೆ.

ಇದಕ್ಕೆ ಪ್ರತಿಕ್ರಿಯಿಸಿದ ಇರಾಕ್ ಪ್ರಧಾನಿ ಅಲಿ ಅಲ್-ಜೈದಿ, ತಮ್ಮ ಭೂಭಾಗವನ್ನು ಸ್ನೇಹ ರಾಷ್ಟ್ರಗಳ ವಿರುದ್ಧ ದಾಳಿ ನಡೆಸಲು ಬಳಸುವುದನ್ನು ತಡೆಯಲು ತನಿಖೆಗೆ ಆದೇಶಿಸಿದ್ದಾರೆ.

ಮಿಲಿಷಿಯಾಗಳಿಂದ ಆರೋಪ ನಿರಾಕರಣೆ

ಈ ನಡುವೆ ಇರಾನ್ ಬೆಂಬಲಿತ "ಇಸ್ಲಾಮಿಕ್ ರೆಸಿಸ್ಟೆನ್ಸ್ ಇನ್ ಇರಾಕ್" ಸಂಘಟನೆ, ಸೌದಿ ಮಾಡಿರುವ ಆರೋಪಗಳನ್ನು ತಳ್ಳಿಹಾಕಿದೆ. ಸೋಮವಾರ ನಡೆದ ದಾಳಿಯನ್ನು ಯೆಮೆನ್‌ನ ಹೌತಿ ಬಂಡುಕೋರರು ನಡೆಸಿರಬಹುದು ಎಂದು ಅದು ಹೇಳಿದೆ.

ಕೆಂಪು ಸಮುದ್ರದಲ್ಲಿ ತೈಲ ಟ್ಯಾಂಕರ್‌ಗೆ ಬೆದರಿಕೆ

ಏತನ್ಮಧ್ಯೆ ಯೆಮೆನ್‌ನ ಹೌತಿ ಬಂಡುಕೋರರು ಸೌದಿ ಅರೇಬಿಯಾದ NCC Ghazal ತೈಲ ಟ್ಯಾಂಕರ್‌ ಮೇಲೆ ಕ್ಷಿಪಣಿ ದಾಳಿ ನಡೆಸಿ, ಅದನ್ನು ಹಿಂದಿರುಗುವಂತೆ ಮಾಡಿದ್ದಾಗಿ ಹೇಳಿಕೊಂಡಿದ್ದಾರೆ.

ಇತ್ತೀಚೆಗೆ ಅವರು ಸೌದಿ ಹಡಗುಗಳ ವಿರುದ್ಧ ಸಮುದ್ರ ತಡೆ ಘೋಷಿಸಿರುವುದರಿಂದ ಬಾಬ್ ಎಲ್-ಮಂಡೆಬ್ ಜಲಸಂಧಿಯಲ್ಲೂ ಆತಂಕ ಹೆಚ್ಚಾಗಿದೆ.

ಬ್ರಿಟನ್‌ನ ಯುನೈಟೆಡ್ ಕಿಂಗ್‌ಡಮ್ ಕಡಲ ವ್ಯಾಪಾರ ಕಾರ್ಯಾಚರಣೆಗಳು (UKMTO) ಕೇಂದ್ರವು ದಕ್ಷಿಣ ಕೆಂಪು ಸಮುದ್ರದಲ್ಲಿ ಸಾಗುತ್ತಿದ್ದ ಟ್ಯಾಂಕರ್ ಸಮೀಪ ಸ್ಫೋಟಗಳ ಶಬ್ದ ಕೇಳಿಬಂದಿದ್ದರೂ, ಹಡಗು ಮತ್ತು ಸಿಬ್ಬಂದಿ ಸುರಕ್ಷಿತರಾಗಿದ್ದಾರೆ ಎಂದು ತಿಳಿಸಿದೆ.

ಹಾರ್ಮುಜ್ ಜಲಸಂಧಿಯಲ್ಲಿ ಮತ್ತೆ ಉದ್ವಿಗ್ನತೆ

ಯುದ್ಧ ಆರಂಭವಾದ ಬಳಿಕ ಇರಾನ್, ಜಗತ್ತಿನ ತೈಲ ಸಾಗಣೆಯ ಸುಮಾರು 20% ಹಾದುಹೋಗುವ ಹಾರ್ಮುಜ್ ಜಲಸಂಧಿಯಲ್ಲಿ ಸಾಗುವ ಹಡಗುಗಳಿಗೆ ಅಡ್ಡಿಪಡಿಸಿತ್ತು. ನಂತರ ತಾತ್ಕಾಲಿಕ ಕದನ ವಿರಾಮದ ಬಳಿಕವೂ ಜಲಸಂಧಿಯ ಮೇಲಿನ ನಿಯಂತ್ರಣದ ಕುರಿತು ಉದ್ವಿಗ್ನತೆ ಮುಂದುವರಿದಿದೆ. ಅಮೆರಿಕದ ನೌಕಾಪಡೆಯ ಭದ್ರತೆಯಲ್ಲಿ ಕೆಲವು ಹಡಗುಗಳು ಒಮಾನ್ ಕರಾವಳಿಯ ಮಾರ್ಗವನ್ನು ಬಳಸುತ್ತಿವೆ.

ಟ್ರಂಪ್-ನೆತನ್ಯಾಹು ಭೇಟಿ

ಈ ಬೆಳವಣಿಗೆಗಳ ನಡುವೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ವೈಟ್ ಹೌಸ್‌ನಲ್ಲಿ ಭೇಟಿ ಮಾಡಿದರು. ಸುಮಾರು ಒಂದೂವರೆ ಗಂಟೆ ನಡೆದ ಈ ಸಭೆ "ಸಕಾರಾತ್ಮಕ ಮತ್ತು ಫಲಪ್ರದ"ವಾಗಿತ್ತು ಎಂದು ಶ್ವೇತಭವನ ತಿಳಿಸಿದೆ.

ಟ್ರಂಪ್, ಇರಾನ್ ಯುದ್ಧಕ್ಕೆ ಅಂತ್ಯ ತರಬೇಕೆಂಬ ಒತ್ತಡವನ್ನು ಎದುರಿಸುತ್ತಿದ್ದು, ನೆತನ್ಯಾಹು ಕೂಡ ದೇಶೀಯ ರಾಜಕೀಯ ಸವಾಲುಗಳನ್ನು ಎದುರಿಸುತ್ತಿದ್ದಾರೆ.

ಅಮೆರಿಕದ ಶಸ್ತ್ರಾಸ್ತ್ರ ಸಂಗ್ರಹದ ಬಗ್ಗೆ ಆತಂಕ

ಇರಾನ್‌ನ ಕ್ಷಿಪಣಿ ದಾಳಿಗಳನ್ನು ನಿರಂತರವಾಗಿ ತಡೆಹಿಡಿಯುತ್ತಿರುವ ಹಿನ್ನೆಲೆಯಲ್ಲಿ ಅಮೆರಿಕದ ಕ್ಷಿಪಣಿ ಪ್ರತಿಬಂಧಕಗಳ (Missile Interceptors) ಸಂಗ್ರಹ ಕಡಿಮೆಯಾಗುತ್ತಿದೆ ಎಂಬ ಆತಂಕ ವ್ಯಕ್ತವಾಗಿದೆ. ಆದರೆ. ಅಮೆರಿಕದ ಪೆಂಟಗನ್, "ಅಧ್ಯಕ್ಷರು ಸೂಚಿಸುವ ಯಾವುದೇ ಕಾರ್ಯಾಚರಣೆಯನ್ನು ನಡೆಸಲು ಅಗತ್ಯವಿರುವ ಎಲ್ಲಾ ಸಾಮರ್ಥ್ಯ ನಮ್ಮ ಬಳಿ ಇದೆ" ಎಂದು ಸ್ಪಷ್ಟಪಡಿಸಿದೆ.

ಇದೇ ವೇಳೆ, ಇತ್ತೀಚಿನ ಸಂಘರ್ಷದಲ್ಲಿ ಮೃತಪಟ್ಟ ನಾಲ್ವರು ಅಮೆರಿಕದ ಯೋಧರು ಮತ್ತು ಗಾಯಗೊಂಡ ಸೈನಿಕರನ್ನು ಅಧಿಕೃತ ಅಂಕಿಅಂಶಗಳಲ್ಲಿ ಹೊಸ "Overseas Operations" ವಿಭಾಗದ ಅಡಿಯಲ್ಲಿ ದಾಖಲಿಸಲಾಗಿದೆ ಎಂದು ಪೆಂಟಗನ್ ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸುಪ್ರೀಂನ ಮಧ್ಯಂತರ ಆದೇಶ ವಿದ್ಯಾರ್ಥಿಗಳ ವಿರುದ್ಧ ದುರ್ಬಳಕೆಯಾಗುವ ಸಾಧ್ಯತೆ: 'ಕಿರುಕುಳ' ಮುಂದುವರಿದರೆ ಸರಿ ಇರಲ್ಲ- ದೀಪ್ಕೆ ವಾರ್ನಿಂಗ್!

ಪ್ರಹ್ಲಾದ್ ಜೋಶಿ ಕೊಳಕು ಮನುಷ್ಯ; ಅತ್ಯಾಚಾರಿಯನ್ನು ರಕ್ಷಿಸುವವರು ನೂತನ ಶಿಕ್ಷಣ ಸಚಿವರಾಗಿದ್ದಾರೆ: ರಾಹುಲ್ ಗಂಭೀರ ಆರೋಪ, Video

Gen-Z ಗಳಿಗೆ ʻಜನರೇಷನ್‌ ಗಟರ್‌ʼಎಂದ ಕಂಗನಾ ರಣಾವತ್; ಅವರನ್ನು ಬಿಜೆಪಿಯೇ ಗಂಭೀರವಾಗಿ ಪರಿಗಣಿಸಿಲ್ಲ, ಸಿಜೆಪಿ ತಿರುಗೇಟು! Video

ದೆಹಲಿಗೆ ಬಂದು ನಾಟಕವಾಡುವ ನಿಮಗೆ KPSC ಹಗರಣ ಅನ್ಯಾಯ ಅನಿಸಲಿಲ್ಲವೇ?: ಲೋಕಸಭೆಯಲ್ಲಿ ಸಿಎಂ ಶಿವಕುಮಾರ್ ವಿರುದ್ಧ ತೇಜಸ್ವಿ ವಾಗ್ದಾಳಿ!

NEET ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ಹಿಂಪಡೆಯಲು ಮಹಾರಾಷ್ಟ್ರ ಸರ್ಕಾರ ಮುಂದು!