ಅಸಿಮ್ ಮುನೀರ್, ಕಣ್ಣೀರಿಟ್ಟ ವ್ಯಕ್ತಿ 
ವಿದೇಶ

ಪಾಕ್ ಸೇನೆ ಇಸ್ರೇಲ್ ಗಿಂತಲೂ ಕೆಟ್ಟದು: ಮುನೀರ್ ಒಬ್ಬ 'Zalim'; ಕ್ಯಾಮರಾ ಮುಂದೆ ಒಂದೇ ಸಮನೆ ಕಣ್ಣೀರಿಟ್ಟ PoK ವ್ಯಕ್ತಿ! ಮನಕಲಕುವ Video

ಅಲ್ಲಿ ಸರ್ಕಾರ ವಿರೋಧಿ ಪ್ರತಿಭಟನೆಗಳು ಹಿಂಸಾತ್ಮಕ ರೂಪ ಪಡೆದುಕೊಂಡಿದ್ದು, ಪ್ರತಿಭಟನಾಕಾರರು ಮತ್ತು ಭದ್ರತಾ ಪಡೆಗಳ ನಡುವಿನ ಘರ್ಷಣೆಯಲ್ಲಿ ಡಜನ್‌ಗಟ್ಟಲೆ ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ಮಿರ್‌ಪುರ್ : ಪಾಕಿಸ್ತಾನ ಆಕ್ರಮಿತ ಕಾಶ್ಮೀರದಿಂದ (PoK) ಮನಕಲಕುವ ವಿಡಿಯೋವೊಂದು ವೈರಲ್ ಆಗಿದೆ. ಇದರಲ್ಲಿ ವ್ಯಕ್ತಿಯೊಬ್ಬ ರವಾಲಕೋಟ್ ಮತ್ತು ಮಿರ್‌ಪುರ್‌ನಲ್ಲಿ ಪ್ರತಿಭಟನಾಕಾರರ ವಿರುದ್ಧ ಪಾಕಿಸ್ತಾನಿ ಸೇನೆ ನಡೆಸಿದ ದಮನಕಾರಿ ಕ್ರಮದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಾ ಕಣ್ಣೀರು ಹಾಕುತ್ತಿರುವುದು ಕಂಡುಬರುತ್ತದೆ.

ಈ ವಿಡಿಯೋದಲ್ಲಿ, ಪಾಕಿಸ್ತಾನ ಸೇನಾ ಮುಖ್ಯಸ್ಥ ಜನರಲ್ ಅಸಿಮ್ ಮುನೀರ್ ಅವರನ್ನು 'ಜಾಲಿಮ್' (ದಮನಕಾರಿ) ಎಂದು ಕರೆಯುವ ವ್ಯಕ್ತಿ, ಸೇನೆಯು 'ಇಸ್ರೇಲ್‌ಗಿಂತಲೂ ಕೆಟ್ಟದಾಗಿದೆ' ಎಂದು ಹೇಳುತ್ತಾರೆ. ಪಾಕ್ ಆಕ್ರಮಿತ ಕಾಶ್ಮೀರದಾದ್ಯಂತ ಅಶಾಂತಿ ಹೆಚ್ಚುತ್ತಿರುವ ಸಂದರ್ಭದಲ್ಲಿಯೇ ಈ ವಿಡಿಯೋ ಹೊರಬಂದಿದೆ.

ಅಲ್ಲಿ ಸರ್ಕಾರ ವಿರೋಧಿ ಪ್ರತಿಭಟನೆಗಳು ಹಿಂಸಾತ್ಮಕ ರೂಪ ಪಡೆದುಕೊಂಡಿದ್ದು, ಪ್ರತಿಭಟನಾಕಾರರು ಮತ್ತು ಭದ್ರತಾ ಪಡೆಗಳ ನಡುವಿನ ಘರ್ಷಣೆಯಲ್ಲಿ ಡಜನ್‌ಗಟ್ಟಲೆ ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ರವಾಲಕೋಟ್ ಮತ್ತು ಮಿರ್‌ಪುರ್ ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಇತ್ತೀಚೆಗೆ ಉಂಟಾಗಿರುವ ಅಶಾಂತಿಯ ಕೇಂದ್ರಬಿಂದುವಾಗಿವೆ.'ಜಾಯಿಂಟ್ ಅವಾಮಿ ಆಕ್ಷನ್ ಕಮಿಟಿ' (JAAC) ನೇತೃತ್ವದಲ್ಲಿ ಪ್ರತಿಭಟನೆಗಳು ತೀವ್ರಗೊಂಡಿದ್ದು, ಪಾಕಿಸ್ತಾನಿ ಆಡಳಿತದ ವಿರುದ್ಧ ಸಾವಿರಾರು ಜನರು ಬೀದಿಗಿಳಿದಿದ್ದಾರೆ.

ಪ್ರತಿಭಟನೆಯ ವೇಳೆ ಪಾಕಿಸ್ತಾನಿ ರೇಂಜರ್ಸ್ ಮತ್ತು ಭದ್ರತಾ ಸಿಬ್ಬಂದಿ ಪ್ರತಿಭಟನಾಕಾರರ ಮೇಲೆ ಗುಂಡಿನ ದಾಳಿ ನಡೆಸಿದ ನಂತರ ಪರಿಸ್ಥಿತಿ ಹದಗೆಟ್ಟಿತು. ಇತ್ತೀಚಿನ ಹಿಂಸಾಚಾರದಲ್ಲಿ ಕನಿಷ್ಠ ಏಳು ಮಂದಿ ಸಾವನ್ನಪ್ಪಿದ್ದಾರೆ ಎಂದು ಪ್ರತಿಭಟನೆಯ ಆಯೋಜಕರು ಹೇಳಿಕೊಂಡಿದ್ದಾರೆ.

ಇದರೊಂದಿಗೆ ಕಳೆದ ಮೂರು ದಿನಗಳಲ್ಲಿ ಮೃತಪಟ್ಟವರ ಒಟ್ಟು ಸಂಖ್ಯೆ 36ಕ್ಕೆ ಏರಿದೆ. ಈ ಪ್ರದೇಶದ ವಿವಿಧ ಭಾಗಗಳಿಗೆ ಘರ್ಷಣೆಗಳು ವ್ಯಾಪಿಸಿದ್ದರಿಂದ ಇನ್ನೂ ಅನೇಕರು ಗಾಯಗೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

IIT Madras ನಿರ್ದೇಶಕ ಕಾಮಕೋಟಿ 'ಗೋಮೂತ್ರ ತಜ್ಞ': ಪ್ರಿಯಾಂಕಾ ಗಾಂಧಿ ಹೇಳಿಕೆ ಖಂಡಿಸಿ 200ಕ್ಕೂ ಹೆಚ್ಚು ಶಿಕ್ಷಣ ತಜ್ಞರಿಂದ ಪತ್ರ

ರಾಮಾಯಣ ಟ್ರೈಲರ್: ಸೀತಾ ಮಾತೆ ಪಾತ್ರಕ್ಕೆ ಸಾಯಿ ಪಲ್ಲವಿ ಬೇಕಿತ್ತಾ? ಸಾಮಾಜಿಕ ಜಾಲತಾಣದಲ್ಲಿ ಪರ-ವಿರೋಧ ಚರ್ಚೆ!

BJP ಸೇರಿ, ಇಲ್ಲದಿದ್ದರೆ ನಿಮ್ಮ ಕುಟುಂಬ ಸಂಕಷ್ಟಕ್ಕೆ ಸಿಲುಕುತ್ತದೆ: ಅಭಿಜೀತ್ ದೀಪ್ಕೆಗೆ 'ವಿಡಿಯೋ ಬೆದರಿಕೆ' ಬಿಚ್ಚಿಟ್ಟ ತಾಯಿ!

ಚೆನ್ನಮ್ಮ ಉತ್ತರ ಕ್ರಿಯಾದಿ: ಸಮಾಧಿ ಮುಂದೆ ಪತ್ನಿ ನೆನೆದು ಕಣ್ಣೀರಿಟ್ಟ ಮಾಜಿ ಪ್ರಧಾನಿ ದೇವೇಗೌಡ

ಧರ್ಮಸ್ಥಳ: ಬಂಗ್ಲೆಗುಡ್ಡೆಯಲ್ಲಿ ಅಸ್ಥಿಪಂಜರ ಪ್ರಕರಣ; ಮೂವರ DNA ಹೊಂದಾಣಿಕೆ ದೃಢ- FSL ವರದಿ