ಪಾಕ್ ಆಕ್ರಮಿತ ಪ್ರದೇಶದಲ್ಲಿ ಭುಗಿಲೆದ್ದ ಹಿಂಸಾಚಾರ 
ವಿದೇಶ

Pakistan-Occupied Kashmir: JAAC ಬ್ಯಾನ್ ಬಳಿಕ ಭುಗಿಲೆದ್ದ ಹಿಂಸಾಚಾರ, 11 ಜನರ ಸಾವು!

ಜೂನ್ 9 ರಂದು ಆಯೋಜಿಸಿದ್ದ ಬಂದ್‌ಗೆ ಮುನ್ನಾ ರಾವಲಕೋಟ್‌ನಲ್ಲಿ ಪ್ರತಿಭಟನಾಕಾರರು ಮತ್ತು ಭದ್ರತಾ ಪಡೆಗಳ ನಡುವಿನ ಘರ್ಷಣೆಯಲ್ಲಿ ಕನಿಷ್ಠ 11 ಜನರು ಸಾವನ್ನಪ್ಪಿದ್ದಾರೆ ಮತ್ತು 70 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ

ರಾವಲಕೋಟ್‌: ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಮತ್ತೆ ಅಶಾಂತಿ ಭುಗಿಲೆದ್ದಿದೆ. ಸಾಮಾಜಿಕ-ರಾಜಕೀಯ ಸಂಘಟನೆ ಜಂಟಿ ಅವಾಮಿ ಕ್ರಿಯಾ ಸಮಿತಿ (JAAC)ಯನ್ನು ಅಧಿಕಾರಿಗಳು ನಿಷೇಧಿಸಿದ ನಂತರ ಹಿಂಸಾಚಾರ ಭುಗಿಲೆದ್ದಿದೆ.

ಜೂನ್ 9 ರಂದು ಆಯೋಜಿಸಿದ್ದ ಬಂದ್‌ಗೆ ಮುನ್ನಾ ರಾವಲಕೋಟ್‌ನಲ್ಲಿ ಪ್ರತಿಭಟನಾಕಾರರು ಮತ್ತು ಭದ್ರತಾ ಪಡೆಗಳ ನಡುವಿನ ಘರ್ಷಣೆಯಲ್ಲಿ ಕನಿಷ್ಠ 11 ಜನರು ಸಾವನ್ನಪ್ಪಿದ್ದಾರೆ ಮತ್ತು 70 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ರಾಯಿಟರ್ಸ್ ಸುದ್ದಿಸಂಸ್ಥೆ ವರದಿ ಮಾಡಿದೆ.

ಇದಕ್ಕೂ ಮುನ್ನಾ ನಡೆದ ಗುಂಡಿನ ದಾಳಿಯಲ್ಲಿ ಮೃತಪಟ್ಟ ಸಹೋದ್ಯೋಗಿ ಕಾರ್ಯಕರ್ತನ ಶವವನ್ನು ಇರಿಸಲಾಗಿದ್ದ ಆಸ್ಪತ್ರೆಯ ಶವಾಗಾರದ ಹೊರಗೆ ಜೆಎಎಸಿ ಬೆಂಬಲಿಗರು ನೆರೆದಿದ್ದಾಗ ಹಿಂಸಾಚಾರ ಭುಗಿಲೆದ್ದಿದೆ ಎಂದು ವರದಿಯಾಗಿದೆ.

ಕಳೆದ ವಾರ ಪ್ರಾದೇಶಿಕ ಆಡಳಿತವು ಭಯೋತ್ಪಾದನಾ ವಿರೋಧಿ ಕಾನೂನುಗಳ ಅಡಿಯಲ್ಲಿ ಜೆಎಸಿಯನ್ನು ನಿಷೇಧಿಸಲಾಗಿದೆ ಎಂದು ಘೋಷಿಸಿದ ನಂತರ ಪೊಲೀಸರು ಮತ್ತು ಅರೆಸೈನಿಕ ಪಡೆಗಳು ಜೆಎಸಿಗೆ ಸಂಬಂಧಿಸಿದ ಪ್ರತಿಭಟನಾಕಾರರನ್ನು ಚದುರಿಸಲು ಪ್ರಯತ್ನಿಸಿವೆ. ಘರ್ಷಣೆ ವೇಳೆ ನಾಲ್ಕು ಪೊಲೀಸ್ ಸಿಬ್ಬಂದಿ ಮತ್ತು ದಾರಿಹೋಕರೊಬ್ಬರು ಸಾವನ್ನಪ್ಪಿದ್ದಾರೆ ಎಂದು ರಾಯಿಟರ್ಸ್ ಸುದ್ದಿಸಂಸ್ಥೆ ತಿಳಿಸಿದ್ದಾರೆ.

ಭದ್ರತಾ ಕಾರ್ಯಾಚರಣೆ ಸಮಯದಲ್ಲಿ ಆರು ಪ್ರತಿಭಟನಾಕಾರರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ. 23 ಭದ್ರತಾ ಸಿಬ್ಬಂದಿ ಮತ್ತು ಸುಮಾರು 50 ಪ್ರತಿಭಟನಾಕಾರರು ಗಾಯಗೊಂಡಿದ್ದಾರೆ ಎಂದು ಪೊಲೀಸ್ ಮುಖ್ಯಸ್ಥ ಲಿಯಾಕತ್ ಮಲಿಕ್ ಹೇಳಿದ್ದಾರೆ. ಮೃತರ ಸಂಖ್ಯೆ ನಿಖರವಾಗಿ ವರದಿಯಾಗಿಲ್ಲ. ಈ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಪ್ರತಿಭಟನೆ ಯಾಕೆ ನಡೆಯುತ್ತಿದೆ?

45 ಸದಸ್ಯರ ಶಾಸಕಾಂಗ ಸಭೆಯಲ್ಲಿ 12 ಸ್ಥಾನಗಳನ್ನು ಕಾಶ್ಮೀರದ ಹೊರಗೆ ಆದರೆ ಪಾಕಿಸ್ತಾನದ ಇತರೆಡೆ ವಾಸಿಸುವ ನಿರಾಶ್ರಿತರಿಗೆ ಮೀಸಲಿಡುವ ಆಡಳಿತದ ನಿರ್ಧಾರದಿಂದ ಇತ್ತೀಚಿನ ಅಶಾಂತಿ ಉಂಟಾಗಿದೆ. ಈ ಕ್ರಮವು ಸ್ಥಳೀಯ ಪ್ರಾತಿನಿಧ್ಯವನ್ನು ದುರ್ಬಲಗೊಳಿಸುತ್ತದೆ ಎಂಬುದು JAAC ವಾದವಾಗಿದೆ. ಅಲ್ಲದೇ ಮೀಸಲು ಸ್ಥಾನಗಳನ್ನು ರದ್ದುಗೊಳಿಸಬೇಕೆಂದು ಒತ್ತಾಯಿಸಿದೆ. ಹಣದುಬ್ಬರ, ವಿದ್ಯುತ್ ಕೊರತೆ, ನಿರುದ್ಯೋಗ ಮತ್ತಿತರ ಸಮಸ್ಯೆಗಳ ವಿರುದ್ಧವೂ ಸಂಘಟನೆ ಪ್ರತಿಭಟನೆ ನಡೆಸುತ್ತಿದೆ.

ಹೆಚ್ಚುತ್ತಿರುವ ವಿದ್ಯುತ್ ಮತ್ತು ಹಿಟ್ಟಿನ ಬೆಲೆಗಳ ಕಳೆದ ಎರಡು ವರ್ಷಗಳಲ್ಲಿ ಅನೇಕ ಪ್ರತಿಭಟನೆಗಳನ್ನು ಸಂಘಟನೆ ನಡೆಸಿದೆ. ಅವುಗಳಲ್ಲಿ ಹಲವು ಭದ್ರತಾ ಪಡೆಗಳೊಂದಿಗೆ ಘರ್ಷಣೆಯಲ್ಲಿ ಕೊನೆಗೊಂಡಿತು. ಜೆಎಎಸಿ ಮೇಲಿನ ನಿಷೇಧ, ಇಂಟರ್ನೆಟ್ ನಿರ್ಬಂಧಗಳು ಮತ್ತು ನಾಯಕರೊಬ್ಬರ ಹತ್ಯೆ ವಿರೋಧಿಸಿ JAAC ಇಂದು ಪ್ರತಿಭಟನೆಗೆ ಕರೆ ನೀಡಿತ್ತು.

ಈ ಮಧ್ಯೆ ರಾವಲಕೋಟ್‌ನಲ್ಲಿ ಸರ್ಕಾರ "ಹತ್ಯಾಕಾಂಡ" ನಡೆಸುತ್ತಿದೆ ಎಂದು JAAC ನಾಯಕ ಶೌಕತ್ ನವಾಜ್ ಮಿರ್ ಆರೋಪಿಸಿದ್ದಾರೆ. ನಿಷೇಧದ ಹೊರತಾಗಿಯೂ ಪ್ರತಿಭಟನೆ ಮುಂದುವರಿಸುವುದಾಗಿ ಪ್ರತಿಜ್ಞೆ ಮಾಡಿದ್ದಾರೆ.

ಜುಲೈ 27 ರಂದು ನಡೆಯಲಿರುವ ಚುನಾವಣೆಗೆ ಮುಂಚಿತವಾಗಿ ಅಧಿಕಾರಿಗಳು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಾದ್ಯಂತ ಭದ್ರತಾ ಕ್ರಮಗಳನ್ನು ಹೆಚ್ಚಿಸಿದ್ದಾರೆ. ಹಲವಾರು ಪ್ರದೇಶಗಳಲ್ಲಿ ಮೊಬೈಲ್ ಇಂಟರ್ನೆಟ್ ಸೇವೆಗಳನ್ನು ಅಡ್ಡಿಪಡಿಸಲಾಗಿದೆ, ಸಾರ್ವಜನಿಕ ಸಭೆಗಳನ್ನು ನಿರ್ಬಂಧಿಸಲಾಗಿದೆ ಮತ್ತು ಜೆಎಎಸಿಯ ಕೇಂದ್ರ ಕಚೇರಿಯನ್ನು ಸೀಲ್ ಮಾಡಲಾಗಿದೆ ಎಂದು ವರದಿಯಾಗಿದೆ. ಈ ಅಶಾಂತಿ ಅಂತರರಾಷ್ಟ್ರೀಯ ಗಮನ ಸೆಳೆದಿದ್ದು, ಯುನೈಟೆಡ್ ಕಿಂಗ್‌ಡಮ್, ಆಸ್ಟ್ರೇಲಿಯಾ ಮತ್ತು ಕೆನಡಾ ಸೇರಿದಂತೆ ದೇಶಗಳು ಈ ಪ್ರದೇಶದಲ್ಲಿ ಭದ್ರತಾ ಪರಿಸ್ಥಿತಿಗಳು ಹದಗೆಡುತ್ತಿರುವ ಬಗ್ಗೆ ಪ್ರಯಾಣಿಕರಿಗೆ ಎಚ್ಚರಿಕೆ ನೀಡಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮಧ್ಯಪ್ರದೇಶ ರಾಜ್ಯಸಭಾ ಚುನಾವಣೆ: ಕಾಂಗ್ರೆಸ್ ಗೆ ಅಡ್ಡ ಮತದಾನದ ಭೀತಿ; ಕೈ ಶಾಸಕರು ಬೆಂಗಳೂರಿಗೆ ಶಿಫ್ಟ್!

ಮಂಡ್ಯದಲ್ಲಿ ಮನಕಲಕುವ ಘಟನೆ: ತಂದೆ-ತಾಯಿ, ಮಗ ನಿಗೂಢ ಸಾವು; ಡೆತ್​ನೋಟ್​​ನಲ್ಲಿ ಶಕ್ತಿ ಯೋಜನೆ ಉಲ್ಲೇಖ!

ಬೆಣ್ಣೆ ನಗರಿಯಲ್ಲಿ ಹೀನ ಕೃತ್ಯ: ಮಹಿಳೆಗೆ 'ಡ್ರಗ್ಸ್' ನೀಡಿ 'ಸಾಮೂಹಿಕ ಅತ್ಯಾಚಾರ'; 10 ಕಾಮುಕರ ಬಂಧನ

'ಮಮತಾ ಕೈಯಿಂದ ಜಾರುತ್ತಿದೆ TMC': ಸಿಎಂ ಸುವೇಂದು ಸಭೆಯಲ್ಲಿ ಭಿನ್ನಮತೀಯ ಸಂಸದರು ಭಾಗಿ!

Covered 82 km in just 72 minutes': ಬೆಂಗಳೂರಿನಲ್ಲಿ ಈ ರೀತಿ ಸುತ್ತಾಡಲು ಇನ್ನೂ 10 ವರ್ಷ ಬೇಕು- ಹೈದರಾಬಾದ್ ಯುವಕನ ಪೋಸ್ಟ್ ವೈರಲ್! ತೀವ್ರ ಚರ್ಚೆ

SCROLL FOR NEXT