ಅಮೆರಿಕ ಉಪಾಧ್ಯಕ್ಷ ಜೆಡಿ ವ್ಯಾನ್ಸ್ 
ವಿದೇಶ

'ಒಪ್ಪಂದಕ್ಕೆ ಸಹಿ ಹಾಕಿದ ಮಾತ್ರಕ್ಕೆ ಹಣ ನೀಡಿದ್ದೇವೆ ಎಂದಲ್ಲ': ಇರಾನ್ ಮಾತುಕತೆ ಕುರಿತು ಅಮೆರಿಕ ಉಪಾಧ್ಯಕ್ಷ JD Vance ಸ್ಪಷ್ಟನೆ

ಜಲಸಂಧಿಯನ್ನು ಪುನಃ ತೆರೆಯುವ ಮತ್ತು ಇರಾನ್‌ನ ಅಣ್ವಸ್ತ್ರ ಕಾರ್ಯಕ್ರಮವನ್ನು ಕೊನೆಗೊಳಿಸುವ ಒಪ್ಪಂದದ ಬಗ್ಗೆ ಸಾಕಷ್ಟು ಸುಳ್ಳು ಮಾಹಿತಿ ಹರಿದಾಡುತ್ತಿದೆ.

ವಾಷಿಂಗ್ಟನ್: ಶಾಂತಿ ಸಂಧಾನ ಒಪ್ಪಂದಕ್ಕೆ ಸಹಿ ಹಾಕಿದ ಮಾತ್ರಕ್ಕೆ ಹಣ ನೀಡಿದ್ದೇವೆ ಎಂದಲ್ಲ ಎಂದು ಹೇಳುವ ಮೂಲಕ ಊಹಾಪೋಹಗಳಿಗೆ ಅಮೆರಿಕ ಉಪಾಧ್ಯಕ್ಷ ಜೆಡಿ ವ್ಯಾನ್ಸ್ (JD Vance) ತೆರೆ ಎಳೆದಿದ್ದಾರೆ.

ಅಮೆರಿಕದ ಉಪಾಧ್ಯಕ್ಷ ಜೆಡೆ ವ್ಯಾನ್ಸ್ ಶುಕ್ರವಾರ, ಹೋರ್ಮುಜ್ ಜಲಸಂಧಿಯನ್ನು ಪುನಃ ತೆರೆಯುವುದು ಹಾಗೂ ಇರಾನ್‌ನ ಅಣ್ವಸ್ತ್ರ ಕಾರ್ಯಕ್ರಮಕ್ಕೆ ಕಡಿವಾಣ ಹಾಕುವ ಸಾಧ್ಯತೆಯಿರುವ ಒಪ್ಪಂದದ ಬಗ್ಗೆ ಹರಿದಾಡುತ್ತಿರುವ ಮಾಹಿತಿಯನ್ನು "ಸುಳ್ಳು ಮಾಹಿತಿ" ಎಂದು ತಳ್ಳಿಹಾಕಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ವ್ಯಾನ್ಸ್, "ಜಲಸಂಧಿಯನ್ನು ಪುನಃ ತೆರೆಯುವ ಮತ್ತು ಇರಾನ್‌ನ ಅಣ್ವಸ್ತ್ರ ಕಾರ್ಯಕ್ರಮವನ್ನು ಕೊನೆಗೊಳಿಸುವ ಒಪ್ಪಂದದ ಬಗ್ಗೆ ಸಾಕಷ್ಟು ಸುಳ್ಳು ಮಾಹಿತಿ ಹರಿದಾಡುತ್ತಿದೆ.

ಮೊದಲನೆಯದಾಗಿ, ಇರಾನ್‌ಗೆ ಯಾವುದೇ ನಗದು ಹಣ ನೀಡಲಾಗುತ್ತಿಲ್ಲ. ಕೇವಲ ಒಪ್ಪಂದಕ್ಕೆ ಸಹಿ ಹಾಕಿದ ಕಾರಣಕ್ಕೆ ಅಥವಾ ಸಭೆಯಲ್ಲಿ ಭಾಗವಹಿಸಿದ ಕಾರಣಕ್ಕೆ ಯಾವುದೇ ಹಣವನ್ನು ಬಿಡುಗಡೆ ಮಾಡಲಾಗುವುದಿಲ್ಲ" ಎಂದು ಹೇಳಿದ್ದಾರೆ.

ಪ್ರಸ್ತಾವಿತ ಒಪ್ಪಂದದ ಚೌಕಟ್ಟು ಅಮೆರಿಕ ಹಾಗೂ ಅದರ ಮಿತ್ರ ರಾಷ್ಟ್ರಗಳ ಭದ್ರತಾ ಹಿತಾಸಕ್ತಿಗಳಿಗೆ ಆದ್ಯತೆ ನೀಡುವ ರೀತಿಯಲ್ಲಿ ರೂಪಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಇರಾನ್‌ಗೆ ದೊರೆಯಬಹುದಾದ ಯಾವುದೇ ಆರ್ಥಿಕ ಪ್ರಯೋಜನಗಳು, ಒಪ್ಪಂದದ ಷರತ್ತುಗಳನ್ನು ಅದು ಎಷ್ಟರ ಮಟ್ಟಿಗೆ ಪಾಲಿಸುತ್ತದೆ ಎಂಬುದರ ಮೇಲೆ ಅವಲಂಬಿತವಾಗಿರುತ್ತವೆ ಎಂದು ವ್ಯಾನ್ಸ್ ಹೇಳಿದ್ದಾರೆ.

"ಒಪ್ಪಂದದ ನಿಯಮಗಳನ್ನು ಇರಾನ್ ಸಂಪೂರ್ಣವಾಗಿ ಪಾಲಿಸಿದರೆ ಮಾತ್ರ ಆರ್ಥಿಕ ಲಾಭಗಳು ದೊರೆಯಲಿವೆ. ಈ ಒಪ್ಪಂದವು ಮಧ್ಯಪ್ರಾಚ್ಯ ಪ್ರದೇಶದಲ್ಲಿ ಮಹತ್ವದ ಬದಲಾವಣೆಯನ್ನು ತರಬಲ್ಲದು ಹಾಗೂ ಶಾಶ್ವತ ಶಾಂತಿಗೆ ದಾರಿ ಮಾಡಿಕೊಡುವ ಸಾಧ್ಯತೆಯೂ ಇದೆ ಎಂದೂ ವ್ಯಾನ್ಸ್ ಸ್ಪಷ್ಟಪಡಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಭಾರತೀಯ ಹಡಗುಗಳ ಮೇಲೆ ನಡೆದಿದ್ದು 'ಇರಾನ್ ದಾಳಿ- ಟ್ರಂಪ್; ಪ್ರಸ್ತಾವಿತ ಕದನ ವಿರಾಮ ಒಪ್ಪಂದದ ಆವೃತ್ತಿ ಅಲ್ಲಗಳೆದ US ಅಧ್ಯಕ್ಷ!

ಭಾರತೀಯ ಹಡಗಿನ ಮೇಲೆ ಅಮೆರಿಕ ದಾಳಿ ಖಂಡಿಸಿದ ಇರಾನ್

ಅಮಿತ್ ಶಾ ಭೇಟಿ ಮಾಡಿದ ಸಿಎಂ ಡಿಕೆಶಿ; ಪೊಲೀಸ್ ಸಾಮರ್ಥ್ಯ ಸುಧಾರಣೆಗೆ ನೆರವಾಗುವಂತೆ ಮನವಿ

ಕೋಲ್ಕತಾ ಸರ್ಕಾರಿ ಕಟ್ಟಡದಲ್ಲಿ ಅಗ್ನಿ ದುರಂತ: ಚುನಾವಣೆಯಲ್ಲಿ ಬಳಸಲಾಗಿದ್ದ 4,000 ಇವಿಎಂ ಭಸ್ಮ; ಅವಘಡದ ಸುತ್ತ ಅನುಮಾನದ ಹುತ್ತ!

Video: ಕೋಚ್ ಜಸ್ಪಾಲ್ ರಾಣಾ ನಿಧನ: ಅಂತಿಮ ನಮನ ವೇಳೆ ಬಿಕ್ಕಿ ಬಿಕ್ಕಿ ಅತ್ತ ಶೂಟರ್ Manu Bhaker

SCROLL FOR NEXT