ಹಾರ್ಮುಜ್ ಜಲಸಂಧಿ 
ವಿದೇಶ

'ಈಗ ಹಾರ್ಮುಜ್ ಅನ್ನು ಯಾವಾಗ ಬೇಕಾದರೂ ಬಂದ್ ಮಾಡುವ ಅಧಿಕಾರ ಇರಾನ್ ಹೊಂದಿದೆ; ಇದು ಅಮೆರಿಕಕ್ಕೆ ಮಾರಕ'

"ನಾವು ಈಗ ಹಾರ್ಮುಜ್ ಜಲಸಂಧಿಯ ಮೇಲೆ ಇರಾನ್‌ಗೆ ವಾಸ್ತವಿಕ ನಿಯಂತ್ರಣವನ್ನು ಹಸ್ತಾಂತರಿಸಿದ್ದೇವೆ - ಇದು ಯಾವುದೇ ಪರಮಾಣು ಬಾಂಬ್‌ಗಿಂತ ಹೆಚ್ಚು ಶಕ್ತಿಶಾಲಿ ಆಯುಧ"

ವಾಷಿಂಗ್ಟನ್: ಅಮೆರಿಕ-ಇರಾನ್ ನಡುವಣ 107 ದಿನಗಳ ಯುದ್ಧ ಕೊನೆಗೂ ಅಂತ್ಯವಾಗುವ ಕಾಲ ಸನ್ನಿಹಿತವಾಗಿದ್ದು, ಉಭಯ ದೇಶಗಳು ಜಿನೀವಾದಲ್ಲಿ ಶಾಂತಿ ಒಪ್ಪಂದಕ್ಕೆ ಸಹಿ ಹಾಕಲು ಸಿದ್ಧವಾಗಿವೆ.

ಈ ಮಧ್ಯೆ, ಯುದ್ಧ ಮುಗಿದ ನಂತರ ಇರಾನ್ ಹಾರ್ಮುಜ್ ಜಲಸಂಧಿಯನ್ನು ಸ್ವಂತ ಇಚ್ಛೆಯಿಂದ ಬಂದ್ ಮಾಡುವ ಸಾಮರ್ಥ್ಯವನ್ನು ಪಡೆದುಕೊಂಡಿದೆ ಎಂದು ಅಮೆರಿಕದ ಗುಪ್ತಚರ ಸಂಸ್ಥೆಗಳು ಬುಧವಾರ ಬಹಿರಂಗಪಡಿಸಿವೆ ಎಂದು ಮೂಲಗಳು ಸಿಎನ್‌ಎನ್‌ಗೆ ತಿಳಿಸಿವೆ.

ಶುಕ್ರವಾರ ಉಭಯ ದೇಶಗಳು ಸಹಿ ಹಾಕಲಿರುವ ಶಾಂತಿ ಒಪ್ಪಂದವನ್ನು ಲೆಕ್ಕಿಸದೆ, ನಿರ್ಣಾಯಕ ಜಲಮಾರ್ಗವನ್ನು ಬಳಸಿಕೊಂಡು ಆರ್ಥಿಕತೆಗೆ ಹಾನಿ ಮಾಡುವ ಇರಾನ್‌ನ ಸಾಮರ್ಥ್ಯವು ಮತ್ತೆ ಹೆಚ್ಚಾಗಬಹುದು ಎಂದು ಗುಪ್ತಚರ ಸಂಸ್ಥೆಗಳು ಬಹಿರಂಗಪಡಿಸಿವೆ.

ಇರಾನ್ ಈಗಾಗಲೇ ನೆರೆಯ ದೇಶಗಳಲ್ಲಿನ ಅಮೆರಿಕದ ನೆಲೆಗಳ ಮೇಲೆ ದಾಳಿ ನಡೆಸಿದೆ. ಅಲ್ಲದೆ ಗಲ್ಫ್ ರಾಷ್ಟ್ರಗಳ ಇಂಧನ ಮೂಲಸೌಕರ್ಯದ ಮೇಲೆ ದಾಳಿಗಳನ್ನು ಬಳಸಿಕೊಳ್ಳಲು ಕಲಿತಿರುವುದರಿಂದ ಇರಾನ್ ಈಗ ಅಮೆರಿಕಕ್ಕೆ ಮಾರಕವಾಗಿ ಮಾರ್ಪಟ್ಟಿದೆ ಎಂದು ಮೂಲಗಳು ಸಿಎನ್‌ಎನ್‌ಗೆ ತಿಳಿಸಿವೆ.

"ನಾವು ಈಗ ಹಾರ್ಮುಜ್ ಜಲಸಂಧಿಯ ಮೇಲೆ ಇರಾನ್‌ಗೆ ವಾಸ್ತವಿಕ ನಿಯಂತ್ರಣವನ್ನು ಹಸ್ತಾಂತರಿಸಿದ್ದೇವೆ - ಇದು ಯಾವುದೇ ಪರಮಾಣು ಬಾಂಬ್‌ಗಿಂತ ಹೆಚ್ಚು ಶಕ್ತಿಶಾಲಿ ಆಯುಧ" ಎಂದು ಅಮೆರಿಕದ ಗುಪ್ತಚರ ಮೌಲ್ಯಮಾಪನಗಳೊಂದಿಗೆ ಪರಿಚಿತವಾಗಿರುವ ಮೂಲಗಳಲ್ಲಿ ಒಬ್ಬರು ಸಿಎನ್‌ಎನ್‌ಗೆ ತಿಳಿಸಿದ್ದಾರೆ.

ಜಲಸಂಧಿಯನ್ನು ಸಂಪೂರ್ಣವಾಗಿ ಪುನಃ ತೆರೆಯಲು ಅಮೆರಿಕ ಇರಾನ್‌ನೊಂದಿಗೆ ತೀವ್ರ ಮಾತುಕತೆ ನಡೆಸಬೇಕಾಯಿತು. ಇದು ಇರಾನಿಯನ್ನರ ನಿರಂತರ ಹತೋಟಿಯನ್ನು ಒತ್ತಿಹೇಳುತ್ತದೆ ಎಂದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

US-Iran ಒಪ್ಪಂದ ಬೆನ್ನಲ್ಲೇ Hormuzನಲ್ಲಿ ತೈಲ ಸಾಗಣೆ ಪುನರಾರಂಭ: ಲೆಬನಾನ್'ನಲ್ಲಿ ಮುಂದುವರೆದ ಉದ್ವಿಗ್ನತೆ, ಮಧ್ಯಪ್ರಾಚ್ಯ ಶಾಂತಿಗೆ ಕಂಟಕ..!

ಶತ್ರು ಮುಂದೆ ಶರಣಾಗುವ ಪ್ರಶ್ನೆಯೇ ಇಲ್ಲ, ಹತಾಶೆಯಿಂದ ಒಪ್ಪಂದಕ್ಕೆ ಮುಂದಾಗಿದ್ದಾರೆ: ಇರಾನ್‌ ಪರಮೋಚ್ಛ ನಾಯಕ ಮೊಜ್ತಾಬಾ ಖಮೇನಿ

ಪರಿಷತ್ತಿನಲ್ಲಿ ಬಲ ಹೆಚ್ಚಿಸಿಕೊಂಡ ಕಾಂಗ್ರೆಸ್: ಗೋಹತ್ಯೆ ನಿಷೇಧ ಮಸೂದೆ ಪರಿಶೀಲಿಸುವತ್ತ ಸರ್ಕಾರದ ಚಿತ್ತ?

ಧರ್ಮಸ್ಥಳ ಪ್ರಕರಣ ತನಿಖೆ ಚುರುಕು: ನಾಪತ್ತೆಯಾಗಿರುವ 17 ಮಂದಿ DNA ಹೊಂದಾಣಿಕೆ ಪ್ರಕ್ರಿಯೆ ಆರಂಭ..!

ವಿಧಾನ ಪರಿಷತ್ ಚುನಾವಣೆ: ಯಾವುದೇ ತಂತ್ರ ರೂಪಿಸಿಲ್ಲ, ಅಡ್ಡ ಮತದಾನ ಬಗ್ಗೆ ಮಾಹಿತಿ ಇಲ್ಲ: ಡಿಕೆ ಶಿವಕುಮಾರ್