ಪ್ರಧಾನಿ ಮೋದಿ 
ವಿದೇಶ

ತಂತ್ರಜ್ಞಾನ ಸುಲಭವಾಗಿ ಎಲ್ಲರಿಗೂ ದೊರೆತಾಗ ಮಾತ್ರ ಪ್ರಗತಿ ಸಾಧ್ಯ: VivaTech ನಲ್ಲಿ ಪ್ರಧಾನಿ ಮೋದಿ!

ಫ್ರಾನ್ಸ್ ಮತ್ತು ಸ್ಲೋವಾಕಿಯಾಕ್ಕೆ ಏಳು ದಿನಗಳ ಅಧಿಕೃತ ಭೇಟಿಯಲ್ಲಿರುವ ಪ್ರಧಾನಿ, ಪ್ಯಾರಿಸ್‌ನಲ್ಲಿ ನಡೆದ ಯುರೋಪಿನ ಅತಿದೊಡ್ಡ ತಂತ್ರಜ್ಞಾನ ಮತ್ತು ನವೋದ್ಯಮ ಕಾರ್ಯಕ್ರಮವಾದ ವಿವಾಟೆಕ್ ಶೃಂಗಸಭೆ 2026 ರಲ್ಲಿ ಈ ಹೇಳಿಕೆ ನೀಡಿದ್ದಾರೆ.

ಪ್ಯಾರಿಸ್: ತಂತ್ರಜ್ಞಾನ ಎಲ್ಲರಿಗೂ ಸುಲಭವಾಗಿ ದೊರೆತಾಗ ಮಾತ್ರ ಪ್ರಗತಿಗೆ ಕಾರಣವಾಗಬಹುದು ಎಂದು ಪ್ರಧಾನಿ ನರೇಂದ್ರ ಮೋದಿ ಗುರುವಾರ ಹೇಳಿದ್ದಾರೆ. ಆದರೆ ಭಾರತ ತಾಂತ್ರಿಕ ಪ್ರಗತಿಯಿಂದ ತ್ವರಿತ ಬದಲಾವಣೆಯತ್ತ ಸಾಗುತ್ತಿದೆ ಎಂದು ಹೇಳಿದ್ದಾರೆ.

ಫ್ರಾನ್ಸ್ ಮತ್ತು ಸ್ಲೋವಾಕಿಯಾಕ್ಕೆ ಏಳು ದಿನಗಳ ಅಧಿಕೃತ ಭೇಟಿಯಲ್ಲಿರುವ ಪ್ರಧಾನಿ, ಪ್ಯಾರಿಸ್‌ನಲ್ಲಿ ನಡೆದ ಯುರೋಪಿನ ಅತಿದೊಡ್ಡ ತಂತ್ರಜ್ಞಾನ ಮತ್ತು ನವೋದ್ಯಮ ಕಾರ್ಯಕ್ರಮವಾದ ವಿವಾಟೆಕ್ ಶೃಂಗಸಭೆ 2026 ರಲ್ಲಿ ಈ ಹೇಳಿಕೆ ನೀಡಿದ್ದಾರೆ.

ವಿದೇಶಿ ಪ್ರಜೆಗಳಿಗೆ ಆಂಥ್ರೊಪಿಕ್‌ನ ಇತ್ತೀಚಿನ ಕೃತಕ ಬುದ್ಧಿಮತ್ತೆ (AI) ಮಾದರಿಗಳ ಬಳಕೆಯನ್ನು ಅಮೆರಿಕ ನಿರ್ಬಂಧಿಸಿದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಈ ರೀತಿಯ ಹೇಳಿಕೆ ನೀಡಿದ್ದಾರೆ. ವಿವಾಟೆಕ್ ಶೃಂಗಸಭೆಯಲ್ಲಿ ಮಾತನಾಡಿದ ಮೋದಿ, ಭಾರತಕ್ಕಾಗಿ AI ಎಂದರೆ ಎಲ್ಲರನ್ನೂಳಗೊಂಡದ್ದು ಎಂದರ್ಥ ಎಂದರು.

ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತದ ಪ್ರಗತಿಯನ್ನು ಪ್ರಮುಖವಾಗಿ ಪ್ರಸ್ತಾಪಿಸಿದ ಪ್ರಧಾನಿ, ಜಾಗತಿಕ ಡಿಜಿಟಲ್ ವಹಿವಾಟುಗಳಲ್ಲಿ ಅರ್ಧದಷ್ಟು ದೇಶದಲ್ಲಿ ನಡೆಯುತ್ತಿದೆ.ತಂತ್ರಜ್ಞಾನವು ಸಮಾಜದಲ್ಲಿ ಎಲ್ಲರಿಗೂ ಸುಲಭವಾಗಿ ದೊರಕಿದಾಗ ಮಾತ್ರ ದೇಶ ಪ್ರಗತಿಯಾಗಲಿದೆ. ಕಳೆದ ದಶಕದಲ್ಲಿ ಭಾರತವು ತಂತ್ರಜ್ಞಾನದಿಂದ ತ್ವರಿತಗತಿಯಲ್ಲಿ ಬದಲಾವಣೆಯತ್ತ ಸಾಗುತ್ತಿದೆ ಎಂದು ಅವರು ಹೇಳಿದರು.

"ವಿಶ್ವದ ಅತಿದೊಡ್ಡ ಡಿಜಿಟಲ್ ಗುರುತಿನ ವ್ಯವಸ್ಥೆಯನ್ನು ರಚಿಸುವುದರಿಂದ ಹಿಡಿದು ವಿಶ್ವದ ಅತಿದೊಡ್ಡ ಡಿಜಿಟಲ್ ಪಾವತಿ ವೇದಿಕೆಗಳವರೆಗೆ, ಆರ್ಥಿಕ ಸೇರ್ಪಡೆ, ಶಿಕ್ಷಣ, ಟೆಲಿಮೆಡಿಸಿನ್ ಗಾಗಿ ಬೃಹತ್ ಪ್ರಮಾಣದಲ್ಲಿ ತಂತ್ರಜ್ಞಾನವನ್ನು ಬಳಸುತ್ತಿದ್ದೇವೆ ಎಂದು ಅವರು ತಿಳಿಸಿದರು.

ವಿವಾಟೆಕ್ ಯುರೋಪಿನ ಪ್ರಮುಖ ತಂತ್ರಜ್ಞಾನ ಮತ್ತು ನಾವೀನ್ಯತೆ ಸಭೆಯಾಗಿದ್ದು, ಭಾರತವು ಇದರಲ್ಲಿ ಅತಿದೊಡ್ಡ ಪೆವಿಲಿಯನ್ ಸ್ಥಾಪಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka MLC Election Results: ಅಡ್ಡ ಮತದಾನದ ನಡುವೆಯೇ ಕಾಂಗ್ರೆಸ್ 5, ಬಿಜೆಪಿ ತೆಕ್ಕೆಗೆ 2 ಸ್ಥಾನ; JDS ಆಘಾತಕಾರಿ ಸೋಲು

BJP-JDS ಅಡ್ಡ ಮತದಾನದಿಂದ Congress 5ನೇ ಅಭ್ಯರ್ಥಿ ಜಯ; ಇದು ಪ್ರಜಾಪ್ರಭುತ್ವದ ಗೆಲುವು: ಸುರ್ಜೇವಾಲಾ

SBI Recruitment: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 1,500 ಹುದ್ದೆಗಳಿಗೆ ಅರ್ಜಿ ಆಹ್ವಾನ!

ಫಲಿಸಿದ ಡಿ.ಕೆ ಶಿವಕುಮಾರ್ ತಂತ್ರ: JDS-BJP ಅಡ್ಡ ಮತದಾನ; ಕಾಂಗ್ರೆಸ್‌ 5ನೇ ಅಭ್ಯರ್ಥಿಗೆ ಗೆಲುವು!

ಆರ್‌ಎಸ್‌ಎಸ್ ಕಚೇರಿ ಮೇಲೆ ಪೆಟ್ರೋಲ್ ಬಾಂಬ್ ಎಸೆತ ಪ್ರಕರಣ: ಮೂವರು ಆರೋಪಿಗಳ ಬಂಧನ; ಪಾಕ್ ಉಗ್ರರೊಂದಿಗೆ ನಂಟಿನ ಶಂಕೆ! Video

SCROLL FOR NEXT