ಜೆಡಿ ವ್ಯಾನ್ಸ್ 
ವಿದೇಶ

ಆಗಸ್ಟ್ 21ರವರೆಗೆ ಇರಾನ್ ತೈಲದ ಮೇಲಿನ ನಿರ್ಬಂಧ ಸ್ಥಗಿತಗೊಳಿಸಿದ ಅಮೆರಿಕ

ಅಮೆರಿಕ ಇರಾನ್ ಮೇಲಿನ ನಿರ್ಬಂಧಗಳನ್ನು ಸಡಿಲಿಸಿದೆ. ಸ್ವಿಟ್ಜರ್‌ಲ್ಯಾಂಡ್‌ನಲ್ಲಿ ನಡೆದ ಮಾತುಕತೆಯ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಅಮೆರಿಕ ಖಜಾನೆ ಇಲಾಖೆ ಹೊರಡಿಸಿದ ಆದೇಶವು ಇರಾನಿನ ಕಚ್ಚಾ ತೈಲ ಉತ್ಪಾದನೆ, ಮಾರಾಟ ಮತ್ತು ವಿತರಣೆಯ ಮೇಲಿನ ನಿರ್ಬಂಧಗಳನ್ನು ಸಡಿಸಗೊಳಿಸಿದೆ.

ಅಮೆರಿಕ ಇರಾನ್ ಮೇಲಿನ ನಿರ್ಬಂಧಗಳನ್ನು ಸಡಿಲಿಸಿದೆ. ಸ್ವಿಟ್ಜರ್‌ಲ್ಯಾಂಡ್‌ನಲ್ಲಿ ನಡೆದ ಮಾತುಕತೆಯ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಅಮೆರಿಕ ಖಜಾನೆ ಇಲಾಖೆ ಹೊರಡಿಸಿದ ಆದೇಶವು ಇರಾನಿನ ಕಚ್ಚಾ ತೈಲ ಉತ್ಪಾದನೆ, ಮಾರಾಟ ಮತ್ತು ವಿತರಣೆಯ ಮೇಲಿನ ನಿರ್ಬಂಧಗಳನ್ನು ಸಡಿಸಗೊಳಿಸಿದೆ. ಇರಾನಿನ ಕಚ್ಚಾ ತೈಲ, ಪೆಟ್ರೋಕೆಮಿಕಲ್ ಉತ್ಪನ್ನಗಳು ಅಥವಾ ಪೆಟ್ರೋಲಿಯಂ ಉತ್ಪನ್ನಗಳ ಉತ್ಪಾದನೆ, ಮಾರಾಟ, ವಿತರಣೆ ಮೇಲಿನ ನಿಷೇಧವನ್ನು 2026ಕ ಆಗಸ್ಟ್ 21ರ ಮಧ್ಯಾಹ್ನ 12:01 ಗಂಟೆಯವರೆಗೆ ಮಾನ್ಯವಾಗಿರುತ್ತವೆ ಅಮೆರಿಕ ಹೇಳಿದೆ.

ಉತ್ತರ ಕೊರಿಯಾ ಮತ್ತು ಕ್ಯೂಬಾವನ್ನು ಒಳಗೊಂಡ ಯಾವುದೇ ವಹಿವಾಟುಗಳಿಗೆ ಈ ಪರವಾನಗಿ ಅನ್ವಯಿಸುವುದಿಲ್ಲ ಎಂದು ಅಮೆರಿಕ ಖಜಾನೆ ಇಲಾಖೆ ಸ್ಪಷ್ಟಪಡಿಸಿದೆ. ಏಕೆಂದರೆ ಎರಡೂ ದೇಶಗಳು ಅಮೆರಿಕದ ನಿರ್ಬಂಧಗಳ ಅಡಿಯಲ್ಲಿಯೇ ಉಳಿದಿವೆ. ಉತ್ತರ ಕೊರಿಯಾದ ಅಕ್ರಮ ಪರಮಾಣು ಶಸ್ತ್ರಾಸ್ತ್ರಗಳ ಕಾರ್ಯಕ್ರಮ, ಬ್ಯಾಲಿಸ್ಟಿಕ್ ಕ್ಷಿಪಣಿ ಪರೀಕ್ಷೆಗಳು ಮತ್ತು ಅಂತರರಾಷ್ಟ್ರೀಯ ಭದ್ರತೆಗೆ ಬೆದರಿಕೆ ಹಾಕುವ ಕ್ರಮಗಳಿಂದಾಗಿ ಅಮೆರಿಕ ಮುಖ್ಯವಾಗಿ ಅದರ ಮೇಲೆ ನಿರ್ಬಂಧಗಳನ್ನು ವಿಧಿಸಿದೆ.

ಕ್ಯೂಬಾದ ಕಮ್ಯುನಿಸ್ಟ್ ಆಡಳಿತವು ಮಾನವ ಹಕ್ಕುಗಳ ಉಲ್ಲಂಘನೆ, ರಾಜಕೀಯ ದಮನ ಮತ್ತು ಅಮೆರಿಕದ ರಾಷ್ಟ್ರೀಯ ಭದ್ರತೆ ಮತ್ತು ವಿದೇಶಾಂಗ ನೀತಿಗೆ ಬೆದರಿಕೆಯೊಡ್ಡುವ ಕ್ರಮಗಳನ್ನು ಕೈಗೊಂಡಿದೆ ಎಂದು ಅಮೆರಿಕ ಸರ್ಕಾರ ನಂಬಿರುವುದರಿಂದ ಅಮೆರಿಕ ಕ್ಯೂಬಾದ ಮೇಲೆ ನಿರ್ಬಂಧಗಳನ್ನು ವಿಧಿಸಿದೆ. ಸ್ವಿಟ್ಜರ್‌ಲ್ಯಾಂಡ್‌ನಲ್ಲಿ ನಡೆದ ಎರಡು ದಿನಗಳ ಶಾಂತಿ ಮಾತುಕತೆಗಳ ಕುರಿತು ವಿವರವಾದ ಮಾಹಿತಿಯನ್ನು ಒದಗಿಸಿರುವುದಾಗಿ ಇರಾನ್ ಹೇಳಿದೆ. ಒಪ್ಪಂದಕ್ಕೆ ಸಂಬಂಧಿಸಿದ ಕೆಲವು ಸಂಕೀರ್ಣ ವಿಷಯಗಳನ್ನು ಚರ್ಚಿಸಲಾಗಿದೆ. ಅವುಗಳನ್ನು ಜಾರಿಗೆ ತಂದ ನಂತರ ಹೆಚ್ಚಿನ ಮಾತುಕತೆಗಳು ಪ್ರಾರಂಭವಾಗಬಹುದು ಎಂದು ಇರಾನ್ ಹೇಳಿದೆ.

ಇರಾನ್ ವಿದೇಶಾಂಗ ಸಚಿವಾಲಯದ ವಕ್ತಾರ ಎಸ್ಮಾಯಿಲ್ ಬಘೈ ಎಕ್ಸ್‌ನಲ್ಲಿ ಪೋಸ್ಟ್‌ನಲ್ಲಿ, ಲೆಬನಾನ್‌ನಲ್ಲಿ ಯುದ್ಧವನ್ನು ನಿಲ್ಲಿಸುವುದು, ಇರಾನ್‌ನ ಫ್ರೀಜ್ ಮಾಡಿರುವ ಸ್ವತ್ತುಗಳನ್ನು ಬಿಡುಗಡೆ ಮಾಡುವುದು ಮತ್ತು ಇರಾನಿನ ತೈಲವನ್ನು ರಫ್ತು ಮಾಡುವ ವಿಷಯಗಳ ಬಗ್ಗೆ ಅಮೆರಿಕ ಮತ್ತು ಇರಾನ್ ನಿರ್ದಿಷ್ಟವಾಗಿ ಚರ್ಚಿಸಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಬ್ಬನ್‌ ಪಾರ್ಕ್‌ ನಿಲ್ದಾಣದಲ್ಲಿ ಕೆಟ್ಟುನಿಂತ ಮೆಟ್ರೋ ರೈಲು; ಇಂದಿರಾನಗರ - ಮೆಜೆಸ್ಟಿಕ್ ನಡುವೆ ಸಂಚಾರ ಸ್ಥಗಿತ!

ಅಮೆರಿಕ- ಇರಾನ್ ಶಾಂತಿ ಒಪ್ಪಂದ: ಜೂನ್ 17 ರಿಂದ ಹಾರ್ಮುಜ್ ಜಲಸಂಧಿ ದಾಟಿದ ಭಾರತದ 11 ಹಡಗುಗಳು! ಇನ್ನೂ ಎಷ್ಟಿವೆ ಗೊತ್ತಾ?

ಬೆಂಗಳೂರು ಮೂಲದ CRED ನಲ್ಲಿ Meta ಹೂಡಿಕೆ: ವಾಟ್ಸಾಪ್ ನ ಜಾಗತಿಕ ಮುಖ್ಯಸ್ಥರಾಗಿ ಶಾ ನೇಮಕಕ್ಕೆ ಕಾರಣಗಳೇನು?PhonePe, GooglePayಗೆ ಬೀಳುತ್ತಾ ಹೊಡೆತ?

ಮುಖ್ಯಮಂತ್ರಿ ಸಿ. ವಿಜಯ್ ಹುಟ್ಟುಹಬ್ಬ: ಎಲ್ಲಾ ವದಂತಿಗಳಿಗೆ ತೆರೆ ಎಳೆದ ಆಪ್ತ ಗೆಳತಿ ತ್ರಿಶಾ ಕೃಷ್ಣನ್!

ಉದ್ಧವ್ ಸೇನೆ ತೊರೆದು ಶಿಂಧೆ ಸೇನೆ ಸೇರಿದ ಬಂಡಾಯ ಸಂಸದರಿಗೆ ಬಂಪರ್ ಗಿಫ್ಟ್; ಅಭಿವೃದ್ಧಿ ಹಣ ಬಿಡುಗಡೆ