ಅಜಿತ್ ಧೋವಲ್ 
ವಿದೇಶ

ಮಧ್ಯಪ್ರಾಚ್ಯ ಸಂಘರ್ಷ: Hormuz ಜಲಸಂಧಿ ಕುರಿತು Ajit Doval ಪ್ರತಿಕ್ರಿಯೆ, ಹೇಳಿದ್ದೇನು?

ದೆಹಲಿಯಲ್ಲಿ ನಡೆದ ಮಹತ್ವದ ಬ್ರಿಕ್ಸ್ ರಾಷ್ಟ್ರಗಳ ರಾಷ್ಟ್ರೀಯ ಭದ್ರತಾ ಸಲಹೆಗಾರರ ಸಮಾವೇಶದಲ್ಲಿ ತಮ್ಮ ಸಹವರ್ತಿಗಳನ್ನು ಸ್ವಾಗತಿಸಿದ ಅಜಿತ್ ಧೋವಲ್ 'ಹಾರ್ಮುಜ್ ಜಲಸಂಧಿ ತೆರೆಯುವುದು ಸ್ವಾಗತಾರ್ಹ ಕ್ರಮ' ಎಂದು ಹೇಳಿದ್ದಾರೆ.

ನವದೆಹಲಿ: ಇಡೀ ಜಗತ್ತಿನಾದ್ಯಂತ ವ್ಯಾಪಕ ಸುದ್ದಿಗೆ ಗ್ರಾಸವಾಗಿರುವ ಮಧ್ಯಪ್ರಾಚ್ಯ ಸಂಘರ್ಷ ಹಾಗೂ ಹಾರ್ಮುಜ್ ಜಲಸಂಧಿ ಕುರಿತು ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಧೋವಲ್ ಪ್ರತಿಕ್ರಿಯೆ ನೀಡಿದ್ದಾರೆ.

ದೆಹಲಿಯಲ್ಲಿ ನಡೆದ ಮಹತ್ವದ ಬ್ರಿಕ್ಸ್ ರಾಷ್ಟ್ರಗಳ ರಾಷ್ಟ್ರೀಯ ಭದ್ರತಾ ಸಲಹೆಗಾರರ ಸಮಾವೇಶದಲ್ಲಿ ತಮ್ಮ ಸಹವರ್ತಿಗಳನ್ನು ಸ್ವಾಗತಿಸಿದ ಅಜಿತ್ ಧೋವಲ್ 'ಹಾರ್ಮುಜ್ ಜಲಸಂಧಿ ತೆರೆಯುವುದು ಸ್ವಾಗತಾರ್ಹ ಕ್ರಮ' ಎಂದು ಹೇಳಿದ್ದಾರೆ.

ಹಾರ್ಮುಜ್ ಜಲಸಂಧಿಯನ್ನು ತೆರೆಯುವ ನಿರ್ಧಾರವು ಇಂಧನ ಭದ್ರತೆಗೆ ನೆರವಾಗಲಿರುವುದರಿಂದ ಅತ್ಯಂತ ಸ್ವಾಗತಾರ್ಹ ಕ್ರಮವಾಗಿದೆ. ಪ್ರಮುಖ ಸಮುದ್ರ ವ್ಯಾಪಾರ ಮಾರ್ಗವಾಗಿರುವ ಹೋರ್ಮುಜ್ ಜಲಸಂಧಿಯಲ್ಲಿ ಮುಕ್ತ ನೌಕಾಯಾನಕ್ಕೆ ಅವಕಾಶ ಕಲ್ಪಿಸುವುದು ಈ ಪ್ರದೇಶದ ರಾಷ್ಟ್ರಗಳಿಗೆ ಮಾತ್ರವಲ್ಲದೆ ಜಾಗತಿಕ ಮಟ್ಟದಲ್ಲಿಯೂ ಪ್ರಯೋಜನಕಾರಿಯಾಗಲಿದೆ ಎಂದು ಧೋವಲ್ ತಿಳಿಸಿದರು.

“ಅಮೆರಿಕ ಮತ್ತು ಇರಾನ್ ನಡುವಿನ ತಿಳುವಳಿಕೆ ಒಪ್ಪಂದವನ್ನು (ಎಂಒಯು) ಭಾರತ ಸ್ವಾಗತಿಸುತ್ತದೆ ಎಂದ ಅವರು, 'ಈ ಒಪ್ಪಂದದ ಬಗ್ಗೆ ನಾವು ಎಚ್ಚರಿಕೆಯ ಆಶಾವಾದ ಹೊಂದಿದ್ದೇವೆ ಮತ್ತು ಇದು ಯಶಸ್ವಿಯಾಗಲಿದೆ ಎಂದು ನಿರೀಕ್ಷಿಸುತ್ತೇವೆ. ಇದು ಇಂಧನ ಭದ್ರತೆಯನ್ನು ಬಲಪಡಿಸಲಿದೆ” ಎಂದರು.

“ಹಾರ್ಮುಜ್ ಜಲಸಂಧಿಯನ್ನು ತೆರೆಯುವುದು ಅತ್ಯಂತ ಸ್ವಾಗತಾರ್ಹ ಬೆಳವಣಿಗೆಯಾಗಿದೆ. ಇದರಿಂದ ಪೂರೈಕೆ ಸರಪಳಿಯಲ್ಲಿರುವ ಅಡಚಣೆಗಳು ನಿವಾರಣೆಯಾಗಲಿದ್ದು, ರಸಗೊಬ್ಬರ ಮತ್ತು ರಾಸಾಯನಿಕಗಳಂತಹ ಕ್ಷೇತ್ರಗಳಲ್ಲಿ ಉಂಟಾಗಿರುವ ಕೊರತೆಯನ್ನು ತಗ್ಗಿಸಲು ಸಹಕಾರಿಯಾಗಲಿದೆ” ಎಂದು ಧೋವಲ್ ಅವರು ಹೇಳಿದರು.

ಧೋವಲ್ ಅವರು ವಿವಿಧ ಭೌಗೋಳಿಕ ಪ್ರದೇಶಗಳಲ್ಲಿ ಕಂಡುಬರುತ್ತಿರುವ ಭೌರಾಜಕೀಯ ಉದ್ವಿಗ್ನತೆಗಳು ಮತ್ತು ಅವು ವಿವಿಧ ದೇಶಗಳ ಮೇಲೆ ಬೀರುತ್ತಿರುವ ಪರಿಣಾಮಗಳ ಬಗ್ಗೆಯೂ ತಮ್ಮ ಭಾಷಣದಲ್ಲಿ ಪ್ರಸ್ತಾಪಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

NEET ವಿದ್ಯಾರ್ಥಿಗಳಿಗೆ ಪರೀಕ್ಷೆ ತಪ್ಪಲು ಕಾಂಗ್ರೆಸ್ ಕಾರ್ಯಕ್ರಮದ ಟ್ರಾಫಿಕ್ ಕಾರಣ?: Bengaluru police Fact chek ಹೇಳೋದೇನು?

MLC ಚುನಾವಣೆ ಅಡ್ಡ ಮತದಾನ: ಪಕ್ಷ ದ್ರೋಹಿಗಳ ವಿರುದ್ಧ ಈಗಾಗಲೇ ಕ್ರಮ ಆರಂಭಿಸಲಾಗಿದೆ: ಆರ್ ಅಶೋಕ್

ಅಪ್ರಾಪ್ತ ವಿದ್ಯಾರ್ಥಿಗಳ ಜೊತೆ ಸೆಕ್ಸ್‌; ಪ್ರೌಢಶಾಲಾ ಶಿಕ್ಷಕಿ ಬಂಧನ!

'ಗಂಡನಿಗಾಗಿ ಹೆಂಡತಿಯ ಹುಡುಕಾಟ': ತಮಿಳುನಾಡು ವಿಧಾನಸಭೆಯಲ್ಲಿ CM ವಿಜಯ್ ಖಾಸಗಿ ಜೀವನ ಕೆದಕಿದ ಉದಯನಿಧಿ ಸ್ಟಾಲಿನ್!

ಬೆಂಗಳೂರು: ಕುಡಿಯೋದೆ ಖಯಾಲಿ ಎಂದಿದ್ದಕ್ಕೆ ಹೆತ್ತ ತಾಯಿಯನ್ನೇ ಬಡಿದು ಕೊಂದ ಮಗಳು, ಮೊಮ್ಮಗ!