ಸಂಗ್ರಹ ಚಿತ್ರ 
ವಿದೇಶ

ಅಮೆರಿಕ-ಇರಾನ್ ಸಂಘರ್ಷಕ್ಕೆ ಬ್ರೇಕ್: ಶಾಂತಿ ಮಾತುಕತೆಗೆ ಉಭಯ ರಾಷ್ಟ್ರಗಳು ಸಮ್ಮತಿ. ಹಾರ್ಮುಜ್‌ನಲ್ಲಿ ಹಡಗು ಸಂಚಾರಕ್ಕೆ ಗ್ರೀನ್ ಸಿಗ್ನಲ್..!

ಕಳೆದ ಕೆಲವು ದಿನಗಳಲ್ಲಿ ಉಭಯ ದೇಶಗಳ ನಡುವೆ ಉದ್ವಿಗ್ನತೆ ತೀವ್ರಗೊಂಡಿತ್ತು. ಹಾರ್ಮುಜ್ ಜಲಸಂಧಿಯಲ್ಲಿ ವಾಣಿಜ್ಯ ಸರಕು ಸಾಗಣೆ ಹಡಗಿನ ಮೇಲೆ ನಡೆದ ದಾಳಿಗೆ ಪ್ರತಿಯಾಗಿ ಅಮೆರಿಕ ಇರಾನ್‌ನ ಗುರಿಗಳ ಮೇಲೆ ದಾಳಿ ನಡೆಸಿತ್ತು.

ವಾಷಿಂಗ್ಟನ್/ಟೆಹ್ರಾನ್: ಹಲವು ದಿನಗಳಿಂದ ತೀವ್ರಗೊಂಡಿದ್ದ ಅಮೆರಿಕ-ಇರಾನ್ ಸಂಘರ್ಷಕ್ಕೆ ಸದ್ಯ ತಾತ್ಕಾಲಿಕ ವಿರಾಮ ಸಿಕ್ಕಿದ್ದು, ಎರಡೂ ರಾಷ್ಟ್ರಗಳು ಸೇನಾ ದಾಳಿಗಳನ್ನು ಸ್ಥಗಿತಗೊಳಿಸಿ ಶಾಂತಿ ಮಾತುಕತೆ ಮುಂದುವರಿಸಲು ಒಪ್ಪಿಗೆ ನೀಡಿವೆ.

ಜೊತೆಗೆ, ಜಾಗತಿಕ ತೈಲ ಸಾಗಣೆಯ ಪ್ರಮುಖ ಮಾರ್ಗವಾದ ಹೋರ್ಮುಜ್ ಜಲಸಂಧಿಯಲ್ಲಿ ವ್ಯಾಪಾರ ಹಡಗುಗಳ ಸಂಚಾರಕ್ಕೆ ಯಾವುದೇ ಅಡ್ಡಿಯಿಲ್ಲದಂತೆ ಕ್ರಮ ಕೈಗೊಳ್ಳಲು ಸಹ ಸಮ್ಮತಿ ವ್ಯಕ್ತಪಡಿಸಿರುವುದು ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಶಮನವಾಗುವ ನಿರೀಕ್ಷೆ ಮೂಡಿಸಿದೆ.

ಎಎಫ್‌ಪಿ (AFP) ವರದಿ ಪ್ರಕಾರ, ಜೂನ್ 17ರಂದು ಮಾಡಿಕೊಂಡಿದ್ದ ತಿಳುವಳಿಕೆ ಒಪ್ಪಂದ (MOU) ಸಂಬಂಧಿಸಿದ ಎಲ್ಲಾ ವಿಷಯಗಳ ಬಗ್ಗೆ ತಾಂತ್ರಿಕ ಮಾತುಕತೆಗಳು ಮುಂದುವರಿಯಲಿವೆ. ಸದ್ಯಕ್ಕೆ ಎರಡೂ ದೇಶಗಳು ಮಿಲಿಟರಿ ದಾಳಿಗಳನ್ನು ನಿಲ್ಲಿಸಲಿದ್ದು, ಹಾರ್ಮುಜ್ ಜಲಸಂಧಿ ಹಾಗೂ ಅದರ ಸುತ್ತಮುತ್ತ ವ್ಯಾಪಾರ ಹಡಗುಗಳ ಸಂಚಾರಕ್ಕೆ ಯಾವುದೇ ಅಡ್ಡಿ ಇರುವುದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆದರೆ, ಮಾತುಕತೆಗಳು ಮಂಗಳವಾರ ಕತಾರ್‌ನ ದೋಹಾದಲ್ಲಿ ಪುನರಾರಂಭವಾಗಲಿವೆ ಎಂಬ ವರದಿಯನ್ನು ಅಮೆರಿಕ ಅಧಿಕೃತವಾಗಿ ದೃಢಪಡಿಸಿಲ್ಲ.

ಕಳೆದ ಕೆಲವು ದಿನಗಳಲ್ಲಿ ಉಭಯ ದೇಶಗಳ ನಡುವೆ ಉದ್ವಿಗ್ನತೆ ತೀವ್ರಗೊಂಡಿತ್ತು. ಹಾರ್ಮುಜ್ ಜಲಸಂಧಿಯಲ್ಲಿ ವಾಣಿಜ್ಯ ಸರಕು ಸಾಗಣೆ ಹಡಗಿನ ಮೇಲೆ ನಡೆದ ದಾಳಿಗೆ ಪ್ರತಿಯಾಗಿ ಅಮೆರಿಕ ಇರಾನ್‌ನ ಗುರಿಗಳ ಮೇಲೆ ದಾಳಿ ನಡೆಸಿತ್ತು. ಇದಕ್ಕೆ ಪ್ರತಿಯಾಗಿ ಇರಾನ್ ಬಹ್ರೈನ್ ಮತ್ತು ಕುವೈತ್‌ನಲ್ಲಿರುವ ಅಮೆರಿಕದ ಸೇನಾ ನೆಲೆಗಳ ಮೇಲೆ ಕ್ಷಿಪಣಿ ಮತ್ತು ಡ್ರೋನ್ ದಾಳಿಗಳನ್ನು ನಡೆಸಿತ್ತು.

ಇದೀಗ ಎರಡೂ ದೇಶಗಳು ಉದ್ವಿಗ್ನತೆ ತಗ್ಗಿಸಲು ಪ್ರಯತ್ನಿಸುತ್ತಿದ್ದು, ಈ ವಾರ ಕತಾರ್‌ನ ದೋಹಾದಲ್ಲಿ ಅಮೆರಿಕ ಹಾಗೂ ಇರಾನ್ ಪ್ರತಿನಿಧಿಗಳು ಮಾತುಕತೆ ನಡೆಸುವ ಸಾಧ್ಯತೆ ಇದೆ ಎಂದು ಆಕ್ಸಿಯೊಸ್ (Axios) ವರದಿ ಮಾಡಿದೆ.

ಮಾತುಕತೆಯಲ್ಲಿ ಮುಖ್ಯವಾಗಿ ಹಾರ್ಮುಜ್ ಜಲಸಂಧಿಯ ಭದ್ರತೆ, ವಾಣಿಜ್ಯ ಹಡಗುಗಳ ಸುರಕ್ಷಿತ ಸಂಚಾರ ಹಾಗೂ ಅಂತರರಾಷ್ಟ್ರೀಯ ನೌಕಾಯಾನಕ್ಕೆ ಅಡ್ಡಿಯಾಗದಂತೆ ಕ್ರಮ ಕೈಗೊಳ್ಳುವ ವಿಚಾರಗಳ ಕುರಿತು ಚರ್ಚೆ ನಡೆಯಲಿದೆ.

ವಿಶ್ವದ ಅತ್ಯಂತ ಪ್ರಮುಖ ತೈಲ ಸಾಗಣೆ ಮಾರ್ಗಗಳಲ್ಲಿ ಒಂದಾಗಿರುವ ಹಾರ್ಮುಜ್ ಜಲಸಂಧಿಯಲ್ಲಿ ಮತ್ತಷ್ಟು ಉದ್ವಿಗ್ನತೆ ಉಂಟಾಗದಂತೆ ನೋಡಿಕೊಳ್ಳುವುದು ಎರಡೂ ರಾಷ್ಟ್ರಗಳ ಪ್ರಮುಖ ಉದ್ದೇಶವಾಗಿದೆ.

ಜೂನ್ 17ರ ಒಪ್ಪಂದವನ್ನು ಪರಸ್ಪರ ಉಲ್ಲಂಘಿಸಲಾಗಿದೆ ಎಂದು ಆರೋಪಿಸಿಕೊಂಡಿದ್ದ ಅಮೆರಿಕ ಮತ್ತು ಇರಾನ್, ಇದೀಗ ದಾಳಿಗಳನ್ನು ತಾತ್ಕಾಲಿಕವಾಗಿ ನಿಲ್ಲಿಸಿ ಮಾತುಕತೆಗೆ ಮುಂದಾಗಿರುವುದು ರಾಜತಾಂತ್ರಿಕ ಪರಿಹಾರದತ್ತ ಮಹತ್ವದ ಹೆಜ್ಜೆಯಾಗಿ ಪರಿಗಣಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್ ಯುದ್ಧದಲ್ಲಿ ಅನಿರೀಕ್ಷಿತ ಗೆಲುವು ಕಂಡ ಕ್ಯಾಲಿಫೋರ್ನಿಯಾದ ಪಿಸ್ತಾಶಿಯೊ ಕಿಂಗ್ಸ್! (ಜಾಗತಿಕ ಜಗಲಿ)

ರಾಮ ಮಂದಿರ ದೇಣಿಗೆ ವಿವಾದ: ಅಂಬಾನಿ ನೀಡಿದ ದೇಣಿಗೆ ಹಣ ಎಲ್ಲಿ..? ಗಜ್ನಿ ನಂತರ ದೇವಾಲಯ ಲೂಟಿ ಮಾಡಿದ್ದು BJP-RSS; ಬಿ.ಕೆ.ಹರಿಪ್ರಸಾದ್ ವಾಗ್ದಾಳಿ

2028ರಲ್ಲೂ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ; 2029ರಲ್ಲಿ ಕೇಂದ್ರದಲ್ಲೂ ನಮ್ಮದೇ ಸರ್ಕಾರ: ಡಿ.ಕೆ. ಶಿವಕುಮಾರ್

Bidadi township ವಿವಾದ: CM ಜತೆ ಚರ್ಚೆಗೆ ಈಗಲೂ ಸಿದ್ಧ; ರೈತರ ನಿರ್ಲಕ್ಷಿಸಿದರೆ ಕಾನೂನು ಹೋರಾಟ- ಸರ್ಕಾರಕ್ಕೆ HDKಗೆ ವಾರ್ನಿಂಗ್

SIR ಪ್ರಕ್ರಿಯೆಯನ್ನು 2ನೇ ಸ್ವಾತಂತ್ರ್ಯ ಹೋರಾಟವೆಂದು ಪರಿಗಣಿಸಿ, ಮತದಾರರ ಹಕ್ಕು ಉಳಿಸಲು ಹೋರಾಟ ನಡೆಸಿ: ಕಾಂಗ್ರೆಸ್ ಕಾರ್ಯಕರ್ತರಿಗೆ ಬಿ.ಕೆ. ಹರಿಪ್ರಸಾದ್ ಕರೆ