ರಕ್ಷಣಾ ಸಿಬ್ಬಂದಿ ಮೃತದೇಹವೊಂದನ್ನು ಸಾಗಿಸುತ್ತಿರುವ ಚಿತ್ರ 
ವಿದೇಶ

ಇರಾನ್ ಪ್ರತೀಕಾರ: ಇಸ್ರೇಲ್‌ನ ಬೀಟ್ ಶೆಮೆಶ್ ನಲ್ಲಿ ಕ್ಷಿಪಣಿ ದಾಳಿ, 8 ಮಂದಿ ಹತ್ಯೆ!

ಜೆರುಸಲೆಂನಿಂದ ಸುಮಾರು 35 ಕಿ.ಮೀ. ದೂರದಲ್ಲಿರುವ ಬೀಟ್ ಶೆಮೆಶ್‌ನಲ್ಲಿರುವ ವಸತಿ ಕಟ್ಟಡದ ಮೇಲೆ ನಡೆಸಿದ ನೇರ ಕ್ಷಿಪಣಿ ದಾಳಿಯಲ್ಲಿ ಎಂಟು ಜನರು ಸಾವನ್ನಪ್ಪಿದ್ದಾರೆ ಎಂದು ರಕ್ಷಣಾ ಸೇವೆಗಳು ಭಾನುವಾರ ತಿಳಿಸಿವೆ.

ಜೆರುಸಲೆಂ: ಮಧ್ಯ ಪ್ರಾಚ್ಯ ಭೀಕರ ಯುದ್ಧದಿಂದ ತತ್ತರಿಸಿದೆ. ಸರ್ವೋಚ್ಚ ನಾಯಕ ಅಯಾತೊಲ್ಲಾ ಅಲಿ ಖಮೇನಿ ಹತ್ಯೆಯಿಂದ ಪ್ರತೀಕಾರದ ಜ್ವಾಲೆಯಲ್ಲಿ ಬೇಯುತ್ತಿರುವ ಇರಾನ್, ಇಸ್ರೇಲ್ ನ ಬೀಟ್ ಶೆಮೆಶ್ ನಲ್ಲಿ ಕ್ಷಿಪಣಿ ದಾಳಿ ನಡೆಸಿದೆ.

ಜೆರುಸಲೆಂನಿಂದ ಸುಮಾರು 35 ಕಿ.ಮೀ. ದೂರದಲ್ಲಿರುವ ಬೀಟ್ ಶೆಮೆಶ್‌ನಲ್ಲಿರುವ ವಸತಿ ಕಟ್ಟಡದ ಮೇಲೆ ನಡೆಸಿದ ನೇರ ಕ್ಷಿಪಣಿ ದಾಳಿಯಲ್ಲಿ ಎಂಟು ಜನರು ಸಾವನ್ನಪ್ಪಿದ್ದಾರೆ ಎಂದು ರಕ್ಷಣಾ ಸೇವೆಗಳು ಭಾನುವಾರ ತಿಳಿಸಿವೆ.

ಇದರೊಂದಿಗೆ ಶನಿವಾರದಿಂದ ಇರಾನ್ ನಡೆಸಿದ ಗುಂಡಿನ ದಾಳಿಯಲ್ಲಿ ಇಸ್ರೇಲ್‌ನಲ್ಲಿ ಹತ್ಯೆಯಾದವರ ಸಂಖ್ಯೆ ಒಂಬತ್ತಕ್ಕೆ ಏರಿಕೆಯಾಗಿದೆ.

ಇರಾನ್ ಕ್ಷಿಪಣಿಯು ನಗರದ ವಸತಿ ಪ್ರದೇಶಕ್ಕೆ ಅಪ್ಪಳಿಸಿದ್ದು, ಬಾಂಬ್ ನಿಂದ ರಕ್ಷಣೆ ಪಡೆಯಲು ಸಾರ್ವಜನಿಕರಿಗಾಗಿ ಮಾಡಲಾದ ಶೆಲ್ಟರ್ ಮತ್ತು ಸುತ್ತಮುತ್ತಲಿನ ಮನೆಗಳಿಗೆ ವ್ಯಾಪಕ ಹಾನಿಯನ್ನುಂಟುಮಾಡಿದೆ. ಯುವತಿ ಸೇರಿದಂತೆ ಇತರ ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ರಕ್ಷಣಾ ಸೇವೆಗಳು ತಿಳಿಸಿವೆ.

ಘಟನಾ ಸ್ಥಳದಲ್ಲಿದ್ದ 20 ಜನರಿಗೆ ಅಲ್ಪ ಪ್ರಮಾಣದ ಗಾಯಗಳಾಗಿವೆ. ನಾಲ್ಕು ವರ್ಷದ ಬಾಲಕನೊಬ್ಬ ಗಾಯಗೊಂಡಿದ್ದಾನೆ ಎಂದು ಇಸ್ರೇಲ್‌ನ ಮ್ಯಾಗೆನ್ ಡೇವಿಡ್ ಆಡಮ್ ತುರ್ತು ಸೇವೆ ತಿಳಿಸಿದೆ. ಅಗ್ನಿಶಾಮಕ ದಳದವರು ಸ್ಥಳದಲ್ಲಿದ್ದು, ಅವಶೇಷಗಳಡಿ ಸಿಲುಕಿರುವವರಿಗಾಗಿ ಶೋಧ ನಡೆಸುತ್ತಿದ್ದಾರೆ. ಕ್ಷಿಪಣಿ ಅಪ್ಪಳಿಸಿದ ಕಟ್ಟಡದ ಸಮೀಪದಲ್ಲಿದ್ದ ಡಜನ್‌ ಗೂ ಹೆಚ್ಚು ಮನೆಗಳಿಗೂ ಹಾನಿಯಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

BRICS 2026: Modi-Putin ಭೇಟಿ; ಆಪ್ತ ಮಿತ್ರನಿಗೆ ಪ್ರಧಾನಿಯಿಂದ ಪವಿತ್ರ, ವಿಶೇಷ ಉಡುಗೊರೆ! Video

ದೇವಸ್ಥಾನದಲ್ಲಿ ಮೀನು ತಿಂದ ಸುವೇಂದು ಅಧಿಕಾರಿ: ಬಾಗೇಶ್ವರ್ ಬಾಬಾಗೆ ತಿರುಗೇಟು; CM ಮಾಂಸಾಹಾರ ಸೇವನೆ ಬಗ್ಗೆ ಬಿಜೆಪಿ ಹೇಳಿದ್ದೇನು? Video

ಕೊನೆಗೂ ಜೈಲಿನಲ್ಲಿ ಪ್ರಜ್ವಲ್‌ ರೇವಣ್ಣ ಬಳಸಿದ್ದ ಮೊಬೈಲ್‌ ಜಾಲ ಪತ್ತೆ: ಮೂವರು ಸಿಬ್ಬಂದಿ ಸೇರಿ 9 ಮಂದಿ ಬಂಧನ

ರಾಜತಾಂತ್ರಿಕತೆ: ಮೂರು ದಿನಗಳಲ್ಲಿ 15 ದ್ವಿಪಕ್ಷೀಯ ಸಭೆಗಳು; ಕ್ಸಿ ಜಿನ್ ಪಿಂಗ್, ವ್ಲಾಡಿಮಿರ್ ಪುಟಿನ್, ಪೆಜೆಶ್ಕಿಯಾನ್ ಮಾತುಕತೆ

KPSC ಹಗರಣ: ಗರ್ಲ್‌ಫ್ರೆಂಡ್‌ಗೆ ಗೋಲ್ಡ್, ಅಣ್ಣನಿಗೆ ವಿಲ್ಲಾ; ಅಭ್ಯರ್ಥಿಗಳ ಲಂಚದ ಹಣದಲ್ಲಿ IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ಕಾರುಬಾರು!