ತೈಲ ಟ್ಯಾಂಕರ್ ಮೇಲೆ ದಾಳಿ, ಭಾರತ ಮೂಲದ ಸಿಬ್ಬಂದಿ ಸಾವು 
ವಿದೇಶ

Oman ಕರಾವಳಿಯಲ್ಲಿ ತೈಲ ಟ್ಯಾಂಕರ್ ಮೇಲೆ Drone ದಾಳಿ; ಭಾರತ ಮೂಲದ ಸಿಬ್ಬಂದಿ ಸಾವು! Video

ತೈಲ ಟ್ಯಾಂಕರ್‌ ಮೇಲಿನ ದಾಳಿಯ ಬಗ್ಗೆ ಒಮನ್‌ನಿಂದ ಮಾಹಿತಿ ಲಭ್ಯವಾಗಿದ್ದು, ಸುಲ್ತಾನ್ ಕಬೂಸ್ ಬಂದರು ಬಳಿ ತೈಲ ಟ್ಯಾಂಕರ್ ಮೇಲೆ ಇರಾನ್ ದಾಳಿ ನಡೆಸಿದೆ.

ನವದೆಹಲಿ: ಇಸ್ರೇಲ್‌-ಅಮೆರಿಕದ ಜಂಟಿ ದಾಳಿಗೆ ಇರಾನ್‌ನಿಂದ ಪ್ರತಿಕಾರದ ದಾಳಿ ನಡೆದಿದ್ದು, ಒಮನ್‌ನಲ್ಲಿ ತೈಲ ಟ್ಯಾಂಕರ್‌ ಮೇಲೆ ನಡೆದ ದಾಳಿಯಲ್ಲಿ ಓರ್ವ ಭಾರತೀಯ ಸಿಬ್ಬಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ತೈಲ ಟ್ಯಾಂಕರ್‌ ಮೇಲಿನ ದಾಳಿಯ ಬಗ್ಗೆ ಒಮನ್‌ನಿಂದ ಮಾಹಿತಿ ಲಭ್ಯವಾಗಿದ್ದು, ಸುಲ್ತಾನ್ ಕಬೂಸ್ ಬಂದರು ಬಳಿ ತೈಲ ಟ್ಯಾಂಕರ್ ಮೇಲೆ ಇರಾನ್ ದಾಳಿ ನಡೆಸಿದೆ. ಇದರಲ್ಲಿ ಭಾರತೀಯ ಮೃತಪಟ್ಟಿರುವ ಬಗ್ಗೆ ಒಮನ್ ದೃಢಪಡಿಸಿದೆ. ಇದರ ವಿಡಿಯೋಗಳು ಕೂಡ ಹರಿದಾಡುತ್ತಿವೆ.

ಅಮೆರಿಕ ಮತ್ತು ಇಸ್ರೇಲ್ ದಾಳಿಗಳಿಗೆ ಪ್ರತಿಯಾಗಿ ಇರಾನ್ ಅಮೆರಿಕ ಸೇನಾ ನೆಲೆಗಳ ಮೇಲೆ ದಾಳಿ ನಡೆಸುತ್ತಿದ್ದು, ಅದರಂತೆ ಒಮನ್ ಮೇಲೂ ಇರಾನ್ ದಾಳಿ ನಡೆಸಿದೆ. ಒಮನ್ ಕರಾವಳಿಯಲ್ಲಿ ಮಾನವರಹಿತ ಡ್ರೋನ್ ವೊಂದು ಹಡಗು ತೈಲ ಟ್ಯಾಂಕರ್‌ಗೆ ಅಪ್ಪಳಿಸಿದ ಪರಿಣಾಮವಾಗಿ ಸಂಭವಿಸಿದ ಸ್ಫೋಟದಲ್ಲಿ ಭಾರತೀಯ ಸಿಬ್ಬಂದಿಯೊಬ್ಬರು ಸಾವನ್ನಪ್ಪಿದ್ದಾರೆ.

ಈ ಮೂಲಕ ಇರಾನ್- ಇಸ್ರೇಲ್ ನಡುವಿನ ಯುದ್ಧದಲ್ಲಿ ಮೊದಲ ಭಾರತೀಯನ ಸಾವಾಗಿದೆ. ಈ ದಾಳಿಯಿಂದಾಗಿ ಬೆಂಕಿ ಕಾಣಿಸಿಕೊಂಡು ಹಡಗಿನಲ್ಲಿದ್ದ ಎಲ್ಲಾ ಸಿಬ್ಬಂದಿಯನ್ನು ಸ್ಥಳಾಂತರಿಸಬೇಕಾಯಿತು. ಆದರೆ, ಈ ದುರಂತದಲ್ಲಿ ಓರ್ವ ಭಾರತೀಯ ಮೃತಪಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸೋಮವಾರ ಓಮನ್ ಕೊಲ್ಲಿಯಲ್ಲಿ ಮಾರ್ಷಲ್ ದ್ವೀಪಗಳ ಧ್ವಜ ಹೊತ್ತ ತೈಲ ಟ್ಯಾಂಕರ್‌ಗೆ ಬಾಂಬ್ ತುಂಬಿದ ಡ್ರೋನ್ ಡಿಕ್ಕಿ ಹೊಡೆದು ಭಾರತೀಯ ನಾವಿಕನೊಬ್ಬ ಸಾವನ್ನಪ್ಪಿದ್ದಾನೆ ಎಂದು ಓಮನ್ ಅಧಿಕಾರಿಗಳನ್ನು ಉಲ್ಲೇಖಿಸಿ ಮಾಧ್ಯಮ ವರದಿಗಳು ತಿಳಿಸಿವೆ.

ಮಸ್ಕತ್ ಬಳಿ ಈ ದಾಳಿ ನಡೆದಿದ್ದು, MKD VYOM ಎಂದು ಗುರುತಿಸಲಾದ ಹಡಗು ದಾಳಿಯಲ್ಲಿ ಹಾನಿಗೊಳಗಾಗಿದೆ. ಮೃತ ಸಿಬ್ಬಂದಿ ಭಾರತೀಯ ಪ್ರಜೆ ಎಂದು ಅಧಿಕಾರಿಗಳು ದೃಢಪಡಿಸಿದ್ದು, ಕಾರ್ಯನಿರತ ಪ್ರಾದೇಶಿಕ ಹಡಗು ಕಾರಿಡಾರ್‌ನಲ್ಲಿ ಸಮುದ್ರ ಭದ್ರತೆಯ ಬಗ್ಗೆ ಹೊಸ ಕಳವಳಗಳನ್ನು ಹುಟ್ಟುಹಾಕಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪಶ್ಚಿಮ ಏಷ್ಯಾದ ಉದ್ವಿಗ್ನತೆ ನಡುವೆ ಮೋದಿ- ಪೆಜೆಶ್ಕಿಯನ್ ಮಾತುಕತೆ: ದೀರ್ಘಕಾಲೀನ, ಪರಸ್ಪರ ಲಾಭದಾಯಕ ಕಾರ್ಯತಂತ್ರಕ್ಕೆ ಒತ್ತು

ಲೋಕೋಪಯೋಗಿ ಇಲಾಖೆಯಲ್ಲಿ 'ಲಂಚ'; ವಿದೇಶಿ ಷೇರು ಹೂಡಿಕೆ ಇತ್ಯಾದಿ; ಸತೀಶ್ ಜಾರಕಿಹೊಳಿ ಮನೆಯಲ್ಲಿ ಸಿಕ್ಕಿದ್ದೇನು? EDಯಿಂದ ಅಧಿಕೃತ ಹೇಳಿಕೆ

ಬದರಿನಾಥದ 'ತಪ್ತ ಕುಂಡ'ದಲ್ಲಿ 108 ಬಾರಿ ಧಾರ್ಮಿಕ ಸ್ನಾನ: ರಾಜಸ್ಥಾನದ ಇಬ್ಬರು ವೃದ್ಧೆಯರು ಸಾವು!

BRICS 2026: ಪುಟಿನ್-ಮೋದಿ ಮಾತುಕತೆ: ಕಪ್ಪು ಸಮುದ್ರದಲ್ಲಿ ಭಾರತೀಯರ ಸುರಕ್ಷತೆಯ ವಿಷಯ ಪ್ರಸ್ತಾಪ ರಷ್ಯಾ ಅಧ್ಯಕ್ಷ ಹೇಳಿದ್ದೇನು?

ಬ್ರಿಕ್ಸ್ ಶೃಂಗಸಭೆ: ಭಾರಿ ಭದ್ರತೆ, ಐಷಾರಾಮಿ ವಿಮಾನದಲ್ಲಿ ನವದೆಹಲಿಗೆ ಆಗಮಿಸಿದ ಪುಟಿನ್! "ಡೂಮ್ಸ್ ಡೇ' ವಿಶೇಷತೆ ಏನು ಗೊತ್ತಾ? Video