ಅಸೀಮ್ ಮುನೀರ್ ಮತ್ತು ರಕ್ಷಣಾ ಸಚಿವ ಖಾಲಿದ್ ಬಿನ್ ಸಲ್ಮಾನ್  
ವಿದೇಶ

ಇರಾನ್ ಯುದ್ಧದ ನಡುವೆಯೇ ಸೌದಿ ರಕ್ಷಣಾ ಸಚಿವರನ್ನು ಭೇಟಿಯಾದ ಪಾಕ್ CDF ಮುನೀರ್! ಕಾರಣವೇನು?

ಇಸ್ಲಾಮಾಬಾದ್ ಮತ್ತು ರಿಯಾದ್ ನಡುವೆ ಕಳೆದ ವರ್ಷ ಪರಸ್ಪರ ರಕ್ಷಣಾ ಒಪ್ಪಂದಕ್ಕೆ ಸಹಿ ಹಾಕಲಾಗಿತ್ತು. ಮೂರನೇ ರಾಷ್ಟ್ರದ ದಾಳಿಯ ಸಂದರ್ಭದಲ್ಲಿ ದೇಶಗಳು ಪರಸ್ಪರರ ರಕ್ಷಣೆಗೆ ಬರುವ ಒಪ್ಪಂದ ಇದಾಗಿದೆ.

ಇಸ್ಲಾಮಾಬಾದ್: ಪಶ್ಚಿಮ ಏಷ್ಯಾದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆ, ಪಾಕಿಸ್ತಾನದ ರಕ್ಷಣಾ ಪಡೆಗಳ ಮುಖ್ಯಸ್ಥ (CDF) ಫೀಲ್ಡ್ ಮಾರ್ಷಲ್ ಸೈಯದ್ ಅಸಿಮ್ ಮುನೀರ್ ಸೌದಿ ಅರೇಬಿಯಾದ ರಕ್ಷಣಾ ಸಚಿವ ಪ್ರಿನ್ಸ್ ಖಾಲಿದ್ ಬಿನ್ ಸಲ್ಮಾನ್ ಅವರನ್ನು ಭೇಟಿಯಾಗಿ ಭದ್ರತಾ ಪರಿಸ್ಥಿತಿ ಕುರಿತು ಚರ್ಚಿಸಿದ್ದಾರೆ.

ಇಸ್ಲಾಮಾಬಾದ್ ಮತ್ತು ರಿಯಾದ್ ನಡುವೆ ಕಳೆದ ವರ್ಷ ಪರಸ್ಪರ ರಕ್ಷಣಾ ಒಪ್ಪಂದಕ್ಕೆ ಸಹಿ ಹಾಕಲಾಗಿತ್ತು. ಮೂರನೇ ರಾಷ್ಟ್ರದ ದಾಳಿಯ ಸಂದರ್ಭದಲ್ಲಿ ದೇಶಗಳು ಪರಸ್ಪರರ ರಕ್ಷಣೆಗೆ ಬರುವ ಒಪ್ಪಂದ ಇದಾಗಿದೆ. ಇದೀಗ ಇರಾನ್‌ನಿಂದ ಸೌದಿ ಅರೇಬಿಯಾ ದಾಳಿಗೆ ಒಳಗಾಗಿದೆ.

ಫೆಬ್ರವರಿ 26 ರಂದು ಅಫ್ಘಾನಿಸ್ತಾನದ ತಾಲಿಬಾನ್ ಪಾಕಿಸ್ತಾನದ ಮೇಲೆ ದಾಳಿ ಮಾಡಿದ ನಂತರ ರಕ್ಷಣಾ ಒಪ್ಪಂದ ತನ್ನ ಮೊದಲ ಪರೀಕ್ಷೆಯನ್ನು ಎದುರಿಸಿತು. ಇದನ್ನು ಉಭಯ ರಾಷ್ಟ್ರಗಳ ಓಪನ್ ವಾರ್ ಎಂದು ಪಾಕಿಸ್ತಾನದ ರಕ್ಷಣಾ ಸಚಿವ ಖವಾಜಾ ಆಸಿಫ್ ಕರೆದಿದ್ದರು.

ಆದರೆ ಈಗ ಯುಎಸ್ ಮತ್ತು ಇಸ್ರೇಲ್ ಜಂಟಿ ದಾಳಿಯ ನಂತರ ಇರಾನ್ ಡ್ರೋನ್ ಮತ್ತು ಕ್ಷಿಪಣಿಗಳನ್ನು ಉಡಾಯಿಸಿದೆ ಎಂದು ವರದಿಯಾಗಿದೆ. ಇರಾನ್‌ನೊಂದಿಗೆ ಔಪಚಾರಿಕ ಯುದ್ಧ ಪ್ರಾರಂಭವಾದರೆ ಸೌದಿ ಅರೇಬಿಯಾದ ರಕ್ಷಣೆಗೆ ಪಾಕಿಸ್ತಾನ ನಿಲ್ಲುತ್ತದೆಯೇ ಎಂಬ ಪ್ರಶ್ನೆ ಉದ್ಬವವಾಗಿದೆ.

ಸಿಡಿಎಫ್ ಮುನೀರ್ ಜೊತೆಗಿನ ಸಭೆಯಲ್ಲಿ ದಾಳಿಯನ್ನು ನಿಲ್ಲಿಸುವ ಮಾರ್ಗಗಳ ಮೇಲೆ ಚರ್ಚೆ ನಡೆಸಲಾಗಿದೆ. ಪ್ರದೇಶದ ಭದ್ರತೆ ಮತ್ತು ಸ್ಥಿರತೆಗೆ ಸೇವೆ ಸಲ್ಲಿಸಬೇಡಿ. ಇರಾನು ತಪ್ಪು ಲೆಕ್ಕಾಚಾರಗಳಿಂದ" ದೂರವಿರುತ್ತದೆ ಎಂಬ ಭರವಸೆ ಇದೆ ಎಂದು ಮುನೀರ್ ಹೇಳಿರುವುದಾಗಿ ಪ್ರಿನ್ಸ್ ಖಾಲಿದ್ ಬಿನ್ ಸಲ್ಮಾನ್ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

ಸಿಡಿಎಫ್ ಮುನೀರ್ ಸೌದಿ ಅರೇಬಿಯಾ ಭೇಟಿ ಕುರಿತು ಪಾಕಿಸ್ತಾನ ಇದುವರೆಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್-ಅಮೆರಿಕವನ್ನ ಕ್ಷಮಿಸೋ ಮಾತೇ ಇಲ್ಲ.. ಆದರೆ...': ನೆರೆಹೊರೆ ರಾಷ್ಟ್ರಗಳ ಕ್ಷಮೆ ಕೋರಿದ Iran

'ಅದು ಮಾನವೀಯ ಕೆಲಸ.. ನಾವು ಸರಿಯಾದ್ದನ್ನೇ ಮಾಡಿದ್ದೆವು': Iran ನೌಕೆಗೆ ಪ್ರವೇಶ ನೀಡಿದ ಕುರಿತು EAM Jaishankar ಹೇಳಿಕೆ!

ಬಂಗಾಳದ ನೂತನ ರಾಜ್ಯಪಾಲ ಆರ್.ಎನ್.ರವಿ 'ಬಿಜೆಪಿ ಕೇಡರ್, ಆದ್ರೆ ಇದು ಕಠಿಣ ಅಖಾಡ': ಮಮತಾ

ರಾಹುಲ್ ಗಾಂಧಿ ರಾಜಕೀಯಕ್ಕೆ ಬರದಿದ್ದರೆ ಏನು ಮಾಡುತ್ತಿದ್ದರು ಗೊತ್ತಾ? ಇಲ್ಲಿದೆ ಅಚ್ಚರಿಯ ಉತ್ತರ

ಯುಪಿ ಉಪಮುಖ್ಯಮಂತ್ರಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಲಖನೌದಲ್ಲಿ ತುರ್ತು ಭೂಸ್ಪರ್ಶ

SCROLL FOR NEXT