ಇರಾನ್-ಇಸ್ರೇಲ್-ಅಮೆರಿಕಾ ಯುದ್ಧ 
ವಿದೇಶ

US-Iran conflict: ತೈಲ ಸಾಗಣೆ ನಿಂತರೆ ಇದುವರೆಗೆ ನಡೆಸಿದ್ದಕ್ಕಿಂತ 20 ಪಟ್ಟು ಹೆಚ್ಚು ದಾಳಿ: ಇರಾನ್‌ಗೆ ಟ್ರಂಪ್ ಕಠಿಣ ಎಚ್ಚರಿಕೆ

ಹಾರ್ಮುಜ್ ಸಮುದ್ರ ಮಾರ್ಗವು ಜಾಗತಿಕ ತೈಲ ಸಾಗಣೆಗೆ ಅತ್ಯಂತ ಪ್ರಮುಖ ದಾರಿ. ಈ ಮಾರ್ಗವು ಪರ್ಷಿಯನ್ ಗಲ್ಫ್ ಅನ್ನು ಗಲ್ಫ್ ಆಫ್ ಒಮನ್ ಹಾಗೂ ಅರೇಬಿಯನ್ ಸಮುದ್ರದೊಂದಿಗೆ ಸಂಪರ್ಕಿಸುತ್ತದೆ.

ವಾಷಿಂಗ್ಟನ್: ಹಾರ್ಮುಜ್ ಮಾರ್ಗದಲ್ಲಿನ ತೈಲ ಸಾಗಣೆ ತಡೆದರೆ ಇದೂವರೆಗೆ ನಡೆಸಿದ ದಾಳಿಗಿಂತ 20 ಪಟ್ಟು ಹೆಚ್ಚು ದಾಳಿ ನಡೆಸುವುದಾಗಿ ಇರಾನ್'ಗೆ ಅಮೆರಿಕಾ ಅಧ್ಯಕ್ಷ ಕಠಿಣ ಎಚ್ಚರಿಕೆ ನೀಡಿದ್ದಾರೆ.

ಸೋಮವಾರ ತಮ್ಮ ಸಾಮಾಜಿಕ ಜಾಲತಾಣವಾದ Truth Social ನಲ್ಲಿ ಟ್ರಂಪ್ ಅವಪು ಈ ಎಚ್ಚರಿಕೆ ಸಂದೇಶವನ್ನು ನೀಡಿದ್ದಾರೆ.

ತೈಲ ಸಾಗಣೆಯನ್ನು ತಡೆಯಲು ಇರಾನ್ ಯಾವುದೇ ಕ್ರಮ ಕೈಗೊಂಡಪೂ ಅಮೆರಿಕಾ ಅದಕ್ಕೆ ಕಠಿಣ ರೀತಿಯಲ್ಲಿ ಪ್ರತಿಕ್ರಿಯೆ ನೀಡುತ್ತದೆ ಎಂದು ಹೇಳಿದ್ದಾರೆ.

Strait of Hormuz ಸಮುದ್ರ ಮಾರ್ಗವು ಜಾಗತಿಕ ತೈಲ ಸಾಗಣೆಗೆ ಅತ್ಯಂತ ಪ್ರಮುಖ ದಾರಿ. ಈ ಮಾರ್ಗವು ಪರ್ಷಿಯನ್ ಗಲ್ಫ್ ಅನ್ನು ಗಲ್ಫ್ ಆಫ್ ಒಮನ್ ಹಾಗೂ ಅರೇಬಿಯನ್ ಸಮುದ್ರದೊಂದಿಗೆ ಸಂಪರ್ಕಿಸುತ್ತದೆ. ಜಾಗತಿಕವಾಗಿ ಬಳಕೆಯಾಗುವ ತೈಲದ ಸುಮಾರು 20 ಶೇಕಡಾ ಈ ಮಾರ್ಗದ ಮೂಲಕ ಸಾಗುತ್ತದೆ ಎಂದು ಅಮೆರಿಕದ ಅಮೆರಿಕಾ ಮಾಹಿತಿ ನೀಡಿದೆ.

ಇತ್ತೀಚೆಗೆ ಅಮೆರಿಕ ಮತ್ತು ಇಸ್ರೇಲ್ ನಡೆಸಿದ ದಾಳಿಗಳ ನಂತರ ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್‌ ಈ ಸಮುದ್ರ ಮಾರ್ಗವನ್ನು ಮುಚ್ಚಿ, ಸಾಗಣೆ ಮಾಡುವ ಹಡಗುಗಳಿಗೆ ಬೆದರಿಕೆ ಹಾಕಿದೆ ಎಂದು ವರದಿಯಾಗಿದೆ.

ಸಾಮಾನ್ಯವಾಗಿ ದಿನಕ್ಕೆ ಸುಮಾರು 60 ಹಡಗುಗಳು ಸಾಗುವ ಈ ಮಾರ್ಗದಲ್ಲಿ ಕಳೆದ 24 ಗಂಟೆಗಳಲ್ಲಿ ಕೇವಲ ಎರಡು ಹಡಗುಗಳು ಮಾತ್ರ ಸಂಚರಿಸಿರುವುದಾಗಿ ತಿಳಿದುಬಂದಿದೆ.

ಈ ಬೆಳವಣಿಗೆಯಿಂದ ಜಾಗತಿಕ ಇಂಧನ ಬೆಲೆ ಏರಿಕೆಯಾಗಿದ್ದು, ಅಮೆರಿಕ ಸೇರಿದಂತೆ ಹಲವು ದೇಶಗಳಲ್ಲಿ ಪೆಟ್ರೋಲ್ ದರಗಳು ಹೆಚ್ಚಳವಾಗಿವೆ. ಉತ್ತರ ಅಮೆರಿಕ ಮಾರುಕಟ್ಟೆಯ ಮಾನದಂಡವಾದ ವೆಸ್ಟ್ ಇಂಟರ್ಮೀಡಿಯೇಟ್ ಕಚ್ಚಾ ತೈಲದ ಬೆಲೆ ಪ್ರತಿ ಬ್ಯಾರೆಲ್‌ಗೆ 86 ಡಾಲರ್‌ಗಿಂತ ಹೆಚ್ಚು ಆಗಿದೆ.

ಇದೇ ವೇಳೆ ಅಮೆರಿಕದ ಇಂಧನ ಕಾರ್ಯದರ್ಶಿ ಕ್ರಿಸ್ ರೈಟ್ ಸಿಎನ್‌ಎನ್‌ಗೆ ನೀಡಿದ ಸಂದರ್ಶನದಲ್ಲಿ, ಹಾರ್ಮುಜ್ ಸಮುದ್ರ ಮಾರ್ಗದಲ್ಲಿ ಹಡಗು ಸಂಚಾರವು ಶೀಘ್ರದಲ್ಲೇ ಸಾಮಾನ್ಯ ಸ್ಥಿತಿಗೆ ಮರಳಬಹುದು ಎಂದು ತಿಳಿಸಿದ್ದಾರೆ. ಇದು ಕೆಲವೇ ವಾರಗಳ ವಿಷಯ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಫೈನಲ್ ಫೈಟ್: ಸಿದ್ದರಾಮಯ್ಯ ಮನವೊಲಿಕೆಗೆ ರಾಹುಲ್ ಗಾಂಧಿ ಯತ್ನ: ಯತೀಂದ್ರಗೆ DCM ಸ್ಥಾನ, ರಾಜ್ಯಸಭೆ ಆಫರ್?

ಪಟ್ಟಕ್ಕಾಗಿ ಫೈನಲ್ ಫೈಟ್: ಮೂರು ಷರತ್ತುಗಳನ್ನು ಹೈಕಮಾಂಡ್ ಮುಂದಿಟ್ಟ ಡಿಕೆಶಿ; CM ಹುದ್ದೆಗಾಗಿ ಬಿಗಿಪಟ್ಟು!

Indian Stock Market: ಕಚ್ಚಾ ತೈಲ ದರ ಏರಿಕೆ, ರೂಪಾಯಿ ಮೌಲ್ಯ, Sensex ಕುಸಿತ

ರಾಜ್ಯ ಸರ್ಕಾರದ 'ದ್ವೇಷ ಭಾಷಣ' ಮಸೂದೆಗೆ ಅಮಿತ್ ಶಾ ಅಡ್ಡಗಾಲು; ಅಸ್ತಿತ್ವದಲ್ಲಿರುವ ಕಾನೂನೇ ಸಾಕು: ಕೇಂದ್ರ

Mekedatu row: ಕರ್ನಾಟಕದ DPR ತಿರಸ್ಕರಿಸಿ; ಪ್ರಧಾನಿ ಮೋದಿಗೆ ತಮಿಳುನಾಡು ಸಿಎಂ ವಿಜಯ್ ಮನವಿ

SCROLL FOR NEXT