ಚೀನಾ ಅಧ್ಯಕ್ಷ ಕ್ಷಿ ಜಿನ್ಪಿಂಗ್ 
ವಿದೇಶ

ಇರಾನಿನ ರೆಡ್ ಕ್ರೆಸೆಂಟ್ ಸೊಸೈಟಿಗೆ ಚೀನಾ 2 ಲಕ್ಷ ಡಾಲರ್ ನೆರವು; ಅಮೆರಿಕ ದಾಳಿ ಖಂಡಿಸಿದ ಬೀಜಿಂಗ್

ಇರಾನ್ ನಲ್ಲಿ ನಾಗರಿಕರು ಮತ್ತು ಮಿಲಿಟರಿಯೇತರ ಟಾರ್ಗೆಟ್ ಗಳ ಮೇಲಿನ ವಿವೇಚನಾರಹಿತ ದಾಳಿಯನ್ನು ಬೀಜಿಂಗ್ ಖಂಡಿಸುತ್ತದೆ ಎಂದು ಅವರು ತಿಳಿಸಿದ್ದಾರೆ.

ಬೀಜಿಂಗ್: ಚೀನಾದ ವಿದೇಶಾಂಗ ಸಚಿವಾಲಯದ ವಕ್ತಾರ ಗುವೊ ಜಿಯಾಕುನ್ ಅವರು ಶುಕ್ರವಾರ ಇರಾನಿನ ರೆಡ್ ಕ್ರೆಸೆಂಟ್ ಸೊಸೈಟಿಗೆ 200,000 ಡಾಲರ್ ಮೌಲ್ಯದ ನೆರವು ನೀಡುವುದಾಗಿ ಹೇಳಿದ್ದಾರೆ ಎಂದು ಚೀನಾ ಡೈಲಿ ವರದಿ ಮಾಡಿದೆ.

ಇರಾನ್ ನಲ್ಲಿ ನಾಗರಿಕರು ಮತ್ತು ಮಿಲಿಟರಿಯೇತರ ಟಾರ್ಗೆಟ್ ಗಳ ಮೇಲಿನ ವಿವೇಚನಾರಹಿತ ದಾಳಿಯನ್ನು ಬೀಜಿಂಗ್ ಖಂಡಿಸುತ್ತದೆ ಎಂದು ಅವರು ತಿಳಿಸಿದ್ದಾರೆ.

ಇದಕ್ಕೂ ಮೊದಲು, ಪಶ್ಚಿಮ ಏಷ್ಯಾ ಸಂಘರ್ಷದಲ್ಲಿ ಭಾಗಿಯಾಗಿರುವ ಎಲ್ಲಾ ದೇಶಗಳೊಂದಿಗೆ ಸಂಪರ್ಕದಲ್ಲಿರಲು ಚೀನಾ ಇಚ್ಛೆ ವ್ಯಕ್ತಪಡಿಸಿದೆ ಎಂದು ಜಿಯಾಕುನ್ ಹೇಳಿರುವುದಾಗಿ ಚೀನಾ ಡೈಲಿ ವರದಿ ಮಾಡಿದೆ.

ಮಾಧ್ಯಮ ಪ್ರತಿನಿಧಿಗಳನ್ನು ಉದ್ದೇಶಿಸಿ ಮಾತನಾಡಿದ ಜಿಯಾಕುನ್, "ಸಂಘರ್ಷದಲ್ಲಿ ನೇರವಾಗಿ ಭಾಗಿಯಾಗಿರುವ ದೇಶಗಳು ಸೇರಿದಂತೆ ಎಲ್ಲಾ ಸಂಬಂಧಿತ ರಾಷ್ಟ್ರಗಳೊಂದಿಗೆ ಸಂವಹನವನ್ನು ಬಲಪಡಿಸುವುದನ್ನು ಮುಂದುವರಿಸುತ್ತದೆ ಮತ್ತು ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆಯನ್ನು ಕಡಿಮೆ ಮಾಡುವ ಮತ್ತು ಶಾಂತಿ ಪುನಃಸ್ಥಾಪಿಸುವಲ್ಲಿ ರಚನಾತ್ಮಕ ಪಾತ್ರ ವಹಿಸುತ್ತದೆ" ಎಂದು ಹೇಳಿದ್ದಾರೆ.

ಚೀನಾದ ವಿದೇಶಾಂಗ ಸಚಿವ ವಾಂಗ್ ಯಿ ಕೂಡ ಇರಾನ್ ಜೊತೆ ಶಾಂತಿ ಮಾತುಕತೆ ನಡೆಸುತ್ತಿರುವಾಗ ಅಂತರರಾಷ್ಟ್ರೀಯ ಕಾನೂನನ್ನು ಉಲ್ಲಂಘಿಸಿದ ಅಮೆರಿಕ ಮತ್ತು ಇಸ್ರೇಲ್ ಅನ್ನು ಟೀಕಿಸಿದ್ದಾರೆ ಎಂದು ಜಿಯಾಕುನ್ ತಿಳಿಸಿದ್ದಾರೆ.

ಇದಕ್ಕೂ ಮೊದಲು, ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಹಾರ್ಮುಜ್ ಜಲಸಂಧಿಯ ಕ್ರಿಯಾತ್ಮಕ ನಿರ್ಬಂಧದ ಬಗ್ಗೆ ಚೀನಾ ಕಳವಳ ವ್ಯಕ್ತಪಡಿಸಿತು ಮತ್ತು "ಸಂಬಂಧಿತ ದೇಶಗಳು" ತಕ್ಷಣವೇ ಮಿಲಿಟರಿ ಕಾರ್ಯಾಚರಣೆಗಳನ್ನು ನಿಲ್ಲಿಸಬೇಕು ಮತ್ತು ಸಮಸ್ಯೆ ಮತ್ತಷ್ಟು ಉಲ್ಬಣಗೊಳ್ಳುವುದನ್ನು ತಪ್ಪಿಸಬೇಕು ಎಂದು ಚೀನಾ ಕರೆ ನೀಡಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ವಿಜಯ್‌ಗೆ ಬೆಂಬಲ ನೀಡುವ ಆತಂಕ: 28 ಶಾಸಕರನ್ನು ಪುದುಚೇರಿ ರೆಸಾರ್ಟ್‌ಗೆ ಶಿಫ್ಟ್ ಮಾಡಿದ AIADMK

ಭಯಭೀತರಾಗಿದ್ದ ಪ್ರಯಾಣಿಕರು: ಸುರಕ್ಷಿತವಾಗಿ ಲ್ಯಾಂಡಿಂಗ್ ಮಾಡಿದ್ದೀನಿ ಚಪ್ಪಾಳೆ ತಟ್ಟಿ; ಪೈಲಟ್, ಮಾಜಿ ಕೇಂದ್ರ ಸಚಿವ ಪೈಲಟ್ ರೂಡಿ, Video!

ಬೆಂಗಳೂರಿನಲ್ಲೇ ಆಡ್ಬೇಕಿತ್ತು, ಆದ್ರೆ..: IPL 2026 ಫೈನಲ್ ಪಂದ್ಯದ ಮೈದಾನ ಬದಲಾವಣೆಗೆ ಇದೇ ಕಾರಣ ಎಂದ BCCI

ಮಾರಕ Hantavirus: ಮನೆಗೆ ಮರಳಿದ ಇಬ್ಬರು ಸೋಂಕಿತರು, ಕ್ವಾರಂಟೈನ್: ಕ್ರೂಸ್ ಶಿಪ್ ಗೆ ವೈರಸ್ ಹರಡಿದ್ದು ಹೇಗೆ?

ಬಿಜೆಪಿ ವಿರೋಧಿಸಿದ್ದೇ ವಿಜಯ್ ಗೆ ಮುಳುವು; ಸರ್ಕಾರ ರಚನೆಗೆ ಅಡ್ಡಿಯಾಗಲು ಕಾರಣ?

SCROLL FOR NEXT