ಪಾಕ್ ರಾಯಭಾರಿ ಅಬ್ದುಲ್ ಬಸಿತ್ (ಸಂಗ್ರಹ ಚಿತ್ರ) 
ವಿದೇಶ

ಅಮೆರಿಕಾ ನಮ್ಮ ಮೇಲೆ ದಾಳಿ ಮಾಡಿದರೆ, ನಾವು ಭಾರತದ ಮೇಲೆ ದಾಳಿ ಮಾಡ್ತೇವೆ: ಪಾಕ್ ಮಾಜಿ ರಾಯಭಾರಿ ಅಬ್ದುಲ್‌ ಬಾಸಿತ್‌

ಯಾರಾದರೂ ನಮನ್ನು ಕೆಟ್ಟ ದಷ್ಟಿಯಿಂದ ನೋಡಿದರೆ ಪಾಕಿಸ್ತಾನಕ್ಕೆ ಭಾರತದ ಮೇಲೆ ಎಲ್ಲಿ ಬೇಕಾದರೂ ದಾಳಿ ಮಾಡುವುದನ್ನು ಬಿಟ್ಟು ಬೇರೆ ದಾರಿ ಇರುವುದಿಲ್ಲ. ನಾವು ಹಾಗೆ ಆಗಬಾರದು ಎಂದು ಬಯಸುತ್ತೇವೆ.

ನವದೆಹಲಿ: ಭಾರತದಲ್ಲಿನ ಪಾಕಿಸ್ತಾನದ ಮಾಜಿ ರಾಯಭಾರಿ ಅಬ್ದುಲ್‌ ಬಾಸಿತ್‌ ನೀಡಿರುವ ವಿವಾದಾತ್ಮಕ ಹೇಳಿಕೆ ಇದೀಗ ದೇಶೀಯ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಗೆ ಕಾರಣವಾಗಿದೆ.

ಅಮೆರಿಕಾ ಪಾಕಿಸ್ತಾನದ ಅಣು ಸ್ಥಾವರಗಳ ಮೇಲೆ ದಾಳಿ ನಡೆಸಿದರೆ, ಅದರ ಪ್ರತಿಯಾಗಿ ಭಾರತದಲ್ಲಿನ ಪ್ರಮುಖ ನಗರಗಳಾದ ದೆಹಲಿ ಮತ್ತು ಮುಂಬೈ ಮೇಲೆ ದಾಳಿ ನಡೆಸುವುದಾಗಿ ಅಬ್ದುಲ್‌ ಬಾಸಿತ್‌ ಅವರು ಹೇಳಿದ್ದಾರೆ.

ಚರ್ಚಾ ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ಅವರು, ಯಾರಾದರೂ ನಮನ್ನು ಕೆಟ್ಟ ದಷ್ಟಿಯಿಂದ ನೋಡಿದರೆ ಪಾಕಿಸ್ತಾನಕ್ಕೆ ಭಾರತದ ಮೇಲೆ ಎಲ್ಲಿ ಬೇಕಾದರೂ ದಾಳಿ ಮಾಡುವುದನ್ನು ಬಿಟ್ಟು ಬೇರೆ ದಾರಿ ಇರುವುದಿಲ್ಲ. ನಾವು ಹಾಗೆ ಆಗಬಾರದು ಎಂದು ಬಯಸುತ್ತೇವೆ, ಭಾರತವೂ ಹಾಗೆ ಬಯಸುವುದಿಲ್ಲ ಎಂದು ಅಡ್ಡಗೋಡೆ ಮೇಲೆ ದೀಪವಿಟ್ಟಂತೆ ಮಾತನಾಡಿದ್ದಾರೆ.

ಅಬ್ದುಲ್ ಬಾಸಿತ್ ಅವರು ಭಾರತವನ್ನು ಗುರಿಯಾಗಿಸುವ ಮಾತು ಹೇಳಿರುವುದಕ್ಕೆ ಹಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಾಸಿತ್‌ ಅವರು, 2014 ರಿಂದ 2017 ರವರೆಗೆ ನವದೆಹಲಿಯಲ್ಲಿ ಪಾಕಿಸ್ತಾನದ ಉನ್ನತ ರಾಜತಾಂತ್ರಿಕರಾಗಿ ಸೇವೆ ಸಲ್ಲಿಸಿದ್ದಾರೆ. ಅವರ ಅಧಿಕಾರಾವಧಿಯಲ್ಲಿ ಭಾರತದೊಂದಿಗೆ ನೇರ ಸಂಪರ್ಕ ಸಾಧಿಸಿದ್ದರಿಂದ, ಅವರ ಹಿಂದಿನ ಪಾತ್ರವು ಪ್ರತಿಕ್ರಿಯೆಗೆ ಹೆಚ್ಚಿನ ಮಹತ್ವ ಇದೆ ಎಂದು ವ್ಯಾಖ್ಯಾನಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್