ಸಾಂದರ್ಭಿಕ ಚಿತ್ರ 
ವಿದೇಶ

ಇರಾನ್ ಮೇಲಿನ ದಾಳಿ ಐದು ದಿನ ತಾತ್ಕಾಲಿಕ ಸ್ಥಗಿತ: ಶಾಂತಿ ಸ್ಥಾಪನೆಗಾಗಿ ಪಾಕಿಸ್ತಾನ, ಟರ್ಕಿ, ಈಜಿಪ್ಟ್ ಮಧ್ಯಸ್ಥಿಕೆ!

ಟರ್ಕಿ, ಈಜಿಪ್ಟ್ ಮತ್ತು ಪಾಕಿಸ್ತಾನ ಕಳೆದ ಎರಡು ದಿನಗಳಿಂದ US ಮತ್ತು ಇರಾನ್ ನಡುವೆ ಸಂದೇಶಗಳನ್ನು ರವಾನಿಸುತ್ತಿವೆ ಎಂಬ ಮೂಲಗಳನ್ನು ಉಲ್ಲೇಖಿಸಿ US ಸುದ್ದಿವಾಹಿನಿ Axios ವರದಿ ಮಾಡಿದೆ.

ವಾಷಿಂಗ್ಟನ್: ಐದು ದಿನಗಳ ಕಾಲ ಇರಾನ್‌ ಮೇಲಿನ ದಾಳಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿರುವುದರಿಂದ ಜಗತ್ತಿಗೆ ಶಾಂತಿಯ ಹೊಸ ಭರವಸೆ ಸಿಕ್ಕಿದೆ.

ಮಧ್ಯ ಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧ ನಾಲ್ಕನೇ ವಾರಕ್ಕೆ ಪ್ರವೇಶಿಸಿರುವಂತೆ ಪಾಕಿಸ್ತಾನ, ಈಜಿಪ್ಟ್ ಮತ್ತು ಟರ್ಕಿಯು ಶಾಂತಿಗಾಗಿ ಮಧ್ಯಸ್ಥಿಕೆ ಪ್ರಯತ್ನದ ವರದಿಗಳ ನಡುವೆ ಈ ಬೆಳವಣಿಗೆಯಾಗಿದೆ. ಮತ್ತೊಂದೆಡೆ ಯುದ್ಧ ಪ್ರಾರಂಭಿಸಿದ ಅಮೆರಿಕ ನೇರವಾಗಿ ಮಾತನಾಡಬೇಕು ಎಂದು ಇರಾನ್ ಪಟ್ಟು ಹಿಡಿದಿದೆ.

ಟರ್ಕಿ, ಈಜಿಪ್ಟ್ ಮತ್ತು ಪಾಕಿಸ್ತಾನ ಕಳೆದ ಎರಡು ದಿನಗಳಿಂದ US ಮತ್ತು ಇರಾನ್ ನಡುವೆ ಸಂದೇಶಗಳನ್ನು ರವಾನಿಸುತ್ತಿವೆ ಎಂಬ ಮೂಲಗಳನ್ನು ಉಲ್ಲೇಖಿಸಿ US ಸುದ್ದಿವಾಹಿನಿ Axios ವರದಿ ಮಾಡಿದೆ.

ಮೂರು ದೇಶಗಳ ವಿದೇಶಾಂಗ ಸಚಿವರು ಶ್ವೇತಭವನದ ರಾಯಭಾರಿ ಸ್ಟೀವ್ ವಿಟ್‌ಕಾಫ್ ಮತ್ತು ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಾಘ್ಚಿ ಅವರೊಂದಿಗೆ ಪ್ರತ್ಯೇಕ ಮಾತುಕತೆ ನಡೆಸಿದ್ದಾರೆ ಎಂದು ಆಕ್ಸಿಯೋಸ್ ವರದಿ ಮಾಡಿದೆ.

ಮಧ್ಯಸ್ಥಿಕೆ ಮುಂದುವರೆದಿದ್ದು, ಯುದ್ಧವನ್ನು ಕೊನೆಗೊಳಿಸುವ ಮತ್ತು ಎಲ್ಲಾ ಬಾಕಿ ಇರುವ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳುವ ಬಗ್ಗೆ ಚರ್ಚೆ ನಡೆಯುತ್ತಿದೆ. ಶೀಘ್ರದಲ್ಲಿ ಉತ್ತರ ದೊರೆಯುವ ನಿರೀಕ್ಷೆಯಿದೆ ಎಂದು ಮೂಲಗಳು ಹೇಳಿವೆ.

ಈಜಿಪ್ಟ್‌ನ ವಿದೇಶಾಂಗ ಸಚಿವ ಬದರ್ ಅಬ್ದೆಲಟ್ಟಿ ಭಾನುವಾರ ಪಾಕಿಸ್ತಾನ, ಟರ್ಕಿ ಮತ್ತು ಕತಾರ್‌ನ ವಿದೇಶಾಂಗ ಸಚಿವರೊಂದಿಗೆ ಸಭೆ ನಡೆಸಿದ್ದಾರೆ ಎಂದು ಈಜಿಪ್ಟ್ ವಿದೇಶಾಂಗ ಸಚಿವಾಲಯ ತಿಳಿಸಿದೆ. ಐದು ದಿನಗಳ ಕಾಲ ಇರಾನ್‌ ಮೇಲಿನ ದಾಳಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ ನಂತರ ಈ ಬೆಳವಣಿಗೆಯಾಗಿದೆ. ಆದಾಗ್ಯೂ ಇರಾನ್‌ನ ವಿದೇಶಾಂಗ ಸಚಿವಾಲಯವು ಅಂತಹ ಮಾತುಕತೆಗಳ ವರದಿಗಳನ್ನು ನಿರಾಕರಿಸಿದೆ,

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪೆಟ್ರೋಲಿಯಂ ಉತ್ಪನ್ನಗಳ ಮಿತಬಳಕೆ "ಈಗಿನ ಅಗತ್ಯ"-ಪ್ರಧಾನಿ ಮೋದಿ: ಮುಂದೆ ಕಾದಿದೆಯಾ ಸಂಕಷ್ಟದ ದಿನಗಳು?

IPL 2026: ಕೊನೆಯ ಎಸೆತದಲ್ಲಿ RCBಗೆ ರೋಚಕ ಜಯ; MI ವಿರುದ್ಧದ ಪಂದ್ಯ ಗೆಲ್ಲಿಸಿದ ಕೃನಾಲ್, ಭುವಿ; ಅಗ್ರಸ್ಥಾನಕ್ಕೇರಿದ ಆರ್‌ಸಿಬಿ!

1 ಮತದಿಂದ DMK ಅಭ್ಯರ್ಥಿ ಪೆರಿಯಕರುಪ್ಪನ್ ಸೋಲು; ಅಂಚೆ ಮತ ಗೊಂದಲದ ಬಗ್ಗೆ ECI ವಿರುದ್ಧ ಮದ್ರಾಸ್ ಹೈಕೋರ್ಟ್ ಕಿಡಿ!

S Keerthana: ವಿಜಯ್ ಕ್ಯಾಬಿನೆಟ್ ನಲ್ಲಿ ಪಂಚಭಾಷಾ ಪಾರಂಗತೆ; ಅತಿ ಕಿರಿಯ ಶಾಸಕಿ!

Pak ನಲ್ಲಿ ರಕ್ತದೋಕುಳಿ: ಹೊಸ ಉಗ್ರ ಸಂಘಟನೆ ನಡೆಸಿದ ದಾಳಿಯಲ್ಲಿ 21 ಸೈನಿಕರು ಬಲಿ; ಆಸ್ಪತ್ರೆಗಳಲ್ಲಿ ತುರ್ತು ಪರಿಸ್ಥಿತಿ!

SCROLL FOR NEXT