ಟ್ರಂಪ್ ಮತ್ತು ಇರಾನ್ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ 
ವಿದೇಶ

ಕ್ಷಿಪಣಿ ದಾಳಿ ಬಳಿಕ ಮಧ್ಯಪ್ರಾಚ್ಯದಲ್ಲಿ ಹೆಚ್ಚಿದ ಉದ್ವಿಗ್ನತೆ: 'ಸಣ್ಣ ಮಟ್ಟದ ದಾಳಿಯಷ್ಟೇ, ಕದನ ವಿರಾಮ ಮುರಿದಿಲ್ಲ'- ಟ್ರಂಪ್..!

ಸಣ್ಣ ಮಟ್ಟದ ದಾಳಿ ನಡೆದರೂ, ಯುದ್ಧ ವಿರಾಮ ಇನ್ನೂ ಮುರಿದಿಲ್ಲ. ಎರಡೂ ದೇಶಗಳು ದೊಡ್ಡ ಯುದ್ಧ ಬಯಸುವುದಿಲ್ಲ ಎಂದು ಹೇಳಿದ್ದಾರೆ. ಇದೇ ವೇಳೆ ಇರಾನ್ ಒಂದು ವೇಳೆ ಮಿತಿ ಮೀರಿದರೆ, ಮುಂದೆ ಎದುರಾಗುವುದು 'ಲವ್ ಟ್ಯಾಪ್' ಆಗಿರುವುದಿಲ್ಲ, ಅದು ಸಂಪೂರ್ಣ ವಿನಾಶವಾಗಿರುತ್ತದೆ ಎಂದೂ ಎಚ್ಚರಿಕೆ ನೀಡಿದ್ದಾರೆ.

ವಾಷಿಂಗ್ಟನ್: ಅಮೆರಿಕಾ ಮತ್ತು ಇರಾನ್ ನಡುವಿನ ಉದ್ವಿಗ್ನತೆ ಮತ್ತೆ ತೀವ್ರಗೊಳ್ಳುತ್ತಿರುವ ನಡುವೆಯೇ, ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೀಡಿರುವ “ಇದು ಕೇವಲ ಲವ್ ಟ್ಯಾಪ್ ಅಷ್ಟೇ” ಎಂಬ ಹೇಳಿಕೆ ಜಾಗತಿಕ ಮಟ್ಟದಲ್ಲಿ ಚರ್ಚೆಗೆ ಗ್ರಾಸವಾಗಿದೆ.

ಹಾರ್ಮುಜ್ ಜಲಸಂಧಿಯಲ್ಲಿ ನಡೆದ ಸೇನಾ ಚಟುವಟಿಕೆಗಳು ಎರಡೂ ದೇಶಗಳ ನಡುವೆ ಯುದ್ಧದ ಭೀತಿ ಹೆಚ್ಚಿಸಿದರೂ, ಪರಿಸ್ಥಿತಿ ಸಂಪೂರ್ಣ ನಿಯಂತ್ರಣ ತಪ್ಪಿಲ್ಲ ಎಂದು ಟ್ರಂಪ್ ಸಮರ್ಥಿಸಿಕೊಳ್ಳುವ ಯತ್ನ ನಡೆಸುತ್ತಿದ್ದಾರೆ.

ಸುದ್ದಿವಾಹಿನಿಯೊಂದಿಗೆ ಮಾತನಾಡಿದ ಟ್ರಂಪ್ ಅವರು, ಇದು ಕೇವಲ ಒಂದು ಲವ್ ಟ್ಯಾಪ್ (ಸಣ್ಣ ಹೊಡೆತ). ಕದನ ವಿರಾಮ ಇನ್ನೂ ಜಾರಿಯಲ್ಲಿದೆ ಎಂದು ಹೇಳುವ ಮೂಲಕ ಪರಿಸ್ಥಿತಿಯನ್ನು ತಿಳಿಗೊಳಿಸಲು ಪ್ರಯತ್ನಿಸಿದ್ದಾರೆ.

ಸಣ್ಣ ಮಟ್ಟದ ದಾಳಿ ನಡೆದರೂ, ಕದನ ವಿರಾಮ ಇನ್ನೂ ಮುರಿದಿಲ್ಲ. ಎರಡೂ ದೇಶಗಳು ದೊಡ್ಡ ಯುದ್ಧ ಬಯಸುವುದಿಲ್ಲ ಎಂದು ಹೇಳಿದ್ದಾರೆ. ಇದೇ ವೇಳೆ ಇರಾನ್ ಒಂದು ವೇಳೆ ಮಿತಿ ಮೀರಿದರೆ, ಮುಂದೆ ಎದುರಾಗುವುದು 'ಲವ್ ಟ್ಯಾಪ್' ಆಗಿರುವುದಿಲ್ಲ, ಅದು ಸಂಪೂರ್ಣ ವಿನಾಶವಾಗಿರುತ್ತದೆ ಎಂದೂ ಎಚ್ಚರಿಕೆ ನೀಡಿದ್ದಾರೆ.

ಇತ್ತೀಚಿನ ವರದಿಗಳ ಪ್ರಕಾರ, ಇರಾನ್ ಪಡೆಗಳು ಅಮೆರಿಕದ ನೌಕಾಪಡೆಯ ಮೂರು ಯುದ್ಧನೌಕೆಗಳನ್ನು ಗುರಿಯಾಗಿಸಿಕೊಂಡು ಕ್ಷಿಪಣಿ, ಡ್ರೋನ್ ಹಾಗೂ ವೇಗದ ಸಣ್ಣ ದೋಣಿಗಳ ಮೂಲಕ ದಾಳಿ ನಡೆಸಲು ಪ್ರಯತ್ನಿಸಿವೆ ಎನ್ನಲಾಗುತ್ತಿದ್ದು, ಈ ದಾಳಿ ಪರ್ಷಿಯನ್ ಗಲ್ಫ್ ಪ್ರದೇಶದಲ್ಲಿ ಭಾರೀ ಆತಂಕ ಸೃಷ್ಟಿಸಿದೆ.

ಅಮೆರಿಕದ ಸೆಂಟ್ರಲ್ ಕಮಾಂಡ್ (CENTCOM) ಮಾಹಿತಿ ಪ್ರಕಾರ, ಅಮೆರಿಕದ ರಕ್ಷಣಾ ವ್ಯವಸ್ಥೆಗಳು ಎಲ್ಲಾ ದಾಳಿಗಳನ್ನು ಯಶಸ್ವಿಯಾಗಿ ತಡೆದಿದ್ದು, ಯಾವುದೇ ಯುದ್ಧನೌಕೆಗೆ ಹಾನಿಯಾಗಿಲ್ಲ ಎಂದು ತಿಳಿಸಿದೆ.

ಘಟನೆಯ ಬಳಿಕ ಅಮೆರಿಕ ಸೇನೆ ತಕ್ಷಣ ಪ್ರತಿದಾಳಿ ನಡೆಸಿ, ಇರಾನ್‌ನ ಬಂದರ್ ಅಬ್ಬಾಸ್ ಮತ್ತು ಕ್ವೆಶ್ಮ್ ಪ್ರದೇಶಗಳಲ್ಲಿದ್ದ ಕ್ಷಿಪಣಿ ಉಡಾವಣೆ ಕೇಂದ್ರಗಳು ಹಾಗೂ ಡ್ರೋನ್ ನೆಲೆಗಳನ್ನು ಗುರಿಯಾಗಿಸಿಕೊಂಡಿದೆ ಎನ್ನಲಾಗಿದೆ.

ಅಮೆರಿಕ ಈ ಕ್ರಮವನ್ನು “ಸ್ವಯಂ ರಕ್ಷಣಾತ್ಮಕ ಕ್ರಮ” ಎಂದು ಸಮರ್ಥಿಸಿಕೊಂಡಿದೆ. ಆದರೆ ಇರಾನ್, ಅಮೆರಿಕದ ದಾಳಿಯಲ್ಲಿ ನಾಗರಿಕರಿಗೆ ಸಂಬಂಧಿಸಿದ ಕೆಲವು ಹಡಗುಗಳು ಮತ್ತು ಪ್ರದೇಶಗಳಿಗೂ ಹಾನಿಯಾಗಿದೆ ಎಂದು ಆರೋಪಿಸಿದೆ.

ಅಮೆರಿಕವೇ ಮೊದಲು ಕದನ ವಿರಾಮ ಉಲ್ಲಂಘಿಸಿದೆ. ಮುಂದಿನ ದಿನಗಳಲ್ಲಿ ಮತ್ತೆ ದಾಳಿ ನಡೆದರೆ “ಪ್ರಬಲ ಪ್ರತಿಕ್ರಿಯೆ” ನೀಡುವುದಾಗಿ ಎಚ್ಚರಿಸಿದೆ. ಈ ಹೇಳಿಕೆಗಳಿಂದ ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ.

ಹಾರ್ಮುಜ್ ಜಲಸಂಧಿ ಜಾಗತಿಕ ತೈಲ ಸಾಗಣೆಯ ಅತ್ಯಂತ ಪ್ರಮುಖ ಮಾರ್ಗಗಳಲ್ಲಿ ಒಂದಾಗಿದೆ. ವಿಶ್ವದ ಬಹುಪಾಲು ತೈಲ ರಫ್ತು ಇದೇ ಮಾರ್ಗದ ಮೂಲಕ ಸಾಗುವುದರಿಂದ, ಇಲ್ಲಿ ಉಂಟಾಗುವ ಯಾವುದೇ ಸೈನಿಕ ಸಂಘರ್ಷ ಜಾಗತಿಕ ಆರ್ಥಿಕತೆಗೆ ದೊಡ್ಡ ಹೊಡೆತ ನೀಡುವ ಸಾಧ್ಯತೆಯಿದೆ. ಈಗಾಗಲೇ ಕಚ್ಚಾ ತೈಲದ ಬೆಲೆಗಳಲ್ಲಿ ಏರಿಳಿತ ಕಂಡುಬರುತ್ತಿದ್ದು, ಹೂಡಿಕೆದಾರರು ಆತಂಕ ವ್ಯಕ್ತಪಡಿಸುತ್ತಿದ್ದಾರೆ.

ಇದೀಗ ಹಲವು ರಾಷ್ಟ್ರಗಳು ಹಾಗೂ ಅಂತರರಾಷ್ಟ್ರೀಯ ಮಧ್ಯವರ್ತಿಗಳು ಅಮೆರಿಕ ಮತ್ತು ಇರಾನ್ ನಡುವಿನ ಮಾತುಕತೆ ಪುನರಾರಂಭವಾಗಬೇಕು ಎಂದು ಒತ್ತಾಯಿಸುತ್ತಿವೆ.

ಪರಿಸ್ಥಿತಿ ಮತ್ತಷ್ಟು ಉಲ್ಬಣಿಸಿದರೆ ಮಧ್ಯಪ್ರಾಚ್ಯದಲ್ಲಿ ದೊಡ್ಡ ಮಟ್ಟದ ಸಂಘರ್ಷ ಸಂಭವಿಸುವ ಭೀತಿ ಜಾಗತಿಕ ಸಮುದಾಯದಲ್ಲಿ ಹೆಚ್ಚುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Ayodhya: ರಾಮ ಮಂದಿರ ದೇಣಿಗೆ ಲೂಟಿ ಪ್ರಕರಣ: 8 ಆರೋಪಿಗಳ ವಿರುದ್ಧ FIR ದಾಖಲು!

Women T-20 World cup: ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 5 ವಿಕೆಟ್ ಗಳ ಭರ್ಜರಿ ಗೆಲುವು!

ಸೇಡಿಗಾಗಿ ಖಾಸಗಿ ಪೋಟೋ, ವಿಡಿಯೋ ವೈರಲ್, ಬೆದರಿಕೆ ಪ್ರಕರಣ: ಕಡ್ಡಾಯವಾಗಿ FIR ದಾಖಲಿಸಬೇಕು, ಪೊಲೀಸರಿಗೆ ಪ್ರಿಯಾಂಕ್ ಖರ್ಗೆ ಖಡಕ್ ಸೂಚನೆ!

Bidadi Township Project: ಸಿಎಂ ಡಿಕೆ ಶಿವಕುಮಾರ್‌ಗೆ 2ನೇ ಪತ್ರ ಬರೆದ ಕೇಂದ್ರ ಸಚಿವ ಎಚ್‌ ಡಿ ಕುಮಾರಸ್ವಾಮಿ!

ಗರಿಷ್ಠ ಅವಧಿ ಸಂಪೂರ್ಣ: KSCA ಕಾರ್ಯದರ್ಶಿ ಸಂತೋಷ್ ಮೆನನ್ ಅನರ್ಹ, BCCI ಒಂಬುಡ್ಸ್‌ಮನ್ ಆದೇಶ!