ಡೊನಾಲ್ಡ್ ಟ್ರಂಪ್ online desk
ವಿದೇಶ

'ಪಾಕಿಸ್ತಾನಕ್ಕೆ ಉಪಕಾರ' ಮಾಡಲು ಇರಾನ್‌ನೊಂದಿಗೆ ಕದನವಿರಾಮ; ಪಾಕ್ ಪ್ರಧಾನಿ 'ಅದ್ಭುತ' ಎಂದ ಟ್ರಂಪ್!

ನಾವು ಅದನ್ನು ಪಾಕಿಸ್ತಾನದ ಅನುಕೂಲಕ್ಕಾಗಿ ಒಪ್ಪಿಕೊಂಡಿದ್ದೇವೆ. ಪಾಕಿಸ್ತಾನದ ಪ್ರಧಾನಿ ಶೆಹಬಾಹಜ್‌ ಷರೀಫ್‌ ಹಾಗೂ ಫೀಲ್ಡ್‌ ಮಾರ್ಷಲ್‌ ಆಸಿಮ್‌ ಮುನೀರ್‌ ಅದ್ಬುತ ಜನ" ಎಂದು ಟ್ರಂಪ್ ಹಾಡಿ ಹೊಗಳಿದ್ದಾರೆ.

ವಾಷಿಂಗ್ಟನ್‌: ಅಮೆರಿಕ ಮತ್ತು ಇರಾನ್ ನಡುವಿನ ಸಂಘರ್ಷವನ್ನು ಶಮನಗೊಳಿಸಲು ಪಾಕಿಸ್ತಾನ ಮಧ್ಯವರ್ತಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಬಗ್ಗೆ ಶನಿವಾರ ಶಾಕಿಂಗ್ ಹೇಳಿಕೆ ನೀಡಿದ್ದಾರೆ.

ಪಶ್ಚಿಮ ಏಷ್ಯಾದಲ್ಲಿನ ಯುದ್ಧಗಳಿಗೆ ಸಂಪೂರ್ಣ ಪರಿಹಾರ ಕಂಡುಕೊಳ್ಳಲು ರಾಜತಾಂತ್ರಿಕ ಮಾತುಕತೆಗೆ ಅವಕಾಶ ನೀಡುವ ಸಲುವಾಗಿ ಮತ್ತು ಪಾಕಿಸ್ತಾನದ ಅನುಕೂಲಕ್ಕಾಗಿ ನಾವು ಇರಾನ್ ನೊಂದಿಗೆ ಕದನವಿರಾಮಕ್ಕೆ ಒಪ್ಪಿಕೊಂಡಿದ್ದೇವೆ ಎಂದು ಟ್ರಂಪ್ ಹೇಳಿದ್ದಾರೆ.

ತಮ್ಮ ಎರಡು ದಿನಗಳ ಚೀನಾ ಭೇಟಿಯ ನಂತರ ಅಮೆರಿಕಕ್ಕೆ ಮರಳುವ ಮಾರ್ಗದಲ್ಲಿ ಏರ್ ಫೋರ್ಸ್ ಒನ್‌ನಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಟ್ರಂಪ್, ಕದನ ವಿರಾಮ ಘೋಷಿಸುವ ನಿರ್ಧಾರದ ಮೇಲೆ ವಿಶಾಲವಾದ ಅಂತರರಾಷ್ಟ್ರೀಯ ಒತ್ತಡ ಪ್ರಭಾವ ಬೀರಿದೆ ಎಂದರು.

"ನಾವು ನಿಜವಾಗಿಯೂ ಇತರ ರಾಷ್ಟ್ರಗಳ ಕೋರಿಕೆಯ ಮೇರೆಗೆ ಕದನ ವಿರಾಮಕ್ಕೆ ಒಪ್ಪಿಕೊಂಡಿದ್ದೇವೆ. ನಾನು ಕದನ ವಿರಾಮದ ಪರವಾಗಿರಲಿಲ್ಲ. ಆದರೆ ನಾವು ಅದನ್ನು ಪಾಕಿಸ್ತಾನದ ಅನುಕೂಲಕ್ಕಾಗಿ ಒಪ್ಪಿಕೊಂಡಿದ್ದೇವೆ. ಪಾಕಿಸ್ತಾನದ ಪ್ರಧಾನಿ ಶೆಹಬಾಹಜ್‌ ಷರೀಫ್‌ ಹಾಗೂ ಫೀಲ್ಡ್‌ ಮಾರ್ಷಲ್‌ ಆಸಿಮ್‌ ಮುನೀರ್‌ ಅದ್ಭುತ ಜನ" ಎಂದು ಟ್ರಂಪ್ ಹಾಡಿ ಹೊಗಳಿದ್ದಾರೆ.

ಕಾರ್ಯತಂತ್ರದ ಜಲಮಾರ್ಗವಾದ ಹಾರ್ಮುಜ್ ಜಲಸಂಧಿಯನ್ನು ತೆರೆಯಲು ಇರಾನ್ ಮೇಲೆ ಒತ್ತಡ ಹೇರಲು ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ 'ಸಹಾಯ' ಕೇಳುವುದನ್ನು ಟ್ರಂಪ್ ಸ್ಪಷ್ಟವಾಗಿ ತಳ್ಳಿಹಾಕಿದರು.

ಒಂದು ತಿಂಗಳ ಕಾಲ ನಡೆದ ಕದನ ವಿರಾಮದ ನಂತರ ಅಮೆರಿಕ 'ಸ್ವಲ್ಪ ಸ್ವಚ್ಛತಾ ಕಾರ್ಯ' ಕೈಗೊಳ್ಳಬೇಕಾಗಬಹುದು ಎಂದು ಅವರು ಹೇಳಿದರು.

ಮುಂದುವರೆದು,ಇರಾನ್‌ನ ಪರಮಾಣು ಯೋಜನೆ ಕುರಿತು ತಿಳಿಸುತ್ತಾ, ಈಗಾಗಲೇ ಅಮೆರಿಕ ದಾಳಿಯಲ್ಲಿ ಅವರ ಪರಮಾಣು ಸೌಲಭ್ಯಗಳು ಹಾನಿಗೊಳಗಾಗಿದ್ದು, ಅವರು ಅದನ್ನು ಮತ್ತೆ ಹಿಂಪಡೆಯುವ ಸ್ಥಿತಿಯಲ್ಲಿಲ್ಲ ಎಂದು ಸಂಧಾನಕಾರರು ತಿಳಿಸಿದ್ದಾರೆ. ಇರಾನ್‌ ಪರಮಾಣು ಅಸ್ತ್ರ ಹೊಂದಲು ಸಾಧ್ಯವಿಲ್ಲ ಎಂದು ಟ್ರಂಪ್ ಪುನರುಚ್ಚರಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸುಪ್ರೀಂ ಕೋರ್ಟ್‌ನಲ್ಲೂ ಕರ್ನಾಟಕಕ್ಕೆ ಹಿನ್ನಡೆ: ಕಾವೇರಿ ವಿಚಾರಣೆ ಒಂದು ವಾರ ಮುಂದೂಡಿಕೆ, CWMA ಆದೇಶ ಪಾಲಿಸಲು ಸೂಚನೆ..!

ನಾನು ರಾತ್ರೋರಾತ್ರಿ ಸ್ಟಾರ್ ಆದವನಲ್ಲ, ಕಷ್ಟಪಟ್ಟು ಸ್ಟಾರ್ ಆಗಿದ್ದೇನೆ: ಕಷ್ಟದ ದಿನಗಳನ್ನು ನೆನೆದ ರಾಕಿಂಗ್ ಸ್ಟಾರ್ ಯಶ್‌

ಅಯೋಧ್ಯೆ ಟ್ರಸ್ಟ್ ಎಸ್‌ಐಟಿ ವರದಿಯನ್ನು ಬಹಿರಂಗ ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್

ತನ್ನ ಕ್ರಿಕೆಟ್ ವೃತ್ತಿ ಜೀವನದಲ್ಲೇ The Best Catch ಹಿಡಿದ ಶುಭಮನ್ ಗಿಲ್: ಅವಕ್ಕಾಗಿ ನಿಂತ ಲಂಕಾ ಬ್ಯಾಟರ್, Video

Jharkhand: ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಭೇಟಿಯಾಗಿ, ನೇಮಕಾತಿ ಪರೀಕ್ಷೆ ವಿವಾದ ಬಗೆಹರಿಸಿ: ಸಿಎಂ ಸೊರೆನ್‌ಗೆ ರಾಹುಲ್ ಗಾಂಧಿ ಮನವಿ