ಉಪೇಂದ್ರ ದ್ವಿವೇದಿ-ಆಸಿಮ್ ಮುನೀರ್ TNIE
ವಿದೇಶ

ಜನರಲ್ ದ್ವಿವೇದಿ ಹೇಳಿಕೆ 'ಪ್ರಚೋದನಕಾರಿ'; ಇದು ವಿನಾಶಕ್ಕೆ ಕಾರಣವಾಗಬಹುದು: ಭಾರತಕ್ಕೆ ಪಾಕ್ ಸೇನೆ ಎಚ್ಚರಿಕೆ

ಭಯೋತ್ಪಾದಕರಿಗೆ ಆಶ್ರಯ ನೀಡುವುದನ್ನು ನಿಲ್ಲಿಸದಿದ್ದರೇ ಪಾಕಿಸ್ತಾನ ಇತಿಹಾಸ ಸೇರಬೇಕಾಗುತ್ತದೆ ಎಂದು ಭಾರತೀಯ ಸೇನಾ ಸಿಬ್ಬಂದಿ ಮುಖ್ಯಸ್ಥ ಜನರಲ್‌ ಉಪೇಂದ್ರ ದ್ವಿವೇದಿ ಅವರ ಕಠಿಣ ಎಚ್ಚರಿಕೆಗೆ ಪಾಕಿಸ್ತಾನ ಕೆರಳಿದೆ.

ಇಸ್ಲಾಮಾಬಾದ್: ಭಯೋತ್ಪಾದಕರಿಗೆ ಆಶ್ರಯ ನೀಡುವುದನ್ನು ನಿಲ್ಲಿಸದಿದ್ದರೇ ಪಾಕಿಸ್ತಾನ ಇತಿಹಾಸ ಸೇರಬೇಕಾಗುತ್ತದೆ ಎಂದು ಭಾರತೀಯ ಸೇನಾ ಸಿಬ್ಬಂದಿ ಮುಖ್ಯಸ್ಥ ಜನರಲ್‌ ಉಪೇಂದ್ರ ದ್ವಿವೇದಿ ಅವರ ಕಠಿಣ ಎಚ್ಚರಿಕೆಗೆ ಪಾಕಿಸ್ತಾನ ಕೆರಳಿದೆ. ಜನರಲ್ ದ್ವಿವೇದಿ ಹೇಳಿಕೆ 'ಪ್ರಚೋದನಕಾರಿ'ಯಾಗಿದ್ದು ದಕ್ಷಿಣ ಏಷ್ಯಾವನ್ನು ಮತ್ತೊಂದು ಸಂಘರ್ಷಕ್ಕೆ ತಳ್ಳಬಹುದು. ಇದರ ಪರಿಣಾಮಗಳು ಇಡೀ ಪ್ರದೇಶಕ್ಕೆ ವಿನಾಶಕಾರಿಯಾಗಬಹುದು ಎಂದು ಪಾಕಿಸ್ತಾನ ಸೇನೆ ಭಾರತಕ್ಕೆ ಎಚ್ಚರಿಕೆ ನೀಡಿದೆ.

ಪಾಕಿಸ್ತಾನ ಸೇನೆಯ ಸಾರ್ವಜನಿಕ ಸಂಪರ್ಕ ಇಲಾಖೆ (ISPR) ಭಾನುವಾರ ಹೇಳಿಕೆ ಬಿಡುಗಡೆ ಮಾಡಿದೆ. ಭಾರತದ ಗ್ರಹಿಕೆಯ ಹೊರತಾಗಿಯೂ, ಪಾಕಿಸ್ತಾನವು ಜಾಗತಿಕವಾಗಿ ಮಹತ್ವದ ದೇಶವಾಗಿ, ಘೋಷಿತ ಪರಮಾಣು ಶಕ್ತಿಯಾಗಿ ಮತ್ತು ದಕ್ಷಿಣ ಏಷ್ಯಾದ ಭೌಗೋಳಿಕತೆ ಮತ್ತು ಇತಿಹಾಸದ ಶಾಶ್ವತ ಭಾಗವಾಗಿ ಉಳಿದಿದೆ ಎಂದು ಪಾಕ್ ಸೇನೆ ಹೇಳಿದೆ.

ಈ ಪ್ರಚೋದನೆ ದಕ್ಷಿಣ ಏಷ್ಯಾವನ್ನು ಮತ್ತೊಂದು ಸಂಘರ್ಷಕ್ಕೆ ತಳ್ಳುತ್ತದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ. ಸೇನೆಯ ಪ್ರಕಾರ, ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ, ವಿನಾಶವು 'ಪರಸ್ಪರ ಮತ್ತು ವ್ಯಾಪಕವಾಗಿರುತ್ತದೆ'. ಜವಾಬ್ದಾರಿಯುತ ಪರಮಾಣು ರಾಷ್ಟ್ರಗಳು "ನಾಗರಿಕತೆಯ ಶ್ರೇಷ್ಠತೆ"ಯನ್ನು ಪ್ರತಿಪಾದಿಸುವ ಅಥವಾ ದೇಶವನ್ನು ಅಳಿಸಿಹಾಕುವ ಬೆದರಿಕೆ ಹಾಕುವ ಬದಲು ಸಂಯಮ, ಪ್ರಬುದ್ಧತೆ ಮತ್ತು ಕಾರ್ಯತಂತ್ರದ ಸಮತೋಲನವನ್ನು ಪ್ರದರ್ಶಿಸಬೇಕು ಎಂದು ISPR ಹೇಳಿದೆ.

ಭಾರತವು ಪಾಕಿಸ್ತಾನದ ಪ್ರಾಮುಖ್ಯತೆಯನ್ನು ಗುರುತಿಸಬೇಕೆಂದು ಒತ್ತಾಯಿಸಿದ್ದು ಪಾಕಿಸ್ತಾನವನ್ನು ಗುರಿಯಾಗಿಸುವ ಯಾವುದೇ ಪ್ರಯತ್ನವು "ಭೌಗೋಳಿಕ ಗಡಿಗಳನ್ನು ಮೀರುವ" ಪರಿಣಾಮಗಳನ್ನು ಉಂಟುಮಾಡಬಹುದು ಎಂದು ಬೆದರಿಕೆಯ ಧ್ವನಿಯಲ್ಲಿ ಪುನರುಚ್ಚರಿಸಿತು. ಈ ಹೇಳಿಕೆ ಅಸಂಬದ್ಧವಾಗಿದೆ. ತನ್ನ ಸುಳ್ಳಿನ ಕಾರ್ಖಾನೆಯ ಮೂಲಕ ನಕಲಿ ಸುದ್ದಿಗಳನ್ನು ಹರಡುವಲ್ಲಿ ಪರಿಣತಿ ಹೊಂದಿರುವ ಭಾರತವು ಅಸ್ಥಿರತೆಯನ್ನು ಹರಡುತ್ತಿದ್ದು ಅಪ್ರಚಾರದಲ್ಲಿ ತೊಡಗಿದೆ ಎಂದು ಆರೋಪ ಮಾಡಿದೆ.

ಶನಿವಾರ ನವದೆಹಲಿಯಲ್ಲಿ ನಡೆದ ಸಂವಾದಾತ್ಮಕ ಅಧಿವೇಶನದಲ್ಲಿ, "ಆಪರೇಷನ್ ಸಿಂಧೂರ್" ನಂತಹ ಪರಿಸ್ಥಿತಿ ಮತ್ತೆ ಉದ್ಭವಿಸಿದರೆ ಭಾರತೀಯ ಸೇನೆ ಏನು ಮಾಡುತ್ತದೆ ಎಂದು ಜನರಲ್ ದ್ವಿವೇದಿ ಅವರನ್ನು ಕೇಳಲಾಯಿತು. ಇದಕ್ಕೆ ಪ್ರತಿಕ್ರಿಯೆಯಾಗಿ, ಪಾಕಿಸ್ತಾನ ಭಯೋತ್ಪಾದನೆಯನ್ನು ಬೆಂಬಲಿಸುತ್ತಿದೆ. ಇದು ಹೀಗೆ ಮುಂದುವರೆದರೇ ಪಾಕಿಸ್ತಾನವು "ಭೌಗೋಳಿಕತೆಯ ಭಾಗವಾಗಿ ಉಳಿಯಬೇಕೆ ಅಥವಾ ಇತಿಹಾಸವಾಗಬೇಕೆ" ಎಂದು ನಿರ್ಧರಿಸಬೇಕಾಗುತ್ತದೆ ಎಂದು ಹೇಳಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನಿರ್ಗತಿಕರಿಗೆ ಬಡವರಿಂದ ಸಹಾಯಹಸ್ತ: 3 ಮಕ್ಕಳ ವಿಧವೆಗೆ ಮನೆ ನಿರ್ಮಿಸಿಕೊಟ್ಟ ವಿಜಯಪುರದ ದಿನಗೂಲಿ ಕಾರ್ಮಿಕರು

ಆಟೋ-ಟ್ಯಾಕ್ಸಿ ಚಾಲಕರಿಗೆ ಮತ್ತೆ ಶಾಕ್​​ ಕೊಟ್ಟ ಕೇಂದ್ರ ಸರ್ಕಾರ: 48 ಗಂಟೆಯಲ್ಲಿ 2ನೇ ಬಾರಿ CNG ದರ ಏರಿಕೆ, ಕೆಜಿಗೆ 1 ರೂ. ಹೆಚ್ಚಳ..!

ಹಾರ್ಮುಜ್ ಜಲಸಂಧಿಯಲ್ಲಿ ವಾಣಿಜ್ಯ ಹಡಗುಗಳ ಗುರಿಯಾಗಿಸಿ ಸಂಚಾರಕ್ಕೆ ಅಡ್ಡಿಪಡಿಸಿದರೆ ಸಹಿಸಲಾಗದು: ವಿಶ್ವಸಂಸ್ಥೆಯಲ್ಲಿ ಭಾರತ ಖಂಡನೆ

“ನಮ್ಮ ತಾಳ್ಮೆ ಪರೀಕ್ಷಿಸಬೇಡಿ; ಉಗ್ರ ಚಟುವಟಿಕೆ ನಿಲ್ಲಿಸದಿದ್ದರೆ ಭೂಪಟದಲ್ಲಿರಬೇಕಾ-ಇತಿಹಾಸದಲ್ಲಿರಬೇಕಾ ತೀರ್ಮಾನಿಸಿ”: ಪಾಕಿಸ್ತಾನಕ್ಕೆ ಭಾರತ ಖಡಕ್ ಎಚ್ಚರಿಕೆ

ರಾಜಧಾನಿ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಭಾರೀ ಅಗ್ನಿ ಅವಘಡ: ಅದೃಷ್ಟವಶಾತ್‌ 68 ಪ್ರಯಾಣಿಕರು ಪಾರು..!

SCROLL FOR NEXT