ಇರಾನ್‌ನ ಪರಮೋಚ್ಚ ನಾಯಕ ಮೊಜ್ತಬಾ ಖಮೆನಿ ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ 
ವಿದೇಶ

ಇರಾನ್‌ನ ಪರಿಷ್ಕೃತ 14 ಅಂಶಗಳ ಪ್ರಸ್ತಾವನೆಯನ್ನು ಅಮೆರಿಕಕ್ಕೆ ಸಲ್ಲಿಸಿದ ಪಾಕಿಸ್ತಾನ; ಒಪ್ಪಿಕೊಳ್ಳುತ್ತಾರಾ ಟ್ರಂಪ್?

ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆ, ಶಾಂತಿ ಮಾತುಕತೆಗೆ ಮಧ್ಯಸ್ಥಿಕೆ ವಹಿಸಿರುವ ಪಾಕಿಸ್ತಾನವು ಮಧ್ಯಪ್ರಾಚ್ಯ ಯುದ್ಧವನ್ನು ಕೊನೆಗೊಳಿಸಲು ಅಮೆರಿಕಕ್ಕೆ ಇರಾನ್‌ನ ಪರಿಷ್ಕೃತ 14 ಅಂಶಗಳ ಪ್ರಸ್ತಾವನೆಯನ್ನು ತಲುಪಿಸಿದೆ.

ಕರಾಚಿ: ಅಮೆರಿಕ-ಇರಾನ್ ಸಂಘರ್ಷಕ್ಕೆ ತಿಂಗಳುಗಳೇ ಕಳೆದರೂ, ಶಾಂತಿ ಮಾತುಕತೆ ಮಾತ್ರ ಇನ್ನೂ ಒಂದು ದಾರದಲ್ಲಿ ನೇತಾಡುತ್ತಿದೆ. ಇತ್ತೀಚಿನ ವಾರಗಳಲ್ಲಿ ಉಭಯ ದೇಶಗಳ ನಡುವೆ ಯುದ್ಧವನ್ನು ಕೊನೆಗೊಳಿಸಲು ಹಲವಾರು ಪ್ರಸ್ತಾಪಗಳನ್ನು ವಿನಿಮಯ ಮಾಡಿಕೊಳ್ಳಲಾಗಿದೆ. ಆದರೆ ಎರಡೂ ಕಡೆಯವರು ಇಲ್ಲಿಯವರೆಗೆ ಯಾವುದೇ ಒಪ್ಪಂದಕ್ಕೆ ಬರಲು ವಿಫಲರಾಗಿದ್ದಾರೆ.

ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆ, ಶಾಂತಿ ಮಾತುಕತೆಗೆ ಮಧ್ಯಸ್ಥಿಕೆ ವಹಿಸಿರುವ ಪಾಕಿಸ್ತಾನವು ಮಧ್ಯಪ್ರಾಚ್ಯ ಯುದ್ಧವನ್ನು ಕೊನೆಗೊಳಿಸಲು ಅಮೆರಿಕಕ್ಕೆ ಇರಾನ್‌ನ ಪರಿಷ್ಕೃತ 14 ಅಂಶಗಳ ಪ್ರಸ್ತಾವನೆಯನ್ನು ತಲುಪಿಸಿದೆ. ಅಲ್ಲದೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಈ ಪ್ರಸ್ತಾವನೆಗಳನ್ನು ಒಪ್ಪಿಕೊಂಡು ಯುದ್ಧವನ್ನು ಅಂತ್ಯಗೊಳಿಸುತ್ತಾರೆ ಎಂದು ಪಾಕಿಸ್ತಾನ ವಿಶ್ವಾಸ ವ್ಯಕ್ತಪಡಿಸಿದೆ.

ಇಸ್ಲಾಮಾಬಾದ್ ಟೆಹ್ರಾನ್‌ನ ನವೀಕರಿಸಿದ 14 ಅಂಶಗಳ ಪ್ರಸ್ತಾವನೆಯನ್ನು ವಾಷಿಂಗ್ಟನ್‌ಗೆ ಬ್ಯಾಕ್‌ಚಾನೆಲ್‌ಗಳ ಮೂಲಕ ತಲುಪಿಸಿದೆ ಎಂದು ಪಾಕಿಸ್ತಾನದ ಮೂಲವೊಂದು ಸೋಮವಾರ ಸುದ್ದಿ ಸಂಸ್ಥೆ ರಾಯಿಟರ್ಸ್‌ಗೆ ತಿಳಿಸಿದೆ.

ಇರಾನ್ ಮೇಲೆ ಅಮೆರಿಕ-ಇಸ್ರೇಲ್ ಜಂಟಿ ದಾಳಿ ಆರಂಭಿಸಿದ ಆರು ವಾರಗಳ ನಂತರ ಕದನ ವಿರಾಮ ಘೋಷಣೆಯಾಗಿದ್ದು, ಪಾಕಿಸ್ತಾನದ ಮಧ್ಯಸ್ಥಿಕೆಯಲ್ಲಿ ಆರಂಭವಾದ ಶಾಂತಿ ಮಾತುಕತೆ ಅರ್ಧಕ್ಕೆ ಮೊಟಕುಗೊಂಡಿದೆ.

ಏಪ್ರಿಲ್‌ನಿಂದ ದೊಡ್ಡ ಪ್ರಮಾಣದ ಯುದ್ಧಗಳು ಕಡಿಮೆಯಾಗಿದ್ದರೂ, ಡ್ರೋನ್ ದಾಳಿಗಳು, ಹಾರ್ಮುಜ್ ಜಲಸಂಧಿಯಲ್ಲಿ ನೌಕಾ ಮುಖಾಮುಖಿ ಮತ್ತು ಇರಾನ್‌ನ ಪರಮಾಣು ಕಾರ್ಯಕ್ರಮದ ವಿವಾದಗಳು ಪಶ್ಚಿಮ ಏಷ್ಯಾ ಸಂಘರ್ಷವನ್ನು ಹೆಚ್ಚಿಸುತ್ತಲೇ ಇರುವುದರಿಂದ ಕದನ ವಿರಾಮ ಅಸ್ಥಿರವಾಗಿದೆ.

ಇರಾನ್ ವಿದೇಶಾಂಗ ಸಚಿವಾಲಯದ ವಕ್ತಾರ ಎಸ್ಮಾಯಿಲ್ ಬಘೈ ಅವರು, ಪಾಕಿಸ್ತಾನದ ಮಧ್ಯಸ್ಥಿಕೆಯ ಮೂಲಕ ಟೆಹ್ರಾನ್‌ನ ನಿಲುವನ್ನು ಅಮೆರಿಕಕ್ಕೆ ತಲುಪಿಸಲಾಗಿದೆ ಎಂದು ದೃಢಪಡಿಸಿದ್ದಾರೆ. ಆದರೆ ಪರಿಷ್ಕೃತ ಪ್ರಸ್ತಾವನೆಯ ವಿವರಗಳನ್ನು ಬಹಿರಂಗಪಡಿಸಲು ಅವರು ನಿರಾಕರಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

1984ರ ಸಿಖ್ ವಿರೋಧಿ ದಂಗೆ ಪ್ರಕರಣ: ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಕಾಂಗ್ರೆಸ್ ನಾಯಕ ಸಜ್ಜನ್ ಕುಮಾರ್ ಜೈಲಿನಲ್ಲೇ ನಿಧನ!

ಕ್ಷೇತ್ರ ಪುನರ್ವಿಂಗಡಣೆ ವಿಚಾರದಲ್ಲಿ ಶಾ ಎದುರೇ ಗುಡುಗಿದ ಡಿಕೆಶಿ: 'ಜನಸಂಖ್ಯೆ ನಿಯಂತ್ರಿಸಿದ ದಕ್ಷಿಣ ರಾಜ್ಯಗಳಿಗೆ ಶಿಕ್ಷೆ ಬೇಡ'; ಲೋಕಸಭೆ ಸ್ಥಾನ 543ಕ್ಕೇ ಸೀಮಿತಗೊಳಿಸುವಂತೆ ಆಗ್ರಹ!

1 ಲಕ್ಷ ವೀಕ್ಷಣೆಯ ವೀಡಿಯೊಗೆ 1 ಲಕ್ಷ ರೂ: Social Media Influencers ಗಳಿಗೆ ಸರ್ಕಾರದ ಬಂಪರ್ ಯೋಜನೆ!

ಕಾಡಿಗೆ ಬೆಂಕಿ ಹಚ್ಚಿ, ಶಿಬಿರಗಳನ್ನೇ ಸ್ಫೋಟಿಸಿದ ಕಳ್ಳಬೇಟೆಗಾರರು: ಚಾಮರಾಜನಗರ ಎನ್‌ಕೌಂಟರ್ ಪ್ರತಿಕಾರಕ್ಕೆ 10 ಎಕರೆ ಅರಣ್ಯವೇ ಬಲಿ!

ದಾವಣಗೆರೆ: ಇಬ್ಬರು ಮಕ್ಕಳ ಸಹಿತ ದಂಪತಿ ಅನುಮಾನಾಸ್ಪದವಾಗಿ ನಾಪತ್ತೆ; ಮನೆಯಲ್ಲಿ ಪತ್ರ ಪತ್ತೆ!