ಲೆಬನಾನ್ ನಲ್ಲಿ ಇಸ್ರೇಲ್ ದಾಳಿಯಿಂದ ಹಾನಿಯಾದ ಮಸೀದಿ 
ವಿದೇಶ

ಅಮೆರಿಕ ಜೊತೆಗೆ ಹಲವು ವಿಷಯಗಳಲ್ಲಿ ಶಾಂತಿ ಮಾತುಕತೆ: ಆದ್ರೆ...ಇರಾನ್ ಹೇಳಿದ್ದೇನು?

ಫೆಬ್ರವರಿ 28 ರಂದು ಆರಂಭವಾದ ಯುದ್ಧವನ್ನು ಕೊನೆಗೊಳಿಸುವ ಒಪ್ಪಂದಕ್ಕಾಗಿ 14 ಅಂಶಗಳ ಒಪ್ಪಂದವನ್ನು ಅಂತಿಮಗೊಳಿಸುತ್ತಿದೆ ಎಂದು ಇರಾನ್ ಹೇಳಿದ ನಂತರ ಇಸ್ಮಾಯಿಲ್ ಬಕೈ ಈ ಹೇಳಿಕೆ ನೀಡಿದ್ದಾರೆ.

ಟೆಹರಾನ್: ಮಧ್ಯ ಪ್ರಾಚ್ಯದಲ್ಲಿ ಸಂಘರ್ಷವನ್ನು ಬಗೆಹರಿಸುವ ನಿಟ್ಟಿನಲ್ಲಿ ಅಮೆರಿಕ ಜೊತೆಗೆ ಅನೇಕ ವಿಚಾರಗಳ ಬಗ್ಗೆ ಮಾತುಕತೆ ನಡೆಯುತ್ತಿದೆ. ಆದರೆ, ಒಪ್ಪಂದ ಸದ್ಯದಲ್ಲೇ ಆಗುವುದಿಲ್ಲ ಎಂದು ಇರಾನ್ ಹೇಳಿದೆ.

ಚರ್ಚೆಯಾಗುತ್ತಿರುವ ಅನೇಕ ವಿಷಯಗಳ ಬಗ್ಗೆ ನಾವು ತೀರ್ಮಾನಕ್ಕೆ ಬಂದಿದ್ದೇವೆ ಎಂದು ಹೇಳುವುದು ಸರಿಯಾಗಿದೆ. ಆದರೆ ಇದರರ್ಥ ಒಪ್ಪಂದಕ್ಕೆ ಸಹಿ ಹಾಕುವುದು ಸನ್ನಿಹಿತವಾಗಿದೆ ಎಂದರ್ಥವಲ್ಲ. ಅಮೆರಿಕದ ಕ್ಷಣಕ್ಕೊಂದು ಬದಲಾವಣೆಗಳು ಒಪ್ಪಂದ ಇನ್ನೂ ಅಂತಿಮಗೊಳ್ಳದಿರಲು ಕಾರಣವಾಗಿದೆ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ಎಸ್ಮಾಯಿಲ್ ಬಕೈ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.

ಫೆಬ್ರವರಿ 28 ರಂದು ಆರಂಭವಾದ ಯುದ್ಧವನ್ನು ಕೊನೆಗೊಳಿಸುವ ಒಪ್ಪಂದಕ್ಕಾಗಿ 14 ಅಂಶಗಳ ಒಪ್ಪಂದವನ್ನು ಅಂತಿಮಗೊಳಿಸುತ್ತಿದೆ ಎಂದು ಇರಾನ್ ಹೇಳಿದ ನಂತರ ಇಸ್ಮಾಯಿಲ್ ಬಕೈ ಈ ಹೇಳಿಕೆ ನೀಡಿದ್ದಾರೆ.

ಇರಾನ್ ಜೊತೆಗಿನ ಯುದ್ಧವನ್ನು ಕೊನೆಗೊಳಿಸುವ ಶಾಂತಿ ಒಪ್ಪಂದ ಸೋಮವಾರ ಕಾರ್ಯರೂಪಕ್ಕೆ ಬರಬಹುದು ಎಂದು ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೊ ಹೇಳಿದ್ದರು. ಲೆಬನಾನ್ ಸೇರಿದಂತೆ ಇರಾನ್ ನಾದ್ಯಂತ ಯುದ್ಧವನ್ನು ಕೊನೆಗೊಳಿಸುವತ್ತ ಒಪ್ಪಂದದ ನಿಯಮಗಳನ್ನು ರೂಪಿಸಲಾಗುತ್ತಿದೆ ಎಂದು ಇರಾನ್ ವಿದೇಶಾಂಗ ಸಚಿವರು ಹೇಳಿದ್ದಾರೆ.

ಇರಾನ್‌ನ ಪರಮಾಣು ಕಾರ್ಯಕ್ರಮದ ವಿವರಗಳನ್ನು ಸೇರಿಸಲಾಗಿಲ್ಲ. ಉಭಯ ದೇಶಗಳು ಒಪ್ಪಂದ ಒಪ್ಪಿಕೊಂಡ ನಂತರವೇ ಈ ವಿಷಯವನ್ನು ಚರ್ಚಿಸಲಾಗುವುದು ಎಂದು ಅವರು ಪುನರುಚ್ಚರಿಸಿದ್ದಾರೆ. ಏಪ್ರಿಲ್ 13 ರಿಂದ ಜಾರಿಯಲ್ಲಿರುವ ಇರಾನಿನ ಬಂದರುಗಳ ಮೇಲಿನ ಯುಎಸ್ ನೌಕಾ ದಿಗ್ಬಂಧನವನ್ನು ಕೊನೆಗೊಳಿಸಬೇಕು. ಇದೇ ವೇಳೆ ಇಸ್ಲಾಮಿಕ್ ರಿಪಬ್ಲಿಕ್ ಆಫ್ ಇರಾನ್ ಹಾರ್ಮುಜ್ ಜಲಸಂಧಿಯಲ್ಲಿ ಸುರಕ್ಷಿತ ಸಾಗಣೆಗೆ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುತ್ತದೆ" ಎಂದು ಅವರು ಹೇಳಿದರು.

ಯುದ್ಧ ಪ್ರಾರಂಭವಾದಾಗಿನಿಂದ ಪ್ರಮುಖ ಜಾಗತಿಕ ಹಡಗು ಮಾರ್ಗವಾದ ಹಾರ್ಮುಜ್ ಮೂಲಕ ಸಂಚಾರವು ಇರಾನಿನ ನಿಯಂತ್ರಣದಲ್ಲಿದೆ. ಇರಾನ್ ಜಲಸಂಧಿ ಮೂಲಕ ಸಾಗುವ ಹಡಗುಗಳಿಗೆ ಟೋಲ್‌ಗಳನ್ನು ವಿಧಿಸುತ್ತಿಲ್ಲ, ಬದಲಿಗೆ "ಸಮುದ್ರ ಸೇವೆಗಳಿಗೆ" ಶುಲ್ಕವನ್ನು ಸಂಗ್ರಹಿಸುತ್ತಿದೆ ಎಂದು ಬಕೈ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮಾಡೆಲ್​ ತ್ವಿಷಾ ಶರ್ಮಾ ನಿಗೂಢ ಸಾವು ಪ್ರಕರಣ: CBI ತನಿಖೆಗೆ ಸುಪ್ರೀಂಕೋರ್ಟ್ ಅಸ್ತು, ಸಾಕ್ಷ್ಯ-ಹೇಳಿಕೆಗಳ ಪ್ರಕಟಿಸದಂತೆ ಮಾಧ್ಯಮಗಳಿಗೆ ಕಟ್ಟುನಿಟ್ಟಿನ ಸೂಚನೆ..!

ಮತ್ತೆ ಏರಿದ ಇಂಧನ ದರ: ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಭಾರೀ ಹೆಚ್ಚಳ; 2 ವಾರಗಳಲ್ಲಿ ರೂ. 7.5 ಏರಿಕೆ, ತೈಲ ಕಂಪನಿಗಳಿಂದ ವಾಹನ ಸವಾರರಿಗೆ ಮತ್ತೆ ಶಾಕ್..!

ನಿತಿನ್ ನಬೀನ್ ಭೇಟಿ ಬಳಿಕ BJP ನಾಯಕತ್ವ ಚರ್ಚೆ ಮತ್ತೆ ಮುನ್ನೆಲೆಗೆ: ವಿಜಯೇಂದ್ರ ಭವಿಷ್ಯ ಕುರಿತು ಹೆಚ್ಚಿದ ಕುತೂಹಲ; ರಾಜ್ಯಾಧ್ಯಕ್ಷ ಸ್ಥಾನಕ್ಕೆ ಪೈಪೋಟಿ ತೀವ್ರ..!

ಬೆಂಗಳೂರು ದಿಢೀರ್ ಹವಾಮಾನ ಬದಲಾವಣೆಗೆ AI ಡೇಟಾ ಸೆಂಟರ್‌ಗಳೇ ಕಾರಣ? ‘Heat island’ ಪರಿಣಾಮ ಕುರಿತು ತಜ್ಞರ ಗಂಭೀರ ಎಚ್ಚರಿಕೆ..!

SIR ಹೆಸರಿನಲ್ಲಿ ಮತದಾರರ ಹೆಸರು ಡಿಲೀಟ್ ಆರೋಪ; war room ಸ್ಥಾಪಿಸಿದ ಕಾಂಗ್ರೆಸ್, ಎಚ್ಚರ ವಹಿಸುವಂತೆ 'ಕೈ' ನಾಯಕರಿಗೆ ಸಿದ್ದು-ಡಿಕೆಶಿ ಸೂಚನೆ

SCROLL FOR NEXT