ಉಕ್ರೇನ್‌ನ ಕೈವ್‌ನಲ್ಲಿ ರಷ್ಯಾ ನಡೆಸಿದ ಕ್ಷಿಪಣಿ ದಾಳಿಯ ನಂತರ ಅಗ್ನಿಶಾಮಕ ದಳದವರು ಬೆಂಕಿಯನ್ನು ನಂದಿಸುತ್ತಿರುವುದು. 
ವಿದೇಶ

ಉಕ್ರೇನ್ ಮೇಲೆ ರಷ್ಯಾ ಭೀಕರ ದಾಳಿ: ಓರ್ವ ಭಾರತೀಯ ಸೇರಿ 12 ಮಂದಿ ಸಾವು..!

ಸೋಮವಾರ ಸಂಜೆಯಿಂದ ಒಡೆಸಾ ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮೇಲೂ ಬಾಂಬ್‌ಗಳು ಹಾಗೂ ಡ್ರೋನ್‌ಗಳ ಮೂಲಕ ದಾಳಿ ಮುಂದುವರಿದಿದೆ.

ಕೀವ್: ಉಕ್ರೇನ್‌ನ ವಿವಿಧ ನಗರಗಳ ಮೇಲೆ ರಷ್ಯಾ ನಡೆಸಿದ ಇತ್ತೀಚಿನ ಭೀಕರ ಕ್ಷಿಪಣಿ ಮತ್ತು ಡ್ರೋನ್ ದಾಳಿಯಲ್ಲಿ ಓರ್ವ ಭಾರತೀಯ ನಾಗರಿಕ ಸೇರಿ ಕನಿಷ್ಠ 12 ಜನರು ಸಾವನ್ನಪ್ಪಿದ್ದಾರೆ ಎಂದು ಉಕ್ರೇನ್ ಅಧ್ಯಕ್ಷ ವೊಲೋಡಿಮಿರ್ ಝೆಲೆನ್ಸ್ಕಿ (Volodymyr Zelensky) ಮಂಗಳವಾರ ಖಚಿತಪಡಿಸಿದ್ದಾರೆ.

ಈ ಭೀಕರ ವೈಮಾನಿಕ ದಾಳಿಯಿಂದಾಗಿ ನೂರಾರು ನಾಗರಿಕರು ಗಾಯಗೊಂಡಿದ್ದು, ಹಲವು ವಸತಿ ಸಂಕೀರ್ಣಗಳು ಧ್ವಂಸಗೊಂಡಿವೆ ಎಂದು ತಿಳಿಸಿದ್ದಾರೆ.

ಸೋಮವಾರ ಸಂಜೆ 6 ಗಂಟೆಯಿಂದ ರಷ್ಯಾ ದಾಳಿ ಆರಂಭಿಸಿತು. ಬ್ಯಾಲಿಸ್ಟಿಕ್, ಕ್ರೂಸ್ ಹಾಗೂ ರಾಡಾರ್‌ ವಿರೋಧಿ ಕ್ಷಿಪಣಿಗಳ ಜೊತೆಗೆ 218 ಡ್ರೋನ್‌ಗಳು ಮತ್ತು ದಿಕ್ಕು ತಪ್ಪಿಸುವ ಡ್ರೋನ್‌ಗಳನ್ನು ಬಳಸಲಾಗಿದೆ ಎಂದು ಝೆಲೆನ್‌ಸ್ಕಿ ಹೇಳಿದ್ದಾರೆ.

ದಾಳಿಗೆ ಬಳಸಲಾದ ಡ್ರೋನ್‌ಗಳ ಪೈಕಿ ಸುಮಾರು ಮೂರನೇ ಒಂದು ಭಾಗ ಜೆಟ್ ಎಂಜಿನ್‌ ಹೊಂದಿದ್ದವು ಎಂದು ವರದಿಯಾಗಿದೆ.

ರಷ್ಯಾ ಪಡೆಗಳು ಕೀವ್ ಮೇಲೆ ಸತತ 6ನೇ ದಿನವೂ ದಾಳಿ ನಡೆಸಿದ್ದು, ಕಳೆದ ವಾರದಿಂದ ಉಕ್ರೇನ್‌ನಲ್ಲಿ ಪ್ರಬಲ ರೀತಿಯಲ್ಲಿ ವಾಯುದಾಳಿ ಎಚ್ಚರಿಕೆಗಳು ಮುಂದುವರಿದಿವೆ.

ಸಾಮಾಜಿಕ ಜಾಲತಾಣದಲ್ಲಿ ವಿವರವಾದ ಮಾಹಿತಿ ಹಂಚಿಕೊಂಡಿರುವ ಝೆಲೆನ್‌ಸ್ಕಿ, ಸೋಮವಾರ ಸಂಜೆಯಿಂದ ಒಡೆಸಾ ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮೇಲೂ ಬಾಂಬ್‌ಗಳು ಹಾಗೂ ಡ್ರೋನ್‌ಗಳ ಮೂಲಕ ದಾಳಿ ಮುಂದುವರಿದಿದೆ ಎಂದು ತಿಳಿಸಿದ್ದಾರೆ.

ದಾಳಿಯಲ್ಲಿ ಒಟ್ಟಾರೆ 12 ಮಂದಿ ಮೃತಪಟ್ಟಿದ್ದು, ಅವರಲ್ಲಿ ಒಬ್ಬರು ಭಾರತೀಯ ಪ್ರಜೆ. ದಾಳಿಯಲ್ಲಿ ಇನ್ನೂ ಹಲವರು ಗಾಯಗೊಂಡಿದ್ದಾರೆ” ಎಂದು ಝೆಲೆನ್‌ಸ್ಕಿ ಹೇಳಿದ್ದಾರೆ.

ರಷ್ಯಾ ನಡೆಸಿದ ದಾಳಿಗೆ ಪ್ರತಿಯಾಗಿ ಉಕ್ರೇನ್ ಪಡೆಗಳು ಐದು ಬ್ಯಾಲಿಸ್ಟಿಕ್ ಕ್ಷಿಪಣಿಗಳು ಹಾಗೂ 187 ಡ್ರೋನ್‌ಗಳು ಸೇರಿದಂತೆ ಒಟ್ಟು 199 ವೈಮಾನಿಕ ಗುರಿಗಳನ್ನು ನಾಶಪಡಿಸಿವೆ ಅಥವಾ ನಿಷ್ಕ್ರಿಯಗೊಳಿಸಿವೆ ಎಂದು ಉಕ್ರೇನ್ ಸೇನೆ ತಿಳಿಸಿದೆ.

ಕ್ಷಿಪಣಿ ಮತ್ತು ಡ್ರೋನ್ ದಾಳಿಗಳು 28 ಸ್ಥಳಗಳಲ್ಲಿ ದಾಖಲಾಗಿದ್ದು, ತಡೆದುರುಳಿಸಲಾದ ವೈಮಾನಿಕ ಗುರಿಗಳ ಅವಶೇಷಗಳು ಮತ್ತೊಂದು 10 ಸ್ಥಳಗಳಲ್ಲಿ ಬಿದ್ದಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಬೆಳವಣಿಗೆಗೆ ಒಂದು ದಿನ ಮೊದಲು ಪ್ರಧಾನಿ ಮೋದಿ ಅವರು ಉಜ್ಬೇಕಿಸ್ತಾನದ ರಾಜಧಾನಿ ಬಿಷ್ಕೆಕ್‌ನಲ್ಲಿ ನಡೆದ ಶಾಂಘೈ ಸಹಕಾರ ಸಂಘಟನೆಯ ಶೃಂಗಸಭೆಯ ವೇಳೆ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರನ್ನು ಭೇಟಿಯಾಗಿದ್ದರು.

ಈ ಸಂದರ್ಭದಲ್ಲಿ ಮೋದಿ ಅವರು ಯುದ್ಧವನ್ನು ಮುಂದುವರಿಸುವ ಬದಲು “ಯುದ್ಧದಿಂದ ಅಂತ್ಯದತ್ತ ಸಾಗಬೇಕು” ಎಂದು ಪುಟಿನ್‌ಗೆ ಮನವಿ ಮಾಡಿದ್ದರು.

ಸಂಘರ್ಷದ ಪ್ರತಿಯೊಂದು ದಿನವೂ ಮಾನವೀಯತೆಯನ್ನು ಹಿಂದಕ್ಕೆ ತಳ್ಳುತ್ತದೆ ಎಂದು ಹೇಳಿದ್ದ ಮೋದಿ, ಬಾಕಿ ಇರುವ ಎಲ್ಲ ಸಮಸ್ಯೆಗಳನ್ನು ಶಾಂತಿಯುತವಾಗಿ ಪರಿಹರಿಸುವಂತೆ ಕರೆ ನೀಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬೆಂಗಳೂರಿನಲ್ಲಿ ಚಿಕನ್ ಅಂಗಡಿಗಳು ಬಂದ್? ಈ ಎರಡು ದಿನ ನಗರದಲ್ಲಿ ನಾನ್‌ವೆಜ್ ಸಿಗೋದು ಡೌಟ್! ಯಾಕೆ ಗೊತ್ತಾ?

ನೇಪಾಳ ಜಲಪ್ರಳಯ: 7ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ; ಸಾವಿನ ಸಂಖ್ಯೆ 1,003ಕ್ಕೆ ಏರಿಕೆ, ಇನ್ನೂ ಸಿಗದ 3,916 ಜನರ ಸುಳಿವು..!

‘ದೇಶ ಸಂತಸದಿಂದ ತುಂಬಿದೆ, ಆದರೆ ಕೆಲವರು ಸುಳ್ಳು ಹೇಳಿ ಜನರಲ್ಲಿ ನಿರಾಶೆ ಮೂಡಿಸಲು ಯತ್ನಿಸುತ್ತಿದ್ದಾರೆ': ವಿಡಿಯೊ ಮೂಲಕ ಪ್ರಧಾನಿ ಮೋದಿ ಹೇಳಿದ್ದೇನು? ; Video

ಸುಮ್ಮನೆ ಬಿಡಲ್ಲ, ಇರಾನ್‌ಗೆ ತಕ್ಕ ಶಾಸ್ತಿ: ಟ್ರಂಪ್ ಕಠಿಣ ಎಚ್ಚರಿಕೆ, ಮಧ್ಯಪ್ರಾಚ್ಯದಲ್ಲಿ ಮತ್ತೆ ಭುಗಿಲೆದ್ದ ಯುದ್ಧಾತಂಕ..!

Commercial Cylinder Rate: ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆ ಹೆಚ್ಚಳ; ಪರಿಷ್ಕೃತ ದರ ಇಂದಿನಿಂದಲೇ ಜಾರಿ