ಭೂಕುಸಿತ 
ವಿದೇಶ

ನೇಪಾಳದಲ್ಲಿ ಮತ್ತೊಮ್ಮೆ ಜಲಪ್ರಳಯದ ಆತಂಕ: ಧುಮ್ಮಿಕ್ಕಿ ಹರಿಯುವ ಚೌಲಾನಿ ನದಿಯನ್ನೇ ತಡೆದು ನಿಲ್ಲಿಸಿದ ಭೀಕರ ಭೂಕುಸಿತ..! Video

ನದಿಯ ದಡದಲ್ಲಿ ವಾಸಿಸುವ ಜನರು ಎಚ್ಚರಿಕೆಯಿಂದ ಇರಬೇಕು ಹಾಗೂ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸೂಚಿಸಲಾಗಿದೆ.

ನೇಪಾಳ: ನೇಪಾಳದಲ್ಲಿ ಮತ್ತೊಮ್ಮೆ ಭೀಕರ ಪ್ರವಾಹದ ಆತಂಕ ಎದುರಾಗಿದೆ. ಭಾರಿ ಭೂಕುಸಿತದ ಕಾರಣದಿಂದಾಗಿ ದಾರ್ಚುಲಾ ಜಿಲ್ಲೆಯ ಪ್ರಮುಖ ನದಿಯಾದ ಚೌಲಾನಿ ನದಿಯ ಹರಿವು ಸಂಪೂರ್ಣವಾಗಿ ಸ್ಥಗಿತಗೊಂಡಿದ್ದು, ನದಿ ಪಾತ್ರದ ಕೆಳಭಾಗದ ಗ್ರಾಮಗಳಿಗೆ ಹೈ ಅಲರ್ಟ್ ಘೋಷಿಸಲಾಗಿದೆ.

ಅಪಿ ಹಿಮಾಲ್ ಗ್ರಾಮೀಣ ಪುರಸಭೆಯ ಭಟ್ಟಾರ್ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿದ್ದು, ಅಪಾರ ಪ್ರಮಾಣದ ಮಣ್ಣು ಮತ್ತು ಅವಶೇಷಗಳು ನದಿಗೆ ಬಿದ್ದಿವೆ. 'ಇದರಿಂದ ನದಿಯ ನೀರಿನ ಹರಿವಿಗೆ ತೊಂದರೆಯಾಗಿದೆ.

ಮತ್ತಷ್ಟು ಭೂಕುಸಿತ ಸಂಭವಿಸಿದರೆ ನದಿಯ ಹರಿವು ಸಂಪೂರ್ಣವಾಗಿ ತಡೆಯಲ್ಪಟ್ಟು, ಬಳಿಕ ತಡೆ ಒಡೆದು ಕೆಳಭಾಗದಲ್ಲಿ ಹಠಾತ್ ಪ್ರವಾಹ ಉಂಟಾಗುವ ಸಾಧ್ಯತೆಯಿದೆ ಎಂದು ದಾರ್ಚುಲಾ ಜಿಲ್ಲಾ ಆಡಳಿತ ಮಂಡಳಿ ಎಚ್ಚರಿಸಿದೆ.

ನದಿಯ ದಡದಲ್ಲಿ ವಾಸಿಸುವ ಜನರು ಎಚ್ಚರಿಕೆಯಿಂದ ಇರಬೇಕು ಹಾಗೂ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸೂಚಿಸಲಾಗಿದೆ.

ಅಪಾಯದ ಪ್ರದೇಶಗಳಲ್ಲಿರುವ ಜನರಿಗೆ ಮಾಹಿತಿ ನೀಡಲು ಹಾಗೂ ತುರ್ತು ಪರಿಸ್ಥಿತಿ ಎದುರಾದರೆ ತಕ್ಷಣ ಸ್ಪಂದಿಸಲು ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ಯಾವುದೇ ಸಂಭವನೀಯ ತುರ್ತು ಪರಿಸ್ಥಿತಿಯನ್ನು ಎದುರಿಸಲು ಸ್ಥಳೀಯ ಆಡಳಿತ ಮತ್ತು ಭದ್ರತಾ ಸಂಸ್ಥೆಗಳು ಹೆಚ್ಚಿನ ಎಚ್ಚರಿಕೆಯಿಂದ ಇರಬೇಕು ಹಾಗೂ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಖಗರಾಜ್ ಭಟ್ಟ ಸೂಚಿಸಿದ್ದಾರೆ. ಪ್ರವಾಹ ಮತ್ತು ವಿಪತ್ತು ಸಂಬಂಧಿತ ತುರ್ತು ನೆರವಿಗಾಗಿ ಆಡಳಿತವು ಸಂಪರ್ಕ ಸಂಖ್ಯೆಗಳನ್ನೂ ಬಿಡುಗಡೆ ಮಾಡಿದೆ.

ಪ್ರಸ್ತುತ ಚೌಲಾನಿ ನದಿಯಲ್ಲಿ ನೀರಿನ ಹರಿವು ಸಾಮಾನ್ಯ ಮಟ್ಟದಲ್ಲಿದೆ ಎಂದು ಸಶಸ್ತ್ರ ಪೊಲೀಸ್ ಪಡೆ ತಿಳಿಸಿದೆ. ಆದರೆ, ಪರಿಸ್ಥಿತಿಯ ಮೇಲೆ ನಿಗಾ ಇಡಲು ಬಾಲಾಂಚ್‌ನ ನೇಪಾಳ್ ಚಮೇಲಿಯಾ ಜಲವಿದ್ಯುತ್ ಭದ್ರತಾ ನೆಲೆಯಿಂದ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಅಗತ್ಯವಿದ್ದಲ್ಲಿ ಸಮೀಪದ ಜನವಸತಿ ಪ್ರದೇಶಗಳಿಗೆ ಎಚ್ಚರಿಕೆ ನೀಡಲು ಸಿಬ್ಬಂದಿ ಸಿದ್ಧರಾಗಿದ್ದಾರೆ.

ಚೌಲಾನಿ ನದಿಯನ್ನು ಚಮೇಲಿಯಾ ನದಿ ಎಂದೂ ಕರೆಯಲಾಗುತ್ತದೆ. ಇದು ಅಪಿ ಹಿಮಾಲ್ ಪ್ರದೇಶದಲ್ಲಿ ಹುಟ್ಟಿ, ಬಳಿಕ ನೇಪಾಳ-ಭಾರತ ಗಡಿಯ ಭಾಗವಾಗಿರುವ ಮಹಾಕಾಳಿ ನದಿಯನ್ನು ಸೇರುತ್ತದೆ.

ನೇಪಾಳದ ಹಲವು ಪ್ರದೇಶಗಳಲ್ಲಿ ಇತ್ತೀಚೆಗೆ ಸಂಭವಿಸಿದ ಭೀಕರ ಪ್ರವಾಹ ಮತ್ತು ಹಠಾತ್ ಪ್ರವಾಹದ ಪರಿಣಾಮಗಳು ಮುಂದುವರಿದಿರುವ ಸಂದರ್ಭದಲ್ಲೇ ಈ ಹೊಸ ಎಚ್ಚರಿಕೆ ಹೊರಬಿದ್ದಿದೆ. ಪ್ರವಾಹದಿಂದ ಹಲವು ಜನವಸತಿ ಪ್ರದೇಶಗಳು ಜಲಾವೃತಗೊಂಡು, ಸಾವು-ನೋವು ಹಾಗೂ ವ್ಯಾಪಕ ಹಾನಿ ಸಂಭವಿಸಿದ ಹಿನ್ನೆಲೆಯಲ್ಲಿ ರಕ್ಷಣಾ ಮತ್ತು ಪುನರ್ವಸತಿ ಕಾರ್ಯಾಚರಣೆಗಳು ಇನ್ನೂ ಮುಂದುವರಿದಿವೆ.

ನದಿಯ ಹರಿವಿಗೆ ಭಾಗಶಃ ತಡೆಯಾಗಿರುವುದರಿಂದ ಪರಿಸ್ಥಿತಿ ಮತ್ತಷ್ಟು ಆತಂಕಕಾರಿ ಎನಿಸಿದೆ. ಮುಂದಿನ ದಿನಗಳಲ್ಲಿ ಭಾರೀ ಮಳೆ ಸುರಿದರೆ ಭೂಕುಸಿತ ಮತ್ತಷ್ಟು ಹೆಚ್ಚಾಗಿ ನದಿಯ ಹರಿವು ಸಂಪೂರ್ಣವಾಗಿ ತಡೆಯಲ್ಪಟ್ಟು, ಮತ್ತೊಂದು ಹಠಾತ್ ಪ್ರವಾಹದ ಅಪಾಯ ಎದುರಾಗಬಹುದು ಎಂಬ ಆತಂಕ ಮೂಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸೆ. 9ರಂದು ಗೃಹ ಸಚಿವಾಲಯದೊಂದಿಗೆ ಮಾತುಕತೆಗೆ ಮುನ್ನ ಹೋರಾಟ ತೀವ್ರ: ಲಡಾಖ್ ಉನ್ನತ ಮಂಡಳಿ ಎಚ್ಚರಿಕೆ

ಕೇರಳಂನ ತ್ರಿಶೂರ್‌ನಲ್ಲಿ ನಿಂತಿದ್ದ ಟ್ರಕ್‌ಗೆ ಕಾರು ಡಿಕ್ಕಿ: ತಮಿಳು ನಾಡಿನ ಎಂಟು ಮಂದಿ ಸಾವು, 7 ಎಂಜಿನಿಯರಿಂಗ್ ವಿದ್ಯಾರ್ಥಿಗಳು; Video

ಮತ್ತೊಂದು ಮಹಾಯುದ್ಧದ ಭೀತಿ: ಇರಾನ್‌ನ 'Pickaxe Mountain' ಧ್ವಂಸಕ್ಕೆ ಅಮೆರಿಕ ಸ್ಕೆಚ್, "ಶೀಘ್ರದಲ್ಲೇ ದಾಳಿ" ಎಂದ ಡೊನಾಲ್ಡ್ ಟ್ರಂಪ್..!

ಪ್ರಧಾನಿ ಮೋದಿ ಮೆಚ್ಚಿದ ಇಡ್ಲಿ ನಿಂಗಮ್ಮನಿಗೆ ಸಂಕಷ್ಟ: ಅಂಗಡಿ ನಡೆಸದಂತೆ GBA ಅಧಿಕಾರಿಗಳ ವಾರ್ನಿಂಗ್!

CJP ಪ್ರತಿಭಟನೆ ವೇಳೆ ಹೆಸರು ದುರುಪಯೋಗ: 'ಬಲಪಂಥೀಯ' ಇನ್‌ಫ್ಲ್ಯುಯೆನ್ಸರ್ ವಿರುದ್ಧ ಕೇಸ್ ದಾಖಲಿಸಿದ ಚಿರಾಗ್ ಪಾಸ್ವಾನ್