ಏಕಾದಶಿ ಶಬ್ದವು ಪಾಡ್ಯ, ಬಿದಿಗೆ, ತದಿಗೆ ಇತ್ಯಾದಿ ತಿಥಿಗಳ ಆದಿಯಾಗಿ ಬರುವ ಹನ್ನೊಂದನೇ ತಿಥಿ. ಏಕಾದಶಿಯ ಪ್ರತಿಯೊಂದು ಮಾಸದ ಶುಕ್ಲ ಹಾಗೂ ಕೃಷ್ಣ ಪಕ್ಷಗಳಲ್ಲಿ ಬರುವ ಪ್ರತ್ಯೇಕ ಪ್ರತ್ಯೇಕ ತಿಥಿಯಾಗಿದೆ. ಏಕಾದಶಿ ಎಂದರೆ ತಕ್ಷಣವೇ ನೆನಪಾಗುವುದು ಉಪವಾಸ. ಉಪವಾಸ ಆಚರಣೆಯೇ ಏಕಾದಶಿಯ ಒಂದು ಮುಖ್ಯ ಅಂಗ. ಏಕಾದಶಿ ಉಪವಾಸದ ಆಚರಣೆಯು ದೈಹಿಕವಾಗಿ ಮಾತ್ರವಲ್ಲದೆ ಮಾನಸಿಕವಾಗಿಯೂ ಹೆಚ್ಚಿನ ಪರಿಣಾಮಕಾರಿ. ಏಕಾದಶಿ ಆಚರಣೆಯು ಹದಿನೈದು ದಿನಗಳಿಗೊಮ್ಮೆ ಆಹಾರ ಪಾನೀಯಗಳ ಸೇವನೆ ವರ್ಜ್ಯ. ಈ ದಿನದಂದು ಕೆಲವರು ಅನ್ನವನ್ನು ಮಾತ್ರ ತ್ಯಜಿಸಿ ಉಪವಾಸ ಆಚರಿಸಿದರೆ,ಮತ್ತೆ ಕೆಲವರು ಹನಿ ನೀರನ್ನೂ ಕುಡಿಯದೆ,ನಿರಾಹಾರ ವ್ರತವನ್ನು ಆಚರಿಸುತ್ತಾರೆ. ಇನ್ನೂ ಕೆಲವರು ಏಕಾದಶಿಯಂದು ಮೌನ ವ್ರತ ಸಹ ಆಚರಿಸುತ್ತಾರೆ. ವೈಕುಂಠದ ಬಾಗಿಲು ತೆಗೆಯುವ ಹಿನ್ನೆಲೆಯಲ್ಲಿ ಉಪವಾಸವಿದ್ದು ವೆಂಕಟೇಶ್ವರ/ಶ್ರೀನಿವಾಸ/ವಿಷ್ಣು ದೇವರ ದರ್ಶನ ಪಡೆದರೆ ಸ್ವರ್ಗ ಪ್ರಾಪ್ತಿಯಾಗುತ್ತದೆ ಎಂಬ ಭಾವನೆಯೂ ಇದೆ.