ಶ್ರೀಚಕ್ರದ ಎಲ್ಲೆಡೆ ದಳಗಳಲ್ಲಿ ತ್ರಿಕೋಣಗಳಲ್ಲಿ, ಭವನಗಳಲ್ಲಿ ಇರುವ ಬೀಜಾಕ್ಷರಗಳು ಜಗದಾಂಬೆ ಶ್ರೀನಿಮಿಷಾಂಬಾ ದೇವಿಯ ಪ್ರಸನ್ನತೆಗೆ ಕಾರಣ ಇದಾಗಿದೆ. ಇಲ್ಲಿನ ಶ್ರೀದೇವಿಯ ಮೂಲ ಮಂತ್ರಗಳನ್ನು ಹೊಂದಿರುವ ಶ್ರೀಚಕ್ರ ಅತೀವಿರಳ ಎನ್ನಲಾಗಿದೆ. ಕೇವಲ ದರ್ಶನ ಮಾತ್ರದಿಂದಲೇ ಭಕ್ತರ ಇಷ್ಟಾರ್ಥ ಈಡೇರುವುದಲ್ಲದೆ ಮನಸ್ಸಿಗೆ ಶಾಂತಿ, ನೆಮ್ಮದಿ ಪ್ರಾಪ್ತವಾಗುತ್ತದೆ. ಶ್ರೀನಿಮಿಷಾಂಬಾ ದೇವಿಯಲ್ಲಿ ಭಕ್ತಿಪೂರ್ವಕವಾಗಿ ಪ್ರಾರ್ಥನೆ ಮಾಡಿಕೊಳ್ಳವುದರಿಂದ ಮದುವೆಯಾಗದವರಿಗೆ ಕಲ್ಯಾಣಭಾಗ್ಯವು, ಮಕ್ಕಳಾಗದವರಿಗೆ ಸಂತಾನ ಭಾಗ್ಯವೂ, ಆರ್ಥಿಕ ತೊಂದರೆಯಲ್ಲಿರುವವರಿಗೆ ಧನಧಾನ್ಯ, ಅನಾರೋಗ್ಯದಿಂದ ಕೂಡಿರುವವರಿಗೆ ಆರೋಗ್ಯ ಭಾಗ್ಯ ಹಾಗೂ ವಿದ್ಯಾರ್ಥಿಗಳಿಗೆ ವಿದ್ಯಾಭಾಗ್ಯವೂ ಪ್ರಾಪ್ತಿಯಾಗುತ್ತದೆ. ಎಂಬುದಾಗಿ ಭಕ್ತಾದಿಗಳ ಇಷ್ಟಾಭಿಲಾಷೆಯನ್ನು ಪೂರೈಸುವ ಆರಾಧ್ಯ ದೈವ ಸ್ವರೂಪಿಣಿ ಶ್ರೀ ನಿಮಿಷಾಂಬಾ ದೇವಿ ಎಂಬುದಾಗಿ ಪ್ರಸಿದ್ದಿಯಾಗಿರುತ್ತದೆ.