ಮೂರನೇ ದಿನ ಬೆಳಗ್ಗೆ ಮುತ್ತೈದೆಯರು ಶುಚೀಭೂತರಾಗಿ ಭೂಮಿ ಬರೆದಲ್ಲಿ ಏಳು ಲೋಳೆರಸವುಳ್ಳ ಸೊಪ್ಪುಗಳನ್ನು (ಅದರ ತುದಿ ಪಶ್ಚಿಮಕ್ಕಿರಬೇಕು) ಸಾಲಾಗಿರಿಸಿ, ದೀಪವನ್ನಿರಿಸುತ್ತಾರೆ. ಪಕ್ಕದಲ್ಲಿ ಅರಶಿನ, ಕುಂಕುಮ, ಕಾಡಿಗೆ, ಎಣ್ಣೆ, ಸೀಗೆ, ಬಾಗೆಗಳ ತೊಗಟೆ, ಪಚ್ಚೆ ಹೆಸರುಬೇಳೆ ಪುಡಿ, ವೀಳ್ಯ, ಊದುಬತ್ತಿಗಳನ್ನಿರಿಸುತ್ತಾರೆ.